Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkaballapur

ಮೈಸೂರು ದಸರಾ ಮಾದರಿಯಲ್ಲಿ ನಂದಿ ಗಿರಿಧಾಮದಲ್ಲಿ ಶಿವೋತ್ಸವ: ಸುಧಾಕರ್

Public TV
Last updated: February 26, 2022 5:48 pm
Public TV
Share
3 Min Read
SUDHKAR
SHARE

ಚಿಕ್ಕಬಳ್ಳಾಪುರ: ಸಾವಿರ ವರ್ಷಗಳ ಇತಿಹಾಸ ಹೊಂದಿರುವ ನಂದಿ ಗಿರಿಧಾಮದ ಭೋಗನಂದೀಶ್ವರ ದೇವಾಲಯದಲ್ಲಿ ಈ ವರ್ಷದಿಂದ ಮೈಸೂರು ದಸರಾ ರೀತಿಯಲ್ಲೇ ಶಿವೋತ್ಸವ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ckb

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಒಂದು ರಾಜ್ಯ ಹಲವು ಜಗತ್ತು ಎಂದು ಬಣ್ಣಿಸಲಾಗುತ್ತಿದೆ. ಅದೇ ರೀತಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯೂ ಒಂದು ಜಿಲ್ಲೆ, ಹಲವು ಜಗತ್ತು. ಪ್ರವಾಸಿ ತಾಣ, ದೇವಾಲಯ, ನದಿ, ಸರೋವರಗಳ ಜೊತೆ ಐತಿಹಾಸಿಕ ಸ್ಥಳಗಳು ಕೂಡ ಚಿಕ್ಕಬಳ್ಳಾಪುರದಲ್ಲಿವೆ. ನಂದಿ ಬೆಟ್ಟದಲ್ಲಿರುವ ಭೋಗನಂದೀಶ್ವರ ದೇವಸ್ಥಾನ ತನ್ನದೇ ಆದ ವಿಶಿಷ್ಠ ಪ್ರಾಮುಖ್ಯತೆ ಪಡೆದಿದೆ ಎಂದು ಹೇಳಿದರು. ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ಹೆಸರಲ್ಲಿ ಕಾಂಗ್ರೆಸ್ ರಾಜಕೀಯವಾಗಿ ದುರ್ಬಳಕೆ : ಡಾ.ಕೆ.ಸುಧಾಕರ್

ಮಹಾಶಿವರಾತ್ರಿ ದಿನ ನಂದೀ ಕ್ಷೇತ್ರದಲ್ಲಿ ವಿಭಿನ್ನ ಮತ್ತು ವೈಭವದ ಶಿವೋತ್ಸವ ಆಚರಿಸಲು ತೀರ್ಮಾನ ಮಾಡಲಾಗಿದೆ. ಇಡೀ ಜಿಲ್ಲೆಯ ಹಾಗೂ ನಾಡಿನ ಜನತೆಗೆ ಶಿವನ ಅನುಗ್ರಹ ಸಿಗಬೇಕು ಅನ್ನುವ ಆಶಯದಿಂದ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಭೋಗನಂದೀಶ್ವರ ದೇವಾಲಯ ಪ್ರಾಚೀನ ದೇವಾಲಯ. ಈ ಕ್ಷೇತ್ರ, ಕದಂಬರು, ಚೋಳರು, ಹೊಯ್ಸಳರು, ವಿಜಯನಗರದ ಆಳ್ವಿಕೆಯನ್ನು ಕೂಡ ಕಂಡಿದೆ. ಈ ಬಾರಿ ಜಿಲ್ಲಾಡಳಿತದ ಸಹಕಾರದಿಂದ ಶಿವೋತ್ಸವ ನಡೆಸಲಾಗುತ್ತದೆ. ಮುಂದಿನ ವರ್ಷದಿಂದ ಸರ್ಕಾರವೇ ಇದರ ನಿರ್ವಹಣೆ ಮಾಡಲಿದೆ ಎಂದರು.

ರಾಜ್ಯದಲ್ಲಿ ಮೈಸೂರು ಚಾಮುಂಡೇಶ್ವರಿ ಕ್ಷೇತ್ರವು ದಸರಾ ಆಚರಣೆಗೆ ಪ್ರಸಿದ್ಧಿ ಹೊಂದಿದ್ದರೆ, ಹಂಪಿ ಕೂಡ ಹಂಪಿ ಉತ್ಸವಕ್ಕೆ ಜನಪ್ರಿಯತೆ ಪಡೆದಿದೆ. ಬೆಂಗಳೂರಿನಲ್ಲಿ ಕರಗ ಉತ್ಸವ ವಿಶ್ವಖ್ಯಾತಿ ಪಡೆದಿದೆ. ಈ ವರ್ಷದಿಂದ ಆರಂಭವಾಗುವ ಶಿವೋತ್ಸವ ಕೂಡ ಇದೇ ರೀತಿಯ ಖ್ಯಾತಿಯನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

SUDHAKAR METTING

ಈ ಬಾರಿಯ ಶಿವೋತ್ಸವಕ್ಕೆ ಥಾವರ್ ಚಾಂದ್ ಗೆಹ್ಲೋಟ್, ಚಾಲನೆ ಕೊಡಲಿದ್ದಾರೆ. ಮುಖ್ಯಮಂತ್ರಿಗಳಿಗೆ ಕೂಡ ಆಹ್ವಾನ ನೀಡಲಾಗಿದೆ. ಅನೇಕ ಸಂತರು, ಗುರುಗಳು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಸಿರಿಗೆರೆಯ ಮಹಾಸ್ವಾಮಿಗಳು, ಸತ್ಯ ಸಾಯಿ ಸಂಸ್ಥೆಯ ಮಧುಸೂದನ್ ಗುರುಗಳು ಕೂಡ ಶಿವೋತ್ಸವಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ:  ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ

ಮಾರ್ಚ 1ರ ಸಂಜೆ 6 ಗಂಟೆಗೆ ಆರಂಭವಾಗಿ, ಬೆಳಗ್ಗೆ ರಥೋತ್ಸವ ನಡೆಯುವ ತನಕ ನಿರಂತರವಾಗಿ ಸಾಂಸ್ಕೃತಿಕ, ಭಕ್ತಿ ಹಾಗೂ ಜಾಗರಣೆ ಕಾರ್ಯಕ್ರಮಗಳು ನಡೆಯಲಿವೆ. ರಾಷ್ಟ್ರೀಯ ಮಟ್ಟದ ಸಂಗೀತ, ನಾಟ್ಯ ಕಲಾವಿದರು, ಚಿತ್ರ ತಾರೆಯರು ಕೂಡ ಇದರಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 25 ಹೆಸರಾಂತ ವಿವಿಧ ತಂಡಗಳು ಭಾಗವಹಿಸಲಿವೆ. ನಗೆ ಹಬ್ಬ ಕೂಡ ಇರಲಿದೆ. ಜಾನಪದ ಕಲೆಗಳು, ಭರತ ನಾಟ್ಯ ಕೂಡ ಆಕರ್ಷಣೆಯಾಗಿರಲಿದೆ. ಮಧ್ಯಾಹ್ನ 1 ಗಂಟೆಯಿಂದ ಹಿಡಿದು, ಮುಂದಿನ ದಿನ ರಥೋತ್ಸವ ಆಗುವ ತನಕ ನಿರಂತರ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಹೇಳಿದರು.

ಮಹಾಶಿವರಾತ್ರಿ ಪ್ರಯುಕ್ತ ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ 'ನಂದಿ ಶಿವೋತ್ಸವ'ದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲಾಯಿತು.

ನಂತರ ಸಿದ್ಧತೆಗಳನ್ನು ಪರಿಶೀಲಿಸಲು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಜಿಲ್ಲಾಧಿಕಾರಿ, ಎಸ್ ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/jFchs8nuf9

— Dr Sudhakar K (@mla_sudhakar) February 26, 2022

ದೀಪಾಲಂಕಾರ:
ನಂದಿ ಬೆಟ್ಟದಲ್ಲಿ ದೀಪಾಲಂಕಾರ ಮಾಡಲಾಗುತ್ತದೆ. ಬೆಟ್ಟದಲ್ಲಿ ಲೇಸರ್ ಶೋ ಇರಲಿದೆ. ಸುಮಾರು 2 ಲಕ್ಷ ಜನರು ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. 20 ರಿಂದ 25 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. 3 ಸಾವಿರ ಫೋರ್‌ ವಿಲರ್‌ಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. 5 ಸಾವಿರ ದ್ವಿಚಕ್ರವಾಹನಗಳ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಊಟದ ವ್ಯವಸ್ಥೆಗೆ 25 ರಿಂದ 30 ಕೌಂಟರ್ 24 ಗಂಟೆಯೂ ಕಾರ್ಯನಿರ್ವಹಿಸಲಿದೆ ಎಂದು ಸಚಿವರು ವಿವರಿಸಿದರು.

ದೇವಾಸ್ಥಾನದ ಆವರಣದಲ್ಲಿ 25 ರಿಂದ 40 ಮಳಿಗೆಗಳು ಸ್ಥಳೀಯ ವಸ್ತುಗಳ ಪ್ರದರ್ಶನಕ್ಕೆ ಸೀಮಿತವಾಗಿರಲಿದೆ. ಜಿಲ್ಲೆಯ ವಿಶೇಷತೆಗಳನ್ನು ಇಲ್ಲಿ ಪ್ರದರ್ಶನಕ್ಕೆ ಇಡಲಾಗುವುದು ಎಂದರು.‌

Mekedatu Padyatra DK Shivakumar Siddaramaiah

ಕಾಂಗ್ರೆಸ್ ರಾಜಕೀಯ:
ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ರಾಜಕೀಯ ಉದ್ದೇಶ ಮತ್ತು ದುರ್ಬಳಕೆಯಾಗಿದೆ. ಅಧಿಕಾರದಲ್ಲಿದ್ದ 7 ವರ್ಷಗಳಲ್ಲಿ ಯೋಜನೆ ಮಾಡಿ ಮುಗಿಸಬಹುದಿತ್ತು. ಆದರೆ ಆ ಪಕ್ಷಕ್ಕೆ ಬದ್ಧತೆ ಇಲ್ಲ, ಜನರು ಮೂರ್ಖರಲ್ಲ. ಡಿಪಿಆರ್ ಮಾಡಲು ಕೇವಲ 3 ತಿಂಗಳು ಸಾಕು. ಆದರೆ 7 ವರ್ಷ ಕಾಲ ಹರಣ ಮಾಡಿ ಈಗ ಮೇಕೆದಾಟು ಯೋಜನೆ ಬಗ್ಗೆ ಹೋರಾಟ ಮಾಡುವ ನಾಟಕ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಭಯ ಬೇಡ:
ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ನಡೆಯುತ್ತಿದೆ. ರಾಜ್ಯದ ಹಲವು ವಿದ್ಯಾರ್ಥಿಗಳು ಅಲ್ಲಿದ್ದಾರೆ. ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಹಾಗೂ ವಿದೇಶಾಂಗ ಇಲಾಖೆ ಜೊತೆ ಸಂಪರ್ಕದಲ್ಲಿದ್ದಾರೆ. ವಿದ್ಯಾರ್ಥಿಗಳು ತಾವೇ ನಿರ್ಧಾರ ಮಾಡಿಕೊಂಡು ಬೇರೆ ದೇಶದ ಗಡಿಗಳಿಗೆ ಬರಬಾರದು. ಸರ್ಕಾರದ ಮಾರ್ಗಸೂಚಿಯಂತೆ ಮುಂದುವರಿಯಬೇಕು. ಎಲ್ಲರೂ ಸುರಕ್ಷಿತವಾಗಿದ್ದಾರೆ. ಅವರನ್ನು ಶೀಘ್ರದಲ್ಲೇ ತವರಿಗೆ ಕರೆ ತರಲಾಗುವುದು ಎಂದು ಹೇಳಿದರು.

TAGGED:dr. k sudhakarShree Bhoga And Yoga Nandeeshwara Swamy Temple Chikkaballapurಡಾ ಕೆ ಸುಧಾಕರ್ಶಿವೋತ್ಸವ
Share This Article
Facebook Whatsapp Whatsapp Telegram

You Might Also Like

bihar lawyer murder
Crime

ಬಿಹಾರ; ನಡುರಸ್ತೆಯಲ್ಲೇ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
3 hours ago
KGF
Districts

ಕೆಜಿಎಫ್‌ನಲ್ಲಿ ಚಿನ್ನದ ಗಣಿಗಾರಿಕೆಗೆ ಕೇಂದ್ರ ಒಪ್ಪಿಗೆ

Public TV
By Public TV
3 hours ago
India vs England Test
Cricket

ಟೀಂ ಇಂಡಿಯಾ ಬೌಲರ್‌ಗಳ ಅಬ್ಬರಕ್ಕೆ ಆಂಗ್ಲರ ಪಡೆ ತತ್ತರ; ಭಾರತದ ಗೆಲುವಿಗೆ 193 ರನ್‌ ಗುರಿ

Public TV
By Public TV
3 hours ago
Sneha Debnath Yamuna River Delhi Tripura
Crime

ದೆಹಲಿಯಲ್ಲಿ ಕಾಣೆಯಾಗಿದ್ದ ಯುವತಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

Public TV
By Public TV
4 hours ago
Leopard Death
Crime

ರೈಲ್ವೆ ಹಳಿ ಬಳಿ ಎರಡು ಚಿರತೆಗಳ ಮೃತದೇಹ ಪತ್ತೆ – ರೈಲು ಡಿಕ್ಕಿಯಾಗಿ ಸಾವು ಶಂಕೆ

Public TV
By Public TV
4 hours ago
bhatkal town police station
Crime

ಭಟ್ಕಳ ನಗರವನ್ನು 24 ಗಂಟೆಯಲ್ಲಿ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರು ವಶಕ್ಕೆ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?