Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರ ಒಂದೇ ವರ್ಷದಲ್ಲಿ ನೀರು ಕೊಟ್ಟರೆ ತಲೆ ಬೋಳಿಸಿಕೊಳ್ತೀನಿ ಎಂದಿದ್ದೆ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರ ಒಂದೇ ವರ್ಷದಲ್ಲಿ ನೀರು ಕೊಟ್ಟರೆ ತಲೆ ಬೋಳಿಸಿಕೊಳ್ತೀನಿ ಎಂದಿದ್ದೆ: ಎಚ್‍ಡಿಕೆ

Bengaluru City

ಸರ್ಕಾರ ಒಂದೇ ವರ್ಷದಲ್ಲಿ ನೀರು ಕೊಟ್ಟರೆ ತಲೆ ಬೋಳಿಸಿಕೊಳ್ತೀನಿ ಎಂದಿದ್ದೆ: ಎಚ್‍ಡಿಕೆ

Public TV
Last updated: March 9, 2022 7:06 pm
Public TV
Share
3 Min Read
HD KUMARSWAMY
SHARE

ಬೆಂಗಳೂರು: ಎತ್ತಿನಹೊಳೆ ಯೋಜನೆಯ ಭಾಗವಾಗಿ ಚಿಕ್ಕಬಳ್ಳಾಪುರದಲ್ಲಿ ಅಡಿಗಲ್ಲು ಹಾಕಿದಾಗ ಒಂದೇ ವರ್ಷದಲ್ಲಿ ನೀರು ಕೊದಲಾಗುವುದು ಎಂದು ಸರ್ಕಾರ ಹೇಳಿತ್ತು. ಅವತ್ತೇ ನಾನು ಕೋಲಾರದಲ್ಲಿ ಹೇಳಿದ್ದೆ, ಒಂದೇ ವರ್ಷದಲ್ಲಿ ನೀರು ಕೊಟ್ಟರೆ ತಲೆ ಬೋಳಿಸಿಕೊಳ್ತೀನಿ ಎಂದಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

SESSION SIDDARAMAIAIH

ವಿಧಾನಸಭೆಯಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚಿಕ್ಕಬಳ್ಳಾಪುರದಲ್ಲಿ ಅಡಿಗಲ್ಲು ಹಾಕಿದಾಗ ಒಂದೇ ವರ್ಷದಲ್ಲಿ ನೀರು ಕೊದಲಾಗುವುದು ಎಂದು ಸರ್ಕಾರ ಹೇಳಿತ್ತು. ಅವತ್ತೇ ನಾನು ಕೋಲಾರದಲ್ಲಿ ಹೇಳಿದ್ದೆ, ಒಂದೇ ವರ್ಷದಲ್ಲಿ ನೀರು ಕೊಟ್ಟರೆ ತಲೆ ಬೋಳಿಸಿಕೊಳ್ತೀನಿ ಅಂತ. ಆಗ ನನಗೆ ಸ್ವಲ್ಪ ಕೂದಲಿತ್ತು. ಹೇ.. ಅವನಿಗೆ ಕೂದಲೇ ಇಲ್ಲ, ಅವನೆಲ್ಲಿ ತಲೆ ಬೋಳಿಸ್ಕೋತಾನೆ ಅಂದಿದ್ರು, ನನಗೆ ನೆನಪಿದೆ ಎಂದು ಎತ್ತಿನಹೊಳೆಯ ಹಣೆಬರಹವನ್ನು ಸದನದ ಗಮನಕ್ಕೆ ತಂದರು. ಎತ್ತಿನಹೊಳೆ ಯೋಜನೆಯ ಎಲ್ಲ ವಿವರಗಳನ್ನು, ಕಷ್ಟ ನಷ್ಟಗಳನ್ನು ಸವಿಸ್ತಾರವಾಗಿ ಹೇಳಿದರು. ಇದನ್ನೂ ಓದಿ: ಕನ್ನಡದಲ್ಲಿ ಮಾತಾಡೋಕೆ ಹೇಳಿ, ನಮಗೆ ಏನೂ ಅರ್ಥ ಆಗ್ತಿಲ್ಲ: ಪರಿಷತ್‌ ಕಲಾಪದಲ್ಲಿ ಗಲಾಟೆ

ettina hole 1

ಪ್ರಸಕ್ತ ಬಜೆಟ್‍ನಲ್ಲಿ ಈ ಯೋಜನೆಗೆ 3,000 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಹಾಗೆ ನೋಡಿದರೆ ಮೊದಲಿಗೆ ಇವೆರಡೂ ಜಿಲ್ಲೆಗಳಿಗೆ ನೀರು ತರುವ ನಿರ್ಧಾರ ಮಾಡಿದ್ದು 2011-12ರಲ್ಲಿ. ಆಗ ಜಲ ಸಂಪನ್ಮೂಲ ಸಚಿವರಾಗಿದ್ದವರು ಈಗಿನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು. ಆದರೆ ಎತ್ತಿನಹೊಳೆಯ ನೀರಿನ ಮೂಲ ಯಾವುದು? ನೀರಿನ ಲಭ್ಯತೆಯ ಖಾತರಿ ಇಲ್ಲದೆ ಲೋಕಸಭೆ ಚುನಾವಣೆ ಘೋಷಣೆ ಆದಾಗ ಚಿಕ್ಕಬಳ್ಳಾಪುರದಲ್ಲಿ ತರಾತುರಿಯಲ್ಲಿ ಕಾರ್ಯಕ್ರಮ ಮಾಡಿ ಶಂಕುಸ್ಥಾಪನೆ ಮಾಡಲಾಯಿತು. ಈಗ ನೀರು ಯಾವಾಗ ಬರುತ್ತದೆ ಎಂದು ಅವರು ಕೇಳಿದರು.

SESSION 1

ನೇತ್ರಾವತಿ ನದಿಯಿಂದ ಮೂರು ಹಂತಗಳಲ್ಲಿ ನೀರನ್ನು ಬರಪೀಡಿತ ಜಿಲ್ಲೆಗಳಿಗೆ 24 ಟಿಎಂಸಿ ನೀರನ್ನು ಹರಿಸುವ ಈ ಯೋಜನೆಗೆ 2013ರಲ್ಲಿ 8,323 ಕೋಟಿ, 2014ರಲ್ಲಿ 12,912ಕೋಟಿಗೆ ಎಸ್ಟಿಮೇಟ್ ಮಾಡಲಾಯಿತು. ಆದರೆ ಹತ್ತು ವರ್ಷ ಆದರೂ ಯೋಜನೆ ಇನ್ನೂ ಆಗುತ್ತಲೇ ಇದೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಇದನ್ನೂ ಓದಿ: ವಿಧಾನಸಭೆ ಕಲಾಪಕ್ಕೆ ಸಚಿವರು ಗೈರು – ಸ್ಪೀಕರ್ ಗರಂ

Ettinahole Project 5

ಇಷ್ಟು ದಿನವಾದರೂ ಕೇವಲ ಲೈನ್ ಎಸ್ಟಿಮೇಟ್ ಮೂಲಕವೇ ಕಾಮಗಾರಿ ಮಾಡಲಾಗುತ್ತಿದೆ. ಇಷ್ಟಾದರೂ ಇಂದು ಹೊಸದಾಗಿ 3000 ಕೋಟಿ ಹಣ ಇಟ್ಟಿದ್ದು, ಅದು ಬಳಕೆ ಆಗಬೇಕು ಎನ್ನುವುದು ನನ್ನ ಆಶಯ ಎಂದರು ಅವರು.

ತುಮಕೂರಿನ ದೇವರಾಯನ ದುರ್ಗದಲ್ಲಿ 10 ಟಿಎಂಸಿ ನೀರು ಸಂಗ್ರಹಿಸಲು ಜಲಾಶಯ ಕಟ್ಟಬೇಕು ಅಂತ ಹೊರಟ ಸರ್ಕಾರ, ಕ್ರಮೇಣ ಅದನ್ನು ಕೈಬಿಟ್ಟು ಮಧುಗಿರಿಯ ಬೈರಗೊಂಡ್ಲು ಬಳಿ 5.7 ಟಿಎಂಸಿ ಜಲಾಶಯ ಕಟ್ಟಲು ಹೊರಡುತ್ತಾರೆ. ಆದರೆ, ಅಲ್ಲಿ ಅರಣ್ಯ ಪ್ರದೇಶ ಮುಳುಗಡೆ ಆಗುತ್ತದೆ ಎನ್ನುವ ಕಾರಣಕ್ಕೆ ಆ ಜಲಾಶಯದ ನೀರು ಸಂಗ್ರಹಣೆ ಪ್ರಮಾಣವನ್ನು ಕಡಿಮೆ ಮಾಡಲು ತೀರ್ಮಾನಿಸಲಾಗಿದೆ. ಹೀಗಾದರೆ ಹೇಗೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಅಲ್ಲಿ ಭೂ ಸ್ವಾಧೀನ ದೊಡ್ಡ ಬಿಕ್ಕಟ್ಟಾಗಿದೆ. ದೊಡ್ಡಬಳ್ಳಾಪುರದಲ್ಲಿ ಏಕೆರೆಗೆ 32 ಲಕ್ಷ ಬೇಕೆಂದು ರೈತರು ಕೇಳುತ್ತಿದ್ದಾರೆ. ಕೊರಟಗೆರೆಗೆ 8 ಲಕ್ಷ ಗೈಡ್ ಲೈನ್ಸ್ ವ್ಯಾಲ್ಯೂ ನಿಗದಿ ಮಾಡಿದ್ದು, ಅವರೂ ಈಗ 32 ಲಕ್ಷ ರೂ. ಕೇಳುತ್ತಿದ್ದಾರೆ. ಹೀಗೆ ವೆಚ್ಚ ಏರುತ್ತಾ ಹೋಗಿ ಈಗ 25ಸಾವಿರ ಕೋಟಿ ಮರು ಅಂದಾಜಿಗೆ ಬಂದು ನಿಂತಿದೆ ಎಂದು ಯೋಜನೆಯ ಕಗ್ಗಂಟುಗಳನ್ನು ಮಾಜಿ ಮುಖ್ಯಮಂತ್ರಿಗಳು ಬಿಡಿಸಿಟ್ಟರು. ಇದನ್ನೂ ಓದಿ: ಸದನ ಬೀಗರ ಮನೆಯಲ್ಲ – ಸಚಿವರ ಗೈರಿಗೆ ಸಭಾಪತಿಗಳು ಗರಂ

Ettinahole Project 8

ಓಪನ್ ಕೆನಾಲ್ ಗ್ರಾವಿಟಿಯಲ್ಲಿ, 15 ಡೆಲಿವರಿ ಪಾಯಿಂಟ್ ಮೂಲಕ ತುಮಕೂರು, ರಾಮನಗರ, ಚಿಕ್ಕಮಗಳೂರು, ಹಾಸನ ಜಿಲ್ಲೆಗೆ ನೀರು ಕೊಡೋದಕ್ಕೆ ಪಾಯಿಂಟ್‍ಗಳನ್ನು ಮಾಡಿದ್ದಾರೆ. ಇಷ್ಟಕ್ಕೆ 14 ಟಿಎಂಸಿ ನೀರು ಅಗತ್ಯ. ಆದರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ 10 ಟಿಎಂಸಿ ನೀರು ಬೇಕು. ಅಷ್ಟು ನೀರನ್ನು ಎಲ್ಲಿಂದ ತರುತ್ತಾರೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

TAGGED:Basvarj Bommaihd kumaraswamykarnataka assembly sessionyettinahole projectಎಚ್‍ಡಿ ಕುಮಾರಸ್ವಾಮಿಎತ್ತಿನಹೊಳೆಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

suraj bigg boss
Bigg Boss: ಕಿಚ್ಚನ ಅನುಪಸ್ಥಿತಿಯಲ್ಲಿ ಬಿಗ್‌ ಬಾಸ್‌ ಮನೆಯಿಂದ ಸೂರಜ್‌ ಔಟ್‌
Cinema Latest Top Stories TV Shows
Sanvi Sudeep 1
ನನ್ನ ದೇಹ ಚರ್ಚೆಯ ವಿಷಯವಲ್ಲ: ಟ್ರೋಲರ್ಸ್‌ಗೆ ಸಾನ್ವಿ ಸುದೀಪ್ ಕೌಂಟರ್
Cinema Latest Sandalwood Top Stories
allu arjun 7
ಪುಷ್ಪಾ-2 ಕಾಲ್ತುಳಿತ ಕೇಸ್ – ನಟ ಅಲ್ಲು ಅರ್ಜುನ್‌ ಸೇರಿ 23 ಮಂದಿ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಕೆ
Cinema Latest Main Post National
vijayalakshmi 1 1
`ಮಹಿಳೆ ತುಂಬಾ ಶಕ್ತಿಶಾಲಿ’ – ದರ್ಶನ್ ಪತ್ನಿ ಟಾಂಗ್‌ ಕೊಟ್ಟಿದ್ದು ಯಾರಿಗೆ?
Cinema Latest Sandalwood Top Stories

You Might Also Like

Murugha Shri
Chitradurga

ಕೋರ್ಟ್ ಆದೇಶ ಉಲ್ಲಂಘಿಸಿ ಮಠದ ಆಸ್ತಿ ಮಾರಾಟ – ಮುರುಘಾಶ್ರೀ ವಿರುದ್ಧ ಮತ್ತೊಂದು ಆರೋಪ

Public TV
By Public TV
33 minutes ago
love fraud
Bengaluru City

ಲವ್-ಸೆಕ್ಸ್ ದೋಖಾ; ಯುವತಿ ಜೊತೆ ಸಲುಗೆ ಬೆಳೆಸಿ 37 ಲಕ್ಷ ವಂಚನೆ – ಆರೋಪಿ ಬಂಧನ

Public TV
By Public TV
47 minutes ago
bengaluru drugs
Bengaluru City

ಹೊಸ ವರ್ಷಾಚರಣೆ ಹೊಸ್ತಿಲಲ್ಲೇ ಭರ್ಜರಿ ಬೇಟೆ; ಬೆಂಗಳೂರಲ್ಲಿ 55.88 ಕೋಟಿ ಮೌಲ್ಯದ ಡ್ರಗ್ಸ್ ಸೀಜ್

Public TV
By Public TV
2 hours ago
NAMMA METRO 5
Bengaluru City

ಮೆಟ್ರೋದಲ್ಲಿ ಮೊಬೈಲ್‌ ಸೌಂಡ್‌ ಜಾಸ್ತಿ ಇಡೋದು, ತಿಂಡಿ ತಿನ್ನೋದು ಮಾಡಿದ್ರೆ ಬೀಳುತ್ತೆ ದಂಡ

Public TV
By Public TV
2 hours ago
Hassan Bus Accident copy
Crime

ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ – ಬಸ್ ಚಾಲಕ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
3 hours ago
helium cylinder blast case mysuru eyewitness
Latest

2 ಹೆಜ್ಜೆ ಮುಂದಿಟ್ಟಿದ್ದರೆ ನಾನು ಇವತ್ತು ಬದುಕಿರುತ್ತಿರಲಿಲ್ಲ.. ನನ್ನ ಮುಂದೆ ದೇಹದ ಭಾಗ ಬಿದ್ದಿತ್ತು: ಮೈಸೂರು ಸ್ಫೋಟ ಬಗ್ಗೆ ಪ್ರತ್ಯಕ್ಷದರ್ಶಿ ಮಾತು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?