ಬೀದರ್: ಕುಡಿದ ಅಮಲಿನಲ್ಲಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ನಗರದ ಹೊರ ವಲಯದ ದೇವ ಉದ್ಯಾನವನದ ಬಳಿ ನಡೆದಿದೆ.
ಕುಡಿದ ಅಮಲಿನಲ್ಲಿ ಚಾಲಕನೊಬ್ಬನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತೊಬ್ಬರು ಬ್ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಲ್ಯಾಂಡಿಂಗ್
ನಗರದ ಬುತ್ತಿ ಬಸವಣ್ಣ ಕಾಲೋನಿಯ ನಿವಾಸಿಗಳಾದ ವಿದ್ಯಾಧರ್ (28) ಹಾಗೂ ಶಾಮ್ ರಾವ್ (30) ಸಾವನ್ನಪ್ಪಿದ ದುರ್ವೈವಿಗಳು. ಇಬ್ಬರು ಯುವಕರು ಪಾರ್ಟಿ ಮಾಡಿ ತೆಲಂಗಾಣದಿಂದ ಬೀದರ್ಗೆ ಬರುತ್ತಿದ್ದರು. ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.