Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಂಜಾಬ್‌ನಲ್ಲಿ AAP ಗೆದ್ದಿದ್ದು ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಂಜಾಬ್‌ನಲ್ಲಿ AAP ಗೆದ್ದಿದ್ದು ಹೇಗೆ?

Latest

ಪಂಜಾಬ್‌ನಲ್ಲಿ AAP ಗೆದ್ದಿದ್ದು ಹೇಗೆ?

Public TV
Last updated: March 10, 2022 11:15 am
Public TV
Share
3 Min Read
ARVIND KEJRIWAL
SHARE

ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಆಮ್ ಆದ್ಮಿ ಪಕ್ಷ (Aam Aadmi Party) 88 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕ್ಲೀನ್ ಸ್ವೀಪ್ ಸಾಧನೆಯತ್ತ ಸಾಗಿದೆ. ಕಳೆದ 70 ವರ್ಷಗಳಿಂದ ಪಂಜಾಬ್ ರಾಜ್ಯವನ್ನು ಆಳಿದ ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳ (SDA) ಸಾಂಪ್ರದಾಯಿಕ ಪಕ್ಷಗಳಿಗಿಂತ ಈಗ ಎಎಪಿ ಮುನ್ನಡೆ ಸಾಧಿಸಲು ಐದು ಪ್ರಮುಖ ಕಾರಣಗಳಿವೆ.

ಪಂಜಾಬ್‌ನಲ್ಲಿ ಬಿಜೆಪಿ-ಅಕಾಲಿದಳ, ಕಾಂಗ್ರೆಸ್ ಸರ್ಕಾರಗಳ ಆಡಳಿತವನ್ನು ನೋಡಿದ್ದರು. ಹೊಸ ಪಕ್ಷಕ್ಕೆ ಅಧಿಕಾರ ನೀಡುವ ಬಯಕೆಯನ್ನು ಹೊಂದಿದ್ದರು. ಇದಕ್ಕೆ ಪೂರಕ ಎನ್ನುವಂತೆ ಒಂದು ಅವಕಾಶವನ್ನು ಎಎಪಿ ಕೇಳಿತ್ತು. ದೆಹಲಿ ಸರ್ಕಾರದ ಜನಪ್ರಿಯ ಯೋಜನೆಗಳು ಪಂಜಾಬ್ ಜನರ ಗಮನ ಸೆಳೆದಿವೆ. ಶಾಲೆಗಳ ಅಭಿವೃದ್ಧಿ, ಉಚಿತ ವಿದ್ಯುತ್ – ನೀರು ಜನರನ್ನು ಸೆಳೆಯಲು ಮತ್ತೊಂದು ಕಾರಣವಾಗಿದೆ. ಬಿಜೆಪಿಗೆ ಅಸ್ತಿತ್ವ ಇಲ್ಲ, ಮಾಜಿ ಸಿಎಂ ಅಮರೀಂದರ್ ಸಿಂಗ್ ವಯಸ್ಸಿನ ಕಾರಣ ಪಂಜಾಬ್ ಜನರು ಕೈ ಬಿಟ್ಟರು ಎಂದು ವಿಶ್ಲೇಷಿಸಲಾಗಿದೆ.

ಅಕಾಲಿದಳ ಬಿಜೆಪಿ ಜೊತೆಗಿದ್ದ ಕಾರಣ ಮತ್ತು ಈಗಾಗಲೇ ಆಡಳಿತ ನೋಡಿರುವ ಕಾರಣ ಜನ ತಿರಸ್ಕರಿಸಿದ್ದಾರೆ. ಇನ್ನು ಕಾಂಗ್ರೆಸ್ ಒಳ ಬಂಡಾಯ, ನಾಯಕರ ನಡುವಿನ ಜಗಳ, ಸಿಎಂ ಅಭ್ಯರ್ಥಿ ಘೋಷಣೆ ವಿಳಂಬವೂ ಆಪ್‌ಗೆ ನೆರವುವಾಗಿದೆ. ಕಳೆದ ಬಾರಿ ಎರಡನೇ ಅತಿದೊಡ್ಡ ಪಕ್ಷವಾಗಿದ್ದ ಆಪ್ ಈ ಬಾರಿ ಅದ್ಭುತವಾಗಿ ಆಗಿ ಪ್ರಚಾರ ನಡೆಸಿತ್ತು. ಗೊಂದಲಗಳಿಗೆ ಅವಕಾಶ ನೀಡದೇ ಅಭಿವೃದ್ಧಿಯ ಮೇಲೆ ಚುನಾವಣೆಗೆ ತೆರಳಿತ್ತು.

AAP ಮುನ್ನಡೆಗೆ ಪ್ರಮುಖ ಕಾರಣಗಳೇನು?
1.ಬದಲಾವಣೆಯ ಕೂಗು
ಪಂಜಾಬ್‌ನಲ್ಲಿ 1997ರಿಂದ 2001ರವರೆಗೆ ಅಂದರೆ ಸುಮಾರು 24 ವರ್ಷಗಳು ಬಿಜೆಪಿಯೊಂದಿಗೆ ಎಸ್‌ಡಿಎ ಪಾಲುದಾರಿಕೆಯೊಂದಿಗೆ ಸಾಂಪ್ರದಾಯಿಕವಾಗಿ ಅಧಿಕಾರ ನಡೆಸಿತ್ತು. 2007 ಮತ್ತು 2012 ಗೆದ್ದಿದ್ದ ಕಾಂಗ್ರೆಸ್‌ಗೆ ಪರ್ಯಾಯವಾಗಿದೆ. ಈ ಬಾರಿ ಪಂಜಾಬ್‌ನಲ್ಲಿ ಮತದಾರರು ಬದಲಾವಣೆಗೆ ಮತ ಹಾಕಿದ್ದಾರೆ. ಎರಡು ದೊಡ್ಡ ಪಕ್ಷಗಳ 70 ವರ್ಷಗಳ ಆಡಳಿತವನ್ನು ಮತದಾರರು ನೋಡಿದ್ದಾರೆ. ಹೀಗಾಗಿ ಬೇರೆ ಪಕ್ಷಕ್ಕೆ ಅವಕಾಶ ನೀಡುವ ಕಾಲ ಬಂದಿದೆ. ಈ ಬಾರಿ ನಾವು ಮೂರ್ಖರಾಗುವುದಿಲ್ಲ. ಭಗವಂತ್ ಮಾನ್ ಮತ್ತು ಕೇಜ್ರಿವಾಲ್‌ಗೆ ಅವಕಾಶ ನೀಡುತ್ತೇವೆ’ ಎಂಬ ಎಎಪಿ ಘೋಷಣೆಯು ರಾಜ್ಯಾದ್ಯಂತ ಪ್ರತಿಧ್ವನಿಸಿತು.

ದೆಹಲಿ ಮಾದರಿ
ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ದೆಹಲಿ ಮಾದರಿಯ ಆಡಳಿತದ ಮೂಲಕ ಪಂಜಾಬ್ ಮತದಾರರ ಗಮನ ಸೆಳೆದರು. ಗುಣಮಟ್ಟದ ಸರ್ಕಾರಿ ಶಿಕ್ಷಣ, ಆರೋಗ್ಯ, ವಿದ್ಯುತ್ ಮತ್ತು ಅಗ್ಗದ ದರದಲ್ಲಿ ನೀರು ಪೂರೈಕೆ ಅವರ ಪ್ರಮುಖ ಸಾಧನೆಗಳಾಗಿವೆ. ಹಾಲಿ ಮತ್ತು ಹಿಂದಿನ ಸರ್ಕಾರಗಳ ಅಧಿಕಾರ ದಾಹ, ವಿವಿಧ ವಲಯಗಳಲ್ಲಿ ಮಿತಿ ಮೀರಿದ್ದ ದರಗಳು, ಆರೋಗ್ಯ ಮತ್ತು ಶಿಕ್ಷಣದ ಖಾಸಗೀಕರಣ ಜನರಲ್ಲಿ ಬೇಸರ ಮೂಡಿಸಿತ್ತು.

ಯುವಸಮುದಾಯ ಮತ್ತು ಮಹಿಳೆಯರು
ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಅವಕಾಶ ಬಯಸುವ ಯುವಜನರು ಮತ್ತು ಮಹಿಳಾ ಮತದಾರರಿಂದ ಎಎಪಿ ಬೆಂಬಲ ಪಡೆದಿದೆ. ರಾಜ್ಯದಲ್ಲಿ ಮಿತಿಮೀರಿರುವ ಭ್ರಷ್ಟಾಚಾರವನ್ನು ಬೇರುಸಮೇತ ಕಿತ್ತೊಗೆಯುವ ಕೇಜ್ರಿವಾಲ್ ಅವರ ಭರವಸೆ ಈ ಎರಡು ಸಮುದಾಯಗಳನ್ನು ಆಕರ್ಷಿಸಿತು. ಶಿಕ್ಷಣ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡುವುದನ್ನು ಕೇಜ್ರಿವಾಲ್ ಅವರು ಒತ್ತಿ ಹೇಳಿದ್ದರು. ರಾಜ್ಯದ ಮಹಿಳೆಯರ ಖಾತೆಗಳಿಗೆ ತಿಂಗಳಿಗೆ 1,000 ರೂಪಾಯಿ ಜಮೆ ಮಾಡುವ ಭರವಸೆಯನ್ನೂ ನೀಡಿದ್ದರು. ಆ ಮೂಲಕ ಯುವಜನತೆ ಮತ್ತು ಮಹಿಳೆಯರನ್ನು ಓಲೈಸುವಲ್ಲಿ ಎಎಪಿ ಯಶಸ್ವಿಯಾಗಿದೆ.

ಭಗವಂತ್ ಮಾನ್ ಸಿಎಂ ಅಭ್ಯರ್ಥಿಯಾಗಿದ್ದು
ಭಗವಂತ್ ಮಾನ್ (Bhagwant Mann) ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದ್ದು ಪಂಜಾಬ್‌ನಲ್ಲಿ ಎಎಪಿ ಮುನ್ನಡೆಗೆ ಸಹಾಯವಾಗಿದೆ. ರಾಜಕೀಯ ಮತ್ತು ಸಾಮಾಜಿಕ ವಿಡಂಬನೆಗಳ ಮೂಲಕವೇ ಪಂಜಾಬ್ ಜನತೆಯ ಹೃದಯದಲ್ಲಿ ಭಗವಂತ್ ಮಾನ್ ಸ್ಥಾನ ಪಡೆದಿದ್ದಾರೆ. ಇತರೆ ರಾಜಕಾರಣಿಗಳಿಗಿಂತ ಭಿನ್ನ ಧ್ವನಿ ಮತ್ತು ಮಣ್ಣಿನ ಮಗ ಎಂಬ ಖ್ಯಾತಿಯನ್ನು ಹೊಂದಿದ್ದಾರೆ. ವ್ಯಕ್ತಿತ್ವದಲ್ಲಿ ಸರಳವಾಗಿ ಗುರುತಿಸಿಕೊಂಡಿದ್ದಾರೆ. ಇದು ಕೂಡ ಪಂಜಾಬ್ ಜನತೆ ಎಎಪಿ ಕಡೆ ಮುಖಮಾಡಲು ಕಾರಣವಾಗಿದೆ.

ಕೃಷಿ ಕಾಯ್ದೆಗಳ ವಿರುದ್ಧದ ಆಂದೋಲನ
ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಪಂಜಾಬ್ ರೈತರು ಭಾರೀ ಸಂಖ್ಯೆಯಲ್ಲಿ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಹೋರಾಟಕ್ಕೆ ಎಎಪಿ ಕೂಡ ಸಹಕಾರ ನೀಡಿತ್ತು. ಇಂತಹ ಪ್ರಮುಖ ಬೆಳವಣಿಗೆಗಳು ಪಂಜಾಬ್ ರಾಜಕೀಯ ವಲಯದಲ್ಲಿ ಬದಲಾವಣೆ ಗಾಳಿ ಬೀಸಲು ಕಾರಣವಾಗಿವೆ.

TAGGED:aapArvind Kejriwalbhagwant mannpunjab election 2022ಅರವಿಂದ್ ಕೇಜ್ರಿವಾಲ್ಎಎಪಿಪಂಜಾಬ್‌ ಚುನಾವಣೆಭಗವಂತ್ ಮಾನ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
8 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
20 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
23 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
35 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
1 hour ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?