Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪಂಜಾಬ್‌ನಲ್ಲಿ AAP ಗೆದ್ದಿದ್ದು ಹೇಗೆ?

Public TV
Last updated: March 10, 2022 11:15 am
Public TV
Share
3 Min Read
ARVIND KEJRIWAL
SHARE

ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಆಮ್ ಆದ್ಮಿ ಪಕ್ಷ (Aam Aadmi Party) 88 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕ್ಲೀನ್ ಸ್ವೀಪ್ ಸಾಧನೆಯತ್ತ ಸಾಗಿದೆ. ಕಳೆದ 70 ವರ್ಷಗಳಿಂದ ಪಂಜಾಬ್ ರಾಜ್ಯವನ್ನು ಆಳಿದ ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳ (SDA) ಸಾಂಪ್ರದಾಯಿಕ ಪಕ್ಷಗಳಿಗಿಂತ ಈಗ ಎಎಪಿ ಮುನ್ನಡೆ ಸಾಧಿಸಲು ಐದು ಪ್ರಮುಖ ಕಾರಣಗಳಿವೆ.

ಪಂಜಾಬ್‌ನಲ್ಲಿ ಬಿಜೆಪಿ-ಅಕಾಲಿದಳ, ಕಾಂಗ್ರೆಸ್ ಸರ್ಕಾರಗಳ ಆಡಳಿತವನ್ನು ನೋಡಿದ್ದರು. ಹೊಸ ಪಕ್ಷಕ್ಕೆ ಅಧಿಕಾರ ನೀಡುವ ಬಯಕೆಯನ್ನು ಹೊಂದಿದ್ದರು. ಇದಕ್ಕೆ ಪೂರಕ ಎನ್ನುವಂತೆ ಒಂದು ಅವಕಾಶವನ್ನು ಎಎಪಿ ಕೇಳಿತ್ತು. ದೆಹಲಿ ಸರ್ಕಾರದ ಜನಪ್ರಿಯ ಯೋಜನೆಗಳು ಪಂಜಾಬ್ ಜನರ ಗಮನ ಸೆಳೆದಿವೆ. ಶಾಲೆಗಳ ಅಭಿವೃದ್ಧಿ, ಉಚಿತ ವಿದ್ಯುತ್ – ನೀರು ಜನರನ್ನು ಸೆಳೆಯಲು ಮತ್ತೊಂದು ಕಾರಣವಾಗಿದೆ. ಬಿಜೆಪಿಗೆ ಅಸ್ತಿತ್ವ ಇಲ್ಲ, ಮಾಜಿ ಸಿಎಂ ಅಮರೀಂದರ್ ಸಿಂಗ್ ವಯಸ್ಸಿನ ಕಾರಣ ಪಂಜಾಬ್ ಜನರು ಕೈ ಬಿಟ್ಟರು ಎಂದು ವಿಶ್ಲೇಷಿಸಲಾಗಿದೆ.

ಅಕಾಲಿದಳ ಬಿಜೆಪಿ ಜೊತೆಗಿದ್ದ ಕಾರಣ ಮತ್ತು ಈಗಾಗಲೇ ಆಡಳಿತ ನೋಡಿರುವ ಕಾರಣ ಜನ ತಿರಸ್ಕರಿಸಿದ್ದಾರೆ. ಇನ್ನು ಕಾಂಗ್ರೆಸ್ ಒಳ ಬಂಡಾಯ, ನಾಯಕರ ನಡುವಿನ ಜಗಳ, ಸಿಎಂ ಅಭ್ಯರ್ಥಿ ಘೋಷಣೆ ವಿಳಂಬವೂ ಆಪ್‌ಗೆ ನೆರವುವಾಗಿದೆ. ಕಳೆದ ಬಾರಿ ಎರಡನೇ ಅತಿದೊಡ್ಡ ಪಕ್ಷವಾಗಿದ್ದ ಆಪ್ ಈ ಬಾರಿ ಅದ್ಭುತವಾಗಿ ಆಗಿ ಪ್ರಚಾರ ನಡೆಸಿತ್ತು. ಗೊಂದಲಗಳಿಗೆ ಅವಕಾಶ ನೀಡದೇ ಅಭಿವೃದ್ಧಿಯ ಮೇಲೆ ಚುನಾವಣೆಗೆ ತೆರಳಿತ್ತು.

AAP ಮುನ್ನಡೆಗೆ ಪ್ರಮುಖ ಕಾರಣಗಳೇನು?
1.ಬದಲಾವಣೆಯ ಕೂಗು
ಪಂಜಾಬ್‌ನಲ್ಲಿ 1997ರಿಂದ 2001ರವರೆಗೆ ಅಂದರೆ ಸುಮಾರು 24 ವರ್ಷಗಳು ಬಿಜೆಪಿಯೊಂದಿಗೆ ಎಸ್‌ಡಿಎ ಪಾಲುದಾರಿಕೆಯೊಂದಿಗೆ ಸಾಂಪ್ರದಾಯಿಕವಾಗಿ ಅಧಿಕಾರ ನಡೆಸಿತ್ತು. 2007 ಮತ್ತು 2012 ಗೆದ್ದಿದ್ದ ಕಾಂಗ್ರೆಸ್‌ಗೆ ಪರ್ಯಾಯವಾಗಿದೆ. ಈ ಬಾರಿ ಪಂಜಾಬ್‌ನಲ್ಲಿ ಮತದಾರರು ಬದಲಾವಣೆಗೆ ಮತ ಹಾಕಿದ್ದಾರೆ. ಎರಡು ದೊಡ್ಡ ಪಕ್ಷಗಳ 70 ವರ್ಷಗಳ ಆಡಳಿತವನ್ನು ಮತದಾರರು ನೋಡಿದ್ದಾರೆ. ಹೀಗಾಗಿ ಬೇರೆ ಪಕ್ಷಕ್ಕೆ ಅವಕಾಶ ನೀಡುವ ಕಾಲ ಬಂದಿದೆ. ಈ ಬಾರಿ ನಾವು ಮೂರ್ಖರಾಗುವುದಿಲ್ಲ. ಭಗವಂತ್ ಮಾನ್ ಮತ್ತು ಕೇಜ್ರಿವಾಲ್‌ಗೆ ಅವಕಾಶ ನೀಡುತ್ತೇವೆ’ ಎಂಬ ಎಎಪಿ ಘೋಷಣೆಯು ರಾಜ್ಯಾದ್ಯಂತ ಪ್ರತಿಧ್ವನಿಸಿತು.

ದೆಹಲಿ ಮಾದರಿ
ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ದೆಹಲಿ ಮಾದರಿಯ ಆಡಳಿತದ ಮೂಲಕ ಪಂಜಾಬ್ ಮತದಾರರ ಗಮನ ಸೆಳೆದರು. ಗುಣಮಟ್ಟದ ಸರ್ಕಾರಿ ಶಿಕ್ಷಣ, ಆರೋಗ್ಯ, ವಿದ್ಯುತ್ ಮತ್ತು ಅಗ್ಗದ ದರದಲ್ಲಿ ನೀರು ಪೂರೈಕೆ ಅವರ ಪ್ರಮುಖ ಸಾಧನೆಗಳಾಗಿವೆ. ಹಾಲಿ ಮತ್ತು ಹಿಂದಿನ ಸರ್ಕಾರಗಳ ಅಧಿಕಾರ ದಾಹ, ವಿವಿಧ ವಲಯಗಳಲ್ಲಿ ಮಿತಿ ಮೀರಿದ್ದ ದರಗಳು, ಆರೋಗ್ಯ ಮತ್ತು ಶಿಕ್ಷಣದ ಖಾಸಗೀಕರಣ ಜನರಲ್ಲಿ ಬೇಸರ ಮೂಡಿಸಿತ್ತು.

ಯುವಸಮುದಾಯ ಮತ್ತು ಮಹಿಳೆಯರು
ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಅವಕಾಶ ಬಯಸುವ ಯುವಜನರು ಮತ್ತು ಮಹಿಳಾ ಮತದಾರರಿಂದ ಎಎಪಿ ಬೆಂಬಲ ಪಡೆದಿದೆ. ರಾಜ್ಯದಲ್ಲಿ ಮಿತಿಮೀರಿರುವ ಭ್ರಷ್ಟಾಚಾರವನ್ನು ಬೇರುಸಮೇತ ಕಿತ್ತೊಗೆಯುವ ಕೇಜ್ರಿವಾಲ್ ಅವರ ಭರವಸೆ ಈ ಎರಡು ಸಮುದಾಯಗಳನ್ನು ಆಕರ್ಷಿಸಿತು. ಶಿಕ್ಷಣ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡುವುದನ್ನು ಕೇಜ್ರಿವಾಲ್ ಅವರು ಒತ್ತಿ ಹೇಳಿದ್ದರು. ರಾಜ್ಯದ ಮಹಿಳೆಯರ ಖಾತೆಗಳಿಗೆ ತಿಂಗಳಿಗೆ 1,000 ರೂಪಾಯಿ ಜಮೆ ಮಾಡುವ ಭರವಸೆಯನ್ನೂ ನೀಡಿದ್ದರು. ಆ ಮೂಲಕ ಯುವಜನತೆ ಮತ್ತು ಮಹಿಳೆಯರನ್ನು ಓಲೈಸುವಲ್ಲಿ ಎಎಪಿ ಯಶಸ್ವಿಯಾಗಿದೆ.

ಭಗವಂತ್ ಮಾನ್ ಸಿಎಂ ಅಭ್ಯರ್ಥಿಯಾಗಿದ್ದು
ಭಗವಂತ್ ಮಾನ್ (Bhagwant Mann) ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದ್ದು ಪಂಜಾಬ್‌ನಲ್ಲಿ ಎಎಪಿ ಮುನ್ನಡೆಗೆ ಸಹಾಯವಾಗಿದೆ. ರಾಜಕೀಯ ಮತ್ತು ಸಾಮಾಜಿಕ ವಿಡಂಬನೆಗಳ ಮೂಲಕವೇ ಪಂಜಾಬ್ ಜನತೆಯ ಹೃದಯದಲ್ಲಿ ಭಗವಂತ್ ಮಾನ್ ಸ್ಥಾನ ಪಡೆದಿದ್ದಾರೆ. ಇತರೆ ರಾಜಕಾರಣಿಗಳಿಗಿಂತ ಭಿನ್ನ ಧ್ವನಿ ಮತ್ತು ಮಣ್ಣಿನ ಮಗ ಎಂಬ ಖ್ಯಾತಿಯನ್ನು ಹೊಂದಿದ್ದಾರೆ. ವ್ಯಕ್ತಿತ್ವದಲ್ಲಿ ಸರಳವಾಗಿ ಗುರುತಿಸಿಕೊಂಡಿದ್ದಾರೆ. ಇದು ಕೂಡ ಪಂಜಾಬ್ ಜನತೆ ಎಎಪಿ ಕಡೆ ಮುಖಮಾಡಲು ಕಾರಣವಾಗಿದೆ.

ಕೃಷಿ ಕಾಯ್ದೆಗಳ ವಿರುದ್ಧದ ಆಂದೋಲನ
ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಪಂಜಾಬ್ ರೈತರು ಭಾರೀ ಸಂಖ್ಯೆಯಲ್ಲಿ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಹೋರಾಟಕ್ಕೆ ಎಎಪಿ ಕೂಡ ಸಹಕಾರ ನೀಡಿತ್ತು. ಇಂತಹ ಪ್ರಮುಖ ಬೆಳವಣಿಗೆಗಳು ಪಂಜಾಬ್ ರಾಜಕೀಯ ವಲಯದಲ್ಲಿ ಬದಲಾವಣೆ ಗಾಳಿ ಬೀಸಲು ಕಾರಣವಾಗಿವೆ.

TAGGED:aapArvind Kejriwalbhagwant mannpunjab election 2022ಅರವಿಂದ್ ಕೇಜ್ರಿವಾಲ್ಎಎಪಿಪಂಜಾಬ್‌ ಚುನಾವಣೆಭಗವಂತ್ ಮಾನ್
Share This Article
Facebook Whatsapp Whatsapp Telegram

Cinema Updates

ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
4 hours ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ ಪಡುಕೋಣೆ
7 hours ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
10 hours ago
Nandamuri Balakrishna
ಬಾಲಯ್ಯ ಜನ್ಮದಿನಕ್ಕೆ `ಅಖಂಡ-2′ ಟೀಸರ್ ರಿಲೀಸ್ – ಮಾಸ್ ಅವತಾರದಲ್ಲಿ ಅಬ್ಬರಿಸಿದ ನಂದಮೂರಿ ಬಾಲಕೃಷ್ಣ
11 hours ago

You Might Also Like

Nandi Hills 2
Chikkaballapur

ನಂದಿಬೆಟ್ಟಕ್ಕೆ ಮೂರು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ

Public TV
By Public TV
19 minutes ago
Vinay Kulkarni
Belgaum

ಶುಕ್ರವಾರ ಶರಣಾಗುತ್ತೇನೆ – ವಿನಯ್ ಕುಲಕರ್ಣಿ ಸಭೆಯಲ್ಲಿ ಪತ್ನಿ ಹಾಜರ್‌

Public TV
By Public TV
32 minutes ago
Manipur Internet Suspend
Latest

ಮಣಿಪುರದ 3 ಜಿಲ್ಲೆಗಳಲ್ಲಿ ಬೆ.5 ರಿಂದ ಸ.5ರವರೆಗೆ ನಿಷೇಧಾಜ್ಞೆ ಸಡಿಲಿಕೆ

Public TV
By Public TV
40 minutes ago
CT Ravi 2
Bengaluru City

ಕಾಂಗ್ರೆಸ್ಸಿನವರೇ ಸಿಕ್ಸ್, ಫೋರ್ ಹೊಡೆದು ಆರ್‌ಸಿಬಿಯನ್ನು ಗೆಲ್ಲಿಸಿದಂತೆ ಅವರಿಗೆ ಆತುರ ಇತ್ತು – ಸಿ.ಟಿ.ರವಿ

Public TV
By Public TV
1 hour ago
ESHWAR KHANDRE
Bengaluru City

ಹುಲಿ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ಸಂತಾಪ

Public TV
By Public TV
2 hours ago
Siddaramaiah 3
Latest

ಚಿನ್ನಸ್ವಾಮಿ ಕಾಲ್ತುಳಿತ | ಸರ್ಕಾರದ ಕ್ರಮಗಳ ಬಗ್ಗೆ ವರಿಷ್ಠರಿಗೆ ವಿವರಿಸಿದ್ದೇನೆ – ಸಿದ್ದರಾಮಯ್ಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?