Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಗೆ ಗೆಲುವು – 4 ದಾಖಲೆ ಬರೆದ ಸಿಎಂ ಯೋಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಜೆಪಿಗೆ ಗೆಲುವು – 4 ದಾಖಲೆ ಬರೆದ ಸಿಎಂ ಯೋಗಿ

Latest

ಬಿಜೆಪಿಗೆ ಗೆಲುವು – 4 ದಾಖಲೆ ಬರೆದ ಸಿಎಂ ಯೋಗಿ

Public TV
Last updated: March 10, 2022 1:41 pm
Public TV
Share
3 Min Read
yogi adityanath
SHARE

ನವದೆಹಲಿ: ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಏರುವ ಮೂಲಕ ಯೋಗಿ ಆದಿತ್ಯನಾಥ್ 4 ದಾಖಲೆಯನ್ನು ಬರೆದಿದ್ದಾರೆ. 1985ರ ನಂತರ ಯಾವುದೇ ಪಕ್ಷ ಸತತ ಎರಡು ಬಾರಿ ಉತ್ತರ ಪ್ರದೇಶವನ್ನು ಆಳಿಲ್ಲ. ಆದರೆ ಈ ಬಾರಿ ಯೋಗಿ ನೇತೃತ್ವದಲ್ಲಿ ಮೊದಲ ಸಲ ಬಿಜೆಪಿ ಸತತ ಎರಡು ಚುನಾವಣೆಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ.

ಅಧಿಕಾರಾವಧಿ ಪೂರ್ಣಗೊಳಿಸಿದ ಮೂರನೇ ಮುಖ್ಯಮಂತ್ರಿ
ಯೋಗಿ ಆದಿತ್ಯನಾಥ್ ಈಗಾಗಲೇ ತಮ್ಮ ಹೆಸರಿಗೆ ದಾಖಲೆಯೊಂದನ್ನು ನೋಂದಾಯಿಸಿಕೊAಡಿದ್ದಾರೆ. ಮೇ 20, 1952 ರಂದು ಭಾರತದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯದ ಮೊದಲ ಅಸೆಂಬ್ಲಿಯನ್ನು ರಚಿಸಿದಾಗಿನಿಂದ ಇಲ್ಲಿಯವರೆಗೆ, ಯುಪಿ ಸುಮಾರು 70 ವರ್ಷಗಳಲ್ಲಿ 21 ಸಿಎಂಗಳನ್ನು ಕಂಡಿದೆ. ಆದರೆ ಕೇವಲ ಮೂವರು ಮಾತ್ರ ಐದು ವರ್ಷಗಳ ಸಂಪೂರ್ಣ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ್ದಾರೆ.

yogi adityanath

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಧಿನಾಯಕಿ ಮಾಯಾವತಿ 2007-2012ರಲ್ಲಿ ಮೊದಲ ಬಾರಿಗೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ 2012-2017ರ ಅವಧಿಯಲ್ಲಿ ಅಧಿಕಾರ ಪೂರ್ಣಗೊಳಿಸಿದ್ದರು. ಇದಾದ ಬಳಿಕ ಯೋಗಿ ಆದಿತ್ಯನಾಥ್ ಪೂರ್ಣಾವಧಿಯನ್ನು ಪೂರ್ಣಗೊಳಿಸಿದ ಮೂರನೇ ಮುಖ್ಯ ಮಂತ್ರಿಯಾಗಿದ್ದಾರೆ. ಇದನ್ನೂ ಓದಿ: ಈ ಕ್ರಾಂತಿಗಾಗಿ ಪಂಜಾಬ್ ಜನತೆಗೆ ಧನ್ಯವಾದಗಳು: ಕೇಜ್ರಿವಾಲ್

15 ವರ್ಷದ ಬಳಿಕ ನೇರ ಆಯ್ಕೆಯಾಗಿ ಸಿಎಂ
ಈ ಬಾರಿ ಗೋರ್‌ಖ್ ಪುರ ಕ್ಷೇತ್ರದಿಂದ ಸ್ಪರ್ಧಿಸಿರುವ ಯೋಗಿ ಆದಿತ್ಯನಾಥ್ ಗೆದ್ದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರೆ 15 ವರ್ಷದ ಬಳಿಕ ವಿಧಾನಸಭೆಯಿಂದ ಆಯ್ಕೆಯಾದ ಶಾಸಕರೊಬ್ಬರು ಸಿಎಂ ಆದಂತಾಗಲಿದೆ. 2007-2012ರಲ್ಲಿ ಸಿಎಂ ಆಗಿದ್ದ ಮಾಯಾವತಿ, 2012-2017ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಅಖಿಲೇಶ್ ಯಾದವ್ ಎಂಎಲ್‌ಸಿಯಾಗಿ ಮುಖ್ಯಮಂತ್ರಿ ಗಾದಿಗೇರಿದ್ದರು.

Yogi Adityanath Narendra Modi 1

ಕಳೆದ 2017ರ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಸಿಎಂ ಆಗಿ ಆಯ್ಕೆಯಾಗಿದ್ದರು. ಅದಕ್ಕೂ ಮುನ್ನ ಅವರು ಗೋರಖ್ ಪುರ ಕ್ಷೇತ್ರದ ಸಂಸದರಾಗಿದ್ದರು. ಸಿಎಂ ಆದ ಬಳಿಕ ಅವರು ಆರು ತಿಂಗಳಲ್ಲಿ ಶಾಸಕರಾಗಬೇಕಿತ್ತು. ಅದಕ್ಕಾಗಿ ಅವರೂ ವಿಧಾನಸಭೆ ಮೊರೆ ಹೋಗದೇ ಪರಿಷತ್ ಮೂಲಕ ಆಯ್ಕೆಯಾಗಿದ್ದರು.

37 ವರ್ಷಗಳಲ್ಲಿ ಅಧಿಕಾರ ಉಳಿಸಿಕೊಂಡ ಮೊದಲ ಸಿಎಂ
ಈವರೆಗೂ ಉತ್ತರ ಪ್ರದೇಶದಲ್ಲಿ ನಾಲ್ಕು ಮಂದಿ ಮುಖ್ಯಮಂತ್ರಿಗಳು ಎರಡನೇ ಅವಧಿಗೆ ಆ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಅವಿಭಜಿತ ಉತ್ತರ ಪ್ರದೇಶ ಸಮಯದಲ್ಲಿ 1985 ರಲ್ಲಿ ಕಾಂಗ್ರೆಸ್‌ನ ನಾರಯಣ ದತ್ತ ತಿವಾರಿ ಅಧಿಕಾರ ಉಳಿಸಿಕೊಂಡ ಕಡೆಯ ಸಿಎಂ. ಇದಕ್ಕೂ ಮೊದಲು 1957 ರಲ್ಲಿ ಸಂಪೂರ್ಣನAದ, 1962 ಚಂದ್ರಭಾನು ಗುಪ್ತಾ, 1974 ರಲ್ಲಿ ಹೇಮಾವತಿ ನಂದನ್ ಬಹುಗುಣ ಅಧಿಕಾರ ಎರಡನೇ ಬಾರಿಗೆ ಉಳಿಸಿಕೊಂಡಿದ್ದರು. ಈಗ ಯೋಗಿ ಆದಿತ್ಯನಾಥ್ ಅದನ್ನು ಉಳಿಸಿಕೊಳ್ಳುವ ಮೂಲಕ 37 ವರ್ಷಗಳಲ್ಲಿ ಅಧಿಕಾರ ಉಳಿಸಿಕೊಂಡ ಮೊದಲ ಮುಖ್ಯಮಂತ್ರಿ ಆಗಿದ್ದಾರೆ. ಇದನ್ನೂ ಓದಿ: ಮೂಢನಂಬಿಕೆಯನ್ನು ಸುಳ್ಳು ಮಾಡಿದ ಯೋಗಿ – ನೋಯ್ಡಾಗೆ ಭೇಟಿ ನೀಡಿದ್ರೂ ಗೆಲುವು!

yogi adityanath

ಬಿಜೆಪಿ ಈವರೆಗೂ ಉತ್ತರ ಪ್ರದೇಶದಲ್ಲಿ ನಾಲ್ಕು ಸಿಎಂಗಳನ್ನು ಕಂಡಿದೆ. ಯೋಗಿ ಆದಿತ್ಯನಾಥ್‌ಗೂ ಮುನ್ನ ಕಲ್ಯಾಣ್ ಸಿಂಗ್, ರಾಮ್ ಪ್ರಕಾಶ್ ಗುಪ್ತಾ, ಹಾಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಮೂವರು ನಾಯಕರು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತಂದಿಲ್ಲ. ಈ ಫಲಿತಾಂಶ ಮೂಲಕ ಬಿಜೆಪಿಯನ್ನು ಎರಡನೇ ಬಾರಿ ಅಧಿಕಾರಕ್ಕೆ ತಂದ ಮೊದಲ ಸಿಎಂ ಆಗಿದ್ದಾರೆ.

ನೊಯ್ಡಾ ಭೇಟಿ ಬಳಿಕ ಅಧಿಕಾರ ಉಳಿಸಿಕೊಂಡ ಸಿಎಂ
ನೊಯ್ಡಾಗೆ ಭೇಟಿಗೆ ನೀಡಿದ ಮುಖ್ಯಮಂತ್ರಿ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ಉತ್ತರ ಪ್ರದೇಶದ ರಾಜಕೀಯದಲ್ಲಿದೆ. ಈ ಕಾರಣಕ್ಕೆ ಹಿಂದೆ ಅಖಿಲೇಶ್ ಯಾದವ್ ಸೇರಿದಂತೆ ಹಲವು ಸಿಎಂಗಳು ನೊಯ್ಡಾಗೆ ತಮ್ಮ ಅಧಿಕಾರದ ಅವಧಿಯಲ್ಲಿ ಭೇಟಿ ನೀಡಿರಲಿಲ್ಲ. ಆದರೆ ಯೋಗಿ ಆದಿತ್ಯನಾಥ್ ತಮ್ಮ ಅವಧಿಯಲ್ಲಿ ಹತ್ತಕ್ಕೂ ಹೆಚ್ಚು ಬಾರಿ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಯುಪಿಯಲ್ಲಿ ಯೋಗಿಯಿಂದ ಇತಿಹಾಸ ಸೃಷ್ಟಿ – ಬಿಜೆಪಿ ಗೆದ್ದಿದ್ದು ಹೇಗೆ?

DtEyGpFU0AAq8C4

ಮೊದಲ ಬಾರಿ ಅವರು ಮೆಟ್ರೋ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಭೇಟಿ ನೀಡಿದ್ದರು. ಇದಾದ ಬಳಿಕ ಅಖಿಲೇಶ್ ಯಾದವ್ ಈ ಇಬ್ಬರು ಮುಂದೆ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಭವಿಷ್ಯ ನುಡಿದಿದ್ದರು. ಆದರೆ 2019 ರಲ್ಲಿ ಮೋದಿ ಮತ್ತೆ ಅಧಿಕಾರಕ್ಕೆ ಬಂದಿದ್ದರು.

1988 ರ ಜೂನ್‌ನಲ್ಲಿ ಆಗಿನ ಯುಪಿ ಸಿಎಂ ವೀರ್ ಬಹದ್ದೂರ್ ಸಿಂಗ್ ಅವರು ನೋಯ್ಡಾದಿಂದ ಹಿಂತಿರುಗಿದ ಕೆಲವು ದಿನಗಳ ನಂತರ ಕಚೇರಿಯನ್ನು ತ್ಯಜಿಸಿದ ನಂತರ ನೋಯ್ಡಾ ಜಿಂಕ್ಸ್ ಜನಪ್ರಿಯವಾಯಿತು. ಅಖಿಲೇಶ್ ಯಾದವ್, ಮುಲಾಯಂ ಸಿಂಗ್ ಯಾದವ್, ಕಲ್ಯಾಣ್ ಸಿಂಗ್ ಮತ್ತು ರಾಜನಾಥ್ ಸಿಂಗ್ ಯುಪಿ ಸಿಎಂ ಆಗಿದ್ದಾಗ ನೋಯ್ಡಾಗೆ ಭೇಟಿ ನೀಡಿರಲಿಲ್ಲ.

TAGGED:bjppoliticsuttar pradeshYogi Adityanathಉತ್ತರ ಪ್ರದೇಶಬಿಜೆಪಿಯೋಗಿ ಆದಿತ್ಯನಾಥ್ರಾಜಕೀಯ
Share This Article
Facebook Whatsapp Whatsapp Telegram

Cinema news

Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories

You Might Also Like

Mushroom masala 3
Food

ಸಿಂಪಲ್ ಆಗಿ ಮಾಡಿ ಮಶ್ರೂಮ್ ಮಸಾಲಾ

Public TV
By Public TV
2 minutes ago
Operation Octopus 2.0
Crime

ಸೈಬರ್ ವಂಚನೆ ವಿರುದ್ಧ ಆಪರೇಷನ್ ಆಕ್ಟೋಪಸ್ – 32 ಬ್ಯಾಂಕ್ ಉದ್ಯೋಗಿಗಳು ಸೇರಿ 52 ಮಂದಿ ಅರೆಸ್ಟ್‌

Public TV
By Public TV
3 minutes ago
ಸಾಂದರ್ಭಿಕ ಚಿತ್ರ
Bengaluru City

CET 2026 – ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

Public TV
By Public TV
7 minutes ago
donald trump iran supreme leader
Latest

ಮತ್ತೆ ಯುದ್ಧದ ಭೀತಿ, ಮಾತುಕತೆ ನಡೆಯೋದೇ ಡೌಟ್‌ – ಇರಾನ್ ನೌಕೆ ವಶಕ್ಕೆ ಪಡೆದ ಅಮೆರಿಕ

Public TV
By Public TV
25 minutes ago
kandakur and Siddaramaiah
Bengaluru City

ನೀವು ರಾಜ್ಯಕ್ಕೆ ಸಿಎಂ? ಅಥವಾ ಮೈಸೂರಿಗೆ ಮಾತ್ರನಾ? – ಇದು ಮಲತಾಯಿ ಧೋರಣೆ, ಸಿದ್ದರಾಮಯ್ಯಗೆ ಶಾಸಕ ಕಂದಕೂರು ಪತ್ರ

Public TV
By Public TV
39 minutes ago
KPCC Muslim leaders express outrage against Jabbar for providing financial assistance to SDPI candidate in Davangere
Bengaluru City

ದಾವಣಗೆರೆಯಲ್ಲಿ SDPI ಅಭ್ಯರ್ಥಿಗೆ ಜಬ್ಬಾರ್‌ ಹಣಕಾಸು ಸಹಾಯ ಮಾಡಿದ್ದಾರೆ: ಸಿಡಿದ ಕೆಪಿಸಿಸಿ ಮುಸ್ಲಿಮ್‌ ನಾಯಕರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?