Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ರಾಜ್ಯಮಟ್ಟದ ಕೃಷಿ ಮೇಳಕ್ಕೆ ಮಂಗಳೂರಿನ ಕೊಲ್ನಾಡು ಸಜ್ಜು

Public TV
Last updated: March 10, 2022 5:51 pm
Public TV
Share
4 Min Read
krushi mela
SHARE

ಮಂಗಳೂರು: ನಗರದ ಹೊರವಲಯದ ಮೂಲ್ಕಿಯ ಕೊಲ್ನಾಡು ಎನ್ನುವ ಪುಟ್ಟ ಊರು ರಾಜ್ಯಮಟ್ಟದ ಕೃಷಿ ಮೇಳಕ್ಕೆ ಮದುವಣಗಿತ್ತಿಯಂತೆ ಸಜ್ಜಾಗಿದೆ. ಮಾರ್ಚ್ 11ರಿಂದ 13ರವರೆಗೆ ಕೃಷಿ ಸಿರಿ-2022 ಜರುಗಲಿದ್ದು ತುಳುನಾಡಿನ ಆಚಾರ ವಿಚಾರ, ಕಲೆ, ಜಾನಪದ ಸಂಸ್ಕೃತಿ, ಕೃಷಿ ಬದುಕಿನ ಅಳಿವು ಉಳಿವಿನ ಬಗ್ಗೆ ಕೃಷಿ ಮೇಳ ಬೆಳಕು ಚೆಲ್ಲಲಿದೆ.

ಮೂರು ದಿನಗಳ ಕಾಲ ಕೃಷಿ ಹಾಗೂ ಕೃಷಿಕರ ಜೀವನದ ಕುರಿತು ಚರ್ಚೆ, ಗೋಷ್ಠಿ ಹಾಗೂ ಸಂವಾದಗಳು ಜರುಗಲಿದ್ದು ಇದಕ್ಕಾಗಿ ವಿಶಾಲ ಮೈದಾನದಲ್ಲಿ ಸಂಘಟಕರು ಸೂಕ್ತ ವ್ಯವಸ್ಥೆ ಕಲ್ಪಿಸಿದ್ದಾರೆ.

ನಿತ್ಯ 10,000 ಜನ ಆಗಮಿಸುವ ನಿರೀಕ್ಷೆ:
ಕೊಲ್ನಾಡಿನಲ್ಲಿ ಜರುಗಲಿರುವ ಕೃಷಿ ಮೇಳ ಹತ್ತು ಹಲವು ವಿಷಯಗಳಿಗೆ ಪ್ರಾಮುಖ್ಯತೆ ಪಡೆದುಕೊಂಡಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಮಾತ್ರವಲ್ಲದೆ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಮಂದಿ ಕೃಷಿಕರು, ಕೃಷಿ ಪ್ರೇಮಿಗಳು ಆಗಮಿಸಲಿದ್ದಾರೆ. ಸಂಘಟಕರ ಪ್ರಕಾರ ದಿನಕ್ಕೆ 10,000 ಮಂದಿ ಆಗಮಿಸುವ ನಿರೀಕ್ಷೆಯಿದ್ದು ಇದಕ್ಕಾಗಿ ವಿಶಾಲವಾದ ವೇದಿಕೆ, ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಇದನ್ನೂ ಓದಿ: ಆಕಸ್ಮಿಕವಾಗಿ ಹೊತ್ತಿ ಉರಿದ ಮನೆ – ರೈತ ಕುಟುಂಬ ಕಂಗಾಲು

krushi mela 4

ಶುಕ್ರವಾರ ಬೆಳಗ್ಗೆ 10ರಿಂದ 11 ಗಂಟೆಯವರೆಗೆ ಯುವ ಜನರಿಗಾಗಿ ಆಧುನಿಕ ಕೃಷಿ ವಿಚಾರಗೋಷ್ಠಿ ನಡೆಯಲಿದ್ದು, ಬಂಟ್ವಾಳ ಶಾಸಕ ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿದ್ದಾರೆ. ಬೆಳಗ್ಗೆ 11:30-12:30ರವರೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ರೈತರಿಗೆ ಸೌಲಭ್ಯ ವಿಷಯದಲ್ಲಿ ವಿಚಾರಗೋಷ್ಠಿ ನಡೆಯಲಿದ್ದು ತೋಟಗಾರಿಕಾ ಇಲಾಖೆ ಹಿರಿಯ ಸಹನಿರ್ದೇಶಕ ಪ್ರವೀಣ್ ಕೆ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಳ್ಳಲಿದ್ದಾರೆ.

ಶನಿವಾರ ಮಾರ್ಚ್ 12ರಂದು ಬೆಳಗ್ಗೆ 10 ರಿಂದ 11ರ ವರೆಗೆ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ವಿಚಾರಗೋಷ್ಠಿ ನಡೆಯಲಿದ್ದು ಕೃಷಿ ವಿವಿ ಹಾಸನ ಇದರ ನಿವೃತ್ತ ಪ್ರಾಧ್ಯಾಪಕ ಎಎ ಫಝಲ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿದ್ದಾರೆ. ಬೆಳಗ್ಗೆ 11:30ರಿಂದ 12:30ರ ವರೆಗೆ ಕಾಲಮಾನ ಅಧರಿತ ಕೃಷಿ ವಿಷಯದಲ್ಲಿ ವಿಚಾರಗೋಷ್ಠಿ ನಡೆಯಲಿದ್ದು ಪ್ರಗತಿಪರ ಕೃಷಿಕ ಶಿವಪ್ರಸಾದ್ ಓರ್ಮುಡಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3ರಿಂದ 4ಗಂಟೆಯವರೆಗೆ ವಿಷಮುಕ್ತ ಆಹಾರದ ಕುರಿತು ವಿಚಾರಗೋಷ್ಠಿ ನಡೆಯಲಿದ್ದು ಆಡ್ಡೂರು ಕೃಷ್ಣ ರಾವ್ ಪಾಲ್ಗೊಳ್ಳಲಿದ್ದಾರೆ.

ದಿನಾಂಕ 13ರಂದು ಬೆಳಗ್ಗೆ 10ರಿಂದ 11ರ ವರೆಗೆ ಜಲಸಂರಕ್ಷಣೆ ವಿಷಯದಲ್ಲಿ ವಿಚಾರಗೋಷ್ಠಿ ಜರುಗಲಿದ್ದು ಡಾ. ಜಗದೀಶ್ ಬಾಳ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿದ್ದಾರೆ. ಬೆಳಗ್ಗೆ 11:30ರಿಂದ ಮನೆಯಲ್ಲಿಯೇ ಕೈತೋಟ ಹಾಗೂ ಸಾವಯವ ಗೊಬ್ಬರ ತಯಾರಿ ವಿಚಾರಗೋಷ್ಠಿ ಜರುಗಲಿದ್ದು ರಾಮಕೃಷ್ಣ ಮಠದ ಏಕಗಮ್ಯಾನಂದ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3ರಿಂದ 4ರವರೆಗೆ ಕೃಷಿ ಮತ್ತು ಅರೋಗ್ಯ ವಿಚಾರಗೋಷ್ಠಿ ನಡೆಯಲಿದ್ದು ವೈದ್ಯ ಅಣ್ಣಯ್ಯ ಕುಲಾಲ್ ಉಳ್ತುರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಜಪಾನ್ ಯೋಧರನ್ನು ಬೀಳ್ಕೊಟ್ಟ ಭಾರತೀಯ ಸೇನೆ

krushi mela 2

ಸಾಂಸ್ಕೃತಿಕ ಕಾರ್ಯಕ್ರಮ, ಭರಪೂರ ಮನೋರಂಜನೆ:
ಕೃಷಿ ಮೇಳದಲ್ಲಿ ಕೃಷಿ ಕುರಿತ ಮಾಹಿತಿ, ಗೋಷ್ಠಿ, ಸಂವಾದದ ಜೊತೆಗೆ ಮೇಳಕ್ಕೆ ಬರುವವರಿಗೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮಕ್ಕಳು, ಮಹಿಳೆಯರಿಗೆ ಮನೋರಂಜನೆ ವ್ಯವಸ್ಥೆ ಮಾಡಲಾಗಿದೆ. 200ಕ್ಕೂ ಹೆಚ್ಚು ಮಳಿಗೆಗಳನ್ನು ಇದಕ್ಕಾಗಿ ವ್ಯವಸ್ಥೆ ಮಾಡಲಾಗಿದ್ದು ಜಾನುವಾರು ಜಾತ್ರೆ, ಕುಕ್ಕುಟ ಮೇಳ, ಚಿಣ್ಣರಿಗೆ ಮನೋರಂಜನೆಗಾಗಿ ಜಾಯಿಂಟ್ ವೀಲ್ ಮತ್ತಿತರ ಆಟದ ವ್ಯವಸ್ಥೆ, ಶುಚಿ ರುಚಿಯಾದ ಸಾಂಪ್ರದಾಯಿಕ ಆಹಾರ ಖಾದ್ಯಗಳ ಫುಡ್ ಕೌಂಟರ್, ಫಲಪುಷ್ಪ ಪ್ರದರ್ಶನ, ಔಷಧಿ ಗಿಡಗಳ ವನಸಿರಿ, ಸಾಂಪ್ರದಾಯಿಕ ಸೆಲ್ಫಿ ಕಾರ್ನರ್ ಎಲ್ಲವನ್ನೂ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ.

ಶುಕ್ರವಾರ ಮಧ್ಯಾಹ್ನ 1 ಗಂಟೆಯಿಂದ ಕಲ್ಲಡ್ಕ ವಿಠಲ ನಾಯಕ್ ಮತ್ತು ತಂಡದಿಂದ ಗೀತಾ ಸಾಹಿತ್ಯ ಸಂಭ್ರಮ, ಸಂಜೆ 4:30ರಿಂದ ರಿದಂ ಸುರತ್ಕಲ್ ತಂಡದಿಂದ ರೈತರ ಅಳಿವು ಉಳಿವು, ಸಂಜೆ 7:30ರಿಂದ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ತಂಡದಿಂದ ನೃತ್ಯ ವೈಭವ, ರಾತ್ರಿ 9:30ರಿಂದ ಕಲಾಕುಂಭ ಸಾಂಸ್ಕೃತಿಕ ವೇದಿಕೆ ಕುಳಾಯಿ ಇವರಿಂದ ತುಳುನಾಡ ಸಂಸ್ಕೃತಿ ಕಾರ್ಯಕ್ರಮ ಜರುಗಲಿದೆ.

ಮಾರ್ಚ್ 12ರಂದು ಬೆಳಗ್ಗೆ 9ರಿಂದ 10:30ರವರೆಗೆ ಹುಭಾಶಿಕ ಕೊರಗರ ಯುವ ವೇದಿಕೆ ಬಾರ್ಕೂರು ಇವರಿಂದ ಕೊರಗರ ಡೋಲು ಕುಣಿತ ಹಾಗೂ ಜಾನಪದ ಕಲಾ ವೈವಿಧ್ಯ, ಮಧ್ಯಾಹ್ನ 1 ಗಂಟೆಯಿಂದ ಸನಾತನ ನಾಟ್ಯಾಲಯ ಮಂಗಳೂರು ಇವರಿಂದ ಪುಣ್ಯಭೂಮಿ ಭಾರತ, ಸಂಜೆ 7:30ರಿಂದ ಕಲಾಶ್ರೀ ಕುಡ್ಲ ತಂಡದಿಂದ ಕುಸಲ್ದ ಕುರ್ಲರಿ, ರಾತ್ರಿ 8:30ರಿಂದ ಲಕುಮಿ ತಂಡದ ಲೇಲೆ ಪಾಡಡೆ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ಭಾನುವಾರ ಬೆಳಗ್ಗೆ 9ರಿಂದ ತುಳು ವರ್ಲ್ಡ್ ಕಾಸರಗೋಡು ಇದರ ಸದಸ್ಯರಿಂದ ಪಾಡ್ದನ ಮೇಳ, ಯಕ್ಷಾಭಿನಯ ಬಳಗ ಇವರಿಂದ ಬಡಗುತಿಟ್ಟು ಯಕ್ಷನೃತ್ಯ ಮತ್ತು ರಕ್ಷಿತ್ ಪಡ್ರೆ ಸಾರಥ್ಯದಲ್ಲಿ ಕೃಷ್ಣಂ ವಂದೇ ಜಗದ್ಗುರುಂ ಯಕ್ಷ ನೃತ್ಯ ಹಾಗೂ ರಾತ್ರಿ 7:30ರಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಇವರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಜರುಗಲಿದೆ. ಇದನ್ನೂ ಓದಿ: ಡಿಕೆಶಿ ವಿಮಾನ ಇಳಿಸಲು ರಾಜ್ಯಗಳೇ ಇಲ್ಲ: ಸುನೀಲ್ ಕುಮಾರ್

krushi mela 1

ಆಕರ್ಷಿಸುತ್ತಿರುವ ಪಾರಂಪರಿಕ ಗ್ರಾಮ:
ಕೃಷಿ ಮೇಳದಲ್ಲಿ ತುಳುನಾಡಿನ ಕೃಷಿ ಹಿನ್ನೆಲೆಯ ಜನರ ಬದುಕನ್ನು ಸಾದರಪಡಿಸುವ ಪಾರಂಪರಿಕ ಗ್ರಾಮ ಜನರನ್ನು ಆಕರ್ಷಿಸುತ್ತಿದೆ. ಮಂಗಳೂರು ವಿಶ್ವವಿದ್ಯಾನಿಲಯ ಪ್ರಾಯೋಜಿತ ಪಾರಂಪರಿಕ ಗ್ರಾಮದಲ್ಲಿ ಕೃಷಿಕರ ಮನೆಗಳು, ಪರಿಸರವನ್ನು ಕಲಾವಿದರ ಕೈಚಳಕದಲ್ಲಿ ಪಡಿಮೂಡಿಸಲಾಗಿದೆ.

ವಿನಯ ಕೃಷಿ ಬೆಳೆಗಾರರ ಸಂಘ ಕೊಲ್ನಾಡು ಮೂಲ್ಕಿ ಹಾಗೂ ಪ್ರಣವ ಸೌಹಾರ್ದ ಸಹಕಾರಿ ನಿಯಮಿತ ಮಂಗಳೂರು ಜಂಟಿಯಾಗಿ ಕೃಷಿ ಮೇಳ ಆಯೋಜನೆ ಮಾಡಿದ್ದು ಹತ್ತಾರು ಸಾಮಾಜಿಕ ಸಂಘಟನೆಗಳು ಕಾರ್ಯಕ್ರಮದ ಯಶಸ್ಸಿಗೆ ಅಹರ್ನಿಶಿ ದುಡಿಯುತ್ತಿವೆ. ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ಸನ್ಮಾನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ. ಕೃಷಿ ಬದುಕು ಮತ್ತು ಅದರಾಚೆಗಿನ ಕೃಷಿಕರ ಸಂಕಷ್ಟಗಳ ಬಗ್ಗೆ ಕೃಷಿ ಸಿರಿ-2022ರಲ್ಲಿ ಗಂಭೀರ ಚಿಂತನೆ ನಡೆಯುವ ಜೊತೆಯಲ್ಲಿ ತುಳುನಾಡಿನ ಅಳಿದುಳಿದ ಕೃಷಿ ಚಟುವಟಿಕೆಗಳು ಗರಿಗೆದರಿದರೆ ಸಮ್ಮೇಳನ ಸಾರ್ಥಕ್ಯ ಪಡೆಯಲಿದೆ.

krushi mela 3

ಎಲ್ಲಿಂದ ಎಷ್ಟು ದೂರ?:
ರಾಜ್ಯಮಟ್ಟದ ಕೃಷಿ ಮೇಳ ನಡೆಯುವ ಕೊಲ್ನಾಡು ಮೂಲ್ಕಿ ಪಟ್ಟಣದಿಂದ 2.5 ಕಿ.ಮೀ ದೂರದಲ್ಲಿದೆ. ಸುರತ್ಕಲ್ ನಿಂದ 13 ಕಿ. ಮೀ, ಮಂಗಳೂರಿನಿಂದ 24 ಕಿ.ಮೀ ಹಾಗೂ ಉಡುಪಿಯಿಂದ 31 ಕಿ.ಮೀ ದೂರದಲ್ಲಿದೆ. ಹತ್ತಿರದ ಪೇಟೆ ಮೂಲ್ಕಿ, ಹತ್ತಿರದ ರೈಲು ನಿಲ್ದಾಣ ಮೂಲ್ಕಿ ಹಾಗೂ ಎಕ್ಸ್ ಪ್ರೆಸ್ ಬಸ್ ನಿಲ್ದಾಣ ಕೊಲ್ನಾಡು ಕಾಲ್ನಡಿಗೆ ದೂರದಲ್ಲಿದೆ. ಕೊಲ್ನಾಡು ತಲುಪಲು ಮಂಗಳೂರು, ಉಡುಪಿ ಕಡೆಯಿಂದ ಸಾಕಷ್ಟು ಸಂಖ್ಯೆಯ ಖಾಸಗಿ ಸರ್ವಿಸ್ ಹಾಗೂ ಎಕ್ಸ್ ಪ್ರೆಸ್ ಬಸ್ ಸೇವೆ ಲಭ್ಯವಿದೆ.

TAGGED:Agriculture FairKolnadukrushi Siri-2022MangaloreState Level Agricultural Fairಕೃಷಿ ಮೇಳಕೃಷಿ ಸಿರಿಕೊಲ್ನಾಡುಮಂಗಳೂರುರಾಜ್ಯಮಟ್ಟದ ಕೃಷಿ ಮೇಳ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood
CHOWKIDAR
ಚೌಕಿದಾರ್ ಜಾಲಿ ಹಾಡಿಗೆ ಕುಣಿದ ಪೃಥ್ವಿ ಅಂಬಾರ್, ಸಾಥ್‌ ಕೊಟ್ಟ ಸಾಯಿ ಕುಮಾರ್
Cinema Latest Sandalwood Top Stories
Siri Ravikumar
`ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್
Cinema Latest
Sudeep
ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದ್ರೂ ಹೋಗ್ತೀನಿ, ಹಣಕಾಸು ಕೊಡಲು ರೆಡಿ ಇದ್ದೀನಿ: ಕಿಚ್ಚ ಸುದೀಪ್‌
Bengaluru City Cinema Latest Main Post Sandalwood

You Might Also Like

Janardhana Poojary
Dakshina Kannada

ಮಸೀದಿ, ಚರ್ಚ್‌ನಲ್ಲಿ ಶವ ಹೂತಿಡಲಿಲ್ವಾ.. ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ: ಜನಾರ್ದನ ಪೂಜಾರಿ ಪ್ರಶ್ನೆ

Public TV
By Public TV
36 minutes ago
Modi 4
Districts

ಸುರಿವ ಮಳೆಯಲ್ಲೇ ಬೀಳ್ಕೊಡುಗೆ – ಕರ್ನಾಟಕದ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೊರಟ ಮೋದಿ

Public TV
By Public TV
55 minutes ago
modi inaugurates bengaluru yellow line metro
Bengaluru City

ಮೆಟ್ರೋ ಕ್ರೆಡಿಟ್‌ ವಾರ್‌ – ಕೇಂದ್ರದ್ದೆಷ್ಟು? ರಾಜ್ಯದ್ದೆಷ್ಟು?

Public TV
By Public TV
1 hour ago
Shivaganga Basavaraj
Davanagere

ಧರ್ಮಸ್ಥಳದ ಧರ್ಮಾಧಿಕಾರಿಗಳು ಸರ್ಕಾರ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ: ಶಿವಗಂಗಾ ಬಸವರಾಜ್

Public TV
By Public TV
1 hour ago
M. Lakshman
Districts

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಮತಗಳ್ಳತನ ಮಾಡಿಯೇ ಬಿಜೆಪಿ ಗೆದ್ದಿದೆ – ಎಂ.ಲಕ್ಷ್ಮಣ್‌ ಆರೋಪ

Public TV
By Public TV
1 hour ago
Narenda modi siddaramaiah dk shivakumar 1
Bengaluru City

ಶಕ್ತಿ ಯೋಜನೆ ಉಲ್ಲೇಖಿಸಿ ಮೋದಿ ಸಿಡಿಸಿದ ಚಟಾಕಿಗೆ ನಕ್ಕಿದ ಸಿಎಂ, ಡಿಸಿಎಂ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?