ಏಳು ದಿನಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ 13ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದ ಸಮಾರೋಪ ಸಮಾರಂಭ ಇಂದು ಬೆಂಗಳೂರಿನ ಜೆ.ಎನ್.ಟಾಟಾ ಆಡಿಟೋರಿಯಂನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚಿತ್ರೋತ್ಸವದಲ್ಲಿ ಭಾಗಿಯಾಗಿ, ನಾನಾ ವಿಭಾಗಗಳಲ್ಲಿ ಸ್ಪರ್ಧಿಸಿದ್ದ ಸಿನಿಮಾಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ಪ್ರದಾನ ಮಾಡಿದರು.
ಮುಖ್ಯ ಅಥಿಗಳಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ.ಆರ್. ಜೈರಾಜ್, ಚಿತ್ರೋತ್ಸವದ ಕಲಾತ್ಮಾಕ ನಿರ್ದೇಶಕ ನರಹರಿರಾವ್, ಕರ್ನಾಟಕ ಚಲನಚಿತ್ರ ಅಕಾಡಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್ ಮುಂತಾದವರು ಭಾಗಿಯಾಗಿದ್ದರು.
2020 ನೇ ಸಾಲಿನ ಪ್ರಶಸ್ತಿಗಳು
ಕನ್ನಡ ಪಾಪ್ಯೂಲರ್ ಎಂಟರ್ ಟೇನ್ಮೆಂಟ್ : ಮೋಸ್ಟ್ ಪಾಪ್ಯುಲರ್ ಕನ್ನಡ ಸಿನಿಮಾ ಅವಾರ್ಡ್
ಅತ್ಯುತ್ತಮ ಚಿತ್ರ : ದಿಯಾ ( ನಿರ್ದೇಶಕ ಕೆ.ಎಸ್.ಅಶೋಕ್)
ಅತ್ಯುತ್ತಮ ಎರಡನೇ ಸಿನಿಮಾ : ಶಿವಾಜಿ ಸುರತ್ಕಲ್ (ನಿರ್ದೇಶಕ ಆಕಾಶ್ ಶ್ರೀವಾತ್ಸ್)
ಅತ್ಯುತ್ತಮ ಮೂರನೇ ಸಿನಿಮಾ : ಲವ್ ಮಾಕ್ಟೆಲ್ (ಡಾರ್ಲಿಂಗ್ ಕೃಷ್ಣ)
ಕನ್ನಡ ಸಿನಿಮಾ ಕಾಂಪಿಟೇಷನ್ : ಬೆಸ್ಟ್ ಫಿಲ್ಮ್ ಅವಾರ್ಡ್
ಅತ್ಯುತ್ತಮ ಚಿತ್ರ : ಪಿಂಕಿ ಎಲ್ಲಿ? (ನಿರ್ದೇಶಕ ಪೃಥ್ವಿ ಕೋನನೂರು)
ಅತ್ಯುತ್ತಮ ಎರಡನೇ ಸಿನಿಮಾ : ದಾರಿ ಯಾವುದಯ್ಯ ವೈಕುಂಟಕೆ (ನಿರ್ದೇಶಕ ಸಿದ್ದು ಪೂರ್ಣಚಂದ್ರ)
ಅತ್ಯತ್ತಮ ಮೂರನೇ ಸಿನಿಮಾ : ಓ ನನ್ನ ಚೇತನ (ಅಪೂರ್ವ ಆಶಾ ದೇವಿ ನಿರ್ದೇಶಕರು)
ಮಸಣದ ಹೂ (ಸ್ಪೆಷಲ್ ಜ್ಯೂರಿ ಅವಾರ್ಡ್)