Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2023ರ ಚುನಾವಣೆಯಲ್ಲಿ ಭಾಜಪ ಕಮಲ ಅರಳಲಿದೆ: ಬಸವರಾಜ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2023ರ ಚುನಾವಣೆಯಲ್ಲಿ ಭಾಜಪ ಕಮಲ ಅರಳಲಿದೆ: ಬಸವರಾಜ ಬೊಮ್ಮಾಯಿ

Bengaluru City

2023ರ ಚುನಾವಣೆಯಲ್ಲಿ ಭಾಜಪ ಕಮಲ ಅರಳಲಿದೆ: ಬಸವರಾಜ ಬೊಮ್ಮಾಯಿ

Public TV
Last updated: March 10, 2022 9:36 pm
Public TV
Share
2 Min Read
BASAVARJ BOMMAI
SHARE

ಬೆಂಗಳೂರು: 2024 ಚುನಾವಣೆ ನಮ್ಮ ಮುಂದೆ ಇದೆ. ಅಂತೆಯೇ ಜವಾಬ್ದಾರಿಯೂ ಬಹಳಷ್ಟಿದೆ. ಈಗ ಕರ್ನಾಟಕವನ್ನು 2023ರಲ್ಲಿ ಮತ್ತೊಮ್ಮೆ ಭಾಜಪದ ಕಮಲವನ್ನು ಅರಳಿಸುವ ಸಮಯ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಅವರು ಇಂದು ಐದು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿರುವ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿ ವಿಜಯೋತ್ಸವ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ನಮ್ಮೆಲ್ಲರ ಜವಾಬ್ದಾರಿ ಹೆಚ್ಚಾಗಲಿದೆ. ಇನ್ನಷ್ಟು ಚುರುಕಾಗಿ ಜಾಗೃತವಾಗಿ ಮತದಾರರ ಬಳಿಗೆ ಹೋಗಿ ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಬೇಕಿದೆ. ಅಧಿಕಾರಿಗಳಿಗೆ ನಾನು ಈಗಾಗಲೇ ಸೂಚನೆಯನ್ನು ನೀಡಿದ್ದೇನೆ. ಈ ತಿಂಗಳಿನೊಳಗೆ ಕಡತಗಳು ಸಿದ್ಧವಾಗಬೇಕು. ಏಪ್ರಿಲ್ ತಿಂಗಳ ಒಳಗೆ ಬಜೆಟ್‍ನಲ್ಲಿ ಏನೇನು ಕಾರ್ಯಕ್ರಮಗಳನ್ನು ಇಲಾಖೆಗಳಿಗೆ ಕೊಟ್ಟಿದ್ದೇವೆ ಅವೆಲ್ಲವುಗಳಿಗೆ ಕಾರ್ಯಾದೇಶ ಆಗಬೇಕು ಎಂದು ಸೂಚಿಸಲಾಗಿದೆ. ಕೂಡಲೇ ಎಲ್ಲಾ ಯೋಜನೆಗಳನ್ನು ಪ್ರಾರಂಭಿಸಿ, ಅನುಷ್ಠಾನಗೊಳಿಸುತ್ತೇವೆ. ಕಟ್ಟಕಡೆಯ ವ್ಯಕ್ತಿಗೂ ಯೋಜನೆಗಳನ್ನು ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಇದನ್ನೂ ಓದಿ: ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಇಳಿಕೆ

MODI YOGI

ರಾಜ್ಯ ಪ್ರವಾಸ: ಯೋಜನೆಗಳ ಪ್ರಚಾರವನ್ನೂ ಬೂತ್ ಮಟ್ಟದಿಂದ ಕಾರ್ಯಕರ್ತರು ಮಾಡಬೇಕು. ಅವುಗಳ ಪ್ರಯೋಜನ ಪಡೆದುಕೊಳ್ಳುವಂತೆ ಮಾಡಬೇಕು. ಭಾಜಪದ ಸದೃಢ ಸಂಘಟನೆ ಮತ್ತು ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳು ಮುಂದಿನ ಚುನಾವಣೆಯಲ್ಲಿ ಬಳಕೆ ಮಾಡಿ ಜನರ ಹೃದಯವನ್ನು ಗೆದ್ದು 2023ರ ಚುನಾವಣೆಯಲ್ಲಿ ಭಾಜಪದ ಕಮಲವನ್ನು ಅರಳಿಸಿ, ಮುಂದಿನ 5 ವರ್ಷ ಸುಭಿಕ್ಷವಾದ ನಾಡನ್ನು ಕಟ್ಟುವ ಸಂಕಲ್ಪವನ್ನು, ಪಣವನ್ನು ತೊಟ್ಟಿದ್ದೇವೆ. ಇದನ್ನೂ ಓದಿ: 12 ಸಾವಿರ ರಷ್ಯಾ ಸೈನಿಕರ ಸಾವು – 20 ಲಕ್ಷ ಉಕ್ರೇನಿಯನ್ನರು ಪಲಾಯನ

bjp - congress

ಅಧಿವೇಶನ ಮುಗಿದ ಕೂಡಲೇ ನಮ್ಮ ನಾಯಕರಾದ ಯಡಿಯೂರಪ್ಪನವರ ಸಮೇತ, ಕೇಂದ್ರದ ನಾಯಕರ ಜೊತೆ ಇಡೀ ರಾಜ್ಯವನ್ನು ಸುತ್ತಿ ಭಾಜಪದ ನೆಲೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ಕೆಲಸ ಮಾಡುತ್ತೇವೆ. ಹೊಸ ಹೊಸ ಕ್ಷೇತ್ರಗಳಲ್ಲಿ ಭಾಜಪವನ್ನು ಆರಿಸುವವರೆಗೂ ಬಿಡುವುದಿಲ್ಲ. ಈಗಾಗಲೇ ಕಾರ್ಯಪ್ರವೃತ್ತವಾಗಿದ್ದೇವೆ. ಅದಕ್ಕಾಗಿ ಸರ್ಕಾರದ ವತಿಯಿಂದ ಎಲ್ಲಾ ಜನಪರವಾದ ಕಾರ್ಯಕ್ರಮಗಳನ್ನು ಮಾಡಲು ನಾವು ಸನ್ನದ್ಧರಾಗಿದ್ದೇವೆ. ಪಕ್ಷದ ಕಾರ್ಯಕರ್ತರು ಕೂಡ ಪಕ್ಷದ ಸಂಘಟನೆ, ಬಲಪಡಿಸುವುದು, ಭಾಜಪವನ್ನು ಅಧಿಕಾರಕ್ಕೆ ತರಲು ಎಲ್ಲಾ ಕಾರ್ಯಕ್ರಮಗಳಿಗೆ ಶಕ್ತಿ ತುಂಬಲು ಸನ್ನದ್ಧರಾಗಬೇಕೆಂದು ಕರೆ ನೀಡಿದರು.

modi yogi1

ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗಲಿದೆ: ದೇಶದಲ್ಲಿ ಕಾಂಗ್ರೆಸ್ ಮುಳುಗಿಹೋಗಿದೆ. ಮುಂದೆ ಕರ್ನಾಟಕದಲ್ಲಿಯೂ ಮುಳುಗಲಿದೆ. ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕಾಗಿ ಹೋರಾಡಬೇಕಿದೆ, ರಾಷ್ಟ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ದಿಕ್ಕು ತೋಚದ, ದಿಕ್ಕಾಪಾಲಾಗಿರುವ ಧೂಳೀಪಟವಾಗಿರುವ ಪಕ್ಷ. ಇಡೀ ರಾಷ್ಟ್ರದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ. ಭಾಜಪ ದೇಶದ ಭವಿಷ್ಯಕ್ಕಾಗಿ ಹೋರಾಟ ಮತ್ತು ಕೆಲಸವನ್ನು ಮಾಡುತ್ತಿದ್ದೇವೆ. ಕಾಂಗ್ರೆಸ್‌ನವರು ತಮ್ಮ ಪಕ್ಷದ ಅಸ್ತಿತ್ವಕ್ಕಾಗಿ ಹೋರಾಟ ಮಾಡುತ್ತಾರೆ. ಇದು ವ್ಯತ್ಯಾಸ. ನಾಲ್ಕು ರಾಜ್ಯಗಳಲ್ಲಿ ವಿಜಯ ಗಳಿಸಿದೆ. ಮಂದೆ ಗುಜರಾತ್, ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ಕರ್ನಾಟಕದಲಿ ಭಾಜಪ ಹುಟ್ಟುವುದು ಅಷ್ಟೇ ಸತ್ಯ ಎಂದರು.

modi yogi
ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರ ನೋಂದಣಿ ಮಾಡಿಸುವವರಿಗೆ ಫ್ರಿಡ್ಜ್, ಟಿವಿಯನ್ನು ಸಿದ್ಧರಾಮಯ್ಯನವರ ಕ್ಷೇತ್ರ ಬಾದಾಮಿಯಲ್ಲಿ ನೀಡಲಾಗಿದೆ. ಕಾಂಗ್ರೆಸ್‌ನವರಿಗೆ  ತೆಗೆದುಕೊಳ್ಳುವುದು ಕೊಡುವುದು ಕರಗತವಾಗಿರುವಂಥದ್ದು. ಯಾವ ಕೆಲಸವೂ ಆಗುವುದಿಲ್ಲ. ಈಗೇನು ಕೊಡುತ್ತಾರೋ, ಅದಕ್ಕೆ ಹತ್ತುಪಟ್ಟು ಅಧಿಕಾರಕ್ಕೆ ಬಂದ ನಂತರ ತೆಗೆದುಕೊಳ್ಳುತ್ತಾರೆ. ಈ ದುಸ್ಥಿತಿಯಲ್ಲಿ ಅವರಿದ್ದಾರೆ. ಅಧಿಕಾರಕ್ಕೆ ಬರುವುದಿಲ್ಲ ಎಂದು ಗೊತ್ತಿದ್ದೇ, ಬೇಜಾವಾಬ್ದಾರಿಯಿಂದ ಬೇಕಾದ್ದನ್ನು ಹೇಳಿದ್ದರು. ನಮ್ಮ ಕಾಂಗ್ರೆಸ್ ನಾಯಕರು ಸರ್ಕಾರ ಮಾಡಲು ಗೋವಾಕ್ಕೆ ತೆರಳಿದ್ದಾರೆ. ಪರಿಸ್ಥಿತಿ ಬೇರೆನೇ ಆಗಿದೆ. ಅವರ ಕಾಲ್ಗುಣ ಸರಿಯಿಲ್ಲ ಎಂದರು.

TAGGED:assembly electionBasavaraj Bommaibengalurubjpcongresselectionಕಾಂಗ್ರೆಸ್ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Working Journalist conference
Bidar

40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ ಸಿಎಂ ಚಾಲನೆ

Public TV
By Public TV
1 minute ago
Koppal Love Jihad
Crime

ಕೊಪ್ಪಳದಲ್ಲಿ ನಡೀತಾ ಲವ್ ಜಿಹಾದ್? – ಮುಸ್ಲಿಂ ಯುವಕನ ಫೋನಲ್ಲಿ ರಾಶಿ ರಾಶಿ ಫೋಟೋ, ವಿಡಿಯೋ ಪತ್ತೆ

Public TV
By Public TV
4 minutes ago
leopard death case
Chamarajanagar

ಮುಳ್ಳುಹಂದಿ ಬೇಟೆಯಾಡಲು ಹೋಗಿ ಚಿರತೆ ಸಾವು

Public TV
By Public TV
17 minutes ago
Haveri
Districts

ಕೆರೆಯಲ್ಲಿ ಹೂಳೆತ್ತುವಾಗ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!

Public TV
By Public TV
23 minutes ago
mobile phones are not allowed during matches in the Indian Premier League Rajasthan Royals were seen breaking the rule and using a mobile phone during the match
Cricket

RCB ವಿರುದ್ಧ ಗೆದ್ದ RRಗೆ ಬಿಗ್ ಶಾಕ್ – ತಂಡದ ಮೇಲೆ ಶಿಸ್ತುಕ್ರಮದ ತೂಗುಗತ್ತಿ

Public TV
By Public TV
55 minutes ago
JDS
Bengaluru City

ಮೋದಿ ಅವ್ರನ್ನ ನೋಡಿ ಸಿದ್ದರಾಮಯ್ಯ ಕಲಿಯಬೇಕು: ಸಿಎಂಗೆ ತಿವಿದ ದೊಡ್ಡಗೌಡರು

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?