Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: BJPಯ ಬಡವರ ಪರ, ಸಕ್ರಿಯ ಆಡಳಿತಕ್ಕೆ ಜನರ ಬೆಂಬಲ ಅನ್ನೋದು ಫಲಿತಾಂಶದಿಂದ ಸಾಬೀತು: ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | BJPಯ ಬಡವರ ಪರ, ಸಕ್ರಿಯ ಆಡಳಿತಕ್ಕೆ ಜನರ ಬೆಂಬಲ ಅನ್ನೋದು ಫಲಿತಾಂಶದಿಂದ ಸಾಬೀತು: ಮೋದಿ

Latest

BJPಯ ಬಡವರ ಪರ, ಸಕ್ರಿಯ ಆಡಳಿತಕ್ಕೆ ಜನರ ಬೆಂಬಲ ಅನ್ನೋದು ಫಲಿತಾಂಶದಿಂದ ಸಾಬೀತು: ಮೋದಿ

Public TV
Last updated: March 10, 2022 9:18 pm
Public TV
Share
2 Min Read
modi election
SHARE

ನವದೆಹಲಿ: ಬಿಜೆಪಿಯ ಬಡವರ ಪರ ಮತ್ತು ಸಕ್ರಿಯ ಆಡಳಿತಕ್ಕೆ ಜನರ ಬೆಂಬಲ ಎಂಬುದನ್ನು ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.

ನಗರದ ಬಿಜೆಪಿ ಹೆಡ್‌ ಕ್ವಾಟ್ರಸ್‌ನಲ್ಲಿ ಮಾತನಾಡಿದ ಅವರು, ಮಾ.10ರಿಂದ ಹೋಳಿ ಆರಂಭವಾಗಲಿದೆ ಎಂದು ನಾವು ಮೊದಲೇ ಹೇಳಿದ್ದೆವು. ಇದು ನಮ್ಮ ಎನ್‌ಡಿಎ ಕಾರ್ಯಕರ್ತರ ʼವಿಜಯ 4′. ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿದ್ದಕ್ಕಾಗಿ, ಬಿಜೆಪಿಗೆ ವಿಜಯವನ್ನು ಖಚಿತಪಡಿಸಿದ್ದಕ್ಕಾಗಿ ನಾನು ಎಲ್ಲಾ ಮತದಾರರಿಗೆ ಧನ್ಯವಾದ ಅರ್ಪಿಸುತ್ತೇನೆ. ಇದೇ ಮೊದಲ ಬಾರಿಗೆ ಎರಡನೇ ಅವಧಿಗೆ ಸಿಎಂ ಆಯ್ಕೆಯಾಗಿದ್ದಾರೆ (ಯೋಗಿ ಆದಿತ್ಯನಾಥ್‌) ಎಂದು ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: EVMಗಳಲ್ಲಿ ಸಮಸ್ಯೆಯಿಲ್ಲ, ಜನರ ತಲೆಯೊಳಗಿನ ಚಿಪ್ಪಿನಲ್ಲಿ ಸಮಸ್ಯೆಯಿದೆ: ಫಲಿತಾಂಶದ ಬಗ್ಗೆ ಓವೈಸಿ ಪ್ರತಿಕ್ರಿಯೆ

bjp workers

ಈ ಚುನಾವಣೆಗಳಲ್ಲಿ ಮಹಿಳೆಯರು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರು ನಮಗೆ ಆಶೀರ್ವಾದ ಮಾಡಿದ್ದಾರೆ. ಮಹಿಳಾ ಮತದಾರರು ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳಲ್ಲಿ ನಾವು ಅದ್ಭುತವಾಗಿ ಗೆದ್ದಿದ್ದೇವೆ. ಈ ವಿಜಯದಲ್ಲಿ ನಮ್ಮ ನಾರಿ ಶಕ್ತಿ ನಮ್ಮ ಪಾಲುದಾರರಾಗಿದ್ದಾರೆ ಎಂದು ಸ್ಮರಿಸಿದ್ದಾರೆ.

ಗೋವಾದಲ್ಲಿ ಎಲ್ಲಾ ಎಕ್ಸಿಟ್‌ ಪೋಲ್‌ಗಳು ತಪ್ಪು ಎಂಬುದು ಸಾಬೀತಾಗಿದೆ. ಉತ್ತರಾಖಂಡದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆದಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಪಕ್ಷವೊಂದು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿದೆ ಎಂದು ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಕುರಿತು ಪ್ರಧಾಣಿ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಜನರು ರಾಷ್ಟ್ರೀಯತೆ, ಅಭಿವೃದ್ಧಿ ಮತ್ತು ಉತ್ತಮ ಆಡಳಿತವನ್ನ ಗೆಲ್ಲಿಸಿದ್ದಾರೆ: ಯೋಗಿ

modi amit shah jp nadda gadkari

ನಾವು 2019ರಲ್ಲಿ (ಕೇಂದ್ರ) ಸರ್ಕಾರವನ್ನು ರಚಿಸಿದಾಗ, 2017ರ (ಯುಪಿ ಗೆಲುವು) ಗೆಲುವಿನಿಂದಾಗಿ ಎಂದು ತಜ್ಞರು ಹೇಳಿದ್ದರು. 2022ರ ಯುಪಿ ಚುನಾವಣಾ ಫಲಿತಾಂಶವೂ 2024ರ ಸಾರ್ವತ್ರಿಕ ಚುನಾವಣೆ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅದೇ ತಜ್ಞರು ಹೇಳುತ್ತಾರೆಂದು ನಾನು ನಂಬುತ್ತೇನೆ ಎಂದು ತಿಳಿಸಿದ್ದಾರೆ.

ಇಂದು ನಾನು ನನ್ನ ಕೆಲವು ಕಾಳಜಿಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ. ಸಾಮಾನ್ಯ ಜನರು ದೇಶದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಕೆಲವರು ರಾಜಕೀಯದ ಗುಣಮಟ್ಟವನ್ನು ಕುಂಠಿತಗೊಳಿಸುತ್ತಿದ್ದಾರೆ. ನಮ್ಮ ಲಸಿಕಾ ಕಾರ್ಯಕ್ರಮವನ್ನು ಜಗತ್ತು ಹೊಗಳಿತು. ಆದರೆ ಕೆಲವರು ನಮ್ಮ ಲಸಿಕೆಗಳನ್ನೇ ಪ್ರಶ್ನಿಸಿದರು ಎಂದು ಪ್ರತಿಪಕ್ಷಗಳ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಇದನ್ನೂ ಓದಿ: ನಾನು ಆತಂಕವಾದಿಯಲ್ಲ ಎಂದು ಮತದಾರರು ಸಾಬೀತು ಮಾಡಿದ್ದಾರೆ: ಕೇಜ್ರಿವಾಲ್

GOA ELECTION 1

ಪಂಜಾಬ್‌ನಲ್ಲಿ ಬಿಜೆಪಿ ಶಕ್ತಿಯಾಗಿ ಹೊರಹೊಮ್ಮುತ್ತಿರುವುದನ್ನು ನಾನು ಈಗಾಗಲೇ ನೋಡುತ್ತಿದ್ದೇನೆ. ನಮ್ಮ ಪಂಜಾಬ್‌ ಕಾರ್ಯಕರ್ತರು ಕಷ್ಟದ ಸಂದರ್ಭಗಳ ನಡುವೆಯೂ ಪಂಜಾಬ್‌ನಲ್ಲಿ ತಮ್ಮ ಕೆಲಸದಿಂದ ಪಕ್ಷ ಹೆಮ್ಮೆಪಡುವಂತೆ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಸಾವಿರಾರು ಭಾರತೀಯ ವಿದ್ಯಾರ್ಥಿಗಳು, ಭಾರತೀಯ ಪ್ರಜೆಗಳು ಉಕ್ರೇನ್‌ನಲ್ಲಿ ಸಿಲುಕಿರುವಾಗಲೂ ದೇಶದ ನೈತಿಕ ಸ್ಥೈರ್ಯವನ್ನು ಮುರಿಯುವ ಮಾತುಗಳು ನಡೆದಿರುವುದು ದುರದೃಷ್ಟಕರ. ಈ ಜನರು ಸಹ ʼಆಪರೇಷನ್‌ ಗಂಗಾʼ ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸಿದರು. ಇದು ಭಾರತದ ಭವಿಷ್ಯಕ್ಕೆ ದೊಡ್ಡ ಆತಂಕವಾಗಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ, ನಾವು ಕಲಿಯುತ್ತೇವೆ: ರಾಹುಲ್ ಗಾಂಧಿ

YOGI

ಯುದ್ಧದಲ್ಲಿ ಹೋರಾಡುತ್ತಿರುವ ರಾಷ್ಟ್ರಗಳೊಂದಿಗೆ (ರಷ್ಯಾ-ಉಕ್ರೇನ್)‌ ಭಾರತವು ಆರ್ಥಿಕ, ರಕ್ಷಣೆ, ಭದ್ರತೆ, ರಾಜಕೀಯ ಸಂಬಂಧಗಳನ್ನು ಹೊಂದಿದೆ. ನಾವು ಸೂರ್ಯಕಾಂತಿ ಎಣ್ಣೆಯಂತಹದ್ದನ್ನೇ ಆಮದು ಮಾಡಿಕೊಳ್ಳುತ್ತೇವೆ. ಕಲ್ಲಿದ್ದಲು, ಅನಿಲ, ಗೊಬ್ಬರಗಳ ಅಂತಾರಾಷ್ಟ್ರೀಯ ಬೆಲೆಗಳು ಪ್ರಪಂಚದಾದ್ಯಂತ ವೇಗವಾಗಿ ಏರುತ್ತಿವೆ ಎಂದು ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ಮತದಾರರು ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆಲುವನ್ನು ಖಚಿತಪಡಿಸಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.

TAGGED:assembly election 2022narendra modiNew Delhiನರೇಂದ್ರ ಮೋದಿನವದೆಹಲಿಪಂಚರಾಜ್ಯ ಚುನಾವಣೆ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
3 minutes ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
14 minutes ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
50 minutes ago
Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
1 hour ago
Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
2 hours ago
Delhi Assembly Masked man arrested
Court

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ ಕೇಸ್ – ಆರೋಪಿಯನ್ನ 8 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?