ತೃಣಮೂಲ ಕಾಂಗ್ರೆಸ್ ಕೌನ್ಸಿಲರ್‌ನ ಹತ್ಯೆ- ಸಿಸಿಟಿವಿಯಲ್ಲಿ ಸೆರೆ

Public TV
1 Min Read
kolkatta murder

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಪಾನಿಹಟಿ ಪುರಸಭೆಯಲ್ಲಿ ನಡೆದ ತೃಣಮೂಲ ಕಾಂಗ್ರೆಸ್ ಕೌನ್ಸಿಲರ್‌ನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ  ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಉತ್ತರ 24 ಪರಗಣ ಜಿಲ್ಲೆಯ ಪಾನಿಹಟಿ ಪುರಸಭೆಯ ವಾರ್ಡ್ ಸಂಖ್ಯೆ 8ರ ಟಿಎಂಸಿ ಕೌನ್ಸಿಲರ್ ಅನುಪಮ್ ದತ್ತಾ ಮೃತ ವ್ಯಕ್ತಿ ಹಾಗೂ ಶಂಭುನಾಥ್ ಪಂಡಿತ್ ಆರೋಪಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿ ಅನುಪಮ್ ದತ್ತಾ ಅವರನ್ನು ಶಂಭುನಾಥ್ ಅವರು ಕೊಲೆ ಮಾಡುತ್ತಿರುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರ ಆಧಾರದ ಮೇಲೆ ಪೊಲೀಸರು ಶಂಭುನಾಥ್ ಅವರನ್ನು ಬಂಧಿಸಿದ್ದಾರೆ.

crime scene e1602054934159 1

ಅನುಪಮ್ ದತ್ತಾ ಸಂಜೆ ಅಗರ್ಪಾರಾದ ಉತ್ತರ ಸ್ಟೇಷನ್ ರಸ್ತೆಯಲ್ಲಿದ್ದಾಗ ಗುಂಡಿನ ದಾಳಿ ನಡೆದಿದೆ. ಇದರಿಂದಾಗಿ ಅನುಪಮ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬೆಂಗಳೂರು ಮ್ಯಾಚ್ ವೇಳೆ ಕ್ರೀಡಾಂಗಣಕ್ಕೆ ನುಗ್ಗಿದ ಅಭಿಮಾನಿಗಳು – ನಾಲ್ವರು ಅರೆಸ್ಟ್

Police Jeep

ಪೊಲೀಸ್ ಕಮಿಷನರ್ ಮನೋಜ್ ಕುಮಾರ್ ವರ್ಮಾ ಮಾತನಾಡಿ, ಅನುಪಮ್ ದತ್ತಾ ಅಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಕೊಲೆಯ ಹಿನ್ನೆಲೆಯ ಕುರಿತು ಶಂಭುನಾಥ್ ಪಂಡಿತ್ ಅವರನ್ನು ವಿಚಾರಣೆ ನಡೆಸುತ್ತಿದ್ದು, ಘಟನೆಗೆ ಸಂಬಂಧಿಸಿ ಇನ್ನಷ್ಟು ಮಂದಿಯನ್ನು ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಳಪೆ ಪ್ರದರ್ಶನದ ನಂತರವೂ ಗಾಂಧಿ ಕುಟುಂಬಕ್ಕೆ ಸೀಮಿತವಾಯ್ತು ಪಕ್ಷ: ಸುಶೀಲ್‌ ಮೋದಿ ವಾಗ್ದಾಳಿ

Share This Article
Leave a Comment

Leave a Reply

Your email address will not be published. Required fields are marked *