Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

21ನೇ ಶತಮಾನ ಜ್ಞಾನದ ಯುಗ, ಪ್ರತೀ ಗ್ರಾಪಂ ವ್ಯಾಪ್ತಿಯಲ್ಲೂ ಮಾದರಿ ಶಾಲೆ ಗುರಿ: ಅಶ್ವಥ್ ನಾರಾಯಣ

Public TV
Last updated: March 16, 2022 5:21 pm
Public TV
Share
3 Min Read
ASHWATHNARYAN
SHARE

-ರಾಮನಗರ, ಚನ್ನಪಟ್ಟಣ, ಕನಕಪುರ ತಾ.ಗಳಲ್ಲೂ ಸದ್ಯದಲ್ಲೇ ಶಾಲೆ ಆರಂಭ

ರಾಮನಗರ: ಸರ್ಕಾರದ ಪ್ರತೀ ಗ್ರಾಮ ಪಂಚಾಯತ್‍ಗೊಂದು ಮಾದರಿ ಪಬ್ಲಿಕ್ ಶಾಲೆ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಸಂಕೀಘಟ್ಟ ಶಾಲೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಇಂದು ಲೋಕಾರ್ಪಣೆ ಮಾಡಿದರು.

ASHWATHNARAYAN 1

ಈ ಸಂದರ್ಭದಲ್ಲಿ ಮಾತನಾಡಿದ ಅವರು, 21ನೇ ಶತಮಾನವು ಜ್ಞಾನದ ಯುಗವಾಗಿದ್ದು, ಗುಣಮಟ್ಟದ ಶಿಕ್ಷಣವು ಅನಿವಾರ್ಯ ಅಗತ್ಯವಾಗಿದೆ. ಹೀಗಾಗಿ, ಕಡಿಮೆ ಮಕ್ಕಳಿರುವ ಸರ್ಕಾರಿ ಶಾಲೆಗಳನ್ನು ಒಟ್ಟುಗೂಡಿಸಿ, ಅತ್ಯುತ್ತಮ ರೀತಿಯಲ್ಲಿ ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ ಒಂದು ಮಾದರಿ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲಾಗುವುದು ಎಂದರು. ಇದನ್ನೂ ಓದಿ: 2.5 ಕೆಜಿ ಚಿನ್ನ, 12 ಕೆಜಿ ಬೆಳ್ಳಿ – ಆಸ್ತಿ ಕಂಡು ಎಸಿಬಿ ಅಧಿಕಾರಿಗಳು ಶಾಕ್

ಮಾದರಿ ಪಬ್ಲಿಕ್ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಯಾವ ರೀತಿಯಲ್ಲೂ ಕಡಿಮೆ ಇಲ್ಲದಂತೆ ನೋಡಿಕೊಳ್ಳಲಾಗುವುದು. ಸಂಕೀಘಟ್ಟದ ಶಾಲೆಗೆ ಆಟದ ಮೈದಾನ, ಸ್ಮಾರ್ಟ್ ತರಗತಿಗಳು, ಶೌಚಾಲಯ, ಬೋಧಕ ಸಿಬ್ಬಂದಿ ಎಲ್ಲವನ್ನೂ ಒದಗಿಸಲಾಗುವುದು. ಜೊತೆಗೆ, ಸುತ್ತಮುತ್ತಲಿನ ಹಳ್ಳಿಗಳ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರಲು ಮತ್ತು ಪುನಃ ಮನೆಗೆ ತಲುಪಿಸಲು ವಾಹನ ವ್ಯವಸ್ಥೆಯನ್ನೂ ಮಾಡಲಾಗುವುದು. 2022-23ನೇ ಶೈಕ್ಷಣಿಕ ವರ್ಷದಿಂದ ಈ ಶಾಲೆಯು ಕಾರ್ಯಾರಂಭ ಮಾಡಲಿದೆ ಎಂದು ಅವರು ಹೇಳಿದರು.

ASHWATHNARYAN 1

ಈ ಶಾಲೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಅಗತ್ಯವಾಗಿರುವ ಮತ್ತಷ್ಟು ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲಾಗುವುದು. ಜೊತೆಗೆ, ಕೆಲವರು ಈ ಶಾಲೆಗೋಸ್ಕರ ಭೂಮಿಯನ್ನು ದಾನವಾಗಿ ಮಾಡಲು ಮುಂದೆ ಬಂದಿದ್ದಾರೆ. ಅದನ್ನೂ ಬಳಸಿಕೊಂಡು, ಈ ಶಾಲೆಯನ್ನು ಪರಿಪೂರ್ಣವಾಗಿ ಬೆಳೆಸಲಾಗುವುದು ಎಂದು ಅವರು ತಿಳಿಸಿದರು. ಇದನ್ನೂ ಓದಿ: ಅಪ್ಪನಂತೆ ಮಗನೂ ಸಮಯ, ಘಳಿಗೆ ನೋಡ್ತಾರೆ: ಸೂರಜ್ ರೇವಣ್ಣ ಕಾಲೆಳೆದ ಅಶೋಕ್

ಸಂಕೀಘಟ್ಟದ ಶಾಲೆಯಲ್ಲಿ ಅಗತ್ಯವಾದ ಹೆಚ್ಚುವರಿ ಕೊಠಡಿಗಳನ್ನು ಈಗಾಗಲೇ ನಿರ್ಮಿಸಲಾಗಿದೆ. ಇದರೊಂದಿಗೆ ಕಂಪ್ಯೂಟರ್ ತರಗತಿಗಳು ಮತ್ತು ವಿಜ್ಞಾನ ಪ್ರಯೋಗಾಲಯಗಳ ಸೌಲಭ್ಯಗಳನ್ನೂ ಕೊಡಲಾಗುವುದು. ಇಲ್ಲಿ 1ರಿಂದ 10ನೇ ತರಗತಿಯವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳೆರಡೂ ಇರಲಿವೆ. ಜಿಲ್ಲೆಯ ರಾಮನಗರ, ಚನ್ನಪಟ್ಟಣ ಮತ್ತು ಕನಕಪುರ ತಾಲೂಕುಗಳಲ್ಲೂ ಇಂತಹ ತಲಾ ಒಂದೊಂದು ಶಾಲೆಗಳನ್ನು ಸದ್ಯದಲ್ಲೇ ಆರಂಭಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ASHWATHNARYAN 2

ಹೆಚ್ಚಿನ ಸರ್ಕಾರಿ ಶಾಲೆಗಳಲ್ಲಿ 1ರಿಂದ 7ನೇ ತರಗತಿಯವರೆಗೆ ಕೇವಲ 30 ಮಕ್ಕಳಿಗಿಂತ ಕಡಿಮೆ ವಿದ್ಯಾರ್ಥಿಗಳಿದ್ದು, ಅವು ಮುಚ್ಚುವ ಸ್ಥಿತಿಗೆ ಬಂದಿವೆ. ಜೊತೆಗೆ ಈ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು, ಇರುವ ಒಬ್ಬಿಬ್ಬರು ಶಿಕ್ಷಕರೇ ಎಲ್ಲ ವಿಷಯಗಳನ್ನೂ ಬೋಧಿಸುತ್ತಿದ್ದಾರೆ. ಹೀಗಾಗಿ, ಕಡಿಮೆ ಮಕ್ಕಳಿರುವ ಸ್ಥಳೀಯ ಶಾಲೆಗಳನ್ನು ಒಟ್ಟುಗೂಡಿಸಿ, ಪ್ರತೀ ಗ್ರಾಪಂ ವ್ಯಾಪ್ತಿಯಲ್ಲೂ ಒಂದು ಪಬ್ಲಿಕ್ ಮಾದರಿ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಅವರು ವಿವರಿಸಿದರು. ಇದನ್ನೂ ಓದಿ: ದೈವ ಸಂಕಲ್ಪ ಯೋಜನೆ ಬಿ,ಸಿ ವರ್ಗಗಳ ದೇವಾಲಯಗಳಿಗೂ ವಿಸ್ತರಣೆ: ಆರ್.ಅಶೋಕ್

ಗ್ರಾಮೀಣ ವಿದ್ಯಾರ್ಥಿಗಳು ಕೂಡ ಇಂದು ಜಾಗತಿಕ ಮಟ್ಟದ ಸ್ಪರ್ಧೆಯನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಅವರಿಗೂ ಜಾಗತಿಕ ಗುಣಮಟ್ಟದ ಶಿಕ್ಷಣವನ್ನು ಪೂರೈಸುವುದು ಸರ್ಕಾರದ ಕರ್ತವ್ಯವಾಗಿದೆ. ಇದಕ್ಕಾಗಿ ಈಗಾಗಲೇ ಹಲವು ಉಪಕ್ರಮಗಳನ್ನು ರೂಪಿಸಿ, ಜಾರಿಗೊಳಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.

ASHWATHNARAYAN

ಸಚಿವರು ನಂತರ ಶಟಲ್ ಕಾಕ್ ಆಡುವುದರ ಮೂಲಕ ಕ್ರೀಡಾಂಗಣವನ್ನು ಉದ್ಘಾಟಿಸಿದರು.

ವಾಹನಕ್ಕೆ ದೇಣಿಗೆ:
ಸಂಕೀಘಟ್ಟ ಮತ್ತು ತಿಪ್ಪಸಂದ್ರದ ಶಾಲೆಗಳ ವಿದ್ಯಾರ್ಥಿಗಳಿಗೆ ವಾಹನ ವ್ಯವಸ್ಥೆ ಮಾಡಲಿ ಎನ್ನುವ ಕಾರಣಕ್ಕೆ ಸಚಿವರು ತಮ್ಮ ಫೌಂಡೇಶನ್ ವತಿಯಿಂದ ತಲಾ ಒಂದು ಲಕ್ಷ ದೇಣಿಗೆಯ ಚೆಕ್ ನೀಡಿದರು. ಇದೇ ಸಂದರ್ಭದಲ್ಲಿ ಈ ಎರಡೂ ಪಂಚಾಯತ್‍ಗಳ ಸದಸ್ಯರು ಕೂಡ ತಲಾ ಮೂರು ಲಕ್ಷ ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಮಂಜುನಾಥ್ ಕೂಡ ತಲಾ ಒಂದು ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದರು.

ASHWATHNARYANA

ಕಾರ್ಯಕ್ರಮದಲ್ಲಿ ಶಾಸಕ ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ, ಡಿಡಿಪಿಐ ಗಂಗಣ್ಣ, ಬ್ಲಾಕ್ ಶಿಕ್ಷಣಾಧಿಕಾರಿ ಯತೀಶ್, ತಹಸೀಲ್ದಾರ್ ಶ್ರೀನಿವಾಸ್, ಸಂಕೀಗಟ್ಟ ಗ್ರಾಪಂ ಅಧ್ಯಕ್ಷ ಸೂರ್ಯಕುಮಾರ್, ತಿಪ್ಪಸಂದ್ರ ಗ್ರಾಪಂ ಅಧ್ಯಕ್ಷೆ ಗಂಗಮ್ಮ ಮುಂತಾದವರು ಉಪಸ್ಥಿತರಿದ್ದರು.

TAGGED:Ashwath Narayaneducationgovernment schoolramanagaraಅಶ್ವಥ್ ನಾರಾಯಣಶಿಕ್ಷಣಸರ್ಕಾರಿ ಶಾಲೆ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Rajath Dharmasthala
ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
Cinema Dakshina Kannada Latest Main Post South cinema
Dhanush Mrunal Thakur
ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?
Cinema Latest Top Stories
Allu Arjun Sneha Reddy
ಶೂಟಿಂಗ್‌ಗಾಗಿ ಮುಂಬೈಗೆ ಹಾರಿದ ಐಕಾನ್ ಸ್ಟಾರ್
Cinema Latest Top Stories
chiranjeevi 6
ಟ್ರೋಲರ್ಸ್‌ ವಿರುದ್ಧ ರೊಚ್ಚಿಗೆದ್ದ ಚಿರಂಜೀವಿ
Cinema Latest South cinema
Santosh balaraj 2
ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ
Bengaluru Rural Cinema Latest Sandalwood

You Might Also Like

Madhuri Elephant
Latest

ಮಾಧುರಿ ಆನೆಯನ್ನು ಮಠಕ್ಕೆ, ಸರ್ಕಾರಿ ಮೃಗಾಲಯಕ್ಕೆ ಸ್ಥಳಾಂತರಿಸಿ – ಜೈನ ಸಮುದಾಯ ಒತ್ತಾಯ

Public TV
By Public TV
2 hours ago
AshwiniVaishnaw
Latest

ರಾಜ್ಯ ಸರ್ಕಾರದಿಂದ ಭೂಮಿ, 50% ಮೊತ್ತ ಭರಿಸಲು ನಿರಾಕರಣೆ; ಶಿವಮೊಗ್ಗ-ಹರಿಹರ ನಡುವಿನ ರೈಲ್ವೆ ಯೋಜನೆ ಸ್ಥಗಿತ

Public TV
By Public TV
2 hours ago
Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ – ಪ್ರಮುಖ ಆರೋಪಿಯ ಬ್ಯಾಂಕ್ ಖಾತೆ ಸೀಜ್

Public TV
By Public TV
2 hours ago
Dharmasthala mass burial case assault
Dakshina Kannada

ಧರ್ಮಸ್ಥಳ ಕೇಸ್; 2 ಗುಂಪುಗಳ ನಡುವೆ ಮಾರಾಮಾರಿ – ವರದಿಗೆ ಹೋದ ಖಾಸಗಿ ವಾಹಿನಿ ವರದಿಗಾರ, ಕ್ಯಾಮೆರಾಮ್ಯಾನ್ ಮೇಲೆ ಹಲ್ಲೆ

Public TV
By Public TV
2 hours ago
D K Shivakumar
Bengaluru City

ನ.1ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಾಲಿಕೆಗಳ ಚುನಾವಣೆಗೆ ಪೂರ್ವಸಿದ್ಧತೆ: ಡಿಕೆಶಿ

Public TV
By Public TV
3 hours ago
youtubers beaten up Chaos erupted in Dharmasthala devotees outraged 2
Dakshina Kannada

ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ – ಸಿಡಿದ ಧರ್ಮಸ್ಥಳದ ಭಕ್ತರು

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?