Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಪುರಾಣ, ಐತಿಹ್ಯ ಹೊಂದಿರುವ ಬೆಟ್ಟದಲ್ಲಿ ಗಣಿಗಾರಿಕೆ – ಸ್ಥಳೀಯರ ವಿರೋಧ

Public TV
Last updated: March 21, 2022 11:30 pm
Public TV
Share
2 Min Read
kolar 4
SHARE

ಕೋಲಾರ: ಅದು ರಾಮಾಯಣ-ಮಹಾಭಾರತದ ಐತಿಹ್ಯ ಹೊಂದಿರುವ ಪುರಾತನ ಬೆಟ್ಟ. ಈ ಬೆಟ್ಟವನ್ನು ನಂಬಿ ಈಗಲೂ ಹತ್ತಾರು ಗ್ರಾಮಗಳ ಜನ-ಜಾನುವಾರುಗಳು ಬದುಕು ಕಟ್ಟಿಕೊಂಡಿದ್ದಾರೆ. ಹೀಗಿರುವಾಗ ರಾಜ್ಯ ಸರ್ಕಾರದ ದುಡುಕು ನಿರ್ಧಾರ ಈಗ ಹತ್ತಾರು ಗ್ರಾಮಗಳ ಜನರನ್ನು ಆತಂಕಕ್ಕೀಡು ಮಾಡಿದೆ.

ಗ್ರಾಮಕ್ಕೆ ಹೊಂದಿಕೊಂಡಂತಿರುವ ಸುಂದರವಾದ ಬೃಹತ್ ಬೆಟ್ಟ. ಬೆಟ್ಟದ ತಪ್ಪಲಿನಲ್ಲಿರುವ ಗ್ರಾಮಗಳು, ಸುತ್ತಲೂ ಸುಂದರವಾದ ವಾತಾವರಣ, ತುಂಬಿ ಹರಿಯುತ್ತಿರುವ ಕೆರೆ-ಕಲ್ಯಾಣಿಗಳು. ಇದೆಲ್ಲಾ ಕಂಡುಬರುವುದು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ದೇವರಾಯಸಮುದ್ರ ಗ್ರಾಮದಲ್ಲಿ. ಇದನ್ನೂ ಓದಿ: ಮಸೀದಿಗೆ ಭೇಟಿ ನೀಡಿ ಭಾವೈಕ್ಯತೆ ಮೆರೆದ ಕೊಪ್ಪಳ ಗವಿಶ್ರೀ

 

kolar 3

ಇಲ್ಲಿ ಕಾಣುವ ಏಕಶಿಲಾ ಬೆಟ್ಟ ಜಿಲ್ಲೆಯ ಬೃಹತ್ ಹಾಗೂ ಐತಿಹಾಸಿಕ ಹಿನ್ನೆಲೆ ಹೊಂದಿರುವ ಬೆಟ್ಟ ಎಂಬ ಖ್ಯಾತಿ ಹೊಂದಿದ್ದು, ವೃಷಬಾದ್ರಿ ಬೆಟ್ಟ ಎಂದು ಕರೆಯಲಾಗುತ್ತದೆ. ಸೀತಾಮಾತೆ ವನವಾಸಕ್ಕೆ ಬಂದಿದ್ದಾಗ ಇಲ್ಲಿ ವಾಸವಿದ್ದಳು ಎಂಬ ಐತಿಹ್ಯ, ರಾಮಾಯಣ ಮಹಾಭಾರತದ ಕುರುಹುಗಳು ಇವೆ. ಪುರಾಣದ ಪ್ರಸಿದ್ಧ ದೇವಾಲಯಗಳು ಬೆಟ್ಟದ ತಪ್ಪಲಿನಲ್ಲಿವೆ ಜೊತೆಗೆ ಬೆಟ್ಟದ ಸುತ್ತಲೂ 30 ಗ್ರಾಮಗಳು ಹಾಗೂ ಸಾವಿರಾರು ಸಂಖ್ಯೆಯ ಪ್ರಾಣಿ ಪಕ್ಷಿಗಳು ಬೆಟ್ಟವನ್ನೇ ನಂಬಿ ತಮ್ಮದೇ ಆದ ಸುಂದರ ಬದುಕು ಕಟ್ಟಿಕೊಂಡಿವೆ.

ಈ ಬೆಟ್ಟದ ಮೇಲೆ ಬೀಳುವ ಮಳೆ ನೀರು ಬೆಟ್ಟದ ಸುತ್ತಮುತ್ತಲಿರುವ ಕೆರೆ ಕುಂಟೆಗಳಲ್ಲಿ ನಿಲ್ಲುತ್ತದೆ. ಹೀಗಾಗಿ ಸಾವಿರಾರು ಸಂಖ್ಯೆಯ ಪ್ರಾಣಿ ಪಕ್ಷಿಗಳಿಗೆ ಹಾಗೂ ಜನರಿಗೆ ಪರೋಕ್ಷವಾಗಿ ಈ ಬೆಟ್ಟ ಆಸರೆಯಾಗಿದೆ. ಇಂತಹ ಬೆಟ್ಟದಲ್ಲಿ ರಾಜ್ಯ ಸರ್ಕಾರ ಕೃತಕ ಮರಳು ಉತ್ಪಾದನಾ ಘಟಕ ಸೇರಿದಂತೆ ಕ್ರಷರ್‌ಗಳಿಗೆ ಹಾಗೂ ಗಣಿಗಾರಿಕೆಗೆ ಅವಕಾಶ ನೀಡಿದೆ. ಸರ್ಕಾರ ಟೆಂಡರ್ ಮೂಲಕ ದೇವರಾಯ ಸಮುದ್ರದ ಸರ್ವೆ ನಂ-199 ರಲ್ಲಿ 200 ಎಕರೆಗೂ ಹೆಚ್ಚು ಪ್ರದೇಶವನ್ನು ವಿವಿದ ಕಂಪನಿಗಳಿಗೆ ಗುತ್ತಿಗೆ ನೀಡಿದೆ. ಆದರೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ಸೇರಿ ಎಂಟು ಇಲಾಖೆಗಳು ಇಲ್ಲಿ ಗಣಿಗಾರಿಕೆ ಮಾಡಬಹುದು ಎಂದು ಅನುಮತಿ ನೀಡಿದೆ. ಇದನ್ನೂ ಓದಿ: ಅಮ್ಮನ ಬಗ್ಗೆ ಅಪ್ಪು ಮಾತನಾಡಿದ್ದ ಸ್ಫೂರ್ತಿದಾಯಕ ಮಾತುಗಳು ವೈರಲ್

kolar 2 1

ಕೋಲಾರ ಜಿಲ್ಲೆಯಲ್ಲಿ ಈಗಾಗಲೇ ಮರಳು ಹಾಗೂ ಕಲ್ಲು ಗಣಿಗಾರಿಕೆಯಿಂದ ಅಪಾರ ಪ್ರಮಾಣದ ಪ್ರಕೃತಿ ಸಂಪತ್ತು ಅವನತಿ ಹಾದಿ ತಲುಪಿದೆ. ಇಂತಹ ಪರಿಸ್ಥಿತಿಯಲ್ಲಿ ಜೆಲ್ಲಿ ಹುಡಿ ಅಥವಾ ಎಂ.ಸ್ಯಾಂಡ್ ಘಟಕ ಸ್ಥಾಪನೆಗೆ ಅನುಮತಿ ನೀಡುವ ಮೂಲಕ ಈ ಗ್ರಾಮಗಳ ಪಾಲಿಗೆ ಮರಣ ಶಾಸನ ಬರೆಯಲು ಮುಂದಾಗಿದೆ. ಈ ಬೆಟ್ಟದಲ್ಲಿ 9 ಎಂ.ಸ್ಯಾಂಡ್ ಘಟಕಗಳ ಸ್ಥಾಪನೆಗೆ ಸರ್ಕಾರವೇ ರಾಜ್ಯ ಮಟ್ಟದಲ್ಲಿ ಟೆಂಡರ್ ಮೂಲಕ ಅನುಮತಿ ನೀಡಿದೆ. ಇದು ಸುತ್ತಮುತ್ತಲಿನ ಹತ್ತಾರು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

ಇಲ್ಲಿ ಎಂ.ಸ್ಯಾಂಡ್ ಘಟಕ ನಿರ್ಮಾಣವಾಗಿದ್ದೇ ಆದಲ್ಲಿ ಸ್ಟೋಟಕ, ದೂಳಿನಿಂದ ಇಡೀ ಪ್ರದೇಶ ಹಾಳಾಗಿ ಸುಮಾರು 30 ಗ್ರಾಮಗಳನ್ನೇ ಸ್ಥಳಾಂತರ ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎನ್ನುವುದು ಗ್ರಾಮಸ್ಥರ ಆತಂಕ. ಸರ್ಕಾರದ ನಿಯಮಗಳ ಅಡಿಯಲ್ಲಿ ಗಣಿಗಾರಿಕೆ ಮಾಡಿದರೆ ಗ್ರಾಮಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ ಎನ್ನುವುದು ಅಧಿಕಾರಿಗಳ ಮಾತಾಗಿದೆ. ಇದೇ ತಿಂಗಳ ಅಂತ್ಯದಲ್ಲಿ ಹಸಿರು ಪೀಠದಿಂದ ತೀರ್ಪು ಹೊರಬೀಳಲಿದೆ. ಈ ಬಗ್ಗೆ ಮಾತನಾಡಿ ಅಕ್ರಮ ಗಣಿಗಾರಿಕೆ ಮಾಡದಂತೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ಸ್ಥಳೀಯ ಶಾಸಕರು ತಿಳಿಸಿದ್ದಾರೆ.

kolar 1

ಒಟ್ಟಿನಲ್ಲಿ ಹಸಿರು ಪೀಠದ ತೀರ್ಪು ಯಾರ ಪರವಾಗಿ ಬರುತ್ತದೋ ಗೊತ್ತಿಲ್ಲ. ಆದರೆ ನಮ್ಮೂರಿನ ಪ್ರಕೃತಿ ಸಂಪತ್ತನ್ನು ಉಳಿಸಿ ಕೊಡಿ ಎನ್ನುವುದು ಗ್ರಾಮಸ್ಥರ ಅಳಲು. ನಮಗೆ ಅಭಿವೃದ್ದಿ ಹೆಸರಲ್ಲಿ ನಡೆಯುವ ಪ್ರಕೃತಿ ನಾಶಕ್ಕಿಂತ ನೆಮ್ಮದಿಯಾಗಿ ಪ್ರಕೃತಿಯ ಜೊತೆಗೆ ಬದುಕಲು ಬಿಡಿ ಎನ್ನುವುದು ಗ್ರಾಮಸ್ಥರ ಆಗ್ರಹ.

TAGGED:DevarayasamudraHillKolarMiningಕೋಲಾರಗಣಿಗಾರಿಕೆದೇವರಾಯಸಮುದ್ರಬೆಟ್ಟ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
16 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
17 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
20 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

BMTC bus
Bengaluru City

ಬಸ್ ನಿಲ್ಲಿಸದ್ದಕ್ಕೆ ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ- ದೂರು ದಾಖಲು

Public TV
By Public TV
4 minutes ago
Air India Bird Hit Ahmedabad Plane Crash
Latest

100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

Public TV
By Public TV
25 minutes ago
UK gay couple
Latest

ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

Public TV
By Public TV
56 minutes ago
Bhavik Maheshwari
Crime

ವಿಮಾನ ದುರಂತ – ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ ಭವಿಕ್

Public TV
By Public TV
1 hour ago
Ahmedabad Plane Crash Survivor
Latest

ನಾನು ವಿಮಾನದಿಂದ ಜಂಪ್ ಮಾಡ್ಲಿಲ್ಲ – ದೊಡ್ಡ ಆಪತ್ತಿನಿಂದ ರಮೇಶ್ ವಿಶ್ವಾಸ್ ಕುಮಾರ್ ಪಾರಾಗಿದ್ದು ಹೇಗೆ?

Public TV
By Public TV
1 hour ago
Ahmedabad Plane Crash 1 2
Latest

ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?