Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಸ್ಲಿಮರಿಗೆ ದೇವಸ್ಥಾನಗಳಲ್ಲಿ ವ್ಯಾಪಾರ ಬಹಿಷ್ಕಾರ – 2021ರಲ್ಲಿ ಗಂಗೊಳ್ಳಿಯಲ್ಲಿ ನಡೆದಿದ್ದು ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮುಸ್ಲಿಮರಿಗೆ ದೇವಸ್ಥಾನಗಳಲ್ಲಿ ವ್ಯಾಪಾರ ಬಹಿಷ್ಕಾರ – 2021ರಲ್ಲಿ ಗಂಗೊಳ್ಳಿಯಲ್ಲಿ ನಡೆದಿದ್ದು ಏನು?

Districts

ಮುಸ್ಲಿಮರಿಗೆ ದೇವಸ್ಥಾನಗಳಲ್ಲಿ ವ್ಯಾಪಾರ ಬಹಿಷ್ಕಾರ – 2021ರಲ್ಲಿ ಗಂಗೊಳ್ಳಿಯಲ್ಲಿ ನಡೆದಿದ್ದು ಏನು?

Public TV
Last updated: March 24, 2022 10:24 am
Public TV
Share
3 Min Read
UDP GANGOLLI FISH
SHARE

ಉಡುಪಿ: ಕರಾವಳಿಯಲ್ಲಿ ಮುಸ್ಲಿಂ ಸಮುದಾಯಕ್ಕೆ ದೇವಸ್ಥಾನಗಳಲ್ಲಿ ವ್ಯಾಪಾರ ಬಹಿಷ್ಕಾರದ ಕಿಚ್ಚು ದಿನೇ ದಿನೇ ಹೆಚ್ಚುತ್ತಿದೆ. ಈ ಕಿಚ್ಚಿಗೆ ಆರಂಭದ ಕಿಡಿ ಹಚ್ಚಿದ್ದು, ಕಳೆದ ವರ್ಷ ಗಂಗೊಳ್ಳಿಯಲ್ಲಿ ನಡೆದ ಒಂದು ಘಟನೆ.

ಹಿಜಬ್ ಹೋರಾಟದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಡುಪಿಗೆ ಕೆಟ್ಟ ಹೆಸರು ಬರುತ್ತಿದ್ದ ಹಿನ್ನೆಲೆಯಲ್ಲಿ ಜನತೆ ಅಸಮಾಧಾನಗೊಂಡಿದ್ದರು. ಜನತೆ ಅಸಮಾಧಾನಗೊಂಡಿದ್ದರೂ ಅಂಗಡಿ ಬಹಿಷ್ಕಾರದ ನಿರ್ಧಾರಕ್ಕೆ ಬಂದಿರಲಿಲ್ಲ. ಆದರೆ ಹೈಕೋರ್ಟ್ ತೀರ್ಪು ಪ್ರಕಟವಾದ ಬಳಿಕ ಅಂಗಡಿಗಳನ್ನು ಮುಚ್ಚಿ ಕರ್ನಾಟಕ ಬಂದ್‍ಗೆ ಕರೆ ಯಾವಾಗ ಕೊಟ್ಟರೋ ಆಗ ಗಂಗೊಳ್ಳಿಯಲ್ಲಿ ಹಿಂದೂ ಸಮಾಜದ ಬಡ ಮೀನುಗಾರ ಮಹಿಳೆಯರ ಮೇಲೆ ಆರ್ಥಿಕ ಬಹಿಷ್ಕಾರ ಹಾಕಿದ ವಿಚಾರ ಮುನ್ನೆಲೆಗೆ ಬಂದಿದೆ.

hijab karnataka bandh Temples in coastal Karnataka and Malnad region ban Muslim traders at annual fairs muzrai department rules

ಅಂದು ಏನಾಗಿತ್ತು?: 2021ರ ಅಕ್ಟೋಬರ್ 21ರಂದು ಬೈಂದೂರು ತಾಲೂಕಿನ ಗಂಗೊಳ್ಳಿ ವ್ಯಾಪ್ತಿಯಲ್ಲಿ ವಿಪರೀತವಾಗಿ ಗೋಕಳ್ಳತನ ನಡೆಯುತ್ತಿತ್ತು. ಅಕ್ರಮ ಕಸಾಯಿಖಾನೆಗಳನ್ನು ಮಾಡಿ ಗೋಮಾಂಸ ಸಾಗಾಟ ನಡೆಯುತ್ತಿತ್ತು. ಇದರ ವಿರುದ್ಧ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳು ಬೃಹತ್ ಪಾದಯಾತ್ರೆಯನ್ನು ಮಾಡಿದ್ದವು. ಇದಾಗಿ ಮಾರನೇ ದಿನದಿಂದ ಮೀನುಗಾರ ಸಮುದಾಯದ ವ್ಯಾಪಾರಿಗಳಿಗೆ ಮುಸ್ಲಿಮರು ವ್ಯಾಪಾರ ಬಹಿಷ್ಕಾರ ಹಾಕಿದ್ದರು.

ಸಮುದ್ರದಲ್ಲಿ ಮೊಗವೀರ ಸಮುದಾಯ ಹಿಡಿದ ಮೀನನ್ನು, ಮೊಗವೀರ ಮಹಿಳೆಯರು ಮಾರುವ ಮೀನನ್ನು ಖರೀದಿ ಮಾಡಲು ಮಾರುಕಟ್ಟೆಗೆ ಬಾರದೇ ಅವರು ದೂರವುಳಿದಿದ್ದರು. ಮೊಗವೀರ ಮಹಿಳೆಯರಿಂದ ಮೀನು ಖರೀದಿಸಬಾರದು ಎಂದು ಸಾಮಾಜಿಕ ಜಾಲತಾಣ ಮತ್ತು ವಾಟ್ಸಪ್‍ನಲ್ಲಿ ಸಂದೇಶವನ್ನು ಹರಿ ಬಿಡಲಾಗಿತ್ತು. ಈ ವಿಚಾರ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದರೂ ಅದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿರಲಿಲ್ಲ. ಇದನ್ನೂ ಓದಿ: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವ್ಯಾಪಾರಿಗಳಿಗೆ ನಿಷೇಧ: ನಿಯಮ ಏನಿದೆ?

UDP FISH

ಕರ್ನಾಟಕ ಬಂದ್ ಸಮಯದಲ್ಲಿ ಅಂಗಡಿ ಬಂದ್ ಮಾಡುವುದರ ಜೊತೆ ಮುಸ್ಲಿಂ ಕಾಂಪ್ಲೆಕ್ಸ್‌ನಲ್ಲಿದ್ದ ಹಿಂದೂ ಮಾಲೀಕರ ಅಂಗಡಿಗಳನ್ನು ಬಂದ್ ಮಾಡಿದ ವಿಚಾರ ಹಿಂದೂ ಸಂಘಟನೆಗಳ ಸಿಟ್ಟಿಗೆ ಕಾರಣವಾಗಿದೆ. ಸಂವಿಧಾನ ವಿರುದ್ಧ ಬಂದ್ ಕರೆ ಕೊಟ್ಟಿದ್ದಕ್ಕೆ ಐದು ತಿಂಗಳ ನಂತರ ಸೂಕ್ತ ಸಂದರ್ಭ ನೋಡಿಕೊಂಡು ಗಂಗೊಳ್ಳಿ ಘಟನೆಗೆ ದೊಡ್ಡ ರೀತಿಯಲ್ಲಿ ತಿರುಗೇಟು ನೀಡುತ್ತಿದ್ದಾರೆ. ಇದನ್ನೂ ಓದಿ: ಮುಸ್ಲಿಂ ದೇವರಿಗೆ ಹಿಂದೂ ಮಟನ್ ಸ್ಟಾಲ್ ಮಾಂಸ ಆಗಲ್ಲ, ನಮ್ಮ ದೇವರಿಗ್ಯಾಕೆ : ಸಿ.ಟಿ ರವಿ

ಇಷ್ಟು ಗಟ್ಟಿ ಧ್ವನಿಯಿಂದ ನಿರ್ಬಂಧ ವಿಚಾರ ಮಾತನಾಡಲು ಕಾರಣವಾಗಿದ್ದು ಸರ್ಕಾರದ ನಿಯಮ. ಸರ್ಕಾರದ ನಿಯಮವೇ ಇರುವ ಕಾರಣ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಇದನ್ನೂ ಓದಿ: ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪುನಾರಂಭಿಸಿ: ಸೋನಿಯಾ ಗಾಂಧಿ

ನಿಯಮ ಏನಿದೆ?: 
ಮುಸ್ಲಿಮರಿಗೆ ಅಂಗಡಿ ಹಾಕಲು ಅವಕಾಶ ನಿರಾಕರಿಸುತ್ತಿರುವ ದೇಗುಲದ ಆಡಳಿತ ಮಂಡಳಿಗಳು, 2002ರಲ್ಲಿ ರೂಪಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಯ ನಿಯಮವನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಧಾರ್ಮಿಕ ದತ್ತಿ ಇಲಾಖೆಯ ನಿಯಮಾವಳಿ ಪುಸ್ತಕದ ಪುಟ ಸಂಖ್ಯೆ 446ರಲ್ಲಿರುವ 12 ನಿಯಮದಲ್ಲಿ, ಸಂಸ್ಥೆಯ ಸಮೀಪದ ಜಮೀನು ಕಟ್ಟಡ ಮತ್ತು ನಿವೇಶನಗಳೂ ಸೇರಿದಂತೆ ಯಾವುದೇ ಸವತ್ತನ್ನು ಹಿಂದೂಗಳಲ್ಲದವರಿಗೆ ಗುತ್ತಿಗೆ ನೀಡತಕ್ಕದಲ್ಲ ಎಂದು ಉಲ್ಲೇಖಿಸಲಾಗಿದೆ.

hijab karnataka bandh Temples in coastal Karnataka and Malnad region ban Muslim traders at annual fairs muzrai department rules 3

ಇದೀಗ ಇದೇ ನಿಯಮವನ್ನು ನಾವು ಜಾರಿ ಮಾಡಿದ್ದೇವೆ ಎಂದು ಹಿಂದೂ ಸಂಘಟನೆಗಳು ಹೇಳುತ್ತಿದೆ. ಹಿಂದೂ ಸಂಘಟನೆಗಳು ಈ ನಿಯಮವನ್ನು ಮುಂದಿಟ್ಟುಕೊಂಡು ದೇವಾಲಯದ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿ ಹಿಂದೂಯೇತರ ವ್ಯಕ್ತಿಗಳಿಗೆ ಅನುಮತಿ ನೀಡದಂತೆ ಮನವಿ ಮಾಡುತ್ತಿದೆ. ಈ ನಿಯಮ ಜಾರಿಯಾಗಿದ್ದು 2002ರಲ್ಲಿ. ಈ ವೇಳೆ ರಾಜ್ಯದಲ್ಲಿ ಅಸ್ತಿತ್ವದಲ್ಲಿ ಇದ್ದಿದ್ದು ಎಸ್‍ಎಂ ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರ. ಇಂದು ಅದೇ ಕಾಂಗ್ರೆಸ್ಸಿಗರು ಇದು ಸರಿಯಲ್ಲ ಎನ್ನುತ್ತಿದ್ದಾರೆ.

hijab karnataka bandh Temples in coastal Karnataka and Malnad region ban Muslim traders at annual fairs muzrai department rules 1

ಹಿಜಬ್ ವಿವಾದ ಸೃಷ್ಟಿಯಾಗುವರೆಗೂ ಈ ನಿಯಮ ಇದೆ ಎನ್ನುವದು ಬಹುತೇಕ ಮಂದಿಗೆ ತಿಳಿದಿರಲಿಲ್ಲ. ಅಷ್ಟೇ ಅಲ್ಲದೇ ಕರಾವಳಿ ಭಾಗದಲ್ಲಿ ಹಿಂದೂ ದೇವಾಲಯಗಳಲ್ಲಿ ಇಲ್ಲಿಯವರೆಗೂ ಮುಸ್ಲಿಮ್ ವ್ಯಾಪಾರಿಗಳು ಅಂಗಡಿಗಳನ್ನು ತೆರೆಯುತ್ತಿದ್ದರು. ಆದರೆ ಹಿಜಬ್ ವಿವಾದ, ಕರ್ನಾಟಕ ಬಂದ್ ಬಳಿಕ ಕರಾವಳಿಯ ಹಿಂದೂ-ಮುಸಲ್ಮಾನ ಸಾಮರಸ್ಯದಲ್ಲಿ ಮತ್ತಷ್ಟು ಬಿರುಕಾಗಿದೆ. ಎರಡು ಸಮುದಾಯದ ಮುಖಂಡರು ಧಾರ್ಮಿಕ ದಿಗ್ಗಜರು ಒಂದೆಡೆ ಕುಳಿತು ಇದಕ್ಕೊಂದು ಪರಿಹಾರ ಮಾಡಬೇಕಿದೆ.

TAGGED:fishgangolliHijabtempleudupiಉಡುಪಿದೇವಸ್ಥಾನಮಂಗಳೂರುಹಿಜಬ್
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Elephant
Chikkamagaluru

ಚಿಕ್ಕಮಗಳೂರು | ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

Public TV
By Public TV
11 minutes ago
Sabarimala Womens Entry 2
Court

ಶಬರಿಮಲೆಗೆ ಮಹಿಳೆಯರ ಪ್ರವೇಶ – ಏ.7 ರಿಂದ 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ

Public TV
By Public TV
12 minutes ago
BK Hariprasad
Bengaluru City

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

Public TV
By Public TV
32 minutes ago
Chitradurga Student Suicide In Residential School
Chitradurga

ಚಿತ್ರದುರ್ಗ | ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
56 minutes ago
ULLA SHIVAMOGGA
Crime

ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

Public TV
By Public TV
1 hour ago
Solar eclipse 1
Latest

ಮಂಗಳವಾರ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣʼ – ಎಲ್ಲೆಲ್ಲಿ ಗೋಚರ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?