Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಎಂಸಿ ನಾಯಕನನ್ನು ಅರೆಸ್ಟ್ ಮಾಡುವಂತೆ ಮಮತಾ ಬ್ಯಾನರ್ಜಿ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಟಿಎಂಸಿ ನಾಯಕನನ್ನು ಅರೆಸ್ಟ್ ಮಾಡುವಂತೆ ಮಮತಾ ಬ್ಯಾನರ್ಜಿ ಆದೇಶ

Crime

ಟಿಎಂಸಿ ನಾಯಕನನ್ನು ಅರೆಸ್ಟ್ ಮಾಡುವಂತೆ ಮಮತಾ ಬ್ಯಾನರ್ಜಿ ಆದೇಶ

Public TV
Last updated: March 24, 2022 4:36 pm
Public TV
Share
3 Min Read
mamata 3
SHARE

ಕೊಲ್ಕತ್ತಾ: ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ಬೀರ್ಭುಮ್ ಗ್ರಾಮದಲ್ಲಿ ನಡೆದ ಹಿಂಸಾಚಾರವು ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ರಾಜ್ಯಪಾಲರೂ ಸೇರಿದಂತೆ ಪ್ರತಿಪಕ್ಷದ ನಾಯಕರು ಘಟನೆಯನ್ನೇ ಪ್ರಮುಖವಾಗಿಟ್ಟುಕೊಂಡು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಮತಾ ಬ್ಯಾನರ್ಜಿ ಅವರನ್ನು ಒತ್ತಾಯಿಸುತ್ತಿದ್ದಾರೆ.

birbhum

ಈ ನಡುವೆ ಬೀರ್ಭುಮ್ ಗ್ರಾಮಕ್ಕೆ ಭೇಟಿ ನೀಡಿರುವ ಮಮತಾ ಬ್ಯಾನರ್ಜಿ ಅವರು ಹಿಂಸಾಚಾರ ನಡೆದ ಸ್ಥಳವನ್ನು ಪರಿಶೀಲಿಸಿ ಕಟ್ಟಿನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಘಟನೆಯಲ್ಲಿ ಹಾನಿಗೊಳಗಾದ ಮನೆಗಳ ದುರಸ್ತಿಗೆ 2 ಲಕ್ಷ ರೂ. ಹಾಗೂ ಸಂತ್ರಸ್ತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಉದ್ಯೋಗಾವಕಾಶ ನೀಡುವ ಭರವಸೆಯನ್ನು ನೀಡಿದ್ದಾರೆ. ಸ್ಥಳದಲ್ಲಿ 10 ಕುಟುಂಬಗಳಿಗೆ ತಲಾ 1 ಲಕ್ಷ ರೂ. ಚೆಕ್ ವಿತರಣೆ ಮಾಡಿದಾರೆ. ಅಲ್ಲದೆ ಬೆಂಕಿ ಅನಾಹುತದಿಂದ ಗಾಯಗೊಂಡವರ ಚಿಕಿತ್ಸೆಗೆ 50 ಸಾವಿರ ರೂ., ತೀವ್ರ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

birbhum 1

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸ್ಥಳೀಯರು ನೀಡಿದ ದೂರಿನ ಮೇರೆಗೆ ರಾಮ್‍ಪುರಹತ್ ಬ್ಲಾಕ್-1 ಅಧ್ಯಕ್ಷ ಅನಾರುಲ್ ಶೇಖ್ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶ ನೀಡಿದ್ದಾರೆ. ಘಟನೆಯ ಬಗ್ಗೆ ಬಿಜೆಪಿ ಮುಖಂಡರು ಆರೋಪಿಸುತ್ತಿರುವುದು ಇಲ್ಲಿನ ರಾಜಕೀಯ ಹಿನ್ನಡೆ. ಹಿಂಸಾಚಾರ ಹಾಗೂ ಕಾನೂನು ಬಾಹೀರತೆಗೆ ಅವಕಾಶ ನೀಡಿದಂತಾಗುತ್ತಿದೆ. ಈ ಘಟನೆಯ ಹಿಂದೆ ದೊಡ್ಡ ಶಕ್ತಿಯಿದೆ ಎಂಬುದು ಇದರಿಂದ ಗೋಚರವಾಗುತ್ತದೆ ಎಂದು ಶಂಕಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್‌, ಡೀಸೆಲ್‌, ಎಲ್‌ಪಿಜಿ ಆಯ್ತು ಈಗ ಸಿಎನ್‌ಜಿ, ಪಿಎನ್‌ಜಿ ದರದಲ್ಲೂ ಏರಿಕೆ

Mamata 1

ಇದೇ ವೇಳೆ ಮಮತಾ ಬ್ಯಾನರ್ಜಿ ಅವರನ್ನು ಸುತ್ತುವರಿದಿದ್ದ ಗ್ರಾಮಸ್ಥರು, ನಮ್ಮ ದೂರುಗಳಿಗೆ ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಘಟನೆಯ ಕುರಿತು ಮಾಹಿತಿ ನೀಡಿರುವ ಪೊಲೀಸರು, ಮಂಗಳವಾರ ಹಿಂಸಾಚಾರ ಘಟನೆ ನಡೆದಿದ್ದು, ಒಂದು ದಿನದ ನಂತರ ಸುಟ್ಟ ಮೃತದೇಹಗಳನ್ನು ಹೊರತೆಗೆಯಲಾಯಿತು. ಘಟನೆಯ ನಂತರ ಅನೇಕರು ಹಿಂಸಾಚಾರಕ್ಕೆ ಹೆದರಿ ಗ್ರಾಮ ತೊರೆದಿದ್ದಾರೆ. ಈ ಪ್ರಕರಣದಲ್ಲಿ ಟಿಎಂಸಿ ಮುಖಂಡನ ಹತ್ಯೆ ಹಾಗೂ ಗ್ರಾಮಸ್ಥರ ಹತ್ಯೆಗೆ ಸಂಬಂಧಿಸಿದಂತೆ ಎರಡು ಎಫ್‍ಐಆರ್ ಗಳನ್ನು ದಾಖಲಿಸಲಾಗಿದೆ. ಈಗಾಗಲೇ ಸುಮಾರು 20 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

NARENDRA MODI

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಆರೋಪಿಗಳನ್ನು ನ್ಯಾಯಾಂಗಕ್ಕೆ ತರಲು ರಾಜ್ಯಕ್ಕೆ ಯಾವುದೇ ರೀತಿಯಲ್ಲಿ ಸಹಾಯ ಮಾಡಲು ನಮ್ಮ ಸರ್ಕಾರ ಸಿದ್ಧವಿದೆ. ಇಂತಹ ಘೋರ ಅಪರಾಧ ಎಸಗಿದವರಿಗೆ ರಾಜ್ಯ ಸರ್ಕಾರ ಕಠಿಣ ಶಿಕ್ಷೆ ವಿಧಿಸಲಿದೆ ಎಂದು ನಾನುಭಾವಿಸುತ್ತೇನೆ. ಇಂತಹ ಅಪರಾಧ, ಅಪರಾಧಿಗಳನ್ನು ಎಂದಿಗೂ ಕ್ಷಮಿಸಬೇಡಿ ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ಇದು ಬಿಜೆಪಿ ನಮ್ಮ ಸರ್ಕಾರದ ಮಾನಹಾನಿಗಾಗಿ ಮಾಡಿರುವ ಪಿತೂರಿ. ಬಿರ್ಭೂಮ್ ಘಟನೆಗೆ ಕಾರಣರಾದ ಎಲ್ಲರ ವಿರುದ್ಧ ಅವರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ವಿಸ್ತಾರವಾದ, ಪ್ರತ್ಯೇಕವಾದ ನಿಲ್ಲುವವರೆಗೂ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ: ಮುತಾಲಿಕ್

birbhum 2

ಏನಿದು ಪ್ರಕರಣ?
ಇಲ್ಲಿನ ಬಗುಟಿ ಗ್ರಾಮ ಪಂಚಾಯ್ತಿ ಮುಖಂಡ ಭಾದು ಶೇಖ್ ಅವರ ಮೇಲೆ ಸೋಮವಾರ ರಾತ್ರಿ ದಾಳಿ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ-60ರ ಅಂಗಡಿಯೊಂದರಲ್ಲಿ ಇರುವಾಗ ಶೇಖ್ ಅವರ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪೊಂದು 10 ರಿಂದ 12 ಮನೆಗೆ ಬೆಂಕಿ ಹಚ್ಚಿದ್ದರು.

birbhum 4

ಇದರಿಂದಾಗಿ 8 ಮಂದಿ ಸಜೀವ ದಹನವಾಗಿದ್ದರು. ಇದರಲ್ಲಿ ಇಬ್ಬರು ಮಕ್ಕಳೂ ಸಹ ಇದ್ದರು ಎಂಬುದಾಗಿ ಬೀರ್ಭುಮ್ ಎಸ್‍ಪಿ ನಾಗೇಂದ್ರ ತ್ರಿಪಾಟಿ ಮಾಹಿತಿ ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತವಾಗಿಯೇ ವಿಚಾರಣೆ ನಡೆಸಲು ಮುಂದಾಗಿತ್ತು. ಈ ನಡುವೆ ಜಿಲ್ಲೆಯ ಕೆಲ ಕುಟುಂಬಗಳು ಹಿಂಸಾಚಾರಕ್ಕೆ ಬೆಚ್ಚಿಬಿದ್ದಿದ್ದು, ತಮ್ಮ ಮನೆಗಳನ್ನು ತೊರೆದು ಹೋಗಿದ್ದಾರೆ. ಇದನ್ನೂ ಓದಿ: ಜಗನ್ ಸಹೋದರಿ ಭಾಷಣದ ವೇಳೆ ಜೇನು ದಾಳಿ – ಟವೆಲ್ ಬೀಸಿದ ಕಾರ್ಯಕರ್ತರು

TAGGED:Grama Panchayathigh courtkolkattamamta banarjeenarendra modiWest Bengalಕೋಲ್ಕತ್ತಾಗ್ರಾಮ ಪಂಚಾಯ್ತಿನರೇಂದ್ರ ಮೋದಿಪಶ್ಚಿಮ ಬಂಗಾಳಮಮತಾ ಬ್ಯಾನರ್ಜಿಹೈಕೋರ್ಟ್
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Drone Soccer Arena
Latest

ರೋಬೋಟ್ ಡಾಗ್ ಆಯ್ತು, ಈಗ ಸಾಕರ್ ಡ್ರೋನ್ – ಮತ್ತೊಂದು ವಿವಾದದಲ್ಲಿ ಗಲ್ಗೋಟಿಯಾ ವಿವಿ

Public TV
By Public TV
12 minutes ago
Lover and Transgender Found Dead Ballari Both deaths are suspicious
Bellary

ಮಂಗಳಮುಖಿ ಜೊತೆ ಯುವಕನ 5 ವರ್ಷದ ಪ್ರೀತಿ – ಇಬ್ಬರೂ ಅನುಮಾನಾಸ್ಪದ ಸಾವು

Public TV
By Public TV
12 minutes ago
Bandipur
Bengaluru City

ನಾಳೆಯಿಂದ ನಾಗರಹೊಳೆ, ಬಂಡೀಪುರದಲ್ಲಿ ಸಫಾರಿ ಪುನರಾರಂಭ

Public TV
By Public TV
22 minutes ago
Chinese Robot Dog
Latest

ಚೀನಾ ನಿರ್ಮಿತ ರೋಬೋಟ್ ಡಾಗ್ ಖರೀದಿಸಿ AI ಶೃಂಗದಲ್ಲಿ ಪ್ರದರ್ಶನ – ಗಲ್ಗೋಟಿಯಾ ವಿವಿಗೆ ಗೇಟ್‌ಪಾಸ್‌

Public TV
By Public TV
55 minutes ago
Eshwar Khandre bhagwant khooba
Latest

ಈಶ್ವರ್ ಖಂಡ್ರೆಗೆ ಅವಾಚ್ಯ ಶಬ್ದಗಳಿಂದ ನಿಂದನೆ – ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ FIR

Public TV
By Public TV
1 hour ago
BJP MLA Dheeraj Muniraj
Bengaluru City

ನಿಮ್ಮ ದಬ್ಬಾಳಿಕೆಗೆ ನಾವು ಹೆದರಲ್ಲ, ಇನ್ನಷ್ಟುಹೋರಾಟ ಮಾಡ್ತೀವಿ – ಡಿಕೆಶಿಗೆ ಧೀರಜ್‌ ಮುನಿರಾಜು ತಿರುಗೇಟು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?