Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿದ್ದರಾಮಯ್ಯ ಅನ್ನೋದೊಂದು ಶಕ್ತಿ: ಬಸವರಾಜ್ ರಾಯರೆಡ್ಡಿ

Public TV
Last updated: March 28, 2022 4:11 pm
Public TV
Share
2 Min Read
BASAVARAJ RAYAREDDY
SHARE

– ಬಿಜೆಪಿ ವಾಮ ಮಾರ್ಗದಿಂದ ಅಧಿಕಾರ ಹಿಡಿದಿದೆ
– ಸಿದ್ದರಾಮಯ್ಯ ಹಿಂದೂ ವಿರೋಧಿ ಅಲ್ಲ
– ಬೊಮ್ಮಾಯಿ ಅಧಿಕಾರ ಉಳಿಸಿಕೊಳ್ಳಲು ಮೌನ ಆಗಬಾರದು

ಬೆಂಗಳೂರು: ಸಿದ್ದರಾಮಯ್ಯ ಅನ್ನೋದು ಶಕ್ತಿಯಾಗಿದೆ. ಅವರ ಹಿಂದೆ ಲಕ್ಷಾಂತರ ಜನರು ಇದ್ದಾರೆ. ನಾವು ಹೈಕೋರ್ಟ್ ತೀರ್ಪನ್ನು ಗೌರವಿಸುತ್ತೇವೆ. ಆದರೆ ಹಿಜಬ್ ವಿಚಾರದಲ್ಲಿ ಸಿದ್ದರಾಮಯ್ಯ ಹೇಳಿಕೆಯನ್ನು ತಿರುಚಲಾಗಿದೆ ಎಂದು ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಕೈ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಅಲ್ಲಿ ಮಾತನಾಡಿದ ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ, ಬಿಜೆಪಿ ವಾಮ ಮಾರ್ಗದಿಂದ ಅಧಿಕಾರ ಹಿಡಿದಿದೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ಕೂಡ ಅಭಿವೃದ್ಧಿಯಾಗಿಲ್ಲ. ಇವಾಗ ಬೊಮ್ಮಾಯಿ ಸಿಎಂ ಆಗಿದ್ದಾರೆ ಆದರೆ ಅಭಿವೃದ್ಧಿ ಕಾರ್ಯ ಯಾವುದು ಕಾಣುತ್ತಿಲ್ಲ. ಬಿಜೆಪಿ ಸರ್ಕಾರ ಗುತ್ತಿಗೆದಾರರಿಂದ ಶೇ.40 ಕಮಿಷನ್ ಪಡೆಯುತ್ತಿದೆ ಎಂದು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 32 ವರ್ಷಗಳ ನಂತ್ರ ಕಾಶ್ಮೀರಿ ಪಂಡಿತರಿಗೆ ಸಿಕ್ಕಿದ್ದು ಸಿನಿಮಾ, ನ್ಯಾಯವಲ್ಲ: ಕೇಜ್ರಿವಾಲ್

ಹಿಜಬ್ ವಿಚಾರದಲ್ಲಿ ರಾಜಕೀಯ ನಡೆಯುತ್ತಿದೆ. ನಾವು ಹೈಕೋರ್ಟ್ ತೀರ್ಪನ್ನು ಗೌರವಿಸುತ್ತೇವೆ. ಹಿಜಬ್ ವಿಚಾರದಲ್ಲಿ ಸಿದ್ದರಾಮಯ್ಯ ಹೇಳಿಕೆಯನ್ನು ತಿರುಚಲಾಗಿದೆ. ವಿದ್ಯಾರ್ಥಿಗಳು ಸಮವಸ್ತ್ರದಲ್ಲಿಯೇ ಶಾಲೆಗೆ ಹೋಗಲಿ. ಆದರೆ ಮುಸ್ಲಿಂ ವಿದ್ಯಾರ್ಥಿಗಳಿಗೆ ಸಮವಸ್ತ್ರದ ಮೇಲೆ ದುಪ್ಪಟ್ಟ ಹಾಕಿಕೊಳ್ಳಲು ಅವಕಾಶ ಕೋಡಿ ಎಂದು ಹೇಳಿದ್ದಾರೆ ಅಷ್ಟೇ. ಮಠದ ಸ್ವಾಮೀಜಿಗಳು ತಲೆ ಮೇಲೆ ಕೂಡ ಶಾಲು ಹಾಕಿಕೊಳ್ಳುತ್ತಾರೆ ಎಂದು ಸಿದ್ದರಾಮಯ್ಯ ಹೇಳಿಲ್ಲ. ಸಿದ್ದರಾಮಯ್ಯ ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ, ಯಾರೋ ಒಬ್ಬ ಯುವಕ ಹಿಂದೆ ನಿಂತು ಸರ್, ಸ್ವಾಮಿಜಿಗಳು ಕೂಡ ತಲೆ ಮೇಲೆ ಶಾಲು ಹಾಕಿಕೊಳ್ತಾರೆ ಎಂದು ಹೇಳಿದ್ದಾರೆ. ಆಗ ಸಿದ್ದರಾಮಯ್ಯ ಹೌದು ಎಂದಿದ್ದಾರೆ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.

Basavaraj Rayareddy

ಉತ್ತರಕರ್ನಾಟಕ ಭಾಗದಲ್ಲಿ ಹೆಂಗಸರು ತಲೆ ಮೇಲೆ ಸೆರಗು ಹಾಕುತ್ತಾರೆ. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಸ್ವಾಮೀಜಿಗಳ ಬಗ್ಗೆ ಸಿದ್ದರಾಮಯ್ಯ ಅವಹೇಳನ ಮಾಡಿಲ್ಲ. ಧರ್ಮ ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯ ಅವರನ್ನು ನೈತಿಕವಾಗಿ ಕುಗ್ಗಿಸುವ ಕೆಲಸ ಬಿಜೆಪಿಯಿಂದ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಅವರನ್ನು ಕುಗ್ಗಿಸಿದರೆ ಕಾಂಗ್ರೆಸ್‍ಗೆ ನಷ್ಟ ಮಾಡುವ ಲೆಕ್ಕಾಚಾರವಾಗಿದೆ. ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿ ಬಿಜೆಪಿಯವರು ಇದ್ದಾರೆ. ಇಂತಹ ಚಿಲ್ಲರೆ ಕೆಲಸ ಬಿಜೆಪಿಯವರು ಮಾಡಬಾರದು ಎಂದು ವಾಗ್ದಾಳಿ ಮಾಡಿದ್ದಾರೆ.

ಪಡಿತರ ವ್ಯವಸ್ಥೆ ಎಲ್ಲಾ ಸಮುದಾಯಕ್ಕೆ ಸಿಗಬೇಕು ಎಂದು ಕಾರ್ಯಕ್ರಮ ತಂದವರು. ಬಸವಣ್ಣನ ಫೋಟೋ ಹಾಕಿದವರು, ಅಕ್ಕಮಹಾದೇವಿ ಹೆಸರು ಬಿಜಾಪುರ ಮಹಿಳಾ ವಿವಿಗೆ ಇಟ್ಟಿದ್ದು ಸಿದ್ದರಾಮಯ್ಯ. ಆದರೆ ಇವರ ಬಗ್ಗೆ ಕೆಲ ಸಚಿವರು ನೀಡುತ್ತಿರುವ ಹೇಳಿಕೆ ವಿಷಾದನೀಯವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಉಳಿಸಿಕೊಳ್ಳಲು ಮೌನ ಆಗಬಾರದು. ಸಚಿವರಿಗೆ ಕೀಳು ಮಟ್ಟದ ಹೇಳಿಕೆ ನೀಡದಂತೆ ತಾಕೀತು ಮಾಡಬೇಕು ಎಂದು ಹೇಳಿದ್ದಾರೆ.

basavaraja rayareddy

ಸ್ವಾಮಿಜಿಗಳ ವಿರುದ್ಧ ಸಿದ್ದರಾಮಯ್ಯ ಮಾತಾಡಿಲ್ಲ. ಇವರು ಒಬ್ಬ ಸಮಾನ್ಯ ವ್ಯಕ್ತಿ ಅಲ್ಲ. ಸಿದ್ದರಾಮಯ್ಯ ಹಿಂದು ವಿರೋಧಿ ಅಲ್ಲ. ವೀರಶೈವ ಲಿಂಗಾಯತ ಸಮುದಾಯಕ್ಕಾಗಿ ಬಹಳಷ್ಟು ಕೆಲಸ ಮಾಡಿದ್ದಾರೆ. ಹಿಜಬ್ ವಿಚಾರದಲ್ಲಿ ಬಿಜೆಪಿ ನಾಯಕರು ಚಿಲ್ಲರೆ ಕೆಲಸ ಮಾಡುತ್ತಿದ್ದಾರೆ. ಚಿಲ್ಲರೆ ಅಧಿಕಾರಕ್ಕಾಗಿ ಚಿಲ್ಲರೆ ಅಧಿಕಾರಕ್ಕಾಗಿ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಬಸವರಾಜ ಬೊಮ್ಮಾಯಿ ಮೌನವಾಗಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

BOMMAI 6

ಬೊಮ್ಮಾಯಿ ಅವರ ತಂದೆ ಎಸ್.ಆರ್.ಬೊಮ್ಮಾಯಿ ಗ್ರೇಟ್ ಪರ್ಸನ್. ಅವರ ಮಗ ಹೀಗೆ ನಡೆದುಕೊಳ್ಳುವುದು ಸತ್ತು ಸ್ವರ್ಗದಲ್ಲಿರುವ ಅವರ ಆತ್ಮಕ್ಕೆ ನೋವಾಗಿರಬಹುದು. ಅವರು ತಮ್ಮ ಸಚಿವರುಗಳಿಗೆ ಬುದ್ಧಿ ಹೇಳಬೇಕು ಎಂದು ಹರಿಹಾಯ್ದಿದ್ದಾರೆ.

TAGGED:basavaraj rayareddycongresssiddaramaiahಕಾಂಗ್ರೆಸ್ಬಸವರಾಜ ಬೊಮ್ಮಾಯಿಬಸವರಾಜ್ ರಾಯರೆಡ್ಡಿಬಿಜೆಪಿಬೆಂಗಳೂರುಸಿದ್ದರಾಮಯ್ಯಹಿಜಬ್
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
5 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
24 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Israel Iran Conflict
Latest

ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

Public TV
By Public TV
2 hours ago
vinay kulkarni
Bengaluru City

ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

Public TV
By Public TV
18 minutes ago
Akash Family
Crime

ವಿಮಾನ ದುರಂತ – ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾವು

Public TV
By Public TV
22 minutes ago
Maithili Patil
Latest

Plane crash | ಲಂಡನ್ ತಲುಪಿ ಫೋನ್ ಮಾಡ್ತೀನಿ ಅಂದಿದ್ದ ಗಗನಸಖಿ ಮಗಳು – ಬಾರದ ಲೋಕಕ್ಕೆ ಹೋದ್ಳು..!

Public TV
By Public TV
25 minutes ago
Ahmedabad Plane Crash Bhagavad Gita
Latest

ಇಡೀ ವಿಮಾನ ಸುಟ್ಟು ಭಸ್ಮವಾದರೂ ಒಂದಿಷ್ಟೂ ಹಾನಿಯಾಗದ ಸ್ಥಿತಿಯಲ್ಲಿ ಸಿಕ್ತು ಭಗವದ್ಗೀತೆ ಪುಸ್ತಕ

Public TV
By Public TV
46 minutes ago
Lawrence Daniels
Latest

Plane Crash | ಅಪ್ಪನ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗ ದುರಂತ ಸಾವು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?