Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಕನ್ನಡ ಮತ್ತು ಹಿಂದಿಯಲ್ಲಿ ಸರೋಜಿನಿ ನಾಯ್ಡು ಬಯೋಪಿಕ್ : ಭಾರತದ ಕೋಗಿಲೆ ಪಾತ್ರದಲ್ಲಿ ಇಬ್ಬರು ನಟಿಯರು

Public TV
Last updated: March 30, 2022 3:32 pm
Public TV
Share
3 Min Read
sonal shantipriya
SHARE

“ಭಾರತದ ಕೋಗಿಲೆ’ ಎಂದೇ ಜನಪ್ರಿಯರಾದ ಸರೋಜಿನಿ ನಾಯ್ಡು ಕುರಿತ ಬಯೋಪಿಕ್​ ಕುರಿತಾದ ಸಿನಿಮಾ ಬರುತ್ತಿದೆ. ವಿನಯ್​ ಚಂದ್ರ ನಿರ್ದೇಶನದ ಈ ಚಿತ್ರವು ಇನ್ನಷ್ಟೇ ಶುರುವಾಗಬೇಕಿದ್ದು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಚರಣ್​ ಸುವರ್ಣ, ಹನಿ ಚೌಧರಿ ಮತ್ತು ಸಿ.ಬಿ. ಕುಲಕರ್ಣಿ ಜತೆಯಾಗಿ ಈ ಚಿತ್ರವನ್ನು ವಿಸ್ತಾ ಫಿಲಂಸ್ ಮೂಲಕ ನಿರ್ಮಿಸುತ್ತಿದ್ದಾರೆ. ಸರೋಜಿನಿ ನಾಯ್ಡು ಅವರ ಚಿಕ್ಕ ವಯಸ್ಸಿನ  ಪಾತ್ರದಲ್ಲಿಸೋನಲ್​ ಮಾಂಟೆರೊ ನಟಿಸಿದರೆ, ಹಿರಿವಯಸ್ಸಿನ ಪಾತ್ರವನ್ನು ಶಾಂತಿಪ್ರಿಯ ಮಾಡುತ್ತಿದ್ದಾರೆ. ಒಂದು ಕಾಲದಲ್ಲಿ ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಜನಪ್ರಿಯ ನಾಯಕಿಯಾಗಿದ್ದ ಶಾಂತಿಪ್ರಿಯ, ಈ ಚಿತ್ರದ ಮೂಲಕ 28 ವರ್ಷಗಳ ನಂತರ ಅಭಿನಯಕ್ಕೆ ವಾಪಸ್ಸಾಗುತ್ತಿದ್ದಾರೆ. 28 ವರ್ಷಗಳ ನಂತರ ನಟನೆಗೆ ವಾಪಸ್ಸಾಗಿದ್ದೇನೆ. ಇಂಥದ್ದೊಂದು ಅವಕಾಶಕ್ಕೆ ಧನ್ಯವಾದಗಳು. ಇಲ್ಲಿ ಸರೋಜಿನಿ ನಾಯ್ಡು ಅವರ ಪಾತ್ರ ನಿರ್ವಹಿಸುತ್ತಿದ್ದು, ಪಾತ್ರಕ್ಕೆ ಶಕ್ತಿಮೀರಿ ಜೀವ ತುಂಬುವುದಕ್ಕೆ ಪ್ರಯತ್ನಿಸುತ್ತೇನೆ ಎನ್ನುತ್ತಾರೆ ಹಿರಿಯ ನಟಿ ಶಾಂತಿಪ್ರಿಯ.

sarojini naidu biopic 3

ಹಿತೇನ್​ ತೇಜ್ವಾನಿ (ಮುಂಬೈ ನಟ) ಮಾತನಾಡುತ್ತಾ,  ಸರೋಜಿನಿ ನಾಯ್ಡು ಅವರ ಜೀವನದಲ್ಲಿ ನಡೆದ ಹಲವು ಪ್ರಮುಖ ವಿಷಯಗಳನ್ನು ಈ ಚಿತ್ರದಲ್ಲಿ ತೆರೆದಿಡಲಾಗುತ್ತಿದೆ. ನಾನು ಸರೋಜಿನಿ ಅವರ ಪತಿ ಗೋವಿಂದರಾಜುಲು ನಾಯ್ಡು ಅವರ ಪಾತ್ರ ನಿರ್ವಹಿಸುತ್ತಿದ್ದೇನೆ. ಸರೋಜಿನಿ ಅವರ ಬಗ್ಗೆ ಜನರಿಗೆ ಅಷ್ಟಾಗಿ ಗೊತ್ತಿಲ್ಲ. ನಿಜ ಹೇಳಬೇಕೆಂದರೆ, ಅವರಿಗೆ ಗೋವಿಂದ್​ ರಾಜುಲುಬೆನ್ನೆಲುಬಾಗಿದ್ದರು. ಕೊನೆಯವರೆಗೂ ಸಹಕಾರ, ಪ್ರೋತ್ಸಾಹ ನೀಡಿದರು. ಕುಟುಂಬ ಮತ್ತು ಮಕ್ಕಳ ಬಗ್ಗೆ ಯೋಚನೆ ಬೇಡ ಎಂದು ಆಕೆಯನ್ನು ಹುರಿದುಂಬಿಸಿದರು. ಆಕೆಗೆ ಏನು ಇಷ್ಟವಿತ್ತೋ, ಅದೆಲ್ಲವನ್ನೂ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟರು ಎಂದು ತಮ್ಮ ಪಾತ್ರ ವಿವರಣೆ ನೀಡಿದರು. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು

shantipriya

 ನನಗೆ ಮೊದಲಿನಿಂದಲೂ ಒಂದು ಬಯೋಪಿಕ್​ನಲ್ಲಿ ನಟಿಸಬೇಕು ಎಂಬ ಆಸೆ ಇತ್ತು. ಅದು ಇಷ್ಟು ಚಿಕ್ಕ ವಯಸ್ಸಿನಲ್ಲೇ ಸಿಗುತ್ತದೆ ಎಂಬ ನಂಬಿಕೆ ಇರಲಿಲ್ಲ. ಚರಣ್​ ಸುವರ್ಣ ಮತ್ತು ಹನಿ ಚೌಧರಿ ನನಗೆ ಸುಮಾರು ಏಳು ವರ್ಷಗಳಿಂದ ಪರಿಚಿತರು. ನನ್ನ ಬ್ಯುಸಿನೆಸ್​ ಪಾರ್ಟನರ್​ಗಳು ಸಹ. ಕಥೆ ಹೇಳಿದಾಗ ಬಹಳ ಖುಷಿ ಆಯಿತು. ಸರೋಜಿನಿ ಅವರ ಚಿಕ್ಕವಯಸ್ಸಿನ ಪಾತ್ರ ಮಾಡುತ್ತಿದ್ದೇನೆ. ಅವರ ಕಾಲೇಜಿನ ದಿನಗಳು ಮತ್ತು ರಾಜಕೀಯಕ್ಕೆ ಎಂಟ್ರಿ ಕೊಡುವುದಕ್ಕಿಂತ ಮುಂಚಿನ ಪಾತ್ರ ಮಾಡುತ್ತಿರುವುದಾಗಿ ಸೋನಾಲ್ ಮಾಂಟೆರೊ ತಿಳಿಸಿದರು. ಇದನ್ನೂ ಓದಿ:  ರಶ್ಮಿಕಾ ವೀಡಿಯೋ ನೋಡಿ ಸುಸ್ತಾದ ಅಭಿಮಾನಿಗಳು – ಕೊಡಗಿನ ಬೆಡಗಿಯ ಜಿಮ್ ಕಸರತ್ತು

sarojini naidu biopic 1

 ಕಳೆದ ಎಂಟು ವರ್ಷಗಳಿಂದ ಸರೋಜಿನಿ ಅವರ ಬಗ್ಗೆ ರೀಸರ್ಚ್​ ಮಾಡುತ್ತಿದ್ದೇನೆ. ಅವರು ಆಗಿನ ಕಾಲಕ್ಕೆ ಸ್ಕಾಲರ್​ಸಿಪ್​ ಪಡೆದು, ಲಂಡನ್​ನಲ್ಲಿ ಓದಿದವರು. ಅವರಿಗೆ ಹಲವು ಭಾಷೆಗಳು ಗೊತ್ತಿತ್ತು. ಭಾರತದ ಪ್ರತಿನಿಧಿಯಾಗಿ ಅವರು ಹಲವು ದೇಶಗಳಿಗೆ ಹೋಗಿದ್ದರು. ಉಪ್ಪಿನ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು. 50 ಡಿಗ್ರಿ ಬಿಸಿಲಿನಲ್ಲೂ ಮೂರು ದಿನಗಳ ಕಾಲ ನೀರು ಕುಡಿಯದೇ ಹೋರಾಟ ಮಾಡಿದರು. ಅವರ ಈ ಹೋರಾಟ ಎಲ್ಲರಿಗೂ ಗೊತ್ತಾಗಬೇಕು ಎಂದು ಈ ಚಿತ್ರ ಮಾಡುತ್ತಿದ್ದೇವೆ ಎಂದು ಕಥೆಗಾರ ಧೀರಜ್ ಮಿಶ್ರ ಹೇಳಿದರು. ಇದನ್ನೂ ಓದಿ: ರಣಬೀರ್ ಕಪೂರ್‌ಗೆ ಪತ್ನಿ ಆಗ್ತಾರಾ ನ್ಯಾಷಿನಲ್ ಕ್ರಶ್ ರಶ್ಮಿಕಾ ಮಂದಣ್ಣ?

sarojini naidu biopic 2

 ಇಲ್ಲಿ ಸರೋಜಿನಿ ಅವರ ಗೊತ್ತಿಲ್ಲದ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದೇವೆ. ಆಕೆ ಹೇಗೆ ಸ್ವಾತಂತ್ರ್ಯ ಹೋರಾಟಗಾರ್ತಿಯಾದರು, ಇಂಡಿಯನ್​ ನ್ಯಾಷನಲ್​ ಕಾಂಗ್ರೆಸ್​ನ ಮೊದಲ ಅಧ್ಯಕ್ಷೆ ಹೇಗಾದರೂ ಮುಂತಾದ ಹಲವು ವಿಷಯಗಳನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ.  ಈ ಚಿತ್ರವನ್ನು ನಿರ್ದೇಶಿಸುವುದರ ಜತೆಗೆ ಸಂಗೀತ ನಿರ್ದೇಶನವನ್ನೂ ಮಾಡುತ್ತಿದ್ದೇನೆ. ಇದೊಂದು ಬಹಳ ಸವಾಲಿನ ಕೆಲಸ. 1890ರ ಕಾಲಘಟ್ಟದಲ್ಲಿನ ಸಂಗೀತವನ್ನು ಕೇಳಿಸಬೇಕು. ಹೊಸ ಸಂಗೀತ ಎಂದನಿಸಬಾರದು.  ತಾರಾಗಣ ಇನ್ನೂ ಪೂರ್ತಿಯಾಗಿಲ್ಲ. ಜರೀನಾ ವಹಾಬ್​ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 1878ರಿಂದ 1949ರ ಕಾಲಘಟ್ಟದಲ್ಲಿ ಈ ಚಿತ್ರ ನಡೆಯುತ್ತದೆ. ಬೆಂಗಳೂರು, ಮುಂಬೈ, ಉತ್ತರ ಪ್ರದೇಶದಲ್ಲಿ 50 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಕನ್ನಡ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿ, ತೆಲುಗು ಮತ್ತು ತಮಿಳಿಗೆ ಡಬ್ಬಿಂಗ್​ ಆಗಲಿದೆ. ಸರೋಜಿನಿ ನಾಯ್ಡು ಅವರ ಕುಟುಂಬದ ಎನ್​ ಓ ಸಿ ಸಿಕ್ಕಿದೆ. ಗೋಪಾಲಕೃಷ್ಣ ಗೋಖಲೆ ಅವರ ಪಾತ್ರವನ್ನು ರಂಗಾಯಣ ರಘು ಅವರಿಂದ ಮಾಡಿಸಬೇಕೆಂಬ ಆಸೆ ಇದೆ. ಜೂನ್​ ಮೊದಲ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕ ವಿನಯ್ ಚಂದ್ರ ಚಿತ್ರದ ಬಗ್ಗೆ ವಿವರಣೆ ನೀಡಿದರು.

TAGGED:Actress ShantipriyabollywoodsandalwoodSarojini NaiduSarojini Naidu BiopicSonal Mentheroನಟಿ ಶಾಂತಿಪ್ರಿಯಬಾಲಿವುಡ್ಸರೋಜಿನಿ ನಾಯ್ಡುಸರೋಜಿನಿ ನಾಯ್ಡು ಬಯೋಪಿಕ್ಸೋನಲ್ ಮೆಂಥೆರೋಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories
Vishnuvardhan Memorial 3
ದಾದಾ ಅಂತ್ಯಕ್ರಿಯೆ ಸ್ಥಳದಲ್ಲೇ ಸ್ಮಾರಕ ನಿರ್ಮಿಸಲಿ – ಫಿಲ್ಮ್ ಚೇಂಬರ್‌ಗೆ ವಿಷ್ಣು ಅಭಿಮಾನಿಗಳ ಸಂಘ ಮನವಿ
Cinema Latest Sandalwood Top Stories
Actor Jaggesh at mantralaya 1
ರಾಯರ ಮಧ್ಯಾರಾಧನೆಯಲ್ಲಿ ನಟ ಜಗ್ಗೇಶ್ ಭಾಗಿ
Cinema Districts Latest Raichur Sandalwood Top Stories

You Might Also Like

rajugowda
Latest

ರಾಜಣ್ಣ ವಜಾ ಹಿಂದೆ ಮಹಾನಾಯಕನ ಪಾತ್ರ ಇದೆ: ರಾಜುಗೌಡ ಹೊಸಬಾಂಬ್

Public TV
By Public TV
13 minutes ago
Dharmasthala 6
Dakshina Kannada

ಧರ್ಮಸ್ಥಳ ಕೇಸ್‌ | ತೀವ್ರ ಕುತೂಹಲ ಕೆರಳಿಸಿದ್ದ 13ನೇ ಸ್ಪಾಟ್‌ನಲ್ಲಿ GPR ಮೂಲಕ ಶೋಧ

Public TV
By Public TV
15 minutes ago
BK Hariprasad
Latest

ಕೆ.ಎನ್.ರಾಜಣ್ಣರನ್ನ ಸಂಪುಟದಿಂದ ತೆಗೆದದ್ದು ದುರದೃಷ್ಟಕರ, ಹೀಗೆ ಆಗಬಾರದಿತ್ತು: ಬಿ.ಕೆ.ಹರಿಪ್ರಸಾದ್‌

Public TV
By Public TV
47 minutes ago
Legislative Council 1
Bengaluru City

ಸಚಿವ ಸಂಪುಟದಿಂದ ರಾಜಣ್ಣ ವಜಾ – ಪರಿಷತ್‌ನಲ್ಲಿ ಗದ್ದಲ ಗಲಾಟೆ

Public TV
By Public TV
55 minutes ago
SATISH JARKIHOLI 1
Bengaluru City

ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರು ಹಗೆ ಸಾಧಿಸ್ತಾರೆ ಎಚ್ಚರಿಕೆಯಿಂದ ಇರಬೇಕು: ಸತೀಶ್ ಜಾರಕಿಹೊಳಿ

Public TV
By Public TV
1 hour ago
Tamil Poet Vairamuthu
Latest

ಸೀತೆಯಿಂದ ಬೇರ್ಪಟ್ಟ ನಂತರ ಶ್ರೀರಾಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ: ತಮಿಳು ಕವಿ ವಿವಾದಾತ್ಮಕ ಹೇಳಿಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?