Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಮಗಳು ಪ್ರತಿಭಾನ್ವಿತಳು ಪರೀಕ್ಷೆಗೆ ಹೆದರುವವಳಲ್ಲ: ಅನುಶ್ರೀ ಹೆತ್ತವರ ಆಕ್ರಂದನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನನ್ನ ಮಗಳು ಪ್ರತಿಭಾನ್ವಿತಳು ಪರೀಕ್ಷೆಗೆ ಹೆದರುವವಳಲ್ಲ: ಅನುಶ್ರೀ ಹೆತ್ತವರ ಆಕ್ರಂದನ

Districts

ನನ್ನ ಮಗಳು ಪ್ರತಿಭಾನ್ವಿತಳು ಪರೀಕ್ಷೆಗೆ ಹೆದರುವವಳಲ್ಲ: ಅನುಶ್ರೀ ಹೆತ್ತವರ ಆಕ್ರಂದನ

Public TV
Last updated: March 30, 2022 4:55 pm
Public TV
Share
2 Min Read
SSLC STUDENT ANUSHRI
SHARE

ಮೈಸೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ ಅನುಶ್ರೀ ಮನೆಯಲ್ಲಿ ಸೂತಕದ ಛಾಯೆ ದಟ್ಟವಾಗಿ ಮೂಡಿದೆ. ಆಕೆ ಪ್ರತಿಭಾನ್ವಿತಳು, ಪರೀಕ್ಷೆಗೆ ಹೆದರುವವಳಲ್ಲ. ಪರೀಕ್ಷಾ ಕೇಂದ್ರ ಬದಲಾಗಿದ್ದಕ್ಕೆ ಆಕೆ ಆಘಾತಕ್ಕೆ ಒಳಗಾಗಿದ್ದಾಳೆ ಎಂದು ಆಕೆಯ ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ.

ಟಿ. ನರಸೀಪುರದಿಂದ 12 ಕಿ.ಮಿ ದೂರದ ಅಕ್ಕೂರು ಗ್ರಾಮದ ಕೆಂಪರಾಜು ಮಗಳು ಅನುಶ್ರೀ. ಗಾರೆ ಕೆಲಸ ಮಾಡುವ ಕೆಂಪರಾಜು ಬಹಳ ಕಷ್ಟಪಟ್ಟು ಮಗಳನ್ನು ಓದಿಸುತ್ತಿದ್ದರು. ಈಗ ಮಗಳು ಈ ರೀತಿ ಸಾವನ್ನಪ್ಪಿರುವುದು ಸಹಜವಾಗಿಯೆ ಅವರನ್ನು ಆಘಾತಕ್ಕೆ ತಳ್ಳಿದೆ.

ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ ದುಃಖ ತೋಡಿಕೊಂಡ ಅನುಶ್ರೀ ಪೋಷಕರು, ಆಕೆಗೆ ಯಾವುದೇ ಆರೋಗ್ಯದ ಸಮಸ್ಯೆ ಇರಲಿಲ್ಲ. ಪರೀಕ್ಷೆಗೆ ಹೋದ ಸಂದರ್ಭದಲ್ಲೂ ಚೆನ್ನಾಗಿಯೇ ಇದ್ದಳು. ಪರೀಕ್ಷೆ ಬರೆದು ಬರುತ್ತೇನೆ ಎಂದು ಬೆಳಗ್ಗೆ ಹೇಳಿ ಹೋದ ಮಗು ಹಿಂತಿರುಗಿ ಬರಲೇ ಇಲ್ಲ ಎಂದು ಗದ್ಗದಿತರಾದರು.

ನಾನು ಕೆಲಸ ಮಾಡುತ್ತಿದ್ದಾಗ ನನ್ನ ತಮ್ಮನ ಕರೆ ಬಂತು. ಮಗಳಿಗೆ ಹುಷಾರಿಲ್ಲ, ಬೇಗ ಅವಳನ್ನು ನೋಡಿಕೊಂಡು ಬಾ ಎಂದ. ಬಳಿಕ ನಾನು ಆಸ್ಪತ್ರೆಗೆ ಧಾವಿಸಿದೆ. ಆದರೆ ಅನುಶ್ರೀ ಜೀವಂತವಾಗಿಯೇ ಇರಲಿಲ್ಲ ಎಂದು ಅಳಲು ತೋಡಿಕೊಂಡರು. ಇದನ್ನೂ ಓದಿ: ಮುಸ್ಲಿಂ ಶಿಲ್ಪಿಗಳನ್ನು ಯಾವಾಗ ಬಹಿಷ್ಕರಿಸುತ್ತೀರಿ: ಹೆಚ್‌ಡಿಕೆ ಪ್ರಶ್ನೆ

anushri parents

ಪ್ರತೀ ದಿನ ಆಕೆ ಕಷ್ಟಪಟ್ಟು ಚೆನ್ನಾಗಿಯೇ ಓದುತ್ತಿದ್ದಳು. ಆಕೆಯನ್ನು ಡಾಕ್ಟರ್ ಇಲ್ಲವೇ ಎಂಜಿನಿಯರ್ ಓದಿಸಬೇಕೆಂಬ ಕನಸಿತ್ತು. ಆದರೆ ಈಗ ಅವಳೇ ಇಲ್ಲ. ಪರೀಕ್ಷೆ ದಿನ ಅವಳನ್ನು ನಾನೇ ಬೆಳಗ್ಗೆ ಆಟೋ ಹತ್ತಿಸಿದ್ದೆ. ಆದರೆ ಬರುವಾಗ ಆಕೆ ಹೆಣವಾಗಿ ಬಂದಳು ಎಂದು ಅನುಶ್ರೀ ತಾಯಿ ಆಕ್ರಂದಿಸಿದರು.

ಶಿಕ್ಷಕರ ನಿರ್ಲಕ್ಷವೇ ಕಾರಣ:
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿ ಅನುಶ್ರೀ ಹೃದಯಾಘಾತದಿಂದ ಮೃತಪಟ್ಟ ಪ್ರಕರಣದಲ್ಲಿ ಶಿಕ್ಷಕರ ನಿರ್ಲಕ್ಷ್ಯವಿದೆ ಎಂದು ಹೇಳಲಾಗುತ್ತಿದೆ. ಅನುಶ್ರೀ ತನಗೆ ನಿಗದಿ ಪಡಿಸಿದ ಪರೀಕ್ಷಾ ಕೇಂದ್ರ ಬಿಟ್ಟು ಪಕ್ಕದ ಕಟ್ಟಡದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾಳೆ.

ಪರೀಕ್ಷೆ ಆರಂಭವಾದ ಮುಕ್ಕಾಲು ಗಂಟೆ ಬಳಿಕ ಪರೀಕ್ಷಾ ಮೇಲ್ವಿಚಾರಕರು ಇದು ನಿನ್ನ ಪರೀಕ್ಷಾ ಕೇಂದ್ರವಲ್ಲ. ಪಕ್ಕದ ಕೇಂದ್ರ ನಿನ್ನದು ಎಂದು ಹೇಳಿ ಉತ್ತರ ಪತ್ರಿಕೆ ಹಿಂದಕ್ಕೆ ಪಡೆದು ಬೇರೆ ಕೇಂದ್ರಕ್ಕೆ ಕಳುಹಿಸಿದ್ದಾರೆ. ಪರೀಕ್ಷೆ ಪ್ರಾರಂಭವಾಗಿ ಮುಕ್ಕಾಲು ಗಂಟೆ ಬಳಿಕ ಪರೀಕ್ಷಾ ಮೇಲ್ವಿಚಾರಕರು ಎಚ್ಚೆತ್ತುಕೊಂಡಿದ್ದಾರೆ. ಅವರ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ. ಇದನ್ನೂ ಓದಿ: 40% ಕಮಿಷನ್ – ಈಶ್ವರಪ್ಪ ವಿರುದ್ಧ ಮೋದಿಗೆ ಪತ್ರ ಬರೆದ ಗುತ್ತಿಗೆದಾರ

tumakuru police jeep

ಘಟನೆಯಲ್ಲಿ ನಡೆದಿದ್ದೇನು?
ಅನುಶ್ರೀ ಪರೀಕ್ಷೆ ಬರೆಯಬೇಕಿದ್ದ ಕೇಂದ್ರ ವಿದ್ಯೋದಯ ಹೈಸ್ಕೂಲ್‌ನಲ್ಲಿ. ಆದರೆ ಅನುಶ್ರೀ ಇದೇ ಶಾಲೆಯ ಕಟ್ಟಡಕ್ಕೆ ಹೊಂದಿಕೊಂಡಿರುವ ವಿದ್ಯೋದಯ ಹಿರಿಯ ಪ್ರಾಥಮಿಕ ಶಾಲೆಗೆ ಹೋಗಿ ಪರೀಕ್ಷೆ ಬರೆದಿದ್ದಾಳೆ. ಅಲ್ಲಿ ಆಕೆಯ ನೋಂದಣಿ ಸಂಖ್ಯೆ ಹೋಲುವ ನಂಬರ್ ಇದ್ದ ಕಾರಣ ಅಲ್ಲೇ ಕುಳಿತು ಪರೀಕ್ಷೆ ಬರೆದಿದ್ದಾಳೆ. ಪರೀಕ್ಷೆ ಪ್ರಾರಂಭವಾಗಿ ಮುಕ್ಕಾಲು ಗಂಟೆಯ ಬಳಿಕ ಪರೀಕ್ಷಾ ಮೇಲ್ವಿಚಾರಕರು ಆಕೆಯನ್ನು ಪರೀಕ್ಷೆಯಿಂದ ಎಬ್ಬಿಸಿ, ಇನ್ನೊಂದೆಡೆಗೆ ಕಳುಹಿಸಿದ್ದಾರೆ. ಈ ಗೊಂದಲಗಳಿಂದ ಅನುಶ್ರೀ ಒತ್ತಡಕ್ಕೊಳಗಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.

TAGGED:Anushriheart attackmysoreSSLC studentಅನುಶ್ರೀಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಮೈಸೂರುಹೃದಯಾಘಾತ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

ಸಾಂದರ್ಭಿಕ ಚಿತ್ರ
Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
By Public TV
21 minutes ago
pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
38 minutes ago
Kurubarahalli Accident
Bengaluru City

ಸ್ಟೀಲ್ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ – ಗುದ್ದಿದ ರಭಸಕ್ಕೆ ಗುಜರಿ ಗೋಡೌನ್ ಬೆಂಕಿಗಾಹುತಿ, ವ್ಯಕ್ತಿ ಸಾವು

Public TV
By Public TV
42 minutes ago
Shivamogga
Districts

ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್

Public TV
By Public TV
1 hour ago
Iran Foreign Minister Abbas Araghchi
Latest

ಶತ್ರುಗಳಿಗೆ ಹಾರ್ಮುಜ್‌ ಜಲಸಂಧಿ ನಿರ್ಬಂಧಿಸುವುದು ಇರಾನ್‌ನ ಕಾನೂನುಬದ್ಧ ಹಕ್ಕು: ವಿಶ್ವಸಂಸ್ಥೆಯಲ್ಲಿ ಅರಘ್ಚಿ ಮಾತು

Public TV
By Public TV
1 hour ago
Fake Govt job
Districts

ಸರ್ಕಾರಿ ನೌಕರಿ ಕೊಡಿಸೋ ನಕಲಿ ನೇಮಕಾತಿ ಜಾಲ ಪತ್ತೆ – ಲಕ್ಷ ಲಕ್ಷ ಹಣ ನುಂಗಿ ಉದ್ಯೋಗಾಕಾಂಕ್ಷಿಗಳಿಗೆ ನಾಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?