Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನಿಂತಿಲ್ಲ ಅಕ್ರಮ ಮರಳು ದಂಧೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನಿಂತಿಲ್ಲ ಅಕ್ರಮ ಮರಳು ದಂಧೆ

Dakshina Kannada

ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನಿಂತಿಲ್ಲ ಅಕ್ರಮ ಮರಳು ದಂಧೆ

Public TV
Last updated: April 1, 2022 10:08 pm
Public TV
Share
2 Min Read
KUKKE
SHARE

ಮಂಗಳೂರು: ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಸುಬ್ರಹ್ಮಣ್ಯದ ತುಂಬಾ ಅಕ್ರಮ ಮರಳು ದಂಧೆಯದ್ದೇ ಕಾರುಬಾರು. ದೇಗುಲಕ್ಕೆ ಆಗಮಿಸುವ ಭಕ್ತರು ತೀರ್ಥ ಸ್ನಾನಗೈಯುವ ಪರಮ ಪವಿತ್ರ ಕುಮಾರಧಾರ ನದಿಯ ಎಲ್ಲೆಂದರಲ್ಲಿ ಮರಳಿಗಾಗಿ ಅಕ್ರಮ ದಂಧೆಕೋರರು ಹಿಟಾಚಿ, ಡ್ರೆಜ್ಜಿಂಗ್ ಮೆಷಿನ್ ಬಳಸಿ ನದಿಯೊಡಲು ಬರಿದು ಮಾಡುತ್ತಿದ್ದು ಅಕ್ರಮ ಮಟ್ಟ ಹಾಕಬೇಕಾದ ಸುಬ್ರಹ್ಮಣ್ಯ ಪೊಲೀಸರು, ಗಣಿ ಇಲಾಖೆ ಅಧಿಕಾರಿಗಳು ಎಲ್ಲಾ ಗೊತ್ತಿದ್ದೂ ಮೌನವಹಿಸಿರುವ ಆರೋಪ ಕೇಳಿಬಂದಿದೆ.

Kukke Shri Subrahmanya

ವಿವಿಧ ಇಲಾಖೆಗಳಿಗೆ ತಿಂಗಳ ಮಾಮೂಲಿಯಿಂದಲೇ ನಡೆಯುತ್ತಿರುವ ದಂಧೆಗೆ ಬ್ರೇಕ್ ಹಾಕೋರು ಯಾರು ಅನ್ನೋದು ಸುಬ್ರಹ್ಮಣ್ಯ ಕ್ಷೇತ್ರದ ಭಕ್ತರ ಪ್ರಶ್ನೆಯಾಗಿದೆ. ಪಂಜ ಏನೆಕಲ್ಲು ಮಾರ್ಗವಾಗಿ ಸಾಗುವಾಗ ಕುಮಾರಧಾರ ಸೇತುವೆಗಿಂತ ಮುಂದೆ ಪರ್ವತ ಮುಖಿ ಬಳಿಯ ಸರಕಾರಿ ಆಸ್ಪತ್ರೆಯ ಮಾರು ದೂರದಲ್ಲೇ ಅಕ್ರಮ ಮರಳುಗಾರಿಕೆ ನಿತ್ಯ ನಿರಂತರ ನಡೆಯುತ್ತಿದೆ. ಸಂಜೆ 6 ಗಂಟೆಯಿಂದ ಶುರುವಾಗುವ ಮರಳು ಸಾಗಾಟ ಮುಂಜಾನೆ 6 ಗಂಟೆಯವರೆಗೂ ನಡೆಯುತ್ತಿದೆ. ಇಲ್ಲಿಂದ ಪ್ರತಿನಿತ್ಯ ನೂರಾರು ಲೋಡ್‍ಗಳಷ್ಟು ಮರಳು ಸಕಲೇಶಪುರ ಮಾರ್ಗವಾಗಿ ಹಾಸನ, ಬೆಂಗಳೂರು ಕಡೆಗೂ ಸಾಗಾಟವಾಗುತ್ತಿದೆ. ಇಲ್ಲಿ ಬಟಾಬಯಲಾಗಿ ಮರಳು ಹೊತ್ತ ಲಾರಿಗಳು ಸಾಗುತ್ತಿದ್ದರೂ ಪೊಲೀಸ್ ಇಲಾಖೆ, ಗಣಿ ಇಲಾಖೆ ಅಧಿಕಾರಿಗಳು ದಂಧೆ ನಿಲ್ಲಿಸಲು ಮುಂದಾಗದೇ ಇರುವುದು ಜನರ ಸಂದೇಹಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಮಾರ್ಚ್‍ನಲ್ಲಿ GST ದಾಖಲೆ ಸಂಗ್ರಹ – ಯಾವ ರಾಜ್ಯದಲ್ಲಿ ಎಷ್ಟು ಸಂಗ್ರಹ?

KUKKE SUBRHMANYA

ಇಲ್ಲಿ ಮಾತ್ರವಲ್ಲದೆ ಸುಬ್ರಹ್ಮಣ್ಯ ಸುತ್ತಮುತ್ತ ಹತ್ತಾರು ಕಡೆಗಳಲ್ಲಿ ನದಿಯಿಂದ ಮರಳು ತೆಗೆಯಲಾಗುತ್ತಿದೆ. ಕುಲ್ಕುಂದ ಸಮೀಪದ ಮೈಸೂರು ಕೆಫೆ ಲಾಡ್ಜ್ ಪಕ್ಕದಲ್ಲಿ ಹಾದುಹೋಗುವ ರಸ್ತೆಯಲ್ಲಿ ಮರಳು ಲಾರಿಗಳ ಆರ್ಭಟ ಮಿತಿಮೀರಿದ್ದು ನದಿಯಲ್ಲಿ ಸಂಜೆಯಾಗುತ್ತಿದ್ದಂತೆ ಮರಳು ಲೋಡ್ ಮಾಡಲಾಗುತ್ತಿದೆ. ಲಾರಿಗಳ ಬೇಕಾಬಿಟ್ಟಿ ಓಡಾಟದಿಂದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಸಾರ್ವಜನಿಕರ ವಾಹನ ಓಡಾಟಕ್ಕೆ ಸಂಚಕಾರ ಉಂಟಾಗಿದೆ. ಸ್ಥಳೀಯರು ಅನೇಕ ಬಾರಿ ಪೊಲೀಸ್ ಇಲಾಖೆ, ಗ್ರಾಮ ಪಂಚಾಯತ್‍ಗೆ ದೂರು ನೀಡಿದ್ದರೂ ಯಾವುದೇ ರೀತಿಯಲ್ಲಿ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಇದನ್ನೂ ಓದಿ: ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಎಂದು ವಿದ್ಯಾರ್ಥಿಯ ಕೈ ಕಚ್ಚಿದ ಉಪನ್ಯಾಸಕ

SAND

ಜಿಲ್ಲೆಯಲ್ಲಿ ಕಾನೂನು ರೀತಿಯಲ್ಲಿ ಸರ್ಕಾರಕ್ಕೆ ರಾಜಾಧನ ಪಾವತಿಸಿ ಮರಳುಗಾರಿಕೆ ನಡೆಸುತ್ತಿರುವವರು ಅಕ್ರಮ ದಂಧೆಕೋರರ ಹಾವಳಿಯಿಂದ ಕಂಗಲಾಗಿದ್ದಾರೆ. ಪರ್ಮಿಟ್, ಟ್ಯಾಕ್ಸ್ ಎಲ್ಲಾ ಕಟ್ಟಿಯೂ ಕೂಡಾ ಇಲಾಖೆ ಅಕ್ರಮ ವ್ಯವಹಾರ ನಡೆಸುವವರ ಪರವಾಗಿ ನಿಂತಿದೆ ಎಂದು ಆರೋಪಿಸುತ್ತಿದ್ದಾರೆ. ಮಾರ್ಚ್ ತಿಂಗಳ ಅಂತ್ಯಕ್ಕೆ ವಾರ್ಷಿಕ ಲೆಕ್ಕದ ಕಾರಣಕ್ಕೆ ಮರಳುಗಾರಿಕೆ ಪರ್ಮಿಟ್ ಮೂರು ದಿನಗಳ ಕಾಲ ಇಲಾಖೆ ಬ್ಲಾಕ್ ಮಾಡಿದ್ದರೂ ಇಲ್ಲಿ ಮಾತ್ರ ಯಥಾಪ್ರಕಾರ ಮರಳು ಸಾಗಾಟವಾಗಿದೆ. ಉಪ್ಪಿನಂಗಡಿ, ಕಡಬ, ಬೆಳ್ತಂಗಡಿ, ಸುಬ್ರಹ್ಮಣ್ಯ, ಸುಳ್ಯ ಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಕಂಡು ಜನರು ಪ್ರಶ್ನೆ ಮಾಡುವಷ್ಟರ ಮಟ್ಟಿಗೆ ರೋಸಿಹೋಗಿದ್ದು ಜಿಲ್ಲಾಡಳಿತ, ಪೊಲೀಸ್ ಅಧಿಕಾರಿಗಳು ಈ ಕೂಡಲೇ ದಂಧೆಯನ್ನು ಸಂಪೂರ್ಣ ಮಟ್ಟ ಹಾಕುವ ಮೂಲಕ ಜನರ ವಿಶ್ವಾಸವನ್ನು ಉಳಿಸಬೇಕಾಗಿದೆ.

TAGGED:kukke Subrahmanyakumaradhara riverSandಕುಮಾರಧಾರಮರಳುಸುಬ್ರಹ್ಮಣ್ಯ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
1 hour ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
3 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
3 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
3 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
4 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?