Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ವಚ್ಛ ಭಾರತಕ್ಕೆ ವಿಶೇಷ ಪ್ರಯತ್ನ: ‘ನಮ್ಮ ಕಸ, ನಮ್ಮಲೇ ಗೊಬ್ಬರ’ ಪರಿಕಲ್ಪನೆ ಮೂಲಕ ವಿನೂತನ ಜಾಗೃತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸ್ವಚ್ಛ ಭಾರತಕ್ಕೆ ವಿಶೇಷ ಪ್ರಯತ್ನ: ‘ನಮ್ಮ ಕಸ, ನಮ್ಮಲೇ ಗೊಬ್ಬರ’ ಪರಿಕಲ್ಪನೆ ಮೂಲಕ ವಿನೂತನ ಜಾಗೃತಿ

Districts

ಸ್ವಚ್ಛ ಭಾರತಕ್ಕೆ ವಿಶೇಷ ಪ್ರಯತ್ನ: ‘ನಮ್ಮ ಕಸ, ನಮ್ಮಲೇ ಗೊಬ್ಬರ’ ಪರಿಕಲ್ಪನೆ ಮೂಲಕ ವಿನೂತನ ಜಾಗೃತಿ

Public TV
Last updated: April 2, 2022 6:17 pm
Public TV
Share
2 Min Read
Garbage Manure Coal Clean India 3
SHARE

ಮಡಿಕೇರಿ: ದೇಶವನ್ನು ಸ್ವಚ್ಛವಾಗಿರಿಸಬೇಕೆಂಬ ದೃಷ್ಟಿಯಿಂದ ಕೇಂದ್ರ ಸರ್ಕಾರವೇ ಸ್ವಚ್ಛ ಭಾರತ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಇಂದಿಗೂ ಅದು ಪರಿಪೂರ್ಣವಾಗಿ ಜಾರಿಗೊಂಡಿಲ್ಲ. ಆದರೆ ಇಲ್ಲೊಬ್ಬರು ಜನಪ್ರತಿನಿಧಿ ಕಸವನ್ನು ಸಂಪೂರ್ಣವಾಗಿ ಪರಿಷ್ಕರಿಸಿ ಸ್ವಚ್ಛ ಪಟ್ಟಣವನ್ನಾಗಿ ಮಾಡುವುದಕ್ಕಾಗಿ ಪಣತೊಟ್ಟಿದ್ದಾರೆ. ಅಷ್ಟೇ ಅಲ್ಲದೇ ಅವರೆ ಒಂದು ಯುವಕರ ತಂಡ ಕಟ್ಟಿಕೊಂಡು ಕಸಮುಕ್ತ ಪಟ್ಟಣವನ್ನು ಮಾಡಲು ಮುಂದಾಗಿದ್ದಾರೆ.

Garbage Manure Coal Clean India

ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣ ಪಂಚಾಯಿತಿ ಬಿಜೆಪಿಯ ಸದಸ್ಯ ಮನು ಅವರು ಅಳಿಲು ಸೇವೆ ಸಂಸ್ಥೆ ಹೆಸರಿನಲ್ಲಿ ‘ನಮ್ಮ ಕಸ, ನಮ್ಮಲೇ ಗೊಬ್ಬರ’ ಪರಿಕಲ್ಪನೆ ಮೂಲಕ ವಿನೂತನ ಜಾಗೃತಿ ಮೂಡಿಸುತ್ತಿದ್ದಾರೆ. ಪಟ್ಟಣ, ನಗರಗಳು ಬೆಳೆದಂತೆ ದಿನನಿತ್ಯ ಕಸ ಉತ್ಪಾದನೆಯಾಗುವ ಪ್ರಮಾಣ ಹೆಚ್ಚುತ್ತಲೇ ಇದೆ. ಆ ಕಸವನ್ನು ಶುದ್ಧವಾಗಿ ಪರಿಷ್ಕರಣೆ ಮಾಡಿ ನಿರ್ವಹಣೆ ಮಾಡುವುದೇ ದೊಡ್ಡ ಸವಾಲಾಗುತ್ತಿದೆ. ಇದನ್ನು ತಪ್ಪಿಸುವ ವೈಜ್ಞಾನಿಕ ಕ್ರಮ ‘ನಮ್ಮ ಕಸ, ನಮ್ಮಲೇ ಗೊಬ್ಬರ’ ಪರಿಕಲ್ಪನೆ.  ಇದನ್ನೂ ಓದಿ: ಗೋಮಾಂಸ ಸಾಗಾಟ – ಇಬ್ಬರು ಆರೋಪಿಗಳು ಸೆರೆ

Garbage Manure Coal Clean India 6

ಕೋವಿಡ್ ತೀವ್ರಗೊಂಡು ದೇಶದಲ್ಲಿ ಲಾಕ್ಡೌನ್ ಜಾರಿಯಾದಾಗ ಮನೆಯಲ್ಲಿಯೇ ಇದ್ದ ಮನು ಅವರು, ತಮ್ಮ ಮನೆಯಲ್ಲಿ ಉತ್ಪಾದನೆ ಆಗುತ್ತಿದ್ದ ಕಸವನ್ನು ವಿಲೇವಾರಿ ಮಾಡುವುದು ಕಷ್ಟವಾಗಿ ಅದನ್ನು ಮನೆಯಲ್ಲೇ ಕರಗಿಸಿ ಗೊಬ್ಬರ ಮಾಡಲು ಚಿಂತಿಸಿದ್ದರು. ಆಗಲೇ ಈ ಯೋಜನೆ ತಲೆಗೆ ಒಳೆದಿದ್ದು ಎಂದು ವಿವರಿಸಿದ್ದಾರೆ.

Garbage Manure Coal Clean India 8

ಮಾಡುವುದು ಹೇಗೆ?
ತರಕಾರಿ ಸಿಪ್ಪೆ, ಉಳಿದ ಆಹಾರ ಪದಾರ್ಥಗಳು, ಆಹಾರದ ವೇಸ್ಟ್ ಸೇರಿದಂತೆ ಯಾವುದೇ ರೀತಿಯ ಹಸಿ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ. ಅದಕ್ಕಾಗಿ ಮನೆಯ ಸುತ್ತಮುತ್ತ ಕೇವಲ ಒಂದಡಿ ಜಾಗವಿದ್ದರೆ ಸಾಕು. ಜೊತೆಗೆ ಆರು ಅಡಿ ಎತ್ತರ, ಒಂದಡಿ ಅಗಲದ ಪ್ಲಾಸ್ಟಿಕ್ ಪೈಪು ಇದ್ದರೆ ಸಾಕು. ಒಂದಡಿ ಆಳದ ಗುಂಡಿ ತೆಗೆದು ಪ್ಲಾಸ್ಟಿಕ್ ಪೈಪನ್ನು ನೆಟ್ಟಗೆ ಹೂತರೆ ಕಸ ವಿಲೇವಾರಿ ಘಟಕ ರೆಡಿ.

Garbage Manure Coal Clean India 5

ಆರು ಅಡಿ ಉದ್ದದ ಪೈಪಿಗೆ ಮೂರು ತಿಂಗಳ ಹಸಿ ಕಸವನ್ನು ಅದಕ್ಕೆ ತುಂಬಬಹುದು. ಕಸ ತುಂಬುವುದಕ್ಕೂ ಮೊದಲು ಮೂರು ಹಿಡಿ ಬೆಲ್ಲದ ಪುಡಿ ಮತ್ತು ಮೂರು ಹಿಡಿಯಷ್ಟು ಸಗಣಿ ಹಾಕಬೇಕು. ಹೀಗೆ ಹಾಕಿದರೆ ನಾವು ತುಂಬುವ ಹಸಿಕಸ ಸುಲಭವಾಗಿ ಕರಗುತ್ತೆ ಎನ್ನುತ್ತಾರೆ ಮನು.

Garbage Manure Coal Clean India 1

ತಮ್ಮ ಅಳಿಲು ಸೇವಾ ಸಂಸ್ಥೆ ಮೂಲಕ ಇದುವರೆಗೆ 150 ಕುಟುಂಬಗಳಿಗೆ ಈ ಘಟಕ ಮಾಡಿಸಿದ್ದಾರೆ. ಇದೀಗ ಆ ಕುಟುಂಬಗಳಲ್ಲಿ ಕೆಲವರು ಕಾಂಪೋಸ್ಟ್ ಗೊಬ್ಬರ ತಯಾರಿಸಿ ಅದೇ ಗೊಬ್ಬರ ಬಳಸಿ ಮನೆಯ ತಾರಸಿಗಳಲ್ಲಿ ಹಣ್ಣು ತರಕಾರಿ ಮತ್ತು ಹೂವುಗಳನ್ನು ಬೆಳೆಯುತ್ತಿದ್ದಾರೆ. ಸ್ವಚ್ಛ ಭಾರತದ ಪರಿಕಲ್ಪನೆಯಲ್ಲಿ ಮಾಡಿರುವ ಈ ಒಂದು ಘಟಕ ಮೂರು ಜನರಿಗೆ ಮೂರು ರೀತಿಯ ಅನುಕೂಲಗಳನ್ನು ಒದಗಿಸುತ್ತಿದೆ.

Garbage Manure Coal Clean India 4

ಒಂದೆಡೆ ಕಸವಿಲೇವಾರಿ ಸರಳವಾಗಿದ್ದರೆ, ಮತ್ತೊಂದೆಡೆ ಅಲ್ಲಿ ಉತ್ಪಾದನೆಯಾಗುವ ಸಾವಯವ ಗೊಬ್ಬರದಿಂದ ಮನೆಯ ತಾರಸಿಗಳಲ್ಲಿ ಹಣ್ಣು ತರಕಾರಿಗಳನ್ನು ಬೆಳೆದು ಹಣ ಉಳಿಸಿಕೊಳ್ಳುತ್ತಿದ್ದಾರೆ. ಜೊತೆಗೆ ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಯಿಂದ ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ಜೊತೆ ಸಮಾಜದ ಆರೋಗ್ಯವನ್ನು ಕಾಪಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: RK ಹೌಸ್‌ನಲ್ಲಿ ರಣಬೀರ್-ಆಲಿಯಾ ಮದುವೆ : ಆ ಸ್ಥಳದ ಹಿಂದಿದೆ ಇಂಟ್ರಸ್ಟಿಂಗ್ ಕಹಾನಿ

Garbage Manure Coal Clean India 2

150 ಕುಟುಂಬಗಳಲ್ಲಿ ಮಾಡಿರುವ ಈ ಕಸ ಸಂಸ್ಕರಣಾ ಘಟಕಗಳನ್ನು ಇನ್ನಷ್ಟು ಕುಟುಂಬಗಳಿಗೆ ವಿಸ್ತರಣೆ ಮಾಡುವ ಚಿಂತನೆಯಲ್ಲಿ ಇದ್ದಾರೆ. ಅಳಿಲು ಸೇವಾ ಸಂಸ್ಥೆಯವರು ಹೆಚ್ಚು ಸಾವಯವ ಗೊಬ್ಬರ ಉತ್ಪಾದನೆ ಆದಲ್ಲಿ ಅದನ್ನು ಅಳಿಲು ಸೇವಾ ಸಂಸ್ಥೆಯೇ ಖರೀದಿ ಮಾಡುವ ಚಿಂತನೆಯಲ್ಲಿದೆ ಎಂದು ವಿರಿಸಿದರು.

TAGGED:Clean IndiacoalgarbageManureಕಸಕೊಡಗುಗೊಬ್ಬರಸ್ವಚ್ಛ ಭಾರತ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
3 hours ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
3 hours ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
4 hours ago
ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
5 hours ago
pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
6 hours ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?