ನವದೆಹಲಿ: ಶ್ರೀಲಂಕಾದಂತೆ ಭಾರತದಲ್ಲಿಯೂ ಆರ್ಥಿಕ ಬಿಕ್ಕಟ್ಟು ತಲೆದೋರಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.
ಆರ್ಜೆಡಿ ಮುಖಂಡ ಶರದ್ ಯಾದವ್ ಅವರ ಭೇಟಿ ವೇಳೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್ಥಿಕ ತಜ್ಞರು ಮತ್ತು ಅಧಿಕಾರಿಗಳು ಇತರ ರಾಷ್ಟ್ರಗಳನ್ನು ನೋಡಿ ಯೋಜನೆ ರೂಪಿಸುತ್ತಾರೆ. ನಾವು ಅವರಂತೆ ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಾರೆ. ಆ ರೀತಿಯಲ್ಲಿ ಮಾಡಬಾರದು. ಮೊದಲು ನಾವು ಯಾರು ಮತ್ತು ಇಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮನನ ಮಾಡಿಕೊಳ್ಳಬೇಕು ಎಂದಿದ್ದಾರೆ. ಇದನ್ನೂ ಓದಿ: 2 ಕೋಟಿ ದರೋಡೆ ಕೇಸ್ – ಪತ್ನಿ ಸಾಲ ತೀರಿಸಲು ಕನ್ನ ಹಾಕಿದ ಇಬ್ಬರು ಪತ್ನಿಯರ ಮುದ್ದಿನ ಗಂಡ
ದೇಶವು ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದೆ ಎಂದು ಶರದ್ ಯಾದವ್ ಇಂದು ಹೇಳಿದ್ದನ್ನು ನಾನು ಒಪ್ಪುತ್ತೇನೆ. ದ್ವೇಷವನ್ನು ಹರಡಲಾಗುತ್ತಿದೆ ಮತ್ತು ರಾಷ್ಟ್ರವನ್ನು ವಿಭಜಿಸಲಾಗುತ್ತಿದೆ. ನಾವು ರಾಷ್ಟ್ರವನ್ನು ಒಟ್ಟುಗೂಡಿಸಬೇಕು ಮತ್ತು ಮತ್ತೊಮ್ಮೆ ನಮ್ಮ ಇತಿಹಾಸದ ಭಾಗವಾಗಿರುವ ಸಹೋದರತ್ವದ ಹಾದಿಯಲ್ಲಿ ನಡೆಯಬೇಕು. ಇದನ್ನೂ ಓದಿ: ಮದ್ಯದ ಬಾಟಲಿಯಿಂದ ಸಿಕ್ಕಿ ಬಿದ್ರು 2 ಕೋಟಿ ಕದ್ದ ಖದೀಮರು
ಆರ್ಥಿಕತೆಯ ಬೆನ್ನೆಲುಬುನ್ನು ಅವರು ಮುರಿದಿದ್ದಾರೆ. ಮುಂದಿನ ಮೂರು-ನಾಲ್ಕು ವರ್ಷಗಳಲ್ಲಿ ಭಯಾನಕ ಫಲಿತಾಂಶ ಬರಲಿದೆ. ದೇಶದ ಆರ್ಥಿಕ ಪರಿಸ್ಥಿತಿ ಮತ್ತು ಉದ್ಯೋಗದ ಪರಿಸ್ಥಿತಿಯನ್ನು ಊಹಿಸಲು ಸಾಧ್ಯವಿರಲ್ಲ. ನೀವು ಜೀವನದಲ್ಲಿ ನೋಡಿಲ್ಲದಿದ್ದನ್ನು ಮುಂದಿನ ದಿನಗಳಲ್ಲಿ ನೋಡಲಿದ್ದೀರಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಜಯನಗರದ ನೆಲದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ
ಕಳೆದ ಎರಡ್ಮೂರು ವರ್ಷಗಳಲ್ಲಿ ಮಾಧ್ಯಮಗಳು, ಸಂಸ್ಥೆಗಳು, ಬಿಜೆಪಿ ಮುಖಂಡರು, RSS ಸತ್ಯವನ್ನು ಮರೆಮಾಚಿವೆ. ನಿಧಾನವಾಗಿ ಸತ್ಯ ಹೊರಬರಲಿದೆ. ಶ್ರೀಲಂಕಾದಂತೆ ಭಾರತದಲ್ಲಿಯೂ ಆಗಲಿದೆ. ಅಲ್ಲಿ ಸತ್ಯಾಂಶ ಹೊರಬಂದಿದೆ. ಭಾರತದಲ್ಲಿಯೂ ಸತ್ಯ ಹೊರಬರಲಿದೆ ಎಂದು ತಿಳಿಸಿದ್ದಾರೆ.