ಸೋಮೇಶ್ವರ ದೇವಾಲಯ ಜಾಗಕ್ಕೆ ಕಿತ್ತಾಟ: ವ್ಯಕ್ತಿಯ ವಿರುದ್ಧ ತಿರುಗಿಬಿದ್ದ ಗ್ರಾಮಸ್ಥರು

Public TV
1 Min Read
vlcsnap 2022 04 14 23h09m03s269

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳ ಗ್ರಾಮದಲ್ಲಿ ಸೋಮೇಶ್ವರ ದೇವಾಲಯಕ್ಕೆ ಸೇರಿದ ಜಾಗದ ವಿವಾದ ಕೆಲ ಘಂಟೆಗಳ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

vlcsnap 2022 04 14 23h09m20s624

ಇಲ್ಲಿನ ಖಾಸಗಿ ವ್ಯಕ್ತಿ ಮುನಿರಾಜು ಮರಸೂರು ಗ್ರಾಮ ಪಂಚಾಯ್ತಿಯಲ್ಲಿ ಅಕ್ರಮವಾಗಿ ಸೋಮೇಶ್ವರ ದೇವಾಲಯಕ್ಕೆ ಸೇರಿದ ಜಾಗವನ್ನು ಕಬಳಿಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಊರಿನ ಗ್ರಾಮಸ್ಥರು ಆತನ ವಿರುದ್ಧ ತಿರುಗಿಬಿದ್ದಿದ್ದರು. ಇದನ್ನೂ ಓದಿ: ಆಧಾರ್ ಕಾರ್ಡ್ ಇರೋರೆಲ್ಲ ಭಾರತೀಯರು: ವಚನಾನಂದ ಶ್ರೀ

vlcsnap 2022 04 14 23h09m16s848

ಇದೇ ಜಾಗದಲ್ಲಿ ಮುಸ್ಲಿಮರ ಕಡೆಯಿಂದ ಇಲ್ಲಿನ ಸ್ಥಳೀಯ ವ್ಯಕ್ತಿಯಾದ ಮುನಿರಾಜುಗೆ ಮಾರಾಟ ಮಾಡಿರುವುದಾಗಿ ದಾಖಲೆಗಳಿವೆ. ಹೀಗಾಗಿ ಮುನಿರಾಜು ನನಗೆ ಸೇರಿದ ಜಾಗ ಅಂತ ಸರ್ವೆ ಮಾಡಿಕೊಂಡಿದ್ದರು. ಅದಕ್ಕಾಗಿ ಕೆಲ ಘಂಟೆಗಳ ಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನೂ ಓದಿ: ಕಲಾವಿದನ ನಾಲಿಗೆಯಿಂದ ಅರಳಿತು ಅಂಬೇಡ್ಕರ್ ಚಿತ್ರ

vlcsnap 2022 04 14 23h09m37s814

ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ದಂಡಾಧಿಕಾರಿಗಳು ಈ ಬಗ್ಗೆ ಗಮನಹರಿಸಿ ಸೋಮೇಶ್ವರ ದೇವಾಲಯದ ಜಾಗವನ್ನು ಬಿಟ್ಟುಕೊಡುವಂತೆ ಸೂಚಿಸಿದರು. ಈ ವೇಳೆ ಕೆಲ ಗಂಟೆಗಳ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *