ಹನುಮಜಯಂತಿ ವೇಳೆ ಹಿಂಸಾಚಾರ – 4 ರಾಜ್ಯಗಳ 140 ಪುಂಡರು ಅರೆಸ್ಟ್

Public TV
1 Min Read
delhi

ನವದೆಹಲಿ: ರಾಮ ನವಮಿಯಂದು ಭುಗಿಲೆದ್ದ ಹಿಂಸಾಚಾರದ ಬಳಿಕ ಹನುಮಜಯಂತಿಯ ಸಂದರ್ಭದಲ್ಲಿಯೂ ಮತ್ತೊಮ್ಮೆ ದೇಶದ ಅನೇಕ ರಾಜ್ಯಗಳಲ್ಲಿ ಘರ್ಷಣೆಗಳು ವರದಿಯಾದವು.

ಹನುಮಜಯಂತಿಯ ಪ್ರಯುಕ್ತ ದೇಶದ ಹಲವೆಡೆ ಶೋಭಾಯಾತ್ರೆಗಳನ್ನು ಮಾಡಲಾಗಿದ್ದು, ಈ ವೇಳೆ ಕಲ್ಲುತೂರಾಟದಂತಹ ಘಟನೆಗಳು ನಡೆದಿದೆ. ಇದರಲ್ಲಿ ಕರ್ನಾಟಕದ ಹುಬ್ಬಳಿಯಲ್ಲಿ ನಡೆದ ಘಟನೆಯೂ ಒಂದು. ದೆಹಲಿಯ ಜಹಾಂಗೀರ್‌ಪುರಿ ಪ್ರಾರಂಭವಾದ ಘರ್ಷಣೆ ಬಳಿಕ ಉತ್ತರಾಖಂಡ, ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲೂ ನಡೆಯಿತು. ಇದನ್ನೂ ಓದಿ: ದೆಹಲಿ ಹನುಮ ಜಯಂತಿ ಮೆರವಣಿಗೆಯಲ್ಲಿ ಹಿಂಸಾಚಾರ ಪ್ರಕರಣ – ಇಬ್ಬರು ಅಪ್ರಾಪ್ತರು ಸೇರಿ 21 ಜನರ ಬಂಧನ

HBL_ POLICE 5

ಪರಿಸ್ಥಿತಿಯನ್ನು ನಿಯಂತ್ರಿಸಲು ಈ ಎಲ್ಲಾ ರಾಜ್ಯಗಳಲ್ಲೂ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಯಿತು. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಸುಮಾರು 140 ಜನರನ್ನು ಬಂಧಿಸಲಾಗಿದೆ. ಕರ್ನಾಟಕದಲ್ಲೇ ಸುಮಾರು 90 ಜನರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಹಿಂಸಾಚಾರ ಪೂರ್ವನಿಯೋಜಿತ ಸಂಚು: ಬಿರುಗಾಳಿ ಎಬ್ಬಿಸಿದ ವಾಟ್ಸಪ್‌ ಆಡಿಯೋ

hbl (2)

ಈ ತಿಂಗಳು ದೇಶದಲ್ಲಿ ಹಿಂಸಾಚಾರಗಳು ನಡೆದು ಜನತೆಯನ್ನು ಬೆಚ್ಚಿ ಬೀಳಿಸಿರುವುದು ಮೊದಲೇನಲ್ಲ. ಇದೇ ತಿಂಗಳು ನಡೆದ ರಾಮನವಮಿ ಆಚರಣೆಯಂದು ಕೂಡಾ ಗುಜರಾತ್, ಪಶ್ಚಿಮ ಬಂಗಾಳ, ಮಧ್ಯಪ್ರದೇಶ ಹೀಗೆ ಹಲವಾರು ರಾಜ್ಯಗಳಲ್ಲಿ ಕಲ್ಲು ತೂರಾಟ ಹಾಗೂ ಬೆಂಕಿ ಹಚ್ಚಿದ ಘಟನೆಗಳನ್ನು ವರದಿಯಾಗಿದೆ.

delhi 1

ದೇಶದ ಕೆಲವು ಭಾಗಗಳಲ್ಲಿ ನಡೆಯುತ್ತಿರುವ ಹಿಂಸಾಚಾರಗಳನ್ನು ಪೂರ್ವನಿಯೋಜಿತ ಪಿತೂರಿ ಎಂದು ಬಿಜೆಪಿ ಹೇಳಿದೆ. ಈ ಘಟನೆಗಳ ಬಗ್ಗೆ ರಾಜ್ಯ ಸರ್ಕಾರಗಳು ಗಂಭೀರವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದೆ.

Share This Article
Leave a Comment

Leave a Reply

Your email address will not be published. Required fields are marked *