Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲ್ಲು ಹೊಡೆಯುವ ಸಂಸ್ಕೃತಿ ಮುಸ್ಲಿಮರಲ್ಲಷ್ಟೇ ಇದೆ: ಪ್ರತಾಪ್‌ ಸಿಂಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಲ್ಲು ಹೊಡೆಯುವ ಸಂಸ್ಕೃತಿ ಮುಸ್ಲಿಮರಲ್ಲಷ್ಟೇ ಇದೆ: ಪ್ರತಾಪ್‌ ಸಿಂಹ

Districts

ಕಲ್ಲು ಹೊಡೆಯುವ ಸಂಸ್ಕೃತಿ ಮುಸ್ಲಿಮರಲ್ಲಷ್ಟೇ ಇದೆ: ಪ್ರತಾಪ್‌ ಸಿಂಹ

Public TV
Last updated: April 21, 2022 2:13 pm
Public TV
Share
2 Min Read
PRATAP SIMHA 1
SHARE

ಮೈಸೂರು: ಹಿಂದೂಗಳ ಧಾರ್ಮಿಕ ಮೆರವಣಿಗೆಯಲ್ಲಿ ಮುಸ್ಲಿಮರು ಯಾಕೆ ಕಲ್ಲು ಹೊಡೆಯುತ್ತಾರೆ? ಮುಸ್ಲಿಮರ ಮೆರವಣಿಗೆ ಮೇಲೆ ಯಾವತ್ತಾದರೂ ಹಿಂದೂಗಳು ಕಲ್ಲು ಹೊಡೆದಿದ್ದಾರಾ? ಹನುಮನ ಮೆರವಣಿಗೆ, ರಾಮನ ಮೆರವಣಿಗೆ ಮೇಲೆ ಮುಸ್ಲಿಮರು ಯಾಕೆ ಪದೇ ಪದೇ ಕಲ್ಲು ಹೊಡೆಯುತ್ತಾರೆ? ಕಲ್ಲು ಹೊಡೆಯುವ ಸಂಸ್ಕೃತಿ ಮುಸ್ಲಿಮರಲ್ಲಿದೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

ಹಿಂದೂಗಳ ಯಾತ್ರೆಯನ್ನು ಸೈತಾನರ ಯಾತ್ರೆ ರೀತಿ ಮುಸ್ಲಿಮರು ನೋಡುತ್ತಾರೆ. ಅನ್ಯ ಧರ್ಮದವರನ್ನು ಸೈತಾನರ ರೀತಿ ನೋಡುವ ಮುಸ್ಲಿಮರ ಮನಃಸ್ಥಿತಿ ಬದಲಾಗಬೇಕು. ನೆಲೆ ಕೇಳಿ ಕೊಂಡು ಹಿಂದೂ ರಾಷ್ಟ್ರಕ್ಕೆ ಬಂದವರು ಮುಸ್ಲಿಮರು. ಇಲ್ಲಿನ ಮುಸ್ಲಿಮರಲ್ಲಿ ಇರುವುದು ಹಿಂದೂ ಡಿಎನ್‌ಎ. ಮತಾಂತರದಿಂದ ಮುಸ್ಲಿಮರಾದ ನೀವು ಏನೋ ಅರಬ್ ಡಿಎನ್‌ಎ ಬಂದಿದೆ ಎನ್ನುವ ರೀತಿ ವರ್ತಿಸಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ನಿರ್ಮಲಾ ಸೀತಾರಾಮನ್ ಹಣದುಬ್ಬರದ ಬಗ್ಗೆ ಅರ್ಥಹೀನ ಮಾತನಾಡಿದ್ದಾರೆ: ದಿನೇಶ್ ಗುಂಡೂರಾವ್

pratap simha 4

ಕಲ್ಲು ಎಸೆದರೆ ಬುಲ್ಡೋಜರ್ ನಿಮ್ಮ ಮನೆ ಮುಂದೆ ಬರುತ್ತದೆ. ಕ್ರಿಯೆಗೆ ಪ್ರತಿಕ್ರಿಯೆಗೆ ಇರುತ್ತದೆ. ಸಮಾಜ ಬಾಹಿರ ಚಟುವಟಿಕೆಗೆ ಕೈ ಹಾಕುವವರ ಮೇಲೆ ಕ್ರಮ ಆಗಲೇ ಬೇಕು. ಭೂಗತ ಪಾತಕಿ ದಾವುದ್ ಇಬ್ರಾಹಿಂ ಕೂಡ ನಿಮ್ಮವನು ಎಂದು ನಿಮಗೆ ಅನ್ನಿಸಿ ಬಿಡುತ್ತೆ. ಕರ್ನಾಟಕದಲ್ಲಿ ಕೂಡಾ ಬುಲ್ಡೋಜರ್ ಬೀದಿಗೆ ಇಳಿಯುತ್ತವೆ. ಬುಲ್ಡೋಜರ್ ರಸ್ತೆಗೆ ಇಳಿಯಬಾರದು ಎಂದರೆ, ಪುಂಡ ಮುಸ್ಲಿಮರು ಗೌರವಯುತವಾಗಿ ಇರಿ ಎಂದು ಎಚ್ಚರಿಸಿದರು.

ಇದೇ ವೇಳೆ ಮೈಸೂರು ದೇವರಾಜ ಮಾರುಕಟ್ಟೆ ಉಳಿಸುವ ವಿಚಾರದಲ್ಲಿ ರಾಜವಂಶಸ್ಥ ಯದುವೀರ್ ಧ್ವನಿ ಎತ್ತಿದ ವಿಚಾರವಾಗಿ ಮಾತನಾಡಿದ ಪ್ರತಾಪ್ ಸಿಂಹ, ಮೈಸೂರು ಮಹಾರಾಜರ ಋಣದಲ್ಲಿ ನಾವಿದ್ದೇವೆ. ಇದು ರಾಜಕಾರಣಿಗಳು ಕಟ್ಟಿದ ಊರಲ್ಲ. ಇಲ್ಲಿನ ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ಯದುವಂಶದವರ ಅಭಿಪ್ರಾಯ ಕೇಳುತ್ತೇವೆ ಎಂದರು.

Pratap Simha 2 1

ಶಿಥಿಲ ವ್ಯವಸ್ಥೆಯಲ್ಲಿ ಮಾರುಕಟ್ಟೆ ಕಟ್ಟಡವಿದೆ. ಅದಕ್ಕಾಗಿ ಅದನ್ನು ಪುನರ್ ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಯದುವಂಶದವರಿಗೆ ಸಂಪೂರ್ಣ ಮಾಹಿತಿ ನೀಡಿ, ಅವರಿಗೆ ವಾಸ್ತವ ಸ್ಥಿತಿ ಅರ್ಥ ಮಾಡಿಸುತ್ತೇವೆ. ಅವರು ನೀಡುವ ಸಲಹೆಗಳನ್ನು ಗೌರವಿಸಿ, ಈ ಕಾರ್ಯ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು.

ಅದಾನಿ-ಅಂಬಾನಿ ಸಂಪತ್ತು ಹೆಚ್ಚಾದ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನಿಗೆ ತಿರುಗೇಟು ನೀಡಿದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಯಾವ ಆಲುಗೆಡ್ಡೆ ಜೋಳ ಬೆಳೆದು ಹಣ ಮಾಡಿದರು? ನೀವು ಇವತ್ತು ಶ್ರಿಮಂತರಾಗಿಲ್ಲವಾ? 30-40 ವರ್ಷದ ಹಿಂದೆ ನೀವು ಹೇಗಿದ್ದರೋ ಇಂದು ಕೂಡಾ ಹಾಗೆಯೇ ಇದ್ದೀರಾ? ನಿಮ್ಮ ಜೊತೆ ಇರುವ ಕೆಜೆ ಜಾರ್ಜ್, ಎಂಬಿ ಪಾಟೀಲ್, ಡಿಕೆ ಶಿವಕುಮಾರ್ 40 ವರ್ಷದ ಹಿಂದೆ ಏನಾಗಿದ್ದರು ಹೇಳಿ? ಇವತ್ತು ಎಷ್ಟು ಶ್ರಿಮಂತರಾಗಿದ್ದಾರೆ. ಉದ್ಯಮಿಗಳ ಶ್ರೀಮಂತಿಕೆ ಬಗ್ಗೆ ಮಾತನಾಡುವ ನೀವು, ರಾಜಕಾರಣಿಗಳ ಶ್ರೀಮಂತಿಕೆ ಬಗ್ಗೆ ಏಕೆ ಮಾತನಾಡುವುದಿಲ್ಲ ಎಂದು ಪ್ರಶ್ನಿಸಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದಿಂಗಾಲೇಶ್ವರ ಶ್ರೀಗಳಿಗೆ ತಲೆ ಸರಿ ಇಲ್ಲ: ರೇಣುಕಾಚಾರ್ಯ ವ್ಯಂಗ್ಯ

Siddaramaiah

ಅದಾನಿ-ಅಂಬಾನಿನಾ ಹುಟ್ಟಿಸಿದ್ದು ಮೋದಿನಾ? ಮೋದಿ ಪ್ರಧಾನ ಮಂತ್ರಿ ಆಗುವುದಕ್ಕೂ ಮುಂಚೆ ಅವರು ಶ್ರೀಮಂತರಾಗಿರಲಿಲ್ಲವಾ? ಮಾತೆತ್ತಿದರೆ ಅದಾನಿ-ಅಂಬಾನಿ ಅಂತೀರಾ. ಎಷ್ಟೋ ಶ್ರೀಮಂತ ಉದ್ಯಮಿಗಳು ಹುಟ್ಟಿದ್ದು ಯಾರ ಕಾಲದಲ್ಲಿ? ಆಸ್ತಿ ಮೌಲ್ಯ ಹೆಚ್ಚಾದಂತೆ ಶ್ರೀಮಂತಿಕೆ ಹೆಚ್ಚಾಗುತ್ತದೆ. ಅದಕ್ಕೆ ಮೋದಿ ಕಾರಣ ಎಂದರೆ ಏನು ಅರ್ಥ? ಮೋದಿಯನ್ನು ಚರ್ಚೆಗೆ ಕರೆಯುತ್ತೀರಾ? ದೇಶಕ್ಕೆ ಒಬ್ಬರೇ ಮೋದಿ. ಇಂತಹ ಚರ್ಚೆಗಳಿಗೆ ಅವರು ಏಕೆ ಬೇಕು ಎಂದು ಟಾಂಗ್ ನೀಡಿದರು.

TAGGED:muslimsmysurupratap simhaStone peltingಕಲ್ಲು ತೂರಾಟಪ್ರತಾಪ್ ಸಿಂಹಮುಸ್ಲಿಂಮೈಸೂರು
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Flights
Latest

ಮಧ್ಯಪ್ರಾಚ್ಯ ಸಂಘರ್ಷ – ಭಾರತದ ಪ್ರವಾಸೋದ್ಯಮ, ವಿಮಾನಯಾನ ಕ್ಷೇತ್ರಕ್ಕೆ ಆತಂಕ

Public TV
By Public TV
4 minutes ago
Indian Origin Men Fined Rs 1.7 Lakh Each In for Spitting Paan On Streets
Latest

ಲಂಡನ್‌ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರಿಗೆ ತಲಾ 1.7 ಲಕ್ಷ ದಂಡ

Public TV
By Public TV
12 minutes ago
Pralhad Joshi 1
Latest

ನವೀಕರಿಸಬಹುದಾದ ಇಂಧನದಲ್ಲಿ ಭಾರತ 3ನೇ ಅತಿದೊಡ್ಡ ರಾಷ್ಟ್ರ: ಪ್ರಹ್ಲಾದ್ ಜೋಶಿ

Public TV
By Public TV
49 minutes ago
Droupadi Murmu Ram Temple
Ayodhya Ram Mandir

ಅಯೋಧ್ಯೆ ರಾಮಮಂದಿರಕ್ಕೆ ದ್ರೌಪದಿ ಮುರ್ಮು ಭೇಟಿ – 150 ಕೆಜಿ ತೂಕದ ಚಿನ್ನ ಲೇಪಿತ ಲೋಹದ ತಟ್ಟೆ ಪ್ರತಿಷ್ಠಾಪನೆ

Public TV
By Public TV
49 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
50 minutes ago
Yatnal
Davanagere

ದಾವಣಗೆರೆ ಬಿಜೆಪಿ ಟಿಕೆಟ್ ಬದಲಾದ್ರೂ ಆಶ್ಚರ್ಯ ಇಲ್ಲ: ಯತ್ನಾಳ್‌ ಹೊಸ ಬಾಂಬ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?