Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಸರ್ಕಾರ ದಲಿತ ಸಮುದಾಯಕ್ಕೆ ದ್ರೋಹ ಬಗೆದಿದೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಸರ್ಕಾರ ದಲಿತ ಸಮುದಾಯಕ್ಕೆ ದ್ರೋಹ ಬಗೆದಿದೆ: ಸಿದ್ದರಾಮಯ್ಯ

Bengaluru City

ಬಿಜೆಪಿ ಸರ್ಕಾರ ದಲಿತ ಸಮುದಾಯಕ್ಕೆ ದ್ರೋಹ ಬಗೆದಿದೆ: ಸಿದ್ದರಾಮಯ್ಯ

Public TV
Last updated: April 21, 2022 3:11 pm
Public TV
Share
3 Min Read
SIDDRAMAIHA
SHARE

ಬೆಂಗಳೂರು: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಮೀಸಲಿಟ್ಟ ಹಣವನ್ನು ಕಾನೂನಿಗೆ ವಿರುದ್ಧವಾಗಿ ಮೂಲಸೌಕರ್ಯ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ದಲಿತ ಸಮುದಾಯಕ್ಕೆ ದ್ರೋಹ ಬಗೆದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

basavaraj bommai 7

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಮ್ಮ ಸರ್ಕಾರ ಜಾರಿಗೆ ತಂದಿರುವ ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆಯ ಪ್ರಕಾರ ಒಟ್ಟು ಬಜೆಟ್‍ನ ಶೇಕಡಾ 24.1ರಷ್ಟು ಭಾಗವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗಷ್ಟೇ ಬಳಸಬೇಕಾಗುತ್ತದೆ. ಆ ವರ್ಷ ಉಳಿಕೆಯಾದರೆ ಅದನ್ನು ನಂತರದ ವರ್ಷ ಖರ್ಚು ಮಾಡಬೇಕು. ನಿಗದಿತ ಪ್ರಮಾಣದಲ್ಲಿ ನಿಗದಿತ ಉದ್ದೇಶಕ್ಕೆ ಖರ್ಚು ಮಾಡದೆ ಇದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೂಡಾ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ. 2021-22ರ ರಾಜ್ಯ ಬಜೆಟ್‍ನಲ್ಲಿ ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆಯನ್ವಯ ಯೋಜನಾ ವೆಚ್ಚದ ಶೇಕಡಾ 24.1ರಷ್ಟು ಅಂದರೆ 26,695.64 ಕೋಟಿ ರೂ.ಗಳನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲ್ಯಾಣಕ್ಕೆ ಮೀಸಲಿಡಲಾಗಿತ್ತು. ಆದರೆ ರಾಜ್ಯ ಸರ್ಕಾರ ಕಾಯ್ದೆಯನ್ನು ಉಲ್ಲಂಘಿಸಿ ಒಟ್ಟು ಹಣದಲ್ಲಿ 7,885.32 ಕೋಟಿ ರೂ.ಗಳನ್ನು ಮೂಲಸೌಕರ್ಯದ ಯೋಜನೆಗಳಿಗೆ ವ್ಯಯ ಮಾಡಿದೆ. ಇದು ಸಂಪೂರ್ಣವಾಗಿ ಕಾನೂನು ವಿರೋಧಿ ನಡೆಯಾಗಿದ್ದು ಇದಕ್ಕೆ ಕಾರಣಕರ್ತರಾದವರ ವಿರುದ್ದ ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಗೆ ಬಿಜೆಪಿ ಕುಮ್ಮಕ್ಕು ಕಾರಣ: ಡಿಕೆಶಿ

2018-21ರ ನಾಲ್ಕು ವರ್ಷಗಳ ಅವಧಿಯಲ್ಲಿ ಈ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಹಣದಲ್ಲಿ 7,885.32 ಕೋಟಿ ರೂ.ಗಳನ್ನು ನೀರಾವರಿ, ನಗರಾಭಿವೃದ್ಧಿ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಯೋಜನೆಗಳಿಗೆ ಖರ್ಚು ಮಾಡಲಾಗಿದೆ. ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯ ನೇರ ಫಲಾನುಭವಿಗಳಾಗಿರುವ ಯೋಜನೆಗಳಿಗೆ ಹಣವನ್ನು ಕಡಿತಗೊಳಿಸಲಾಗಿದೆ. ಎಸ್‍ಸಿಪಿ/ಟಿಎಸ್‍ಪಿ ಹಣದ ಸ್ವಲ್ಪ ಭಾಗವನ್ನು ಸಾಮಾನ್ಯ ಮೂಲಸೌಕರ್ಯಗಳಿಗೆ ಬಳಸಲು ಕಾಯ್ದೆಯಲ್ಲಿ ಅವಕಾಶವಿದ್ದರೂ, ಇಷ್ಟೊಂದು ಪ್ರಮಾಣದ ಹಣವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯ ನೇರ ಫಲಾನುಭವಿಗಳಲ್ಲದ ಯೋಜನೆಗಳಿಗೆ ಬಳಸುವುದು ಆ ಸಮುದಾಯಕ್ಕೆ ಬಗೆಯುವ ದ್ರೋಹ ಮಾತ್ರವಲ್ಲ, ಕಾನೂನಿನ ಉಲ್ಲಂಘನೆಯೂ ಹೌದು ಎಂದು ವಾಗ್ದಾಳಿ ನಡೆಸಿದ್ದಾರೆ.

BJP FLAG

ರಾಜ್ಯದ ಸಂಪನ್ಮೂಲಗಳನ್ನು ಹಂಚಿಕೆ ಮಾಡುವಾಗ ಅನುಸರಿಸಬೇಕಾದ ಸೂತ್ರಗಳು ಯಾವುವು ಎಂಬುದನ್ನು ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆಯ ಸೆಕ್ಷನ್ 3ರಲ್ಲಿ ಸ್ಪಷ್ಟವಾಗಿ ಹೇಳಿದೆ. ಅದರ ಪ್ರಕಾರ ‘ವಿನಾಯಿತಿಸಲಾದ ವೆಚ್ಚ’ ಎಂದರೆ ಈ ಅಧಿನಿಯಮದ ಅನ್ವಯದಿಂದ ವಿನಾಯಿತಿಗೊಳಿಸಲಾದ ವೆಚ್ಚ ಮತ್ತು ವೇತನ, ವೇತನ ಸಹಾಯಾನುದಾನ, ಪಿಂಚಣಿ, ಆಡಳಿತಾತ್ಮಕ ವೆಚ್ಚ, ಮೂಲಧನ ಮರು ಸಂದಾಯ ಮತ್ತು ರಾಜ್ಯ ಸರ್ಕಾರ ತನ್ನದೇ ಸಾಲಗಳ ಲೆಕ್ಕದ ಮೇಲೆ ಬಡ್ಡಿ ಸಂದಾಯ ಮತ್ತು ರಾಜ್ಯ ಸರ್ಕಾರದ ಉದ್ಯಮಗಳ ಮೂಲಕ ಆಯವ್ಯಯ-ಹೊರತಾದ ಸಾಲಗಳು ಹಾಗೂ ರಾಜ್ಯ ಸರ್ಕಾರವು ಅಧಿಸೂಚಿಸಿದ ಆಡಳಿತಾತ್ಮಕ ಸ್ವರೂಪದ ಇತರ ಯಾವುದೇ ವೆಚ್ಚವನ್ನು ಒಳಗೊಳ್ಳುತ್ತದೆ. ಇವುಗಳನ್ನು ಹೊರತುಪಡಿಸಿ ಹಂಚಿಕೆ ಮಾಡಬಹುದಾದ ಮೊತ್ತದ ಆಧಾರದ ಮೇಲೆ ಎಸ್‍ಸಿಪಿ ಮತ್ತು ಟಿಎಸ್‍ಪಿಗೆ ಅನುದಾನವನ್ನು ನಿಗದಿಪಡಿಸಲಾಗುತ್ತದೆ. ಇದರ ಆಧಾರದ ಮೇಲೆ ಜನಸಂಖ್ಯೆಗನುಗುಣವಾಗಿ ಅನುದಾನವನ್ನು ನಿಗದಿಪಡಿಸಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಭಿನ್ನಾಭಿಪ್ರಾಯ ಹತ್ತಿಕ್ಕಿ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ: ಮೋದಿಗೆ ರಾಹುಲ್‌ ತಿರುಗೇಟು

CONGRESS 1

2012-13 ರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರಿಗಾಗಿ ಕೇವಲ 7,200 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿತ್ತು. ಈ ಮೊತ್ತವು 2014-15ರ ವೇಳೆಗೆ 15834 ಕೋಟಿ ರೂ.ಗಳಿಗೆ ಏರಿಕೆಯಾಯಿತು. 2018ರ ಫೆಬ್ರವರಿಯಲ್ಲಿ ನಾನು ಬಜೆಟ್ ಮಂಡಿಸಿದಾಗ 29691.5 ಕೋಟಿ ರೂ.ಗಳನ್ನು ಈ ಯೋಜನೆಗೆ ಮೀಸಲಿರಿಸಿದ್ದೆ. ಆದರೆ ಕಳೆದ 3 ವರ್ಷಗಳಿಂದ ರಾಜ್ಯದ ಬಿಜೆಪಿ ಸರ್ಕಾರವು ಈ ವರ್ಗಗಳಿಗೆ ಖರ್ಚು ಮಾಡುವ ಅನುದಾನವನ್ನು ಒಂದೇ ಸಮನೆ ಕಡಿಮೆ ಮಾಡುತ್ತಿದೆ. ಬಜೆಟ್ ಗಾತ್ರ ಮಾತ್ರ ದೊಡ್ಡದಾಗುತ್ತಿದೆಯೇ ಹೊರತು, ಜನರ ಕಲ್ಯಾಣಕ್ಕಾಗಿ ಖರ್ಚು ಮಾಡುವ ಅನುದಾನ ಕಡಿಮೆಯಾಗುತ್ತಿದೆ. 2008-09 ರಿಂದ 2012-13ರ ವರೆಗಿನ ಐದು ವರ್ಷಗಳ ಅವಧಿಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಎಸ್‍ಸಿಪಿ ಮತ್ತು ಟಿಎಸ್‍ಪಿಗೆ ಮೀಸಲಿಟ್ಟಿದ್ದ ಹಣ ಒಟ್ಟು 22,261 ಕೋಟಿ ರೂ.2018ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ವರ್ಷಗಳಲ್ಲಿ ಈ ಯೋಜನೆಗೆ 88,395 ಕೋಟಿ ರೂ. ಖರ್ಚು ಮಾಡಿದ್ದೆವು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಾಸ್ಟರ್ ಮೈಂಡ್ ನಾನಲ್ಲ, ಗಲಭೆಗೆ ನಾನು ಕಾರಣನಲ್ಲ – ಅಜ್ಞಾತ ಸ್ಥಳದಿಂದ ವೀಡಿಯೋ ಬಿಟ್ಟ ವಾಸಿಂ

TAGGED:Basavaraj BommaibjpcongressSiddramaihaಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
38 seconds ago
Yathindra Siddaramaiah 1
Districts

ಕುರ್ಚಿ ಕದನಕ್ಕೆ ದಲಿತ ಸಿಎಂ ಚೆಕ್‌ಮೇಟ್ ಕೊಟ್ಟ ಯತೀಂದ್ರ

Public TV
By Public TV
7 minutes ago
ALCOHOL
Districts

ಹೆಚ್ಚಾದ ಬಿಸಿಲಿನ ಅಬ್ಬರ – ಬಿಯರ್‌, ಲಿಕ್ಕರ್ ಮಾರಾಟದಲ್ಲಿ ಹೆಚ್ಚಳ

Public TV
By Public TV
36 minutes ago
PM Modi 6
Latest

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ – ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

Public TV
By Public TV
36 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
39 minutes ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?