Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಆ್ಯಸಿಡ್‌ ದಾಳಿಗೆ ಒಳಗಾದ ಯುವತಿ ಚಿಕಿತ್ಸೆಗೆ 1 ಲಕ್ಷ ರೂ. ಚೆಕ್ ಕೊಟ್ಟ BBMP

Public TV
Last updated: April 30, 2022 12:48 pm
Public TV
Share
2 Min Read
Treatment Bangalore Acid Attack Young Woman
SHARE

ಬೆಂಗಳೂರು: ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಯುವತಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಿಡಿಗೇಡಿ ಯುವಕ ಆ್ಯಸಿಡ್‌ ದಾಳಿ ಮಾಡಿದ್ದಾನೆ. ಈ ಹಿನ್ನೆಲೆ ಆ್ಯಸಿಡ್‌ ದಾಳಿಗೆ ಒಳಗಾದ ಸಂತ್ರಸ್ತೆ ಯುವತಿಯ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂತ್ರಸ್ತೆ ಯುವತಿಯ ವೈದ್ಯಕೀಯ ವೆಚ್ಚಕ್ಕೆ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ 1 ಲಕ್ಷ ರೂ. ಸಹಾಯಹಸ್ತದ ಚೆಕ್ ಅನ್ನು ವಿಶೇಷ ಆಯುಕ್ತರಾದ ರಂಗಪ್ಪ ಮತ್ತು ಬಿಬಿಎಂಪಿ ನೌಕರರ ಭವನದ ಅಧ್ಯಕ್ಷರಾದ ಅಮೃತ್ ರಾಜ್ ಕುಟುಂಬಸ್ಥರಿಗೆ ಕೊಟ್ಟರು. ಈ ವೇಳೆ ಆಡಳಿತಾಧಿಕಾರಿಗಳ ಆಪ್ತ ಕಾರ್ಯದರ್ಶಿ ನಾರಾಯಣ್‍ಸ್ವಾಮಿ, ಕಂದಾಯ ಅಧಿಕಾರಿ ಉಮಾ ಹಾಗೂ ಸಂಘದ ಪದಾಧಿಕಾರಿಗಳಾದ ಎಸ್.ಜಿ.ಸುರೇಶ್, ಸಾಯಿಶಂಕರ್, ಕೆ.ಜಿ.ರವಿ, ಕೆ.ಮಂಜೇಗೌಡರು, ನರಸಿಂಹ ಅವರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಅವನನ್ನ ಪ್ಲೀಸ್ ಬಿಡಬೇಡಿ, ಅವನಿಗೆ ಶಿಕ್ಷೆಯಾಗಲೇ ಬೇಕು: ಪೊಲೀಸರನ್ನು ಬೇಡಿಕೊಂಡ ಆಸಿಡ್ ಸಂತ್ರಸ್ತೆ

Young Acid Nagesh

ವಿಶೇಷ ಆಯುಕ್ತರಾದ ರಂಗಪ್ಪ ಅವರು ಈ ವೇಳೆ ಮಾತನಾಡಿದ್ದು, ಜನರ ಮೂಲಭೂತ ಸೌಲಭ್ಯ ಒದಗಿಸುವ ಜನಸ್ನೇಹಿ ಸಂಸ್ಥೆ ಬಿಬಿಎಂಪಿಯಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘವು ನೌಕರರ ಹಿತಾರಕ್ಷಣೆ ಜೊತೆಯಲ್ಲಿ ಜನರ ಸಂಕಷ್ಟಗಳಿಗೆ ನೆರವು ನೀಡುವ ಸಾಮಾಜಿಕ ಸೇವಾ ಸಂಘಟನೆಯಾಗಿ ರೂಪುಗೊಂಡಿದೆ. ಆ್ಯಸಿಡ್‌ ದಾಳಿಗೆ ಒಳಗಾದ ಯುವತಿಯ ವೈದ್ಯಕೀಯ ಚಿಕಿತ್ಸೆಗೆ 1 ಲಕ್ಷ ರೂ. ನೀಡಲಾಗಿದೆ. ಸಂತ್ರತ್ತೆ ಯುವತಿ ಬೇಗನೆ ಗುಣಮುಖರಾಗಲಿ ಎಂಬ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

Young Acid Nagesh 5

ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಅಮೃತ್ ರಾಜ್ ಅವರು ಮಾತನಾಡಿದ್ದು, ಬೆಂಗಳೂರು ನಗರ ನಾಗರಿಕರ ದಿನನಿತ್ಯ ಬಿಬಿಎಂಪಿ ಜೊತೆಯಲ್ಲಿ ಒಡನಾಟವಿರುತ್ತದೆ. ನಮ್ಮ ಸಂಘವು ಜನರ ನೋವು, ಸಂಕಷ್ಟಗಳಿಗೆ ಸದಾ ತನ್ನ ಸಹಾಯ ಹಸ್ತ ನೀಡುತ್ತಾ ಬಂದಿದೆ. ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ದಿನಸಿ ಕಿಟ್ ಮತ್ತು ಮಾಸ್ಕ್, ಸ್ಯಾನಿಟೈಸರ್ ವಿತರಣೆ. ಕೊಡಗು, ಉತ್ತರಕರ್ನಾಟಕ ಪ್ರವಾಹದಿಂದ ನೊಂದ ಸಂಕಷ್ಟದಲ್ಲಿರುವ ಜನರಿಗೆ ಸಹಾಯಹಸ್ತ ನೀಡಿದೆ ಎಂದು ತಿಳಿಸಿದರು. ಇದನ್ನೂ ಓದಿ:  ನಿಮಗೆ ಹಿಂದಿ ಬರದಿದ್ದರೆ ಈ ದೇಶ ಬಿಟ್ಟು ಹೋಗಿ: ಸಂಜಯ್ ನಿಶಾದ್ 

Treatment Bangalore Acid Attack Young Woman 1

ಧರ್ಮಸ್ಥಳದಲ್ಲಿ ನೀರಿನ ಅಭಾವ ಇದ್ದಾಗ 1 ಲಕ್ಷ ಲೀಟರ್ ನೀರು ನೀಡಲಾಯಿತು. ಬೆಂಗಳೂರಿನಲ್ಲಿ ಅಪಘಾತದಿಂದ ಮೃತ್ತಪಟ್ಟ ವ್ಯಕ್ತಿ ಕುಟುಂಬದವರಿಗೆ 1 ಲಕ್ಷ ರೂ. ಮತ್ತು ಹಲವಾರು ಕುಟುಂಬಗಳಿಗೆ ಆಸ್ಪತ್ರೆ ವೆಚ್ಚ, ಔಷಧಿ ಸಂಘದ ವತಿಯಿಂದ ಭರಿಸಲಾಗಿದೆ. ಆ್ಯಸಿಡ್‌ ದಾಳಿಗೆ ಒಳಗಾದ ಸಂತ್ರತ್ತೆ ಯುವತಿಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆ ಮತ್ತು ಕುಟುಂಬದ ನಿರ್ವಹಣೆ 1 ಲಕ್ಷ ರೂಪಾಯಿಯನ್ನು ಸಂಘದ ವತಿಯಿಂದ ಸಹಾಯಹಸ್ತ ಮಾಡಲಾಗಿದೆ. ಇನ್ನು ಹೆಚ್ಚಿನ ಸಹಕಾರ ಬೇಕಾದಲ್ಲಿ ನೀಡುತ್ತೇವೆ ಎಂದು ಭರವಸೆ ಕೊಟ್ಟರು.

TAGGED:acid attackbengalurutreatmentyoung womanಆಸಿಡ್ ದಾಳಿಚಿಕಿತ್ಸೆಬೆಂಗಳೂರುಯುವತಿ
Share This Article
Facebook Whatsapp Whatsapp Telegram

You Might Also Like

Indian Embassy Israel
Latest

ಇಸ್ರೇಲ್ – ಇರಾನ್ ಸಂಘರ್ಷ | 24×7 ಸಹಾಯವಾಣಿ ಆರಂಭಿಸಿದ ಭಾರತ

Public TV
By Public TV
34 minutes ago
Ahmedabad Air India Plane Crash 4
Latest

Ahmedabad Tragedy | ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್‌ ಇಂಡಿಯಾ

Public TV
By Public TV
34 minutes ago
Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
57 minutes ago
WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
1 hour ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
1 hour ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?