ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗೋ ಕಂಗನಾ ರಣಾವತ್ ಈ ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ. ಕಂಗನಾ ಏನಾದ್ರೂ ರಾಜಕೀಯಕ್ಕೆ ಎಂಟ್ರಿ ಕೊಡ್ತಿದ್ದಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಯೋಗಿ ಆದಿತ್ಯನಾಥ್ ಜತೆಗಿನ ಫೋಟೋ ಹಂಚಿಕೊಂಡು ಈ ಭೇಟಿ ತುಂಬಾ ಸಂತಸ ತಂದಿದೆ ಎಂದು ಬರೆದುಕೊಂಡಿದ್ದಾರೆ.
ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿರುವ ನಟಿ ಕಂಗನಾ, ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅಭೂತಪೂರ್ವವಾದ ಯಶಸ್ಸು ಗಳಿಸಿರುವ ಮಹಾರಾಜ್ ಯೋಗಿ ಆದಿತ್ಯನಾಥ್ ಭೇಟಿ ಮಾಡಿದ್ದು, ನನ್ನ ಅದೃಷ್ಟ ಎಂದು ಬರೆದುಕೊಂಡಿದ್ದಾರೆ. ಈ ಫೋಟೋ ಭಾರೀ ವೈರಲ್ ಆಗುತ್ತಿದೆ.
ಮಹಾರಾಜ್ ಜೀ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದ ಈ ಸಂಜೆ ಅದ್ಭುತವಾದದ್ದು, ಮುಖ್ಯಮಂತ್ರಿ ಅವರ ಸಹಾನುಭೂತಿ ಮತ್ತು ಕಾಳಜಿಗೆ ನಾನು ಮೂಕವಿಸ್ಮಿತಳಾಗಿದ್ದೇನೆ. ಇನ್ನು ಅವರ ಈ ಗುಣಗಳಿಂದಾಗಿನೇ ನಾನು ಅವರನ್ನು ಹೆಚ್ಚು ಗೌರವಿಸುತ್ತೇನೆ ಎಂದು ಬಣ್ಣಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
View this post on Instagram
ನಟಿ ಕಂಗನಾ ಅವರು ಯೋಗಿ ಆದಿತ್ಯನಾಥ್ ಭೇಟಿಯಾಗಿರುವುದರ ಬಗ್ಗೆ ಇನ್ನು ತಿಳಿದು ಬಂದಿಲ್ಲ. ಆದರೆ ಕಂಗನಾ ಹಲವಾರು ವರ್ಷಗಳಿಂದ ಬಿಜೆಪಿಯ ಕಟ್ಟ ಅಭಿಮಾನಿಯಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗವಾಗಿ ಆಗಾಗ ಬೆಂಬಲ ಸೂಚಿಸುತ್ತಲೇ ಬಂದಿದ್ದಾರೆ. ಇನ್ನು ಯೋಗಿ ಆದಿತ್ಯನಾಥ್ ಅವರ ಯಶಸ್ಸಿಗೆ ಮನಸಾರೆ ಕಂಗನಾ ಶುಭಹಾರೈಸಿದ್ದಾರೆ. ಇದನ್ನೂ ಓದಿ: ಚಲಿಸುವ ಬೋಟ್ ನಲ್ಲಿ ಚೆಲುವೆ ರಾಧಿಕಾ ಕುಮಾರಸ್ವಾಮಿ
ಕಂಗನಾ ರಣಾವತ್ ನಟನೆಯ `ಧಾಕಡ್’ ಇದೇ ಮೇ.20 ತೆರೆಗೆ ಬರಲು ಸಜ್ಜಾಗಿದೆ. ವಿವಾದಗಳ ನಟಿ ಕಂಗನಾ ಕಂಪ್ಲೀಟ್ ಆ್ಯಕ್ಷನ್ ಅವತಾರದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ನಟಿಯ ಹೊಸ ಅವತಾರವನ್ನ ಅಭಿಮಾನಿಗಳು ಅಪ್ಪಿ ಒಪ್ಪಿಕೊಳ್ತಾರಾ ಅಂತಾ ಕಾದು ನೋಡಬೇಕಿದೆ.