Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀರಾಮಚಂದ್ರನಿಗೂ ಟೀಕೆಗಳು ತಪ್ಪಲಿಲ್ಲ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶ್ರೀರಾಮಚಂದ್ರನಿಗೂ ಟೀಕೆಗಳು ತಪ್ಪಲಿಲ್ಲ: ಬೊಮ್ಮಾಯಿ

Bengaluru City

ಶ್ರೀರಾಮಚಂದ್ರನಿಗೂ ಟೀಕೆಗಳು ತಪ್ಪಲಿಲ್ಲ: ಬೊಮ್ಮಾಯಿ

Public TV
Last updated: May 2, 2022 4:11 pm
Public TV
Share
3 Min Read
Basavaraj Bommai
SHARE

ಬೆಂಗಳೂರು: ಟೀಕೆ ಟಿಪ್ಪಣಿಗಳು ಬಂದರೂ ಕರ್ತವ್ಯದಿಂದ ವಿಮುಖರಾಗಬಾರದು. ಕರ್ತವ್ಯದಲ್ಲಿ ತಲ್ಲೀನರಾದವರಿಗೆ ಯಾವುದೂ ಬಾಧಕವಾಗುವುದಿಲ್ಲ. ಶ್ರೀರಾಮಚಂದ್ರನಿಗೂ ಟೀಕೆಗಳು ತಪ್ಪಲಿಲ್ಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಮಿತ್ರ ಸಹಾಯ ವಾಣಿ ಹಾಗೂ ಇಲಾಖೆಯ ಅಧಿಕಾರಿಗಳಿಗೆ ವೃತ್ತಿ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸಂದೇಶ ರವಾನೆ ಮಾಡಿದರು.

Basavaraj Bommai 1

ಕರ್ತವ್ಯ ಮಾಡದೆ ಗತಿಸಿ ಹೋದ ಕಾಲ ಮರಳಿ ಬರುವುದಿಲ್ಲ. ಅದರ ಬಗ್ಗೆ ಮಾತನಾಡುವುದರಿಂದ ಪ್ರಯೋಜನವಿಲ್ಲ. ಪ್ರಸ್ತುತವಾಗಿರುವ ನಮ್ಮ ಗುರಿ ಸಾಧನೆಯ ಛಲ ಮುಖ್ಯ. ವರ್ತಮಾನದಲ್ಲಿ ಮಾಡುವ ಕೆಲಸ ಭವಿಷ್ಯ ನಿರ್ಮಿಸುತ್ತದೆ. ಸಮಯಕ್ಕೆ ತಕ್ಕ ಹಾಗೆ ಕಾರ್ಯಕ್ರಮಗಳನ್ನು ಮುಟ್ಟಿಸಬೇಕು. ಸರಿಯಾದ ಮಾರ್ಗಸೂಚಿಗಳು ಇಲ್ಲದೆ ಕೆಲವು ಕಾರ್ಯಕ್ರಮಗಳು ಮುಟ್ಟುವುದಿಲ್ಲ ಎಂದರು.

ದೀನ ದಲಿತರಿಗೆ ನೆರವು: ದೀನದಲಿತರ ಶ್ರೇಯೋಭಿವೃದ್ಧಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕಣ್ಣೀರನ್ನು ಒರೆಸುವುದು ನನಗೆ ಮುಖ್ಯ. ಅವರು ಸ್ವಾಭಿಮಾನದ ಬದುಕು ನಡೆಸುವುದು ಬಹಳ ಮುಖ್ಯ. ಇದರಲ್ಲಿ ಯಾವುದೇ ರೀತಿಯ ರಾಜಿಯೂ ಇಲ್ಲ ಹಾಗೂ ಮುಲಾಜೂ ಇಲ್ಲ ಎಂದು ಎಚ್ಚರಿಕೆ ನೀಡಿದರು.

Basavaraj Bommai 3

ರಾಜ್ಯದಲ್ಲಿ ಕಾನೂನುಗಳಿವೆ, ಆ ಪ್ರಕಾರ ನಡೆದುಕೊಳ್ಳಲು ಏನು ತೊಂದರೆ? ನೀವು ಸರಿಯಾಗಿ ಕೆಲಸ ಮಾಡಿದರೆ ಇಡೀ ಕರ್ನಾಟಕದ ದೀನದಲಿತರು ಸಂತೋಷ ಪಡುತ್ತಾರೆ. ಅವರ ಆಕಾಂಕ್ಷೆಗಳಿಗೆ ರೆಕ್ಕೆಪುಕ್ಕ ಬರುತ್ತವೆ. ಆ ಸಂಕಲ್ಪವನ್ನು ತೊಡಬೇಕು. ನೀವು ಕೇವಲ ನಿಮ್ಮ ಕೆಲಸ ಮಾಡುವುದಷ್ಟೇ ಅಲ್ಲ, ಅಧಿಕಾರವನ್ನು ಜನರ ಪರವಾಗಿ ಬಳಕೆ ಮಾಡುವ ಕರ್ತವ್ಯ ನಿಮ್ಮದು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸರ್ಕಾರದ ಕಾರ್ಯಕ್ರಮಗಳನ್ನು ಜನತೆಗೆ ತಲುಪಿಸಲು ಸಾಮಥ್ರ್ಯ ಮತ್ತು ಬದ್ಧತೆ ಅಗತ್ಯ. ಜನ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಮುಟ್ಟಬೇಕು ಹಾಗೂ ಅವನ ಜೀವನದ ಗುಣಮಟ್ಟವನ್ನು ಹೆಚ್ಚಿಸಬೇಕು ಎನ್ನುವ ಕಲ್ಪನೆ ಸಾಕಾರಗೊಳ್ಳುವ ಮೊದಲು ಇಲಾಖೆಗೆ ಸಾಮಥ್ರ್ಯ ಇರಬೇಕು. ಅದರ ಜೊತೆಗೆ ಬದ್ಧತೆ ಇರಬೇಕು ಎಂದು ತಿಳಿಸಿದರು.

Basavaraj Bommai 2

ಬದಲಾವಣೆಯ ಪರ್ವ: ಆಡಳಿತದ ವ್ಯಾಖ್ಯಾನ ಬದಲಾಗಿದೆ. ಪ್ರಜಾಪ್ರಭುತ್ವದ ಆಕಾಂಕ್ಷೆಗಳು ಬದಲಾಗಿವೆ. ಬದಲಾವಣೆಯ ಈ ಪರ್ವ ಕಾಲದಲ್ಲಿ ನಾವೂ ಕೂಡ ಬದಲಾವಣೆಗೆ ಹೊಂದಿಕೊಂಡರೆ ಮಾತ್ರ ಪ್ರಸ್ತುತವಾಗುತ್ತೇವೆ. ಪ್ರಸ್ತುತವಾಗುವುದರ ಜೊತೆಗೆ ನಮ್ಮನ್ನು ನಂಬಿದ ಜನರಿಗೆ ನ್ಯಾಯವನ್ನು ಕೊಡಲು ಸಾಧ್ಯ. ಇದನ್ನು ನಾವು ಮಾಡದಿದ್ದರೆ, ಎಲ್ಲವೂ ಇದ್ದು ಇಲ್ಲದಂತಾಗುತ್ತದೆ. ಸರ್ಕಾರ ಪ್ರತಿವರ್ಷ ಅನುದಾನವನ್ನು ಕೊಡುತ್ತಿರುತ್ತದೆ. ಅದರ ಸದುಪಯೋಗವಾಗವು ಸರಿಯಾದ ಸಮಯದಲ್ಲಿ ಆಗಬೇಕು. ಆಗ ಮಾತ್ರ ಕಾರ್ಯಕ್ರಮದ ಉದ್ದೇಶ ಈಡೇರುತ್ತದೆ ಎಂದರು.

ಕಷ್ಟದಲ್ಲಿರುವವರಿಗೆ, ಬಡವರಿಗೆ, ಅವಮಾನಕ್ಕೆ ಒಳಗಾದವರಿಗೆ, ತುಳಿತಕ್ಕೆ ಒಳಗಾದವರಿಗೆ ಕೈ ಹಿಡಿದು ಮೇಲೆತ್ತುವ ಸೌಭಾಗ್ಯ ಒದಗಿದೆ. ಇದನ್ನು ನಾನು ಪ್ರಾಮಾಣಿಕವಾಗಿ ಮಾಡಬೇಕು ಎನ್ನುವ ಬದ್ಧತೆ ಬಂದರೆ ಈ ಸಮಾಜ ಖಂಡಿತ ಉದ್ಧಾರವಾಗುತ್ತದೆ. ನೀವು ನಿಮ್ಮ ಕರ್ತವ್ಯ, ಸರ್ಕಾರದ ಧ್ಯೇಯೋದ್ದೇಶಗಳು ಹಾಗೂ ಕಟ್ಟ ಕಡೆಯ ಮನುಷ್ಯನ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

BASAVARAJ BOMMAI 3

ಅಸಡ್ಡೆ ಒಪ್ಪಲು ಸಾಧ್ಯವಿಲ್ಲ: ವಿಳಂಬ ಧೋರಣೆ, ಅಸಡ್ಡೆ ಅಸಹಕಾರವನ್ನು ಎಂದೂ ಒಪ್ಪಲು ಸಾಧ್ಯವಿಲ್ಲ. ಅನುದಾನ ಒದಗಿಸಿದರೂ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತದೆ. ನಮ್ಮ ಸರ್ಕಾರ ವಿಳಂಬ ಧೋರಣೆ, ಅಸಡ್ಡೆ, ಅಸಹಕಾರವನ್ನು ಎಂದೂ ಒಪ್ಪಲು ಸಾಧ್ಯವಿಲ್ಲ ಎಂದು ವಾರ್ನಿಂಗ್ ನೀಡಿದರು.

ದಾಖಲೆಗಳ ಸರಳೀಕರಣವಾಗಬೇಕು. ಇಲಾಖೆಗಳ ಸಮನ್ವಯ, ನೌಕರರಲ್ಲಿ ತಾಳಮೇಳ ಇವೆಲ್ಲವುಗಳ ಆಮೂಲಾಗ್ರ ಬದಲಾವಣೆಯ ಅವಶ್ಯಕತೆ ಇದೆ. ಅತ್ಯಂತ ಸರಳವಾಗಿ ಕಾರ್ಯಕ್ರಮಗಳನ್ನು ರೂಪಿಸಿ ಅವುಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಮಾಡಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಬದಲಾವಣೆ ಕಾಲ ಪ್ರಾರಂಭವಾಗಿದೆ, ಸಬೂಬುಗಳ ಕಾಲ ಮುಗಿದಿದೆ: ಬೊಮ್ಮಾಯಿ

ಸ್ವಾತಂತ್ರ್ಯ ಬಂದ ಮೇಲೆ 75 ವರ್ಷಗಳಾಗಿವೆ. ಸರ್ಕಾರದ ಸಹಾಯವಿಲ್ಲದೆ ಅವರು ಏನೂ ಮಾಡಲು ಸಾಧ್ಯವಿಲ್ಲ. ವ್ಯವಸ್ಥೆಯಲ್ಲಿ ಅವರಿಗೆ ನ್ಯಾಯ ಸಿಕ್ಕಿರುವುದಿಲ್ಲ. ಸರ್ಕಾರವೇ ನ್ಯಾಯ ಕೊಡಬೇಕು. ನ್ಯಾಯ ಕೊಡುವುದಷ್ಟೇ ಅಲ್ಲ ಈ ಸಂದೇಶವನ್ನು ಕೊಡಬೇಕು. ನಮ್ಮ ಸರ್ಕಾರ ವಿಳಂಬ ಧೋರಣೆ, ಅಸಡ್ಡೆ ಅಸಹಕಾರವನ್ನು ಎಂದೂ ಒಪ್ಪಲು ಸಾಧ್ಯವಿಲ್ಲ ಎಂದರು.

ಈ ವ್ಯವಸ್ಥೆಯಲ್ಲಿ ಸರ್ಕಾರಿ ನೌಕರರಾಗಿ ಕೆಲಸ ಮಾಡುವುದು ಸುಲಭವಲ್ಲ. ಬಹಳಷ್ಟು ಬಾರಿ ಕ್ಲಿಷ್ಟಕರ ಸಂದರ್ಭಗಳು ಬರುತ್ತವೆ. ಸ್ಪಷ್ಟವಾದ ವಿಚಾರಗಳಿಲ್ಲದ ನಾಯಕತ್ವದಿಂದ ಈ ಸಂದರ್ಭಗಳು ಬರುತ್ತವೆ. ಜವಾಬ್ದಾರಿಯಿಂದ ನುಣುಚಿಕೊಳ್ಳುವ ನಾಯಕತ್ವವಾಗಲಿ, ವ್ಯವಸ್ಥೆಯಾಗಲಿ ಉದ್ಧಾರ ಮಾಡಲು ಸಾಧ್ಯವಿಲ್ಲ. ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲು ಅನುಮಾನ, ಅವಕಾಶವಿಲ್ಲ. ಸ್ಪಷ್ಟ ನಿರ್ದೇಶನಗಳನ್ನು ನೀಡಲಾಗುವುದು. ಅದರಂತೆ ಕೆಲಸ ಮಾಡಬೇಕು. ನಿಮ್ಮನ್ನು ಸಂಪೂರ್ಣವಾಗಿ ಸಂರಕ್ಷಿಸುವುದು ನಮ್ಮ ಕೆಲಸ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಗೆ ಪ್ರಚಾರದ ಹುಚ್ಚು: ಸುನಿಲ್ ಕುಮಾರ್ ತಿರುಗೇಟು

ಜನ ಹತಾಶರಾಗಬಾರದು. ಅವರು ಬಂದಾಗ ಸ್ವಲ್ಪ ಕೋಪದಲ್ಲಿ ಮಾತನಾಡುತ್ತಾರೆ. ನಾವು ಸಮಸ್ಯೆಗಳನ್ನು ಚರ್ಚೆ ಮಾಡುತ್ತೇವೆ. ಸಮುದಾಯಗಳು ಸಮಸ್ಯೆಗಳೊಂದಿಗೆ ಬದುಕುತ್ತಾರೆ. ಸಮಸ್ಯೆಯನ್ನು ಚರ್ಚೆ ಮಾಡುವುದಕ್ಕೂ ಶ್ರಮಪಟ್ಟು ಕೆಲಸ ಮಾಡುವುದಕ್ಕೂ ಬಹಳ ವ್ಯತ್ಯಾಸವಿದೆ ಎಂದು ಹೇಳಿದರು.

TAGGED:Basavaraj BommaibengaluruDepartment of Social Welfareಬಸವರಾಜ ಬೊಮ್ಮಾಯಿಬೆಂಗಳೂರುಸಮಾಜ ಕಲ್ಯಾಣ ಇಲಾಖೆ
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

Greater Noida B.Tech Student Suicide
Crime

ಮದ್ಯ ಸೇವಿಸಿದ್ದಕ್ಕೆ ಬೈಗುಳ – ಹಾಸ್ಟೆಲ್ ಕಟ್ಟಡದಿಂದ ಜಿಗಿದು ಬಿ.ಟೆಕ್ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
25 minutes ago
Jammu Kashmir
Latest

ಜಮ್ಮು-ಕಾಶ್ಮೀರದಲ್ಲಿ ನಿರಂತರ ಹಿಮಪಾತ – ಶ್ರೀನಗರ ಏರ್‌ಪೋರ್ಟ್‌ನಲ್ಲಿ ಹಿಮ ತೆರವು ಕಾರ್ಯ

Public TV
By Public TV
40 minutes ago
shidlaghatta City Municipal Council Commissioner Amrutha Gowda receives death threat from Congress Leader Rajeev Gowda 1
Bengaluru City

ನಗರಸಭೆ ಪೌರಾಯುಕ್ತೆಗೆ ಬೆದರಿಕೆ – ರಾಜೀವ್ ಗೌಡ ನಿವಾಸದ ಮೇಲೆ ಪೊಲೀಸರ ದಾಳಿ

Public TV
By Public TV
54 minutes ago
Indian Man Shoot
Latest

ಅಮೆರಿಕದಲ್ಲಿ ಪತ್ನಿ, ಮೂವರು ಸಂಬಂಧಿಕರನ್ನ ಗುಂಡಿಟ್ಟು ಕೊಂದ ಭಾರತೀಯ ವ್ಯಕ್ತಿ – 12 ಕೇಸ್‌ ದಾಖಲು

Public TV
By Public TV
56 minutes ago
Seemanth kumar Singh Maheshwar Rao
Bengaluru City

77ನೇ ಗಣರಾಜ್ಯೋತ್ಸವ; ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ 2,000 ಇ-ಪಾಸ್ ವ್ಯವಸ್ಥೆ: ಸೀಮಂತ್ ಕುಮಾರ್ ಸಿಂಗ್

Public TV
By Public TV
1 hour ago
Modi Trump
Latest

ಗುಡ್‌ ನ್ಯೂಸ್‌ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ತೆಗೆಯಲು ಟ್ರಂಪ್‌ ಸಿದ್ಧತೆ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?