ಬೆಳಗಾವಿ: ಮೂಡಲಗಿ ತಾಲೂಕಿನ ಅರಬಾವಿ ಗ್ರಾಮದ ಸತ್ತಿಗೇರಿ ಮಡ್ಡಿ ತೋಟದ ಮಸೀದಿಯ ಮೇಲೆ ಯಾರೋ ಕಿಡಗೇಡಿಗಳು ಕೇಸರಿ ಬಣ್ಣದ ಧ್ವಜ ಕಟ್ಟಿದ್ದು, ಮುಂಜಾನೆ ಮುಸ್ಲಿಮರು ಪ್ರಾರ್ಥನೆಗೆ ತೆರಳಿದಾಗ ಇದು ಬೆಳಕಿಗೆ ಬಂದಿದೆ.
ಜಿಲ್ಲೆಯ ಗೋಕಾಕ್ ತಾಲೂಕಿನ ಸತ್ತಿಗೇರಿ ಮಡ್ಡಿಯಲ್ಲಿ ಇರುವಂತಹ ಮಸೀದಿ ಮೇಲೆ ಬೆಳಗ್ಗೆ 3.30 ರಿಂದ 5.30ರ ಸುಮಾರಿಗೆ ಯಾರೋ ಕಿಡಿಗೇಡಿಗಳು ಮಸೀದಿ ಮೇಲೆ ಕೇಸರಿ ಧ್ವಜ ಕಟ್ಟಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದ ಹಿಂದೂ ಮತ್ತು ಮುಸ್ಲಿಂ ಹಿರಿಯರು ಧ್ವಜವನ್ನು ತೆರವುಗೊಳಿಸಿದ್ದಾರೆ. ಯಾರು ಕಟ್ಟಿದ್ದಾರೆ ಎಂಬುದು ಇದುವರೆಗೂ ತಿಳಿದು ಬಂದಿಲ್ಲ. ಇದನ್ನೂ ಓದಿ: ಉಗುರಿನಲ್ಲಿದ್ದ ರಕ್ತದ ಕಲೆಯಿಂದಾಗಿ ಕೊಲೆ ಮಾಡಿದ್ದ ವ್ಯಕ್ತಿ ಸಿಕ್ಕಿಬಿದ್ದ!
ಸದ್ಯ ಸ್ಥಳದಲ್ಲಿ ವಾತಾವರಣ ಶಾಂತವಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಸ್ಥಳದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ನಿಯೋಜಿಸಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ಗೆ ವಿಷ್ಣು ಸ್ತಂಭ ಎಂದು ಮರುನಾಮಕರಣ ಮಾಡಲು ಆಗ್ರಹಿಸಿ ಪ್ರತಿಭಟನೆ