Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಕ್ತಸಿಕ್ತ ಅಧ್ಯಾಯಕ್ಕೆ ನಾಯಕನಾಗಲಿದ್ದಾರಾ ನೀನಾಸಂ ಸತೀಶ್?: 20 ಕೋಟಿ ಬಜೆಟ್, ಪ್ಯಾನ್ ಇಂಡಿಯಾ ಸಿನಿಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಕ್ತಸಿಕ್ತ ಅಧ್ಯಾಯಕ್ಕೆ ನಾಯಕನಾಗಲಿದ್ದಾರಾ ನೀನಾಸಂ ಸತೀಶ್?: 20 ಕೋಟಿ ಬಜೆಟ್, ಪ್ಯಾನ್ ಇಂಡಿಯಾ ಸಿನಿಮಾ

Cinema

ರಕ್ತಸಿಕ್ತ ಅಧ್ಯಾಯಕ್ಕೆ ನಾಯಕನಾಗಲಿದ್ದಾರಾ ನೀನಾಸಂ ಸತೀಶ್?: 20 ಕೋಟಿ ಬಜೆಟ್, ಪ್ಯಾನ್ ಇಂಡಿಯಾ ಸಿನಿಮಾ

Public TV
Last updated: May 12, 2022 1:32 pm
Public TV
Share
2 Min Read
FotoJet 8 6
SHARE

ಕನ್ನಡದ ಸೆನ್ಸಿಬಲ್ ನಾಯಕ ಎಂದೇ ಖ್ಯಾತರಾಗಿರುವ ಹೆಸರಾಂತ ನಟ ನೀನಾಸಂ ಸತೀಶ್, ಅಭಿಮಾನಿಗಳಿಗೆ ಹೊಸದೊಂದು ಸುದ್ದಿ ಕೊಟ್ಟಿದ್ದಾರೆ. ಇದೇ ಮೇ 15ರಂದು ಅವರು ಹೊಸ ಸಿನಿಮಾದ ಟೈಟಲ್ ಲಾಂಚ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಹೊಸ ಸಿನಿಮಾದ ಟೈಟಲ್ ಲಾಂಚ್ ಆಮಂತ್ರಣ ಪತ್ರಿಕೆಯಲ್ಲಿ ರಕ್ತದಲ್ಲಿ ಮಿಂದೆದ್ದ ಬ್ಲೇಡ್ ಅನ್ನು ಬಳಸಿಕೊಂಡಿದ್ದು, ಇದು ರಕ್ತಸಿಕ್ತ ಅಧ್ಯಾಯದ ಕುರುಹು ಇರಬಹುದಾ? ಎನ್ನುವ ಕುತೂಹಲ ಮೂಡಿಸಿದ್ದಾರೆ. ಇದನ್ನೂ ಓದಿ : ಲೇಡಿ ಸೂಪರ್ ಸ್ಟಾರ್ ನಯನತಾರಾ ಚಿತ್ರದ ಮೂಲಕ ಖ್ಯಾತ ಕ್ರಿಕೆಟಿಗೆ ಧೋನಿ ಸಿನಿ ರಂಗಕ್ಕೆ ಎಂಟ್ರಿ

ninasam satish 5ಇದೇ ಪೋಸ್ಟರ್ ನಲ್ಲಿಯೇ ‘ಎಲ್ಲಾ ಯುದ್ಧಗಳು, ಯುದ್ಧ ಭೂಮಿಯಲ್ಲೇ ನಡೆಯೊಲ್ಲ’ ಎನ್ನುವ ಟ್ಯಾಗ್ ಲೈನ್ ಕೂಡ ಬರೆದಿದ್ದು, ಅದು ಮನುಕುಲದ ಮಧ್ಯ ನಡೆದ ಯುದ್ಧದ ಕಥೆಯಾ ಎಂಬ ಪ್ರಶ್ನೆ ಕೂಡ ಮೂಡುವಂತೆ ಮಾಡಿದ್ದಾರೆ. ಬ್ಲೇಡ್ ಮತ್ತು ರಕ್ತ ಹಾಗೂ ಯುದ್ಧ ಪದಗಳ ಬಳಕೆಯಿಂದಾಗಿ ಈ ಸಿನಿಮಾ ಯಾವುದರ ಸುತ್ತ ಹೆಣೆದಿರುವ ಕಥೆ ಎನ್ನುವುದು ಸದ್ಯಕ್ಕೆ ಸಸ್ಪೆನ್ಸ್. ಮೇ15 ರಂದು ನಡೆಯಲಿರುವ ಮುಹೂರ್ತ ಮತ್ತು ಟೈಟಲ್ ಲಾಂಚ್ ದಿನ ಈ ಕುರಿತು ಒಂದಷ್ಟು ಮಾಹಿತಿ ಸಿಗಬಹುದು. ಇದನ್ನೂ ಓದಿ : ಕಂಗನಾಗೆ ಹುಡುಗರನ್ನು ಕಂಡರೆ ಆಗಲ್ಲವಂತೆ: ಅದಕ್ಕೆ ಮದುವೆ ಆಗಿಲ್ಲವಂತೆ

ninasam satish 6

ಈ ಸಿನಿಮಾದ ವಿಶೇಷ ಅಂದರೆ, ವೃದ್ಧಿ ಕ್ರಿಯೇಷನ್ ಮತ್ತು ಸತೀಶ್ ಪಿಕ್ಚರ್ ಹೌಸ್ ಜಂಟಿಯಾಗಿ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ವಿನೋದ್ ದೋಂಡಾಳೆ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಸತೀಶ್ ಯಾವ ರೀತಿಯ ಪಾತ್ರವನ್ನು ನಿರ್ವಹಿಸಲಿದ್ದಾರೆ ಎನ್ನುವುದು ಕುತೂಹಲ. ಇದನ್ನೂ ಓದಿ : ವಿಜಯ್ ದೇವರಕೊಂಡ ಹೊಸ ಗರ್ಲ್ ಫ್ರೆಂಡ್ ಅನನ್ಯ ಪಾಂಡೆ? : ಮುನಿಸಿಕೊಂಡ್ರಾ ರಶ್ಮಿಕಾ ಮಂದಣ್ಣ

ninasam satish 2

ಈ ಕುರಿತು ಪಬ್ಲಿಕ್ ಟಿವಿ ಡಿಜಿಟಲ್ ಜತೆ ಮಾತನಾಡಿದ ಸತೀಶ್, ‘ಸಿನಿಮಾದ ಟೈಟಲ್ ತುಂಬಾ ವಿಶೇಷವಾಗಿದೆ. ಅಲ್ಲದೇ, ನಮ್ಮದೇ ನೆಲದ ಕಥೆಯನ್ನು ಹೇಳುತ್ತಿದ್ದೇವೆ. ಈವರೆಗೂ ನಿರ್ವಹಿಸದೇ ಇರುವ ಪಾತ್ರ ಅದಾಗಿದೆ. ಈ ಸಿನಿಮಾಗಾಗಿ ಲುಕ್ ಕೂಡ ಬದಲಾಗಲಿದೆ. ಈಗಲೇ ಸಿನಿಮಾದ ಬಗ್ಗೆ ಮಾತನಾಡುವುದು ಸರಿಯಾದದ್ದು ಅಲ್ಲ. ತೆರೆಯ ಮೇಲೆಯೇ ಕಥೆ ಮತ್ತು ಪಾತ್ರಗಳು ಪರಿಚಯವಾಗಲಿ’ ಎಂದರು. ಇದನ್ನೂ ಓದಿ : ಕಾಂಗ್ರೆಸ್‍ನಿಂದಲೇ ಟ್ರೋಲ್‍ಗೆ ಕರೆ – ನನ್ನನ್ನು ನಾನೇ ಟ್ರೋಲ್ ಮಾಡ್ಕೋತಿನಿ ಎಂದ ರಮ್ಯಾ

ninasam satish 7

ಈವರೆಗೂ ಕನ್ನಡದಲ್ಲಿ ನಾನಾ ರೀತಿಯ ಕಥೆಗಳು ಬಂದಿವೆ. ಆದರೆ, ಇದೇ ಮೊದಲ ಬಾರಿಗೆ ಇಂಥದ್ದೊಂದು ಕಥೆಯು ಭಾರತೀಯ ಸಿನಿಮಾ ರಂಗದಲ್ಲಿ ಬರುತ್ತಿರುವುದು ಸಿನಿಮಾಗಳ ವಿಶೇಷಗಳಲ್ಲಿ ಒಂದು. ಆದಷ್ಟು ನೈಜತೆಗೆ ಹತ್ತಿರವಾಗುವಂತೆ ಕಥೆಯನ್ನು ಹೇಳುತ್ತಿರುವುದಾಗಿ ಸಿನಿಮಾ ತಂಡದಿಂದ ಬಂದ ಮಾಹಿತಿ. ಹಾಗಾಗಿ ಇದು ನೈಜ ಘಟನೆಯನ್ನು ಆಧರಿಸಿದ ಸಿನಿಮಾನಾ? ಎನ್ನುವುದಕ್ಕೆ ಚಿತ್ರತಂಡವೇ ಉತ್ತರ ಕೊಡಬೇಕಿದೆ.

ninasam satish 4

ಪ್ಯಾನ್ ಇಂಡಿಯಾ ಸಿನಿಮಾ?

ಸಿನಿಮಾ ತಂಡದಿಂದ ಸಿಕ್ಕಿರುವ ಮಾಹಿತಿ ಪ್ರಕಾರ ಸುಮಾರು 20 ಕೋಟಿಗೂ ಅಧಿಕ ವೆಚ್ಚದಲ್ಲಿ ಈ ಸಿನಿಮಾ ಮೂಡಿ ಬರಲಿದೆಯಂತೆ. ಭಾರೀ ಬಜೆಟ್ ಬೇಡುವಂತಹ ದೃಶ್ಯಗಳು ಸಿನಿಮಾದಲ್ಲಿ ಇರಲಿದ್ದು, ಯುದ್ಧ ಸನ್ನಿವೇಶವನ್ನು ಕ್ರಿಯೇಟ್ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಕೂಡ ಇದೆ.

TAGGED:New CinemasandalwoodSatish NeenasamTitle Launchಟೈಟಲ್ ಲಾಂಚ್ಸತೀಶ್ ನೀನಾಸಂಸ್ಯಾಂಡಲ್ ವುಡ್ಹೊಸ ಸಿನಿಮಾ
Share This Article
Facebook Whatsapp Whatsapp Telegram

Cinema news

ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows
Gilli Nata 5
BBK 12 | ಕಾವ್ಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಗಿಲ್ಲಿ ಕೊಟ್ಟ ಉತ್ತರ ಏನು?
Cinema Latest Main Post TV Shows
gilli nata bigg boss
ಬಿಗ್ ಬಾಸ್ ಸೀಸನ್ 12 ಗೆದ್ದ ಗಿಲ್ಲಿ – ಇಂದು ಮಳವಳ್ಳಿಯಿಂದ ಹುಟ್ಟೂರು ದಡದಪುರಕ್ಕೆ ಅದ್ದೂರಿ ಮೆರವಣಿಗೆ
Cinema Latest Mandya Top Stories TV Shows

You Might Also Like

Ration Rice Chitradurga Challakere
Chitradurga

ಚಳ್ಳಕೆರೆಯಲ್ಲಿ ಪಡಿತರ ಅಕ್ಕಿ ಖರೀದಿಸಿ ಸಂಗ್ರಹ ಆರೋಪ – ಗೋದಾಮಿನ ಮೇಲೆ ದಾಳಿ

Public TV
By Public TV
5 minutes ago
Prateek Yadav Aparna Yadav
Latest

ಆದಷ್ಟು ಬೇಗ ಈ ಕೆಟ್ಟ ಮನಸ್ಸಿನ, ಸ್ವಾರ್ಥ ಮಹಿಳೆಗೆ ಡಿವೋರ್ಸ್‌ ಕೊಡ್ತೀನಿ – ಪತ್ನಿ ವಿರುದ್ಧವೇ ಸಿಡಿದ ಪ್ರತೀಕ್ ಯಾದವ್!

Public TV
By Public TV
1 hour ago
Sriramulu 1
Bellary

ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು, ವಿಳಾಸ ಬಹಿರಂಗ – ಮಾಜಿ ಸಚಿವ ಶ್ರೀರಾಮುಲು ವಿರುದ್ಧ FIR

Public TV
By Public TV
2 hours ago
ICC Jay shah
Latest

ಭಾರತದಲ್ಲಿ ಆಡದಿದ್ದರೆ ವಿಶ್ವಕಪ್‌ ಟೂರ್ನಿಯಿಂದಲೇ ಹೊರದಬ್ಬುತ್ತೇವೆ – ಬಾಂಗ್ಲಾಗೆ ಐಸಿಸಿ ಲಾಸ್ಟ್‌ ವಾರ್ನಿಂಗ್‌

Public TV
By Public TV
3 hours ago
Anagodu Zoo Davanagere
Davanagere

ಆನಗೋಡು ಕಿರು ಮೃಗಾಲಯದಲ್ಲಿ 4 ಚುಕ್ಕಿ ಜಿಂಕೆಗಳ ನಿಗೂಢ ಸಾವು – ಸಾಂಕ್ರಾಮಿಕ ರೋಗ ಶಂಕೆ

Public TV
By Public TV
3 hours ago
Mysuru 1
Districts

ಸಿಎಂ ಸ್ವಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ – 20 ಎಕ್ರೆ ಒತ್ತುವರಿ ಜಾಗ ಸರ್ಕಾರದ ವಶಕ್ಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?