ಕಾಳೇನ ಅಗ್ರಹಾರ ಕೆರೆಗೆ ಭೇಟಿ ನೀಡಿ ಸಸಿನೆಟ್ಟ ನಿರ್ಮಲಾ ಸೀತಾರಾಮನ್

Public TV
1 Min Read
nirmala sithraman

ಬೆಂಗಳೂರು: ಬೊಮ್ಮನಹಳ್ಳಿ ವಲಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಬೇಗೂರು ವಾರ್ಡ್-192 ವ್ಯಾಪ್ತಿಯ ಸರ್ವೇ ಸಂಖ್ಯೆ 43ರ 7 ಎಕರೆ 30 ಗುಂಟೆ ಪ್ರದೇಶದಲ್ಲಿರುವ ಕಾಳೇನ ಅಗ್ರಹಾರ ಕೆರೆಗೆ ಕೇಂದ್ರ ಸರ್ಕಾರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ಸಸಿನೆಟ್ಟು ಕೆರೆ ಅಭಿವೃದ್ಧಿ ಕಾರ್ಯವನ್ನು ವೀಕ್ಷಿಸಿದರು.

ಕಾಳೇನ ಅಗ್ರಹಾರ ಕೆರೆಯನ್ನು ಸಂಸತ್ ಸದಸ್ಯರ ಯೋಜನೆಯಡಿ 75 ಲಕ್ಷ ರೂ. ರಾಜ್ಯ ಸರ್ಕಾರದ 2017-18ನೇ ಸಾಲಿನ ಅನುದಾನ 75 ಲಕ್ಷ ರೂ. ರಾಜ್ಯ ಸರ್ಕಾರದ 2018-19ನೇ ಸಾಲಿನ ಅನುದಾನ 1.5 ಕೋಟಿ ರೂ. ಸೇರಿ 3 ಕೋಟಿ ರೂ. ಅನುದಾನದಲ್ಲಿ ಅಭಿವೃದ್ಧಿ ಪಡಿಸಲಾಗಿದೆ.

nirmala sithraman 1

ಕೆರೆಯ ಅಭಿವೃದ್ಧಿ ಕಾಮಗಾರಿಯ ವಿವರ, ಹೂಳು ತೆಗಯುವುದು, ಕೆರೆ ಏರಿಯಾ ನಿರ್ಮಾಣ, ಕೊಳಚೆ ನೀರು ತಿರುವುಗಾಲುವೆ ನಿರ್ಮಾಣ, ಕೆರೆಯ ಸುತ್ತಲೂ ತಂತಿ ಬೇಲಿ ನಿರ್ಮಾಣ, ವಾಯು ವಿಹಾರ ಮಾರ್ಗ ಅಭಿವೃದ್ಧಿ, 15 ಆಸಗಳ ವ್ಯವಸ್ಥೆ, ಕೆರೆಯ ಇನ್ ಲೆಟ್ ಅಭಿವೃದ್ಧಿ, ಶೌಚಾಲಯ ವ್ಯವಸ್ಥೆ, 150 ಕೆ.ಎಲ್.ಡಿ ಸಾಮರ್ಥ್ಯ ಕೊಳಚೆ ನೀರು ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣದ ಬಗ್ಗೆ ಈ ವೇಳೆ ಚರ್ಚೆ ಮಾಡಲಾಯಿತು. ಇದನ್ನೂ ಓದಿ: ಆ್ಯಸಿಡ್ ಹಾಕಿ ನಾಪತ್ತೆಯಾಗಿದ್ದ ನಾಗೇಶ್ ವಿದ್ಯಾರ್ಥಿಯಿಂದ ಅರೆಸ್ಟ್! 

nirmala sithraman 2

ಈ ವೇಳೆ ಸ್ಥಳೀಯ ಶಾಸಕರಾದ ಶ್ರೀಕೃಷ್ಣಪ್ಪ, ವಲಯ ಆಯುಕ್ತರಾದ ಡಾ.ಹರೀಶ್ ಕುಮಾರ್, ವಲಯ ಜಂಟಿ ಆಯುಕ್ತರಾದ ಕೃಷ್ಣಮೂರ್ತಿ, ಮುಖ್ಯ ಇಂಜಿನಿಯರ್‌ಗಳಾದ ಶಶಿಕುಮಾರ್, ವಿಜಯ್ ಕುಮಾರ್ ಹರಿದಾಸ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *