Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ- ಕೋರ್ಟ್ ಅಂಗಳಕ್ಕೆ ಕೊಂಡೊಯ್ಯಲು ಸಿದ್ಧತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ- ಕೋರ್ಟ್ ಅಂಗಳಕ್ಕೆ ಕೊಂಡೊಯ್ಯಲು ಸಿದ್ಧತೆ

Districts

ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ- ಕೋರ್ಟ್ ಅಂಗಳಕ್ಕೆ ಕೊಂಡೊಯ್ಯಲು ಸಿದ್ಧತೆ

Public TV
Last updated: May 16, 2022 12:31 pm
Public TV
Share
2 Min Read
jamia masjid mandya 1
SHARE

ಮಂಡ್ಯ: ವಾರಣಾಸಿಯ ಜ್ಞಾನವ್ಯಾಪಿ ಮಸೀದಿಯಲ್ಲಿ ಡ್ರೋನ್ ಸರ್ವೇಗೆ ಸುಪ್ರೀಂಕೋರ್ಟ್ ನೀಡಿರುವ ಆದೇಶವು ಮೂರನೇ ದಿನಕ್ಕೆ ಒಂದು ಕಡೆ ಕಾಲಿಟ್ಟರೇ, ಇತ್ತ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯ ವಿವಾದವನ್ನು ಕೋರ್ಟ್ ಮೆಟ್ಟಿಲಿಗೆ ಕೊಂಡೊಯ್ಯಲು ಸಕಲ ಸಿದ್ಧತೆಗಳು ನಡೆಯುತ್ತಿವೆ.

ಸಕ್ಕರೆ ನಾಡು ಮಂಡ್ಯ ಜಿಲ್ಲೆ ಸದಾ ಒಂದೆಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತದೆ. ಇದೀಗ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯ ವಿವಾದದ ಮೂಲಕ ಸುದ್ದಿಯಾಗುತ್ತಿದೆ. ಜಾಮಿಯಾ ಮಸೀದಿ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು. 1784ರಲ್ಲಿ ದೇವಸ್ಥಾನವನ್ನು ಒಡೆದು ಟಿಪ್ಪು ಸುಲ್ತಾನ್ ಈ ಜಾಮಿಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ. ಹೀಗಾಗಿ ಈ ಮಸೀದಿಯ ಜಾಗದಲ್ಲಿ ಮತ್ತೆ ಮೂಡಲಬಾಗಿಲು ಆಂಜನೇಯಸ್ವಾಮಿಯನ್ನು ಪ್ರತಿಷ್ಠಾಪನೆ ಮಾಡಬೇಕೆಂದು ಹಿಂದೂ ಸಂಘಟನೆಗಳು ಆಗ್ರಹ ಮಾಡುತ್ತಿವೆ.

MND JAMIYA MASIDI

ಈ ಜಾಗದಲ್ಲಿ ಹಿಂದೂ ದೇವಸ್ಥಾನ ಇತ್ತೆಂದು ಇಲ್ಲಿರುವ ಹಿಂದೂ ದೇವಸ್ಥಾನದ ರೀತಿಯ ಕೆತ್ತನೆಗಳು, ಕಂಬಗಳು, ಕಲ್ಯಾಣಿ, ಗೋಪುರದ ಕಲಶವೇ ಹೇಳುತ್ತಿವೆ. ಹೀಗಾಗಿ ಇಲ್ಲಿ ಆಂಜನೇಯಸ್ವಾಮಿ ಪ್ರತಿಷ್ಠಾಪನೆಯಾಗಬೇಕೆಂದು ಈಗಾಗಲೇ ನರೇಂದ್ರ ಮೋದಿ ವಿಚಾರ ಮಂಚ್ ವೇದಿಯ ಪದಾಧಿಕಾರಿಗಳು ಮಂಡ್ಯ ಜಿಲ್ಲಾಧಿಕಾರಿಗೆ ಮನವಿಯನ್ನು ಸಲ್ಲಿಸಿದ್ದಾರೆ.

ಟಿಪ್ಪು ಸುಲ್ತಾನ್ ತನ್ನ ಆಡಳಿತದಲ್ಲಿ ಇಲ್ಲಿದ್ದ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವನ್ನು ಒಡೆದು ಜಾಮಿಯಾ ಮಸೀದಿಯನ್ನು ಕಟ್ಟಿರುವುದು, ಇಲ್ಲಿರುವ ದೇವಸ್ಥಾನಗಳ ಕುರುಹುಗಳನ್ನು ಗಮನಿಸಿದರೆ ತಿಳಿಯುತ್ತದೆ. ಹೀಗಾಗಿ ಕೋರ್ಟ್ ಮೆಟ್ಟಿಲು ಏರಲು ಹಿಂದೂ ಸಂಘಟನೆಗಳು ನಿರ್ಧಾರ ಮಾಡಿವೆ.

jamia masjid mandya

ನರೇಂದ್ರ ಮೋದಿ ವಿಚಾರ ಮಂಚ್‍ನ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದ ಹಾಗೆ ಇತ್ತ ಹಿಂದೂ ಸಂಘಟನೆಗಳ ಮುಖಂಡರು ಸಹ ಈ ಬಗ್ಗೆ ಧ್ವನಿಗೂಡಿಸಿ ಹೋರಾಟ ಮಾಡಲು ರೂಪುರೇಷೆ ಸಿದ್ಧಪಡಿಸುತ್ತಿರುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹಿಂದೂಸ್ತಾನದಲ್ಲಿ ಕೇಸರಿ ಆಡಳಿತ ನಡೆಸುತ್ತೆ: ದೇವೇಂದ್ರ ಫಡ್ನವೀಸ್

ಬೀದಿಗಿಳಿದು ಹೋರಾಟ ಮಾಡುವುದು ಒಂದು ಕಡೆಯಾದರೆ ಇತ್ತ ಕಾನೂನು ಹೋರಾಟ ಮಾಡಲು ಸಹ ಹಿಂದೂ ಪರ ಸಂಘಟನೆಗಳು ಸಜ್ಜಾಗುತ್ತಿವೆ. ಈಗಾಗಲೇ ಬಾಬ್ರಿ ಮಸೀದಿ, ವಾರಣಾಸಿಯ ಜ್ಞಾನವ್ಯಾಪಿ ಮಸೀದಿ ವಿವಾದ ಕೋರ್ಟ್‍ಗೆ ಬಗೆಹರಿಯುವ ಮಟ್ಟಕ್ಕೆ ತಲುಪಿವೆ. ಹೀಗಾಗಿ ಜಾಮಿಯಾ ಮಸೀದಿಯ ವಿವಾದವನ್ನು ನ್ಯಾಯಾಲಯದ ಸಮ್ಮುಖದಲ್ಲೇ ಬಗೆಹರಿಸಿಕೊಳ್ಳುತ್ತೇವೆಂಬ ನಿರ್ಧಾರಕ್ಕೆ ಹಿಂದೂಪರ ಸಂಘಟನೆಗಳು ಬಂದಿವೆ. ಈ ವಿವಾದವನ್ನು ಏಕಾಏಕಿ ಹೈಕೋರ್ಟ್‍ಗೆ ತೆಗೆದುಕೊಂಡು ಹೋಗಲು ಭಜರಂಗ ಸೇನೆ ಸಜ್ಜಾಗಿದ್ದು, ಈಗಾಗಲೇ ಈ ಕುರಿತು ವಕೀಲರ ಜೊತೆಗೂ ಮಾತುಕತೆ ನಡೆಸಿದೆ.

MND JAMIYA MASIDI 1

ಈ ಬಗ್ಗೆ ಮಾತನಾಡಿದ ಭಜರಂಗ ಸೇನೆ ಕಾರ್ಯಕರ್ತರು ವಕೀಲರ ಸಲಹೆಯಂತೆ ಮೊದಲಿಗೆ ಪುರಾತತ್ವ ಇಲಾಖೆಗೆ ಹಾಗೂ ಸಂಬಂಧಪಟ್ಟ ಸಚಿವರಿಗೆ ಮಸೀದಿ ಹಿಂದೂಗಳಿಗೆ ಸೇರಬೇಕೆಂದು ಸಾಕ್ಷಿ ಸಮೇತ ಪತ್ರ ಬರೆಯಲಾಗುತ್ತದೆ. ಸರ್ಕಾರದಿಂದ ನಮಗೆ ನ್ಯಾಯ ಸಿಗುವುದಿಲ್ಲ ಎಂದು ತಿಳಿದಿದೆ. ಹೀಗಾಗಿ ನಂತರ ನಾವು ಹೈಕೋರ್ಟ್‍ಗೆ 1001 ಹಿಂದೂ ಕಾರ್ಯಕರ್ತರು ದಾವೆಯನ್ನು ಹಾಕುತ್ತೇವೆ. ಈ ಬಗ್ಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಹಿಂದೂಗಳಿಗೆ ಬಿಟ್ಟು ಕೊಡುವಂತೆ ಆಗ್ರಹ

anjaneya temple

ಭಾರತದ ಪುರಾತತ್ವ ಇಲಾಖೆಯ 1935ರ ಸರ್ವೇಯಲ್ಲಿ ಈ ಹಿಂದೆ ಜಾಮಿಯಾ ಮಸೀದಿಯ ಮೊದಲು ದೇವಸ್ಥಾನವಾಗಿತ್ತು ಎಂದು ಉಲ್ಲೇಖವಾಗಿರುವ ಸಾಕ್ಷಿಯೂ ದೊರೆತಿದೆ. ಇದಲ್ಲದೇ ಮತ್ತಷ್ಟು ಸಾಕ್ಷಿಗಾಗಿ ಮೈಸೂರು ಗೆಜೆಟ್ ಮೂಲಕ ಪಡೆದುಕೊಳ್ಳುತ್ತಿದ್ದೇವೆ. ಸರ್ಕಾರಕ್ಕೆ ಒಂದಷ್ಟು ಮಾಹಿತಿಗಳನ್ನು ಒದಗಿಸಿಕೊಡುವಂತೆ ಆರ್‌ಟಿಐನಲ್ಲಿ ಕೇಳಿದ್ದೇವೆ. ಈ ಎಲ್ಲಾ ಸಾಕ್ಷ್ಯಗಳು ಸಿಕ್ಕ ನಂತರ ಮಸೀಯದಲ್ಲಿರುವ ಹಿಂದೂ ದೇವಸ್ಥಾನದ ಕುರುಹುಗಳನ್ನು ವೀಡಿಯೋ ಮತ್ತು ಫೋಟೋ ಸಾಕ್ಷಿಗಳನ್ನು ಇಟ್ಟುಕೊಂಡು ಕೆಲವೇ ದಿನಗಳಲ್ಲಿ ದಾವೆ ಹೂಡುತ್ತೇವೆಂದರು.

TAGGED:Jamia masjidmandyaSrirangapatnaಮಂಡ್ಯಮಸೀದಿಹಿಂದರೂ ಸಂಘಟನೆಗಳು
Share This Article
Facebook Whatsapp Whatsapp Telegram

Cinema news

Jai Lalitha Serial
ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Cinema Latest Top Stories TV Shows
Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood
Sanvi Sudeep
ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ – ಫೋಟೋ ವೈರಲ್
Cinema Latest Sandalwood Top Stories
Ratha Saptami Jeevan Moulya
ರಥಸಪ್ತಮಿ: ವಿಭಿನ್ನ ಧಾರಾವಾಹಿಗೆ ಸಾಕ್ಷಿಯಾದ ಉದಯ ಟಿವಿ
Cinema Latest TV Shows

You Might Also Like

Bengaluru airport 1
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

Public TV
By Public TV
28 minutes ago
MB Patil
Bengaluru City

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು; 3-4 ತಿಂಗಳಲ್ಲಿ ಹೊಸ ರೈಲು ಸೇವೆಗೆ ಪ್ರಯತ್ನ: ಎಂ.ಬಿ.ಪಾಟೀಲ್

Public TV
By Public TV
34 minutes ago
Shubman Gill 2
Cricket

ಗಿಲ್‌, ಪಾಂಡ್ಯ ಈಸ್‌ ಬ್ಯಾಕ್‌ – ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಗೆ ಬಲಿಷ್ಠ ತಂಡ ರೆಡಿ

Public TV
By Public TV
1 hour ago
panipat women
Crime

ತನಗಿಂತ ಯಾರೂ ಸುಂದರವಾಗಿ ಕಾಣಬಾರದು ಅಂತ 6 ವರ್ಷದ ಹುಡುಗಿ ಕೊಂದ ಮಹಿಳೆ

Public TV
By Public TV
2 hours ago
chalavadi narayanaswamy 1
Bengaluru City

ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅಲ್ಲ, ವೇಣುಗೋಪಾಲ್: ಛಲವಾದಿ ನಾರಾಯಣಸ್ವಾಮಿ

Public TV
By Public TV
2 hours ago
BY Vijayendra MP Renukacharya
Bengaluru City

ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯೋದು ಸೂರ್ಯ-ಚಂದ್ರ ಇರುವಷ್ಟೇ ಸತ್ಯ: ರೇಣುಕಾಚಾರ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?