Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತೀಯ ಸಿನಿಮಾ ರಂಗದಲ್ಲೇ ಮಾಡಿರದ ಕಥೆಯೊಂದು ಕನ್ನಡದಲ್ಲಿ: ನೀನಾಸಂ ಸತೀಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಭಾರತೀಯ ಸಿನಿಮಾ ರಂಗದಲ್ಲೇ ಮಾಡಿರದ ಕಥೆಯೊಂದು ಕನ್ನಡದಲ್ಲಿ: ನೀನಾಸಂ ಸತೀಶ್

Cinema

ಭಾರತೀಯ ಸಿನಿಮಾ ರಂಗದಲ್ಲೇ ಮಾಡಿರದ ಕಥೆಯೊಂದು ಕನ್ನಡದಲ್ಲಿ: ನೀನಾಸಂ ಸತೀಶ್

Public TV
Last updated: May 16, 2022 1:36 pm
Public TV
Share
3 Min Read
ninasam satish 6
SHARE

ನೀನಾಸಂ ಸತೀಶ್ ನಾಯಕರಾಗಿ ನಟಿಸುತ್ತಿರುವ ” ಅಶೋಕ ಬ್ಲೇಡ್” ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಪಿ.ಶೇಷಾದ್ರಿ ಆರಂಭಫಲಕ ತೋರಿದರು. ಟಿ.ಎನ್.ಸೀತಾರಾಂ ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಇದನ್ನೂ ಓದಿ: ದೊಡ್ಮನೆ ಕುಡಿ ಯುವರಾಜ್ ಎದುರು ವಿಲನ್ ಆಗಿ ಡಾಲಿ!

FotoJet 53

ನಾನು ಹಲವಾರು ವರ್ಷಗಳಿಂದ ಕಿರುತೆರೆ ಮತ್ತು ಹಿರಿತೆರೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಪಿ. ಶೇಷಾದ್ರಿ, ಟಿ.ಎನ್​. ಸೀತಾರಾಂ ಅವರ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಂಚಿಕೆ ನಿರ್ದೇಶಕ ಮತ್ತು ನಿರ್ದೇಶಕರಾಗಿ ಕೆಲಸ ಮಾಡಿದ್ದೇನೆ. ಈ ಸಂದರ್ಭದಲ್ಲಿ ವರ್ಧನ್​ ಮತ್ತು ದೀಪಕ್​ ನಾಯ್ಡು ಅವರ ಪರಿಚಯವಾಯಿತು. ಮೂರು ಜನ ಸೇರಿ 10 ವರ್ಷಗಳ ಹಿಂದೆ ಒಂದು ಪ್ರೊಡಕ್ಷನ್​ ಹೌಸ್​ ಪ್ರಾರಂಭಿಸಿ, ಹಲವು ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದೇವೆ. ಒಂದು ಚಿತ್ರ ನಿರ್ಮಾಣ ಮಾಡುವ ಯೋಚನೆ ಇತ್ತು. ಟಿ.ಕೆ. ದಯಾನಂದ್​ ಅವರ ಹತ್ತಿರ ಒಂದೊಳ್ಳೆಯ ಕಥೆ ಇದೆ ಎಂದು ಗೊತ್ತಾಯಿತು. ಕಥೆ ಕೇಳಿದಾಗ ಬಹಳ ಇಷ್ಟವಾಯಿತು. ಇದೇ ನಮ್ಮ ಸಂಸ್ಥೆಯ ಮೊದಲ ಚಿತ್ರವಾಗಬೇಕು ಎಂದು ತೀರ್ಮಾನಿಸಿ ಚಿತ್ರ ಮಾಡುತ್ತಿದ್ದೇವೆ. ಸತೀಶ್​ ನೀನಾಸಂ ಸಹ ಕೈ ಜೋಡಿಸಿದ್ದಾರೆ. ವರ್ತಕರು ಮತ್ತು ಕಾರ್ಮಿಕರ ನಡುವೆ ನಡೆಯುವ ಯುದ್ಧದ ಕುರಿತು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ನಿರ್ದೇಶಕ ವಿನೋದ್ ದೋಂಡಾಳೆ ಮಾಹಿತಿ ನೀಡಿದರು.

ninasam satish 2

ದಿನ ಬೆಳಗಾದರೆ ಹಲವು ನಿರ್ದೇಶಕರು ಬಂದು ಕಥೆ ಹೇಳುತ್ತಾರೆ. ಆದರೆ, ಈ ಕಥೆ ಹುಡುಕಿದ್ದು ನಾನೇ. ಸ್ನೇಹಿತರ ಮೂಲಕ ದಯಾನಂದ್​ ಅವರ ಬಳಿ ಒಳ್ಳೆಯ ಕಥೆ ಇದೆ ಎಂದು ಕೇಳಿದೆ. ತರಿಸಿ ಓದಿದೆ. ತಕ್ಷಣ ಈ ಚಿತ್ರವನ್ನು ಮಾಡಬೇಕು ಎಂದನಿಸಿತು. ಇದೊಂದು ದೊಡ್ಡ ಕ್ಯಾನ್ವಾಸ್​ನ ಚಿತ್ರ. ಒಂದು ಐತಿಹಾಸಿಕ ಯುದ್ಧವಿದೆ. 10 ನಿಮಿಷಗಳ ಕಾಲ ಸಾವಿರ ಜನ ಭಾಗವಹಿಸುವ ಯುದ್ಧ. ಅದನ್ನು ವಿನೋದ್​ ಸಮರ್ಥವಾಗಿ ತೆರೆಯ ಮೇಲೆ ತರುತ್ತಾರೆ ಎಂಬ ನಂಬಿಕೆ ಇದೆ. ಈ ಯುದ್ಧದಲ್ಲಿ ಒಬ್ಬ ಸೂಪರ್​ ಸ್ಟಾರ್​ ಕಾಣಿಸಿಕೊಳ್ಳಲಿದ್ದಾರೆ. ಉತ್ತರಾಖಂಡ, ಮುಂಬೈ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ನಾಳೆಯಿಂದ ಚಿತ್ರೀಕರಣ ಶುರುವಾಗಲಿದ್ದು, ನಾನು ಜುಲೈನಲ್ಲಿ ಚಿತ್ರತಂಡ ಸೇರಿಕೊಳ್ಳಲಿದ್ದೇನೆ ಎನ್ನುತ್ತಾರೆ ನೀನಾಸಂ ಸತೀಶ್. ಇನದನ್ನೂ ಓದಿ:`ಫಿದಾ’ ಬ್ಯೂಟಿ ಸಾಯಿ ಪಲ್ಲವಿಗೆ ಕನ್ನಡ ಹೇಳಿಕೊಟ್ಟ ಶೀತಲ್ ಶೆಟ್ಟಿ

ninasam satish 7

ಮೊದಲ ಬಾರಿಗೆ ಇನ್​ಸ್ಪೆಕ್ಟರ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಹಳ ಒಳ್ಳೆಯ ಪಾತ್ರ ಇದು. ಚಿತ್ರವು ಎರಡು ಕಾಲಘಟ್ಟದಲ್ಲಿ ನಡೆಯಲಿದೆ. ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದರು ಕಾವ್ಯ ಶೆಟ್ಟಿ. ದಯಾನಂದ್ ಅವರು ಈ ಕಥೆ ಹೇಳಿದ ತಕ್ಷಣ ನಮಗೆ ಹಾಗೂ ನಿರ್ದೇಶಕ ವಿನೋದ್ ಅವರಿಗೆ ಹಿಡಿಸಿತು. ಇದೇ ಕಥೆಯನ್ನು ಸಿನಿಮಾ ಮಾಡಲು ತೀರ್ಮಾನಿಸಿದ್ದೆವು. ಇದೊಂದು ಬಿಗ್ ಬಜೆಟ್ ಸಿನಿಮಾ ಆಗಲಿದೆ ಎಂದಿದ್ದಾರೆ ನಿರ್ಮಾಪಕ ನರಹರಿ. ಇದನ್ನೂ ಓದಿ: ಟಗರು-2ನಲ್ಲಿ ಶಿವಣ್ಣನ ಜತೆ ನಟಿಸಬೇಕಿತ್ತು ಅಪ್ಪು!

FotoJet 1 32

ನನಗೆ ಈ ಕಥೆ ಬಹಳ ವಿಶೇಷ. ಮೈಸೂರು ಸೀಮೆಯಲ್ಲಿ 70ರ ದಶಕದಲ್ಲಿ ನಡೆದ ಒಂದು ಘಟನೆ ಬಗ್ಗೆ ಕೇಳಿದ್ದೆ. ಅದು ಎಲ್ಲೂ ದಾಖಲಾಗಿಲ್ಲ. ಎಲ್ಲೂ ಅದರ ಬಗ್ಗೆ ಉಲ್ಲೇಖವಿಲ್ಲ. ಕೊನೆಗೆ ಆ ಕಥೆಯ ವಿವರಗಳನ್ನು ಹುಡುಕಿಕೊಂಡು ಹೋದಾಗ ಹಲವು ಮಹತ್ವದ ವಿಷಯಗಳು ಗೊತ್ತಾಯಿತು. ಇದು ಕನ್ನಡ ನೆಲದ ವೀರರ ಕಥೆ. ಯುದ್ಧ ಎಂದರೆ ಯುದ್ಧಭೂಮಿ ಅಥವಾ ಸಾಮ್ರಾಜ್ಯ ವಿಸ್ತರಣೆಯ ಕಥೆಯಲ್ಲ. ಎರಡು ಸಮುದಾಯಗಳ ಕುರಿತ ಕಥೆ ಇದೆ. ವ್ಯಾಪಾರಿಗಳು ಮತ್ತು ಕಾರ್ಮಿಕರ ನಡುವಿನ ಕಥೆ ಇದೆ. ಇದರಲ್ಲಿ ಭಾಗವಹಿಸಿದ ಕೆಲವರನ್ನು ಹುಡುಕಿ ಮಾತಾಡಿಸಿದೆ. ಒಂದಿಷ್ಟು ಮಾಹಿತಿ ಸಿಕ್ಕಿತು. ಅದನ್ನು ಬೆಳೆಸಿ ಚಿತ್ರಕಥೆ ಮಾಡಿದ್ದೇನೆ. ಈ ಕಥೆ ಎಲ್ಲರಿಗೂ ಇಷ್ಟವಾಗಿದೆ ಎಂದು‌ ಚಿತ್ರದ ಕಥೆಯ ಬಗ್ಗೆ ಟಿ.ಕೆ.ದಯಾನಂದ್ ಮಾತನಾಡಿದರು. ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ, ಛಾಯಾಗ್ರಾಹಕ ಲವಿತ್ ಹಾಗೂ ನಟ ಬಿ.ಸುರೇಶ್ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

TAGGED:Ashok Bladeb sureshSandal WoodSatish NeenasamTK Dayanandಅಶೋಕ್ ಬ್ಲೇಡ್ಟಿ.ಕೆ.ದಯಾನಂದ್ಬಿ.ಸುರೇಶ್ಸತೀಶ್ ನೀನಾಸಂಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Eshwar Khandre
Bengaluru City

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಯತ್ನ: ಈಶ್ವರ ಖಂಡ್ರೆ

Public TV
By Public TV
4 minutes ago
bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
10 minutes ago
kea
Bengaluru City

ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ

Public TV
By Public TV
22 minutes ago
IndiGo CEO Pieter Elbers
Latest

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ

Public TV
By Public TV
57 minutes ago
Majestic Bus Station Ramalinga Reddy
Bengaluru City

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Public TV
By Public TV
1 hour ago
siddaramaiah 1 5
Bengaluru City

ವಾಣಿಜ್ಯ ಬಳಕೆಯ ಗ್ಯಾಸ್ ಸಮಸ್ಯೆ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?