ತಾಕತ್ತಿನಿಂದ ಹೇಳ್ತೇನೆ, ನನಗೆ ಮುಸ್ಲಿಮರ ಮತಗಳು ಬೇಡ, ಹಿಂದೂಗಳ ಮತಗಳಷ್ಟೇ ಸಾಕು: ಹರೀಶ್ ಪೂಂಜಾ

Public TV
1 Min Read
harish poonja 1

ಮಂಗಳೂರು: ನನಗೆ ಮುಸ್ಲಿಮರ ಮತಗಳು ಬೇಡ, ಹಿಂದೂಗಳ ಮತಗಳಷ್ಟೇ ಸಾಕು ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

AYODHYA RAMAMANDIR

ಬೆಳ್ತಂಗಡಿಯ ಧಾರ್ಮಿಕ ಸಭಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಸ್ಪರ್ಧಿಸಲು ಸಂಘದ ಹಿರಿಯರು ಸೂಚಿಸಿದ್ರೆ ಸ್ಪರ್ಧೆ ಮಾಡುತ್ತೇನೆ. ಆದರೆ ಆಗ ತಾಕತ್ತಿನಿಂದ ಹೇಳ್ತೇನೆ, ನನಗೆ ಮುಸ್ಲಿಮರ ವೋಟ್ ಬೇಡ. ನನಗೆ ಕೇವಲ ಹಿಂದೂಗಳ ವೋಟ್ ಅಷ್ಟೇ ಸಾಕು. ಯಾಕೆಂದರೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಆಗಬೇಕು. ಕಾಶಿಯಲ್ಲಿ ವಿಶ್ವನಾಥ ದೇವರ ಮಂದಿರ ನಿರ್ಮಾಣ ಆಗಬೇಕು. ದತ್ತ ಪೀಠದಲ್ಲಿ ದತ್ತಾತ್ರೇಯರ ಪೀಠ ನಿರ್ಮಾಣ ಆಗಬೇಕು. ಹೀಗಾಗಿ ಬಹಳ ಧೈರ್ಯದಿಂದ ಹೇಳ್ತೇನೆ ನನಗೆ ಮುಸ್ಲಿಮರ ಮತಗಳು ಬೇಡ ಎಂದು ತುಳು ಭಾಷೆಯಲ್ಲಿ ಧಾರ್ಮಿಕ ಸಭೆಯೊಂದರಲ್ಲಿ ಗುಡುಗಿದ್ದಾರೆ. ಇದನ್ನೂ ಓದಿ: ಹಳೇಹುಬ್ಬಳ್ಳಿ ಗಲಭೆ ಪ್ರಕರಣ- 8 ಮಂದಿಗೆ ಜಾಮೀನು

kashi appa

ಕಾಂಗ್ರೆಸ್ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತ ಹತ್ಯೆ ಆಗಿದೆ. ಕೆಂಪುಕೋಟೆ ಮೇಲೆ ಭಗವಾದ್ವಜ ಹಾರಿಸ್ತೀವಿ ಎಂದು ಹೇಳಿರುವ ಭಾಷಣದ ತುಣುಕುಗಳು ಭಾರೀ ವೈರಲ್ ಆಗಿದೆ. ಇದೀಗ ಈ ಹೇಳಿಕೆ ಮುಂದಿನ ಚುನಾವಣೆಯಲ್ಲಿ ಅವರ ಮತಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯ ಬಗ್ಗೆ ಮಾತುಗಳು ಕೇಳಿಬರುತ್ತಿದೆ. ಇದನ್ನೂ ಓದಿ: ಹುಡುಗಿಗೆ ಮೆಸೇಜ್ ಮಾಡಿದನೆಂದು ದಲಿತ ಯುವಕನ ಮೇಲೆ ಅಮಾನುಷ ಹಲ್ಲೆ – ಅರೆಬೆತ್ತಲೆ ಮೆರವಣಿಗೆ

Share This Article
Leave a Comment

Leave a Reply

Your email address will not be published. Required fields are marked *