ಬೆಂಗಳೂರಿನಲ್ಲಿ ರಣಮಳೆಗೆ ಇಬ್ಬರು ಕಾರ್ಮಿಕರು ಬಲಿ

Public TV
1 Min Read
RAIN DEATH

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸುರಿದ ರಣ ಮಳೆಗೆ ಇಬ್ಬರು ಕಾರ್ಮಿಕರು ಬಲಿಯಾಗಿರುವ ದುರ್ಘಟನೆ ನಡೆದಿದೆ.

ಇಲ್ಲಿನ ಉಲ್ಲಾಳ ಉಪನಗರದ ಬಳಿ ಘಟನೆ ನಡೆದಿದೆ. ಕಾವೇರಿ 5ನೇ ಹಂತದ ಕಾಮಗಾರಿಗೆ ಪೈಪ್‌ಲೈನ್ ಅಳವಡಿಸುವ ಕೆಲಸ ಮಾಡುತ್ತಿದ್ದ ಮೂವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತದೇಹಗಳು ಪತ್ತೆಯಾಗಿವೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಗುಡುಗು ಸಹಿತ, ಭಾರೀ ಮಳೆ- ತಗ್ಗುಪ್ರದೇಶಗಳೆಲ್ಲ ನೀರುಮಯ, ಸವಾರರ ಪರದಾಟ

RAIN DEATH (1)

ಮಳೆಗೆ ನಲುಗಿದ ಜನ: ಭಾರೀ ಮಳೆಗೆ ಸಿಲಿಕಾನ್ ಸಿಟಿಯ ಜನ ನಲುಗಿ ಹೋಗಿದ್ದಾರೆ. ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿದ್ದು, ಜನ ಹರಸಾಹಸ ಪಡುತ್ತಿದ್ದಾರೆ. ಮುಳುಗಿದ ರಸ್ತೆಯಿಂದಾಗಿ ವಾಹನಗಳಲ್ಲಿ ನೀರು ತುಂಬಿಕೊಂಡಿದೆ. ಬೆಳಗ್ಗೆ ಮಳೆ ಕೊಂಚ ಬಿಡುವು ನೀಡಿದ್ದು, ಮನೆಯ ಆವರಣ, ವಾಹನಗಳನ್ನು ಶುಚಿಗೊಳಿಸುವ ಕಾರ್ಯದಲ್ಲಿ ಜನ ನಿರತರಾಗಿದ್ದಾರೆ. ಸಾರ್ವಜನಿಕರು ಬಿಬಿಎಂಪಿಯ ಕೆಲಸಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *