Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅತೀ ಹಿಂದುಳಿದ ವರ್ಗಗಳ ಪ್ರತಿನಿಧಿಗಳಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್‍ಗೆ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅತೀ ಹಿಂದುಳಿದ ವರ್ಗಗಳ ಪ್ರತಿನಿಧಿಗಳಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್‍ಗೆ ಒತ್ತಾಯ

Bengaluru City

ಅತೀ ಹಿಂದುಳಿದ ವರ್ಗಗಳ ಪ್ರತಿನಿಧಿಗಳಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್‍ಗೆ ಒತ್ತಾಯ

Public TV
Last updated: May 20, 2022 7:54 pm
Public TV
Share
3 Min Read
mc venugopal
SHARE

ಬೆಂಗಳೂರು: ಮುಂಬರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಅತಿ ಹಿಂದುಳಿದ ವರ್ಗಗಳ ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಎಮ್.ಸಿ. ವೇಣುಗೋಪಾಲ್ ಅವರು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಪ್ರೆಸ್ ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನ ಪರಿಷತ್‍ನ ಏಳು ಸ್ಥಾನಗಳಿಗೆ ಜೂನ್ ತಿಂಗಳಿನಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ಮೂರು ರಾಜಕೀಯ ಪಕ್ಷಗಳು ಅತೀ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಅತೀ ಹಿಂದುಳಿದ ವರ್ಗಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿಪಡಿಸಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

WhatsApp Image 2022 05 20 at 7.10.41 PM

ಸ್ವಾತಂತ್ರ್ಯ ಬಂದ ಈ ಏಳೂವರೆ ದಶಕದಲ್ಲಿ ಅತೀ ಹಿಂದುಳಿದ ವರ್ಗಗಳ ಸುಮಾರು 197 ಸಮುದಾಯಗಳು ರಾಜಕೀಯ ಅವಕಾಶಗಳಿಂದ ವಂಚಿತವಾಗಿವೆ. ಪ್ರಸ್ತುತ ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿ ನ್ಯಾಯಮೂರ್ತಿ ಚಿನ್ನಪ್ಪ ರೆಡ್ಡಿ ಆಯೋಗ 1995ಕ್ಕಿಂತ ಹಿಂದೆ ಸಲ್ಲಿಸಿದ ವರದಿಯನ್ನು ಆಧರಿಸಿದೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿಲ್ಲ ಎಂದು ಆಯೋಗ ತನ್ನ ವರದಿಯಲ್ಲಿ ಸೇರಿಸದೇ ಕೈಬಿಟ್ಟ ಕೆಲವು ಜಾತಿ, ಉಪಜಾತಿಗಳನ್ನು ಸರ್ಕಾರ ಸ್ವಯಂ ಪ್ರೇರಣೆಯಿಂದಲೋ, ಒತ್ತಡಕ್ಕೆ ಒಳಗಾಗಿಯೋ ಸೇರ್ಪಡೆ ಮಾಡಿರುವುದರಿಂದ ಅರ್ಹ ಹಿಂದುಳಿದ ವರ್ಗಗಳಿಗೆ ಘೋರ ಅನ್ಯಾಯವಾಗಿದೆ. ಅನ್ಯಾಯದ ಫಲವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅರ್ಹ ಹಿಂದುಳಿದ ವರ್ಗಗಳಿಗೆ ನ್ಯಾಯವಾಗಿ ಸಿಗಬೇಕಾದ ಮೀಸಲಾತಿ ಕೋಟಾ ಸಿಗದೆ ಸಂವಿಧಾನದ ಆಶಯ ವಿಫಲವಾಗಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ನವಜೋತ್‌ ಸಿಂಗ್‌ ಸಿಧುಗೆ 1 ವರ್ಷ ಜೈಲು ಶಿಕ್ಷೆ

web bjp logo 1538503012658

ವಿಧಾನ ಪರಿಷತ್ ಅಸ್ತಿತ್ವಕ್ಕೆ ಬಂದ 1952ರಿಂದ 2022ರವರೆಗಿನ 70 ವರ್ಷದಲ್ಲಿ ವಿಧಾನ ಪರಿಷತ್‍ನಲ್ಲಿ ದೊರೆತ 802 ಅವಕಾಶಗಳ ಪೈಕಿ ಪ್ರಬಲ ಸಮುದಾಯದವರೇ ಪರಿಷತ್ ಸದಸ್ಯತ್ವದ ಸಿಂಹಪಾಲು ಪಡೆದಿದ್ದಾರೆ. ಅಚ್ಚರಿಯಾಗಬಹುದಾದ ಅಧಿಕೃತ ವಿವರ ಈ ಕೆಳಕಂಡಂತಿದೆ. ಲಿಂಗಾಯತರು-141, ಒಕ್ಕಲಿಗ-158, ಬ್ರಾಹ್ಮಣ-91, ಪ.ಜಾ-65, ಮುಸ್ಲಿಂ-54, ಕುರುಬ-20, ಪ.ಪಂ-18, ಈಡಿಗ-18, ಕೊಡವ-15, ಜೈನ್-14, ಬಂಟ-14, ಬಲಿಜ-13, ಕ್ರೈಸ್ತ್-12, ಮರಾಠ-12, ಬೆಸ್ತ-11, ವೈಶ್ಯ-10, ರೆಡ್ಡಿ-9, ಗಾಣಿಗ-6, ದೇವಾಂಗ-5, ವಿಶ್ವಕರ್ಮ-4, ಉಪ್ಪಾರ-3, ನಾಯ್ಡು, ತಿಗಳ, ಮಡಿವಾಳ, ಹಿಂದೂ ಸಾದರು, ರಾಜು ಕ್ಷತ್ರಿಯ, ಭಂಡಾರಿ-ತಲಾ 2, ಗೊಲ್ಲ, ಕುಂಬಾರ, ರಜಪೂತ್, ಮುದಲಿಯಾರ್, ಅರಸು, ದೇವಳಿ, ಸಿಂಧಿ, ಭಾವಸಾರ ಕ್ಷತ್ರಿಯ, ಸವಿತಾ-ತಲಾ 1 ಸ್ಥಾನಗಳನ್ನು ಪಡೆದುಕೊಂಡಿದ್ದಾರೆ ಎಂದು ಅವರು ಅಂಕಿ ಅಂಶಗಳ ಮೂಲಕ ಮಾಹಿತಿ ನೀಡಿದರು.

congress logo 1

ಪ್ರಸ್ತುತ, ವಿಧಾನಪರಿಷತ್ತಿನ 74 ಸದಸ್ಯರ ಸಮುದಾಯದ ವಿವರ ಹೀಗಿದ್ದು, ಒಕ್ಕಲಿಗ-21, ಲಿಂಗಾಯತ-20, ಪ.ಜಾ-5, ಕುರುಬ-5, ಪ.ಪಂ, ಮುಸ್ಲಿಂ, ಬೆಸ್ತ-ತಲಾ 3, ಈಡಿಗ-3, ಕೊಡವ, ಬಂಟ, ಬ್ರಾಹ್ಮಣ-ತಲಾ 2, ತಿಗಳ, ವೈಶ್ಯ, ರೆಡ್ಡಿ, ವಿಶ್ವಕರ್ಮ ಮತ್ತು ಜೈನ್-ತಲಾ 1, ಇವರಲ್ಲಿ ಮುಂಬರುವ ಜೂನ್ ತಿಂಗಳಲ್ಲಿ 7 ಮಂದಿ ಸದಸ್ಯರು ನಿವೃತ್ತರಾಗುತ್ತಿದ್ದಾರೆ ಎಂದರು. ಇವರೆಲ್ಲಾ ವಿಧಾನಸಭಾ ಸದಸ್ಯರಿಂದ ಚುನಾಯಿತರಾದವರು. ಈ ಸ್ಥಾನಗಳನ್ನು ತುಂಬಲು ಜೂನ್ ಮೊದಲವಾರ ಚುನಾವಣೆ ನಡೆಯಲಿದೆ ಎಂದರು. ಇದನ್ನೂ ಓದಿ: ಜ್ಞಾನವಾಪಿ ಕೇಸ್ ವಾರಣಾಸಿ ಕೋರ್ಟ್‍ಗೆ ವರ್ಗಾವಣೆ – ವಾದ, ಪ್ರತಿವಾದ ಹೇಗಿತ್ತು?

ಪ್ರಸಕ್ತ ವಿಧಾನ ಸಭೆಯ ಸದಸ್ಯರ ಬಲದಂತೆ (ಬಿಜೆಪಿ-4, ಕಾಂಗ್ರೆಸ್-2 ಮತ್ತು ದಳ-1) ಚುನಾಯಿತರಾಗುವ ಸಂಭವವಿದೆ. ಹಿಂದುಳಿದ ವರ್ಗಗಳು ಮತ್ತು ಅಲೆಮಾರಿ, ಅರೆ ಅಲೆಮಾರಿ ಹಾಗೂ ವಿಮುಕ್ತ ಬುಡಕಟ್ಟುಗಳ 46 ಸಮುದಾಯಗಳು ಹೊಂದಿರುವ ಜನಸಂಖ್ಯಾ ಸಾಮಥ್ರ್ಯಕ್ಕೆ ತಕ್ಕಂತೆ ಪರಿಷತ್ತಿನಲ್ಲಿ ಅವುಗಳ ಸಂಖ್ಯೆ ತೀರಾ ಕಡಿಮೆ ಇದೆ. ತಮ್ಮ ಪಕ್ಷದ ವತಿಯಿಂದ ಚುನಾಯಿಸಬಹುದಾದ ಸ್ಥಾನಗಳನ್ನೂ ಹಿಂದುಳಿದ ಮತ್ತು ಅಲೆಮಾರಿ, ಅರೆ ಅಲೆಮಾರಿ ಹಾಗೂ ವಿಮುಕ್ತ ಬುಡಕಟ್ಟುಗಳ 46 ಸಮುದಾಯಗಳಿಗೆ ಅನ್ವಯಿಸುವಂತೆ ಅವಕಾಶ ಕಲ್ಪಿಸಿಕೊಟ್ಟು ಈ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ದೊರಕಿಸಿ ಕೊಡಬೇಕೆಂದು ಎಂದು ಅವರು ಮನವಿ ಮಾಡಿದರು.

jds logo

ಇನ್ನೂ, ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‍ಗೆ ಚುನಾವಣೆ ನಡೆಸುವುದು ಮತ್ತು ಸ್ಥಳೀಯ ಸಂಸ್ಥೆಗಳ ಅಧಿಕಾರಾವಧಿ ಪೂರ್ಣಗೊಂಡ ನಂತರ ನಿರ್ವಾತ ಸೃಷ್ಠಿಯಾಗಲು ಬಿಡದೆ ಚುನಾವಣೆ ನಡೆಸಬೇಕಾಗಿರುವುದು ರಾಜ್ಯಗಳ ಸಾಂವಿಧಾನಿಕ ಹೊಣೆಗಾರಿಕೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಹೀಗಾಗಿ ಸ್ಥಳೀಯ ಸಂಸ್ಥೆಗಳಿಂದ ಪರಿಷತ್‍ಗೆ ಚುನಾವಣೆ ನಡೆಸುವ ಸನ್ನಿವೇಶ ಕರ್ನಾಟಕದಲ್ಲೂ ಎದುರಾಗಿದೆ. ಹಾಗೇ ಯಾವುದೇ ಕ್ಷಣದಲ್ಲೂ ಚುನಾವಣೆ ದಿನಾಂಕ ಘೋಷಣೆಯಾಗುವ ಸಂಭವವಿದೆ. ಈ ಹಂತದಲ್ಲಿ ರಾಜ್ಯದ ಮೂರೂ ರಾಜಕೀಯ ಪಕ್ಷಗಳು ಅತಿ ಹಿಂದುಳಿದ ವರ್ಗಗಳ ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಅವರು ಒತ್ತಾಯಿಸಿದರು.

evm ballot

ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಹಿಂದುಳಿದ ವರ್ಗಗಳ ಮೀಸಲಾತಿ ವಿಚಾರವಾಗಿ ನಿಜವಾಗಿಯೂ ಆಸಕ್ತಿ ಮತ್ತು ಕಾಳಜಿ ಇದ್ದಲ್ಲಿ ಸಾಮೂಹಿಕವಾಗಿ ಒಂದು ತೀರ್ಮಾನಕ್ಕೆ ಬಂದು ಓಬಿಸಿ ಮೀಸಲಾತಿಯನ್ನು ಅಭ್ಯರ್ಥಿಯ ಬದಲು ಕ್ಷೇತ್ರಗಳಲ್ಲಿ ಮೀಸಲಾತಿಯನ್ನು ನೀಡಿದಾಗ ಮಾತ್ರ ಕರ್ನಾಟಕದ ಶೇ. 62ಕ್ಕೂ ಹೆಚ್ಚಿರುವ ಹಿಂದುಳಿದ, ಅತಿ ಹಿಂದುಳಿದ ವರ್ಗಗಳ ಬಗ್ಗೆ ಸಾಮಾಜಿಕ ಕಳಕಳಿಯನ್ನು ಕಾಣಬಹುದು ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಮ್. ನಾಗರಾಜ್, ಖಜಾಂಚಿ ಎಲ್.ಎ. ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.

 

TAGGED:bengalurubjpcongressjdsM.C. VenugopalMost Backward Classesnews conferenceVidhan Sabha Electionsಅತೀ ಹಿಂದುಳಿದ ವರ್ಗಗಳುಎಮ್.ಸಿ. ವೇಣುಗೋಪಾಲ್ಕಾಂಗ್ರೆಸ್ಜೆಡಿಎಸ್ಬಿಜೆಪಿಬೆಂಗಳೂರುವಿಧಾನ ಪರಿಷತ್ ಚುನಾವಣೆಸುದ್ದಿಗೋಷ್ಠಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Panchamasali Peetha 1
Davanagere

ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ – ಸ್ವಾಮೀಜಿ ಬೆಂಬಲಿಗರಿಂದ ಟ್ರಸ್ಟಿ ಬೆಂಬಲಿಗರ ಮೇಲೆ ಹಲ್ಲೆ

Public TV
By Public TV
13 minutes ago
namma metro
Bengaluru City

ಮೆಟ್ರೋದಲ್ಲಿ ಮಹಿಳೆಯರ ವಿಡಿಯೋ ಚಿತ್ರೀಕರಣ ಕೇಸ್‌ – ಆರೋಪಿಗೆ ಜಾಮೀನು‌ ನಿರಾಕರಿಸಿದ ಹೈಕೋರ್ಟ್

Public TV
By Public TV
15 minutes ago
Raichuru Man got congratulatory letter from pm modi for wedding
Districts

ಮದುವೆಗೆ ಆಹ್ವಾನಿಸಿದ್ದ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ

Public TV
By Public TV
25 minutes ago
Free trade agreement signed with New Zealand after 15 years what are the benefits for India Piyush Goyal FDI1
Automobile

15 ವರ್ಷದ ಬಳಿಕ ನ್ಯೂಜಿಲೆಂಡ್‌ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ – ಭಾರತಕ್ಕೆ ಏನು ಲಾಭ?

Public TV
By Public TV
27 minutes ago
PM Modi 4
Latest

ಇದು ನನ್ನ ಕೊನೆಯ ರ‍್ಯಾಲಿ, ಫಲಿತಾಂಶದ ನಂತರ ಪ್ರಮಾಣವಚನ ಸಮಾರಂಭಕ್ಕೆ ಬರುತ್ತೇನೆ: ಪ್ರಧಾನಿ ಮೋದಿ

Public TV
By Public TV
51 minutes ago
ragging alleged in hassan veterinary college hostel
Crime

ಹಾಸನದ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‍ನಲ್ಲಿ ರ‍್ಯಾಗಿಂಗ್‌ ಮಾರಾಮಾರಿ – ಹಲವರಿಗೆ ಗಾಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?