Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: RSS ಕೋಮುವಾದಿ ಸಂಘಟನೆ ಎಂದು ಬಿಂಬಿಸಿದ ಆರೋಪ – ವಿವಾದದ ಕೇಂದ್ರವಾದ ವೀರಸೌಧ ಚಿತ್ರ ಗ್ಯಾಲರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | RSS ಕೋಮುವಾದಿ ಸಂಘಟನೆ ಎಂದು ಬಿಂಬಿಸಿದ ಆರೋಪ – ವಿವಾದದ ಕೇಂದ್ರವಾದ ವೀರಸೌಧ ಚಿತ್ರ ಗ್ಯಾಲರಿ

Chikkaballapur

RSS ಕೋಮುವಾದಿ ಸಂಘಟನೆ ಎಂದು ಬಿಂಬಿಸಿದ ಆರೋಪ – ವಿವಾದದ ಕೇಂದ್ರವಾದ ವೀರಸೌಧ ಚಿತ್ರ ಗ್ಯಾಲರಿ

Public TV
Last updated: May 21, 2022 8:20 pm
Public TV
Share
3 Min Read
CKB VEERASOUDA 6
SHARE

– ಹಿಂದೂಪರ ಸಂಘಟನೆಗಳ ಆಕ್ಷೇಪ

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿರುವ ಸ್ವಾತಂತ್ರ್ಯ ಸಂಗ್ರಾಮದ ಸಂಪೂರ್ಣ ನೆನಪುಗಳನ್ನು ಮೆಲುಕು ಹಾಕುವ ವಿದುರಾಶ್ವತ್ಥ ವೀರಸೌಧದ ಚಿತ್ರ ಗ್ಯಾಲರಿ ಈಗ ವಿವಾದದ ಕೇಂದ್ರಬಿಂದುವಾಗಿದೆ.

CKB VEERASOUDA 1

ವೀರಸೌಧದ ಚಿತ್ರ ಗ್ಯಾಲರಿಯ ಕೆಲ ಚಿತ್ರಗಳು ಹಾಗೂ ಚಿತ್ರದ ಕೆಳಗೆ ಬರೆದ ಕೆಲ ಪದಗಳು ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದು ರಾಜ್ಯದಲ್ಲಿ ಹೊಸ ವಿವಾದವೊಂದು ಸೃಷ್ಠಿಯಾಗಿದೆ. ವಿದುರಾಶ್ವತ್ಥ ಐತಿಹಾಸಿಕ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ. ಕರ್ನಾಟಕದ ಜಲಿಯನ್ ವಾಲಾಬಾಗ್ ಖ್ಯಾತಿಯ ಸ್ವಾತಂತ್ರ್ಯ ಸಂಗ್ರಾಮದ ನೆನಪಿನ ತಾಣವೂ ಹೌದು. ಇಂತಹ ಐತಿಹ್ಯವುಳ್ಳ ಸ್ವಾತಂತ್ರ್ಯ ಸಂಗ್ರಾಮದ ಸ್ಥಳದಲ್ಲಿ ಕಳೆದ 10 ವರ್ಷಗಳ ಹಿಂದೆ ತಲೆ ಎತ್ತಿರುವ ವೀರಸೌಧದ ಫೋಟೋ ಗ್ಯಾಲರಿ ಈಗ ವಿವಾದಿತ ಕೇಂದ್ರವಾಗಿದೆ. ಸ್ವಾತಂತ್ರ್ಯ ಸಂಗ್ರಾಮದ ಸಂಪೂರ್ಣ ಸನ್ನಿವೇಶಗಳನ್ನು ಫೋಟೋಗಳ ರೂಪದಲ್ಲಿ ಕಟ್ಟಿಕೊಡುವ ಕೆಲಸವನ್ನು ನಿವೃತ್ತ ಪ್ರೊಫೆಸರ್‌ ಬಿ.ಜಿ ಗಂಗಾಧರಮೂರ್ತಿ ಮಾಡಿದ್ದಾರೆ. ಆದ್ರೆ ಈ ಗ್ಯಾಲರಿಯಲ್ಲಿನ ಕೆಲ ಫೋಟೋಗಳು ಈಗ ವಿವಾದಕ್ಕೀಡಾಗಿದ್ದು. ಸ್ವಾತಂತ್ರ್ಯ ಸೇನಾನಿಗಳ ಫೋಟೋ ಜೊತೆಗೆ ಕೆಳಭಾಗದಲ್ಲಿ ಹಿಂದೂ ಕೋಮುವಾದ-ಮುಸ್ಲಿಂ ಕೋಮುವಾದ ಎಂಬ ತಲೆ ಬರಹಗಳು ಹಿಂದೂ ಸಂಘಟನೆಗಳ ಕಾರ್ಯಕರ್ತರ ಆಕ್ಷೇಪಣೆಗೆ ಕಾರಣವಾಗಿವೆ. ಇದನ್ನೂ ಓದಿ: ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಅಬಕಾರಿ ಸುಂಕ ಇಳಿಕೆ

CKB VEERASOUDA 2

ಚಿತ್ರ ಗ್ಯಾಲರಿಯ ಸ್ಥಾಪಕ ಗಂಗಾಧರ ಮೂರ್ತಿ ಹೇಳೋದೇನು?
ಜಿಲ್ಲಾಡಳಿತದ ನೇತೃತ್ವದಲ್ಲಿ ಸ್ವಾತಂತ್ರ್ಯ ಸ್ಮಾರಕ ಅಭಿವೃದ್ಧಿ ಸಮತಿಯಡಿ ಬರುವ ವೀರಸೌಧದಲ್ಲಿ ಸಮಿತಿಯ ಸಲಹೆಗಾರರಾಗಿರುವ ನಿವೃತ್ತ ಪ್ರೊಫೆಸರ್‌ ಹಾಗೂ ಚಿಂತಕ ಗಂಗಾಧರ ಮೂರ್ತಿ ಈ ವೀರಸೌಧ ಗ್ಯಾಲರಿಯ ಸ್ಥಾಪಕರಾಗಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಹಗಲು ರಾತ್ರಿ ಸಾಕಷ್ಟು ವರ್ಷಗಳ ಕಾಲ ಇತಿಹಾಸವನ್ನು ಅಧ್ಯಯನ ಮಾಡೇ ಈ ಚಿತ್ರ ಗ್ಯಾಲರಿಯನ್ನು ನಿರ್ಮಾಣ ಮಾಡಿದ್ದೇವೆ. ಕಳೆದ 10-12 ವರ್ಷಗಳಿಂದ ಇಲ್ಲದ ವಿವಾದ ಈಗ ಆರಂಭವಾಗಿದೆ. ಕೆಲವರು ಉದ್ದೇಶಪೂರ್ವಕವಾಗಿಯೇ ವಿನಾಕಾರಣ ವಿವಾದ ಸೃಷ್ಟಿಸುತ್ತಿದ್ದಾರೆ. ಹಿಂದೂ ಕೋಮುವಾದ-ಮುಸ್ಲಿಂ ಕೋಮುವಾದ ಅಂತ ಬಳಸಲಾಗಿದೆ. ಹಿಂದೂ ಕೋಮುವಾದ ಅಂತ ಹೆಸರು ಈಗ ಸೃಷ್ಟಿಸಿರೋದಲ್ಲ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ನಿನ್ನ ಹೆಸರು ಮೊಹಮ್ಮದ್? – ಬಿಜೆಪಿ ಮಾಜಿ ಕಾರ್ಪೊರೇಟರ್ ಪತಿಯಿಂದ ಹಲ್ಲೆಗೊಳಗಾದ ವೃದ್ಧ ಸಾವು

CKB VEERASOUDA 4

ನಾನು 2006ರಲ್ಲಿ ಕೆಲಸ ಆರಂಭ ಮಾಡಿ 2009ರಲ್ಲಿ ಮುಗಿಸಿ 2012ರಲ್ಲಿ ಸಾರ್ವಜನಿಕರ ವೀಕ್ಷಣೆಗೆ ಮುಕ್ತ ಅವಕಾಶ ನೀಡಲಾಗಿದೆ. 1985ರಲ್ಲಿ ಎನ್‍ಸಿಇಆರ್‌ಟಿ ಸಂಸ್ಥೆಯ ಮೂಲಗ್ರಂಥದ ಆಧಾರದ ಜೊತೆಗೆ ಗೊಂದಲ ಬಂದಾಗ ಇತಿಹಾಸಕಾರರ ಪುಸ್ತಕಗಳನ್ನು ಅಧ್ಯಯನ ಮಾಡಿ ಈ ಗ್ಯಾಲರಿ ನಿರ್ಮಿಸಿದ್ದೇವೆ. ತುಂಬಾ ದೊಡ್ಡ ರಾಜಕಾರಣಿಗಳು, ಅಧಿಕಾರಿಗಳು, ವಿದ್ಯಾರ್ಥಿಗಳು ವೀಕ್ಷಣೆ ಮಾಡಿದ್ದಾರೆ. ಒಳ್ಳೆಯ ಕೆಲಸ ಅಂತ ಅಭಿನಂದಿಸಿದ್ದಾರೆ, ಕಳೆದ 20 ದಿನಗಳಿಂದ ಕೆಲ ಪ್ರತಿರೋಧಗಳು ಬರ್ತಿವೆ. ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕೆಲ ಫೋಟೋಗಳು ಒಪ್ಪಿಗೆ ಇಲ್ಲ ಎಂದು ಅವನ್ನು ತೆಗೆದು ಹಾಕಲು ಒತ್ತಡ ಹಾಕಿದ್ದಾರೆ. ತೆಗೆಯದೆ ಹೋದರೆ ಬೆಂಕಿ ಹಾಕ್ತೀವಿ ಅನ್ನೋ ಬಾಷೆ ಸಹ ಕೆಲವರು ಬಳಸಿದ್ದಾರೆ ಅಂತ ಗಂಗಾಧರ ಮೂರ್ತಿ ಆರೋಪಿಸಿದ್ದಾರೆ. ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು

CKB VEERASOUDA 3

ಗಂಗಾಧರ ಮೂರ್ತಿಯವರ ಪ್ರಕಾರ ಹಿಂದೂ ಸಂಘಟನೆಗಳು ಚಿತ್ರ ಗ್ಯಾಲರಿಯಲ್ಲಿ ಮುಸ್ಲಿಮರಿಗೂ ಸ್ವಾತಂತ್ರ್ಯ ಹೋರಾಟಗಾರರಿಗೂ ಏನು ಸಂಬಂಧ ಯಾಕೆ ಆ ರೀತಿ ಬಿಂಬಿಸಿದ್ದೀರಿ? ಗೋಡ್ಸೆ-ಸಾರ್ವಕರ್‌ಗೆ ಅನ್ಯಾಯ ಆಗುವ ರೀತಿ ಬಿಂಬಿಸಿರುವ ಆರೋಪ, ಟಿಪ್ಪು ವೈಭವೀಕರಣ ಮಾಡಿರುವ ಆರೋಪ, ಹಿಂದೂ ಕೋಮುವಾದ ಪದ ಬಳಕೆಗೆ ಆಕ್ಷೇಪ, ಆ ಪದ ಬಳಸದಂತೆ ಒತ್ತಡ, ನಾವು ಹಿಂದೂ ಕೋಮುವಾದ ಅಂತಲೂ ಮುಸ್ಲಿಂ ಕೋಮುವಾದ ಅಂತಲೂ ಬಳಸಿದ್ದೇವೆ. ಕೋಮುವಾದ ಎಲ್ಲ ಧಾರ್ಮಿಕ ಸಂಘಟನೆಗಳಲ್ಲಿ ಇರುವಂತಹದ್ದು. ಆಯಾ ಧರ್ಮದವರು ಆ ಕೋಮಿನ ಪರವಾಗಿ ವಾದ ಮಾಡ್ತೀವಿ ಅನ್ನೋರಿಗೆ ಕೋಮುವಾದ ಪದ ಬಳಸುತ್ತೇವೆ. ಆದ್ರೆ ಇದಕ್ಕೆ ತಗಾದೆ ತಗೆದಿದ್ದಾರೆ ಎಂದು ದೂರಿದ್ದಾರೆ.

CKB VEERASOUDA 5

ವೀರಸೌಧಕ್ಕೆ ಪೊಲೀಸ್ ಭದ್ರತೆ
ವಿವಾದಗಳ ನಂತರ ವೀರಸೌಧಕ್ಕೆ ಭದ್ರತೆಗಾಗಿ ಮನವಿ ಮಾಡಲಾಗಿದ್ದು ವೀರಸೌಧಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೀರಸೌಧಕ್ಕೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ವಿವಾದಿತ ವೀರಸೌಧಕ್ಕೆ ಹಲವು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆಗಮಿಸಿ ಆಕ್ಷೇಪಣೆಗಳನ್ನು ಸಂದರ್ಶಕರ ಪುಸ್ತಕದಲ್ಲಿ ಬರೆಯುತ್ತಿದ್ದಾರೆ. ಈ ನಡುವೆ ಕೆಲವರು ಮೌಖಿಕವಾಗಿ ವೀರಸೌಧದಲ್ಲಿರುವ ಸಿಬ್ಬಂದಿಗೆ ಧಮ್ಕಿ ಹಾಕಿರುವ ಆರೋಪ ಮಾಡಲಾಗಿದ್ದು, 10-12 ವರ್ಷಗಳಿಂದ ಇಲ್ಲದ ವಿವಾದ ಈಗ ಆರಂಭವಾಗಿದ್ದು ಚರ್ಚೆಗೆ ಗ್ರಾಸವಾಗಿದೆ.

TAGGED:ChikkaballapurarssVeera SoudhaVidurashwathaಆರ್‍ಎಸ್‍ಎಸ್ಪೊಲೀಸ್ವಿದುರಾಶ್ವತ್ಥ ವೀರಸೌಧವೀರಸೌಧ
Share This Article
Facebook Whatsapp Whatsapp Telegram

Cinema news

Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories
The Devil
10,500ಕ್ಕೂ ಹೆಚ್ಚು ಪೈರಸಿ ಲಿಂಕ್ ಡಿಲಿಟ್ – ಡೆವಿಲ್ ಚಿತ್ರತಂಡ ಅಧಿಕೃತ ಪೋಸ್ಟ್
Bengaluru City Cinema Latest Main Post Sandalwood
Samantha Ruth Prabhu 1
ಮೊದಲು ನಿಧಿ ಅಗರ್ವಾಲ್‌, ನಂತ್ರ ಸಮಂತಾ – ಫ್ಯಾನ್ಸ್‌ನಿಂದಲೇ ಕಸಿವಿಸಿ
Cinema Latest South cinema Top Stories

You Might Also Like

DK Shivakumar 11
Bengaluru City

2027ರ ಡಿಸೆಂಬರ್ ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೋ ಮಾರ್ಗ ಸಂಚಾರ: ಡಿಕೆಶಿ

Public TV
By Public TV
13 seconds ago
Yellow Line Metro
Bengaluru City

ಹಳದಿ ಮಾರ್ಗದ ಮೆಟ್ರೋಗೆ ನಾಳೆ 6ನೇ ರೈಲು ಸೇರ್ಪಡೆ

Public TV
By Public TV
25 minutes ago
Chinnaswamy Stadium
Cricket

ಬೆಂಗಳೂರಿನ ಕೊಹ್ಲಿ ಫ್ಯಾನ್ಸ್‌ಗೆ ನಿರಾಸೆ – ಅಭಿಮಾನಿಗಳಿಲ್ಲದೇ ನಡೆಯುತ್ತಾ ವಿಜಯ್‌ ಹಜಾರೆ ಪಂದ್ಯ?

Public TV
By Public TV
48 minutes ago
Finance Ministry
Latest

ಕರ್ನಾಟಕಕ್ಕೆ ವಿಶೇಷ ಅನುದಾನ ಬಾಕಿ ಇರಿಸಿಕೊಂಡಿಲ್ಲ: ಕೇಂದ್ರ ಸ್ಪಷ್ಟನೆ

Public TV
By Public TV
48 minutes ago
indian railways
Bengaluru City

ಕೆಂಗೇರಿ, ಹೆಜ್ಜಾಲ ರೈಲ್ವೇ ನಿಲ್ದಾಣಗಳ ಮಧ್ಯೆ ಗರ್ಡರ್‌ ಆಳವಡಿಕೆ – ಕೆಲ ರೈಲುಗಳ ಸೇವೆ ರದ್ದು

Public TV
By Public TV
1 hour ago
Love with a married man Married woman commits live suicide Ballari
Bellary

ವಿವಾಹಿತನ ಜೊತೆ ಪ್ರೀತಿ, ಮದುವೆಗೆ ನಿರಾಕರಣೆ – ವಿವಾಹಿತೆ ಲೈವ್ ಸೂಸೈಡ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?