ಸದ್ಗುರು ಜೊತೆ ಮಂಡಿ ನೋವಿನ ಬಗ್ಗೆ ಹೇಳಿಕೊಂಡ ಸಿಎಂ

Public TV
1 Min Read
Sadhguru bommai

ಬರ್ನ್: ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ತೆರಳಿದ್ದಾರೆ. ಈ ವೇಳೆ ಬೊಮ್ಮಾಯಿ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಭೇಟಿ ಮಾಡಿದರು.

ಹವಾಮಾನ ಬದಲಾವಣೆ ಹಾಗೂ ಪರಿಸರ ಮಾಲಿನ್ಯ ಕುರಿತ ಗೋಷ್ಠಿಗೂ ಮುನ್ನ ಸದ್ಗುರು ಬೊಮ್ಮಾಯಿಯವರನ್ನು ಭೇಟಿ ಮಾಡಿದರು. ಸಿಎಂ ನಡೆದು ಬರುತ್ತಿದ್ದುದನ್ನು ನೋಡಿ ಸದ್ಗುರು ಏನಾಗಿದೆ ಎಂದು ವಿಚಾರಿಸಿದರು. ಈ ವೇಳೆ ಬೊಮ್ಮಾಯಿ ತಮ್ಮ ಮಂಡಿ ನೋವಿನ ಸಮಸ್ಯೆ ಬಗ್ಗೆ ಜಗ್ಗಿ ವಾಸುದೇವ್ ಬಳಿ ಹೇಳಿಕೊಂಡರು. ಇದನ್ನೂ ಓದಿ: ಪರಿಷತ್‌ ಚುನಾವಣೆ – ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಕಾಂಗ್ರೆಸ್-ಬಿಜೆಪಿಯಲ್ಲಿ ಇನ್ನೂ ಅಂತಿಮವಾಗದ ಅಭ್ಯರ್ಥಿಗಳು

Sadhguru bommai 2

ಶೃಂಗಸಭೆಯಲ್ಲಿ ಸಿಎಂ ಬೊಮ್ಮಾಯಿ ನೀಲಿ ಬಣ್ಣದ ಸೂಟ್ ಧರಿಸಿ ಮಿಂಚಿದ್ದಾರೆ. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಇಲಾಖೆ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಹಾಗೂ ಸಿಎಂ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಸಿಎಂಗೆ ಸಾತ್ ನೀಡಿದ್ದಾರೆ. ಇದನ್ನೂ ಓದಿ: ಕುವೆಂಪು, ನಾಡಗೀತೆಗೆ ಅವಮಾನ- ರೋಹಿತ್ ಚಕ್ರತೀರ್ಥರ ಮೇಲೆ ಮುಗಿಬಿದ್ದ ಕಾಂಗ್ರೆಸ್

Sadhguru bommai 1

ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾರತವನ್ನು ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿದ್ದಾರೆ. ಸಿಎಂ ಜೊತೆ 8 ಜನರ ತಂಡ ದಾವೋಸ್‌ಗೆ ತೆರಳಿದ್ದು, ಸಿಎಂ ಆದ ಬಳಿಕ ಬೊಮ್ಮಾಯಿಯವರಿಗೆ ಇದು ಮೊದಲ ವಿದೇಶ ಪ್ರವಾಸವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *