Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮೈಸೂರು ಸಕ್ಕರೆ ಕಾರ್ಖಾನೆಗೆ ಶೀಘ್ರ ಹಣ ಬಿಡುಗಡೆ ಮಾಡಲು ಸಿಎಂಗೆ ದಿನೇಶ್ ಗೂಳಿಗೌಡ ಒತ್ತಾಯ

Public TV
Last updated: May 28, 2022 3:59 pm
Public TV
Share
3 Min Read
basavaraj bommai dinesh guligowda
SHARE

– ಶಾಸಕ ದಿನೇಶ್ ಗೂಳಿಗೌಡರಿಗೆ ಸಕಾರತ್ಮಕವಾಗಿ ಸ್ಪಂದಿಸಿದ ಸಿಎಂ
– ಬಾಕಿ 46.25 ಕೋಟಿ ರೂ. ಬಿಡುಗಡೆಗೆ ಮನವಿ

ಬೆಂಗಳೂರು: ಮೈಸೂರು ಸಕ್ಕರೆ ಕಂಪನಿ ನಿಗಮದ ಮಂಡ್ಯ ಕಾರ್ಖಾನೆಗೆ 3.75 ಕೋಟಿ ರೂ.ವನ್ನು ಬಿಡುಗಡೆ ಮಾಡಿದ್ದು, ಬಾಕಿ ಇರುವ 46.25 ಕೋಟಿ ರೂ. ಹಣವನ್ನು ಕೂಡಲೇ ಬಿಡುಗಡೆ ಮಾಡಿ, ಕಬ್ಬು ನುರಿಯುವ ಕೆಲಸ ಪ್ರಾರಂಭಕ್ಕೆ ಚಾಲನೆ ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಂಡ್ಯ ಶಾಸಕ ದಿನೇಶ್ ಗೂಳಿಗೌಡ ಅವರು ಮನವಿಪತ್ರ ಸಲ್ಲಿಸಿದರು.

ಬೊಮ್ಮಾಯಿ ಅವರ ಸರ್ಕಾರಿ ನಿವಾಸದಲ್ಲಿ ಭೇಟಿ ಮಾಡಿದ ಮನವಿ ಸಲ್ಲಿಸಿದರು. ಈ ಸಂಬಂಧ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಶೀಘ್ರವೇ ಬಾಕಿ ಅನುದಾನಗಳನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದರು.

basavaraj bommai dinesh guligowda 1

ಪತ್ರದ ಸಾರಾಂಶ ಹೀಗಿದೆ: ಮಂಡ್ಯ ಜಿಲ್ಲೆ ಜನತೆಯ ಜೀವನಾಧಾರವಾಗಿರುವ ಮೈಸೂರು ಸಕ್ಕರೆ ಕಾರ್ಖಾನೆ ಪುನಾರಂಭ ಹಾಗೂ ಪುನಶ್ಚೇತನಕ್ಕಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 50 ಕೋಟಿ ರೂ.ವನ್ನು ಮೀಸಲಿಟ್ಟಿದ್ದು, ಅದರಲ್ಲಿ ಪ್ರಥಮ ಹಂತವಾಗಿ 15 ಕೋಟಿ ರೂ.ವನ್ನು ಬಿಡುಗಡೆಗೊಳಿಸಲಾಗುತ್ತದೆ ಎಂಬ ಆಶ್ವಾಸನೆಯನ್ನು ಸಾರ್ವಜನಿಕವಾಗಿ ನೀಡಲಾಗಿತ್ತು. ಆದರೆ, ಇದೀಗ ಕೇವಲ 3.75 ಕೋಟಿ ರೂ.ವನ್ನು ಮಾತ್ರವೇ ಬಿಡುಗಡೆ ಮಾಡಲಾಗಿದ್ದು, ಸದರಿ ಹಣ ಜನರ ನಿರೀಕ್ಷೆ ಮತ್ತು ಕಾರ್ಖಾನೆ ಪುನಾರ್ ಆರಂಭಿಸುವ ಕಾರ್ಯಕ್ಕೆ ತೊಡಕನ್ನುಂಟು ಮಾಡಿದೆ.

ಕಾರ್ಖನೆಯಲ್ಲಿ ಸಾಕಷ್ಟು ತಾಂತ್ರಿಕ ಹಾಗೂ ಆಡಳಿತಾತ್ಮಕ ತೊಂದರೆಗಳು ಇದ್ದು, ಈಗಾಗಲೇ ಕಾರ್ಖಾನೆ ಆರಂಭವಾಗದೆ ಸುಮಾರು 2 ವರ್ಷಗಳು ಕಳೆದಿವೆ. ಜೊತೆಗೆ ಸಾಕಷ್ಟು ಯಂತ್ರಗಳ ದುರಸ್ತಿಯಾಗಬೇಕಿದ್ದು, ಇನ್ನು ಹೊಸ ಯಂತ್ರೊಪಕರಣಗಳು ಅಥವಾ ಬಿಡಿಭಾಗಗಳು ಬೇಕಿರುತ್ತವೆ. ಜೊತೆಗೆ ಇನ್ನಿತರ ಮೂಲಭೂತ ಸೌಲಭ್ಯವನ್ನು ಒದಗಿಸಿ ಸುಸ್ಥಿತಿಗೆ ತರಬೇಕಿದ್ದು, ಈ ಎಲ್ಲಾ ಪ್ರಕ್ರಿಯೆಗೆ ಈಗ ಬಿಡುಗಡೆ ಮಾಡಿರುವ 3.75 ಕೋಟಿ ರೂ. ಯಾವುದಕ್ಕೂ ಸಾಕಾಗುವುದಿಲ್ಲ.

basavaraj bommai dinesh guligowda..

ಈಗ ಜೂನ್ ತಿಂಗಳ ಆರಂಭಿಕ ಹಂತದಲ್ಲಿದ್ದೇವೆ. ಜುಲೈ ಮಾಸಾಂತ್ಯದಲ್ಲಿ ಕಾರ್ಖಾನೆಯನ್ನು ಆರಂಭಗೊಳಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಕ್ಕರೆ ಸಚಿವರು ಭರವಸೆಯನ್ನು ನೀಡಿದ್ದಾರೆ. ಹೀಗಾಗಿ ಕಬ್ಬು ನುರಿಯಲು ಗರಿಷ್ಠ ಎಂದರೆ ಇನ್ನು ಎರಡರಿಂದ ಎರಡೂವರೆ ತಿಂಗಳ ಅವಕಾಶ ಮಾತ್ರ ಇದೆ. ಇಂತಹ ಸಂದರ್ಭದಲ್ಲಿ ಯಂತ್ರೋಪಕರಣಗಳನ್ನು ಸರಿಪಡಿಸಿ, ಸಿಬ್ಬಂದಿಯನ್ನು ನಿಯೋಜಿಸಿಕೊಂಡು ಕಾರ್ಯನಿರ್ವಹಣೆ ಮಾಡಬೇಕೆಂದರೆ ಕೆಲಸ ಕಾರ್ಯಗಳು ಚುರುಕಾಗಿ ನಡೆಯಬೇಕು. ಇದಕ್ಕೆ ಸಾಕಷ್ಟು ಹಣದ ಅವಶ್ಯಕತೆ ಇರುತ್ತದೆ. ಹಣ ಬಿಡುಗಡೆ ನಿಧಾನವಾಗುತ್ತಾ ಹೋದಂತೆ ಕಾರ್ಖಾನೆ ಆರಂಭವೂ ವಿಳಂಬವಾಗುತ್ತಾ ಹೋಗುತ್ತದೆ. ತೀರಾ ವಿಳಂಬವಾದರೆ ಕಾರ್ಖಾನೆ ಪ್ರಾರಂಭಿಸಿಯೂ ಯಾರಿಗೂ ಪ್ರಯೋಜನ ಇರುವುದಿಲ್ಲ. ಇದನ್ನೂ ಓದಿ: ಗೋ ಪೂಜೆ ಮಾಡುವವರು ಗೋಮಾಂಸ ತಿಂತೀನಿ ಅಂದ್ರೆ ಅವರಿಗಿಂತ ಕಟುಕ ಈ ಪ್ರಪಂಚದಲ್ಲಿ ಯಾರು ಇಲ್ಲ: ಆರ್.ಅಶೋಕ್

ಇನ್ನು ಬಂದಿರುವ ಪ್ರಾಥಮಿಕ ಮಾಹಿತಿ ಪ್ರಕಾರ 15 ಕೋಟಿ ರೂ. ಹಣಕಾಸು ಇಲಾಖೆಯಲ್ಲಿ ಮಂಜೂರಾಗಿದ್ದು, ಆದರೆ ಕೇವಲ 3.75 ಕೋಟಿ ರೂ. ಬಿಡುಗಡೆಯಾಗಿರುತ್ತದೆ. ಆದರೆ, ಉಳಿದ ಮೊತ್ತವನ್ನು ಸಹ ಶೀಘ್ರದಲ್ಲಿ ಬಿಡುಗಡೆ ಮಾಡಿದರೆ ಮುಂದಿನ ಚಟುವಟಿಕೆಗೆ ಅನುಕೂಲವಾಗಿ ಈ ಭಾಗದ ರೈತರಿಗೆ ಸೂಕ್ತ ಸಮಯದಲ್ಲಿ ಕಬ್ಬು ನುರಿಸಲು ಅನುಕೂಲವಾದಂತೆ ಆಗುತ್ತದೆ.

basavaraj bommai dinesh guligowda 2

ವಕಿರ್ಂಗ್ ಕ್ಯಾಪಿಟಲ್‍ಗೆ ವ್ಯವಸ್ಥೆ ಮಾಡಿ: ಯಾವುದೇ ಒಂದು ಕಾರ್ಖಾನೆ ಆರಂಭಕ್ಕೆ ಮೊದಲು ವರ್ಕಿಂಗ್ ಕ್ಯಾಪಿಟಲ್ ಇರುವುದು ಅತ್ಯವಶ್ಯಕ. ಈ ನಿಟ್ಟಿನಲ್ಲಿ ಬಜೆಟ್‍ನಲ್ಲಿಯೂ ಪ್ರಸ್ತಾಪವಾಗಿದೆ. ಬ್ಯಾಂಕ್ ಮೂಲಕ ವರ್ಕಿಂಗ್ ಕ್ಯಾಪಿಟಲ್‍ಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತಾದರೂ ಇನ್ನೂ ಆ ಬಗ್ಗೆ ಅಧಿಕೃತ ಕ್ರಮವಾಗಲಿ, ಆದೇಶವಾಗಲಿ ಹೊರಬಿದ್ದಿಲ್ಲ. ಇದನ್ನೂ ಓದಿ: ಕನ್ನಡಿಗರ ತಂಟೆಗೆ ಬಂದ್ರೆ ಹುಷಾರ್! – MES ಪುಂಡರಿಗೆ ಸಿಎಂ ಎಚ್ಚರಿಕೆ

ಕಾರ್ಖಾನೆ ಒಮ್ಮೆ ಪ್ರಾರಂಭವಾದ ಮೇಲೆ ಬರುವಂತಹ ಖರ್ಚು ವೆಚ್ಚಗಳು ಸೇರಿದಂತೆ ಕಾರ್ಖಾನೆಗೆ ಕಬ್ಬು ಹಾಕಿದ ರೈತರಿಗೆ ಹಣ ಪಾವತಿ ಮಾಡಲು ಅನುದಾನವು ಇರಬೇಕಾಗುತ್ತದೆ. ಈ ಮೂಲಕ ಸುಗಮವಾಗಿ ಚಾಲನೆಯನ್ನು ಮಾಡಬೇಕಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಕ್ರಮವಾಗಿಲ್ಲ. ಹೀಗಾಗಿ ಈ ಎಲ್ಲಾ ವಿಷಯಗಳ ನಿಟ್ಟಿನಲ್ಲಿ ಗಮನಹರಿಸಿ, ಕಾರ್ಖಾನೆಗೆ ಬಾಕಿ ಇರುವ ಅನುದಾನವನ್ನು ಬಿಡುಗಡೆ ಮಾಡುವುದಲ್ಲದೆ, ಸಂಪೂರ್ಣ 50 ಕೋಟಿ ರೂ.ವನ್ನು (ಅಂದರೆ ಬಾಕಿ 46.25 ಕೋಟಿ ರೂ.) ಆದಷ್ಟು ಶೀಘ್ರವಾಗಿ ಬಿಡುಗಡೆಗೊಳಿಸಿ ರೈತರ ನೆರವಿಗೆ ದಾವಿಸಬೇಕು ಎಂದು ಮಂಡ್ಯ ಜಿಲ್ಲೆಯ ರೈತರ ಪರವಾಗಿ ಮನವಿ ಮಾಡಿದರು.

TAGGED:Basavaraj Bommaidinesh guligowdamandyaMysugar Factoryದಿನೇಶ್ ಗೂಳಿಗೌಡಬಸವರಾಜ ಬೊಮ್ಮಾಯಿಮಂಡ್ಯಮೈಶುಗರ್
Share This Article
Facebook Whatsapp Whatsapp Telegram

Cinema Updates

Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
49 minutes ago
jayam ravi
ವದಂತಿ ಗೆಳತಿ ಜೊತೆ ಹಾರ ಹಾಕಿಸಿಕೊಂಡ ಜಯಂ ರವಿ
50 minutes ago
Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
1 day ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
2 days ago

You Might Also Like

kea
Bengaluru City

DCET: ಅರ್ಜಿ ತಿದ್ದುಪಡಿಗೆ ಜೂ.8ರವರೆಗೆ ಅವಕಾಶ – ಕೆಇಎ

Public TV
By Public TV
36 minutes ago
Mahua Moitra Pinaki Misra
Latest

ಬಿಜೆಡಿ ಮಾಜಿ ಸಂಸದನ ಮದುವೆಯಾದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ – ಜರ್ಮನಿಯಲ್ಲಿ ಮದುವೆಯಾಗಿರುವ ಫೋಟೋ ವೈರಲ್

Public TV
By Public TV
57 minutes ago
bengaluru stambede 1
Bengaluru City

ಬೆಳಗ್ಗಿನ ಜಾವ 4 ಗಂಟೆ ವರೆಗೆ ಕೆಲಸ ಮಾಡಿದ್ದ ಪೊಲೀಸರಿಗೆ ಮತ್ತೆ ಬಂದೋಬಸ್ತ್‌ ನೀಡಲು ಆಗ್ತಿತ್ತಾ? – ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

Public TV
By Public TV
1 hour ago
Shivam Death ElectricShock
Bengaluru City

ಕಲ್ಯಾಣಮಂಟಪದ ಏರ್ ಕೂಲರ್‌ನಿಂದ ಎಲೆಕ್ಟ್ರಿಕ್ ಶಾಕ್ – 4 ವರ್ಷದ ಮಗು ದುರ್ಮರಣ

Public TV
By Public TV
2 hours ago
Chinnaswamy Stampede
Bengaluru City

Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

Public TV
By Public TV
2 hours ago
RCB
Bengaluru City

Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಗಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?