Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೋಹಿತ್ ಚಕ್ರತೀರ್ಥ ವಜಾ? – ಸಚಿವರ ವರದಿ ಆಧರಿಸಿ ಕ್ರಮ ಕೈಗೊಳ್ತೇನೆಂದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೋಹಿತ್ ಚಕ್ರತೀರ್ಥ ವಜಾ? – ಸಚಿವರ ವರದಿ ಆಧರಿಸಿ ಕ್ರಮ ಕೈಗೊಳ್ತೇನೆಂದ ಸಿಎಂ

Bengaluru City

ರೋಹಿತ್ ಚಕ್ರತೀರ್ಥ ವಜಾ? – ಸಚಿವರ ವರದಿ ಆಧರಿಸಿ ಕ್ರಮ ಕೈಗೊಳ್ತೇನೆಂದ ಸಿಎಂ

Public TV
Last updated: May 31, 2022 10:35 pm
Public TV
Share
2 Min Read
Text book
SHARE

– ಚಕ್ರತೀರ್ಥ ಮೇಲೆ ನಾಳೆ ಕ್ರಮ ಆಗುತ್ತಾ?

ಬೆಂಗಳೂರು: ಪಠ್ಯ ಪರಿಷ್ಕರಣೆ ವಿಚಾರವಾಗಿ ದಿನಕ್ಕೊಂದು ವಿವಾದ ಭುಗಿಲೇಳುತ್ತಿದ್ದು, ರಾಜ್ಯ ಸರ್ಕಾರ ತೀವ್ರ ಒತ್ತಡ ಎದುರಿಸುತ್ತಿರುವಂತೆ ಕಾಣುತ್ತಿದೆ. ಅದ್ರಲ್ಲೂ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ತಲೆದಂಡಕ್ಕೆ ದಿನೇ ದಿನೇ ಆಗ್ರಹ ಹೆಚ್ಚುತ್ತಿದೆ.

BOMMAI 3

ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ ಸೇರಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಲೇ ಇವೆ. ರಾಷ್ಟ್ರಕವಿ ಕುವೆಂಪುರನ್ನು ಅಪಮಾನಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದ ಆದಿಚುಂಚನಗಿರಿ ಶ್ರೀಗಳ ಮನವೊಲಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಆದರೆ ಅದೂ ಫಲ ಕೊಟ್ಟಂತೆ ಕಾಣುತ್ತಿಲ್ಲ. ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್‍ನಲ್ಲಿ ಬಹಳ ಜನ ಸ್ನೇಹಿತರಿದ್ದಾರೆ- ರಾಜಕೀಯ ದಾಳ ಉರುಳಿಸಿದ ಸಿಎಂ

ನಿನ್ನೆ ಸಚಿವ ಬಿ.ಸಿ.ನಾಗೇಶ್ ಆದಿಚುಂಚನಗಿರಿ ಮಠಕ್ಕೆ ಭೇಟಿ ಕೊಟ್ಟಿದ್ರು. ಇಂದು ಪಠ್ಯಪುಸ್ತಕ ನಿರ್ದೇಶನಾಲಯದ ನಿರ್ದೇಶಕ ಮಾದೇಗೌಡ ನೇತೃತ್ವದ ತಂಡ ಶ್ರೀಗಳನ್ನು ಭೇಟಿ ಮಾಡಿ ಕುವೆಂಪು ಪಠ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ನಡುವೆ ಬಸವಣ್ಣಗೆ ಪಠ್ಯದಲ್ಲಿ ಅಪಮಾನ ಮಾಡಲಾಗಿದೆ. ಲಿಂಗಾಯತ ಧರ್ಮದ ಬಗ್ಗೆ ತಪ್ಪು ಕಲ್ಪನೆ ಬರುವಂತೆ ಪಠ್ಯ ಪರಿಷ್ಕರಣೆ ಮಾಡಲಾಗಿದೆ. ಕೂಡಲೇ ಇದನ್ನೆಲ್ಲಾ ಹಿಂಪಡೆದು, ಹಳೆಯ ಪಠ್ಯ ಮುಂದುವರೆಸಬೇಕು. ಇಲ್ಲ ಅಂದ್ರೆ ಹೋರಾಟ ಮಾಡಬೇಕಾಗುತ್ತದೆ ಎಂದು ಸಾಣೆಹಳ್ಳಿ ಶ್ರೀಗಳು ಪತ್ರ ಬರೆದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

TEXTBOOK

ಕೂಡಲಸಂಗಮ ಶ್ರೀಗಳು ಕೂಡ, ಪಠ್ಯದಲ್ಲಿ ಬಸವಣ್ಣನವರ ಬಗ್ಗೆ ಇರೋದನ್ನು ನೋಡಿ ಎದೆಗೆ ಕಲ್ಲು ಹೊಡೆದಂಗೆ ಆಗಿದೆ. ಕುವೆಂಪು, ಬಸವಣ್ಣ ತತ್ವಗಳಿಗೆ ಅಪಚಾರ ಎಸಗಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಈ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ರದ್ದು ಮಾಡುವಂತೆ ಒತ್ತಾಯಿಸಿ ಸಿಎಂಗೆ ಪತ್ರ ಬರೆದಿದ್ದಾರೆ.

ಈ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ವಿವಾದ ರಹಿತ ವ್ಯಕ್ತಿಗಳಿಗೆ ಸಮಿತಿಯಲ್ಲಿ ಜಾಗ ಕೊಡ್ಬೇಕು ಎಂದಿದ್ದಾರೆ. ಈ ಬೆನ್ನಲ್ಲೇ ಮಾತನಾಡಿದ ಸಿಎಂ, ಸಮಿತಿಯಿಂದ ರೋಹಿತ್ ಚಕ್ರತೀರ್ಥ ಸದಸ್ಯತ್ವ ವಜಾ ಬಗ್ಗೆ ನಾಳೆ ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: 21 ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ – ಕರ್ನಾಟಕಕ್ಕೆ 8 ಸಾವಿರ ಕೋಟಿ ಬಿಡುಗಡೆ

CM Basavaraja Bommai

ಸಾಣೆಹಳ್ಳಿ ಸ್ವಾಮೀಜಿಗಳೊಂದಿಗೆ ಮಾತನಾಡಿ ಗೊಂದಲ ಬಗೆಹರಿಸೋದಾಗಿ ಶಿಕ್ಷಣ ಸಚಿವರು ತಿಳಿಸಿದ್ದಾರೆ. ಕುವೆಂಪು ಬಗ್ಗೆ ಅಪಮಾನ ಮಾಡಲಾಗಿದೆ ಅನ್ನೋ ಆರೋಪಕ್ಕೆ ರೋಹಿತ್ ಚಕ್ರತೀರ್ಥರಿಂದ ಸ್ಪಷ್ಟೀಕರಣ ನೀಡಿದ್ದು, ಕುವೆಂಪು ಅವರಿಗೆ ಅಪಮಾನ ಮಾಡಿಲ್ಲ ಎಂದಿದ್ದಾರೆ. 2017ರಲ್ಲಿ ವಾಟ್ಸಪ್ ಮೂಲಕ ಬಂದ ನಾಡಗೀತೆ ಧಾಟಿಯ ನಾಲ್ಕು ಸಾಲುಗಳನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದೆ ಅಷ್ಟೇ. ಆದ್ರೆ, ಇದನ್ನು ಕೆಲವರು ತಮಗೆ ಬೇಕಾದಂತೆ ತಿರುಚಿದ್ದಾರೆ. ಪೊಲೀಸ್ ಇಲಾಖೆ ಕೂಡ ಪ್ರಕರಣ ಕೈಬಿಟ್ಟಿದೆ. ಹಳೆಯ ಪ್ರಕರಣವನ್ನು ಮತ್ತೆ ಕೆದಕಿ ವಿವಾದವಾಗಿಸಿದ್ದು ವಿಷಾದನೀಯ ಎಂದಿದ್ದಾರೆ.

ಮೈಸೂರು ರಾಜವಂಶ ಯದುವೀರ್ ಮಾತ್ರ, ಲೆಫ್ಟು ಬೇಡ, ರೈಟೂ ಬೇಡ. ಇತಿಹಾಸವನ್ನು ಇತಿಹಾಸವಾಗಿಯೇ ಭೋದಿಸಿ ಎಂದು ಸಲಹೆ ನೀಡಿದ್ದಾರೆ.

TAGGED:Basavaraj BommaiBC NageshDK ShivakumarKPCCnirmalananda swamijirohith chakrathirthashobha karandlajetextbookYaduveer Krishnamatha Chamaraja Wodeyarಕೆಪಿಸಿಸಿಡಿ.ಕೆ.ಶಿವಕುಮಾರ್ನಿರ್ಮಲಾನಂದ ಸ್ವಾಮೀಜಿಪಠ್ಯಪುಸ್ತಕಬಸವರಾಜ ಬೊಮ್ಮಾಯಿಬಿ.ಸಿ.ನಾಗೇಶ್ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ರೋಹಿತ್‌ ಚಕ್ರತೀರ್ಥಶೋಭಾ ಕರಂದ್ಲಾಜೆ
Share This Article
Facebook Whatsapp Whatsapp Telegram

Cinema news

Gilli
BBK Season 12 Winner | ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟ ಗಿಲ್ಲಿ
Bengaluru City Cinema Latest Main Post TV Shows
Ashwini Gouda 1
BBK Season 12 | ಬಿಗ್‌ ಮನೆಯ ಫೈಯರ್‌ ಬ್ರ್ಯಾಂಡ್‌ ಅಶ್ವಿನಿ ಗೌಡಗೆ 3ನೇ ಸ್ಥಾನ!
Cinema Latest Main Post TV Shows
Gilli Kavya
ಗಿಲ್ಲಿ ಹೇಳಿದಾಗ ಕಾಣಿಸಿಕೊಳ್ಳೋಕೆ ಇದು ಕಪಲ್‌ ಶೋ ಅಲ್ಲ – ಆಚೆ ಬರ್ತಿದ್ದಂತೆ ಕ್ಲ್ಯಾರಿಟಿ ಕೊಟ್ಟ ಕಾವು!
Bengaluru City Cinema Latest Top Stories TV Shows
Kavya 01
BBK Season 12 | 3ನೇ ರನ್ನರ್‌ಅಪ್‌ ಕಾವ್ಯ ಶೈವ ಔಟ್‌ – ಸಿಕ್ಕ ಬಹುಮಾನ ಎಷ್ಟು?
Bengaluru City Cinema Latest Main Post TV Shows

You Might Also Like

Pralhad Joshi Davos WEF Meeting
Latest

ವಿಶ್ವ ಆರ್ಥಿಕ ವೇದಿಕೆ ಸಭೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Public TV
By Public TV
28 seconds ago
Ind vs NZ 1
Cricket

ಭಾರತದ ನೆಲದಲ್ಲಿ ಫಸ್ಟ್‌ ಟೈಮ್‌ ಏಕದಿನ ಸರಣಿ ಗೆದ್ದ ಕಿವೀಸ್‌; ಚೇಸ್‌ ಮಾಸ್ಟರ್‌ ಶತಕದ ಹೋರಾಟ ವ್ಯರ್ಥ!

Public TV
By Public TV
1 hour ago
Raghu
Cinema

BBK Season 12 | ಗ್ರ್ಯಾಂಡ್‌ ಫಿನಾಲೆಯಿಂದ ರಗಡ್‌ ರಘು ಔಟ್‌

Public TV
By Public TV
3 hours ago
AR Rahman 2
Bollywood

ಭಾರತ ನನ್ನ ಸ್ಫೂರ್ತಿ, ತವರು – ಕೆಲವೊಮ್ಮೆ ಉದ್ದೇಶಗಳನ್ನು ತಪ್ಪಾಗಿ ಅರ್ಥೈಸಲ್ಪಡಬಹುದು: ರೆಹಮಾನ್ ಸ್ಪಷ್ಟನೆ

Public TV
By Public TV
4 hours ago
Dhanush Gowda
Cinema

BBK 12 | Top-5 ಪಟ್ಟದಿಂದ ಔಟ್‌ – ಗ್ರ್ಯಾಂಡ್‌ ಫಿನಾಲೆಯಿಂದ ಹೊರಬಂದ ಧನುಷ್‌

Public TV
By Public TV
4 hours ago
Narendra Modi
Latest

ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಶಿಕ್ಷೆಯಾಗಲೇಬೇಕು, ‘ಮಹಾ ಜಂಗಲ್ ರಾಜ್’ ಯುಗ ಕೊನೆಗೊಳಿಸಬೇಕು: ಮೋದಿ ಕರೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?