ಕಾಂಗ್ರೆಸ್‌ಗೆ ಬ್ರಿಜೇಶ್‌ ಕಾಳಪ್ಪ ರಾಜೀನಾಮೆ

Public TV
1 Min Read
Brijesh Kalappa

ಬೆಂಗಳೂರು: ಕಾಂಗ್ರೆಸ್‌ ನಾಯಕ, ಸುಪ್ರೀಂ ಕೋರ್ಟ್‌ ವಕೀಲ ಬ್ರಿಜೇಶ್‌ ಕಾಳಪ್ಪ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ವಕ್ತಾರರಾಗಿದ್ದ ಬ್ರಿಜೇಶ್‌ ಕಾಳಪ್ಪ ಅವರು ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವಕಾಶ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನೇರವಾಗಿ ಪತ್ರ ಬರೆದು ತನ್ನ ನಿರ್ಧಾರವನ್ನು ತಿಳಿಸಿದ್ದಾರೆ. ಬ್ರಿಜೇಶ್‌ ಕಾಳಪ್ಪ ಆಮ್‌ ಆದ್ಮಿ ಪಕ್ಷವನ್ನು ಸೇರುವ ಸಾಧ್ಯತೆಯಿದೆ.

congress flag

ರಾಜೀನಾಮೆ ಪತ್ರದಲ್ಲಿ ಏನಿದೆ?
ಗೌರವಾನ್ವಿತ ಮೇಡಂ,
ಆರಂಭದಲ್ಲಿ ನೀವು ನನಗೆ ಒದಗಿಸಿದ ಹಲವಾರು ಅವಕಾಶಗಳಿಗಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ. ರಾಷ್ಟ್ರದ ಎಲ್ಲಾ ಭಾಗಗಳಲ್ಲಿ ನಾನು ಪರಿಚಿತನಾಗಿ ಅದು ನಿಮ್ಮ ಪ್ರೋತ್ಸಾಹದಿಂದ. ಈ ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು.

ಮತ್ತೊಮ್ಮೆ ನಿಮ್ಮ ಆಶೀರ್ವಾದದಿಂದ ನಾನು ಸಚಿವ ಸ್ಥಾನಮಾನ ಇರುವ ಕರ್ನಾಟಕ ಸರ್ಕಾರದ ಕಾನೂನು ಸಲಹೆಗಾರನಾಗಿ ನೇಮಕಗೊಂಡಿದ್ದೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಗರ್ಭಗುಡಿಗೆ ಇಂದು ಯೋಗಿ ಶಂಕುಸ್ಥಾಪನೆ

Brijesh Kalappa FACEBOOK POST

2013 ರಿಂದ ಹಿಂದಿ, ಇಂಗ್ಲಿಷ್ ಮತ್ತು ಕನ್ನಡ ಚಾನೆಲ್‌ಗಳಲ್ಲಿ ಯುಪಿಎ ಸರ್ಕಾರವನ್ನು ಪ್ರತಿನಿಧಿಸಿದ್ದೇನೆ. ಸುಮಾರು ಒಂದು ದಶಕದ ಕಾಲ ನಾನು 6,497 ಚರ್ಚೆಗಳನ್ನು ನಡೆಸಿದ್ದೇನೆ. ಪಕ್ಷ ನೀಡಿದ ರಾಜಕೀಯ ಕೆಲಸವನ್ನು ನಾನು ಸರಿಯಾಗಿ ನಿರ್ವಹಿಸಿದ್ದು, ನನಗೆ ತೃಪ್ತಿ ಸಿಕ್ಕಿದೆ. ಟಿವಿ ಚರ್ಚೆಗಳಲ್ಲಿ ನಾನು ಎಂದಿಗೂ ಪೂರ್ವ ತಯಾರಿ ಇಲ್ಲದೇ ಭಾಗವಹಿಸುತ್ತಿರಲಿಲ್ಲ.

2014 ಮತ್ತು 2019ರ ಸೋಲಿನ ಬಳಿಕ ಪಕ್ಷಕ್ಕೆ ಕೆಟ್ಟ ಸಮಯ ಬಂದರೂ ನಾನು ಉತ್ಸಾಹವನ್ನು ಕಳೆದುಕೊಂಡಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ನಾನು ಉತ್ಸಾಹ ಕಳೆದುಕೊಂಡಿದ್ದೇನೆ. ಹೀಗಾಗಿ 1997 ರಿಂದ ಆರಂಭವಾದ ಪಕ್ಷ ನಂಟಿಗೆ ಕೊನೆ ಹೇಳುತ್ತಿದ್ದು,  ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ.

Share This Article
Leave a Comment

Leave a Reply

Your email address will not be published. Required fields are marked *