ಕಿಯಾರಾಗೆ ಸಿದ್ಧಾರ್ಥ್ ಮಲ್ಹೋತ್ರಾ ಕ್ಲಾಸ್: ಅಷ್ಟಕ್ಕೂ ಆಗಿದ್ದೇನು?

Public TV
2 Min Read
kaira

ಬಾಲಿವುಡ್ ಬ್ಯೂಟಿ ಕಿಯಾರಾ ಅಡ್ವಾಣಿ `ಭೂಲ್ ಭುಲಯ್ಯ’ ಸಕ್ಸಸ್ ಖುಷಿಯಲ್ಲಿದ್ದಾರೆ. ಸಿನಿಮಾ ವಿಚಾರದ ಜೊತೆ ವಯಕ್ತಿಕ ವಿಚಾರವಾಗಿಯೂ ಕಿಯಾರಾ ಸುದ್ದಿಯಲ್ಲಿದ್ದಾರೆ. ಕಿಯಾರಾ ಮತ್ತು ಸಿದ್ಧಾರ್ಥ್ ಕುರಿತು ಹೊಸ ವಿಚಾರ ಇದೀಗ ಸೌಂಡ್ ಮಾಡುತ್ತಿದೆ.

siddarth 1

ಬಿಟೌನ್‌ನಲ್ಲಿ ಸಿದ್ಧಾಥ್ ಮತ್ತು ಕಿಯಾರಾ ಲವ್ವಿ ಡವ್ವಿ ಬಗ್ಗೆ ಸಾಕಷ್ಟು ವಿಚಾರಗಳು ಈಗಾಗಲೇ ಹರಿದಾಡುತ್ತಾ ಇದೆ. ಬ್ರೇಕಪ್ ಮಾಡಿಕೊಂಡಿದ್ದ ಈ ಜೋಡಿ ಮತ್ತೆ ಒಂದಾಗಿದ್ದಾರೆ ಅನ್ನೋ ಸುದ್ದಿ ಕೂಡ ಇದೆ. ಈ ಬೆನ್ನಲ್ಲೇ ಕಿಯಾರಾಗೆ ಸಿದ್ಧಾರ್ಥ್ ಬೈತಾರಂತೆ ಅನ್ನೋ ವಿಚಾರವನ್ನ ನಿರ್ದೇಶಕ ಕಮಾಲ್ ಆರ್ ಖಾನ್ ಹೇಳಿದ್ದಾರೆ. ಇದನ್ನೂ ಓದಿ: ಜೂನ್ 3ಕ್ಕೆ ತೆರೆಮೇಲೆ ಸಂದೀಪ್ ಉನ್ನಿಕೃಷ್ಣನ್ ಜೀವನಚರಿತ್ರೆ

siddarth kiara 8

ಈಗ ಕಿಯಾರಾ ಮತ್ತು ಸಿದ್ಧಾರ್ಥ್ ಬಗ್ಗೆ ಮಾತನಾಡಿರುವ ನಿರ್ದೇಶಕ ಕಮಾಲ್ ಖಾನ್ ಸದಾ ವಿವಾದಗಳಿಂದ ಸುದ್ದಿ ಆಗುತ್ತಾರೆ. ಬೇರೆ ನಟ, ನಟಿಯರ ಬಗ್ಗೆ ಮಾತನಾಡಿ ಕಾಲೆಳೆಯುವ ಕೆಲಸ ಮಾಡುತ್ತಾರೆ. ಅಂತೆಯೇ ಈಗ ಕಮಾಲ್ ಆರ್ ಖಾನ್ ಈಗ ಕಿಯಾರಾ ತನ್ನ ಬಗ್ಗೆ ಮಾಡಿದ್ದ ಟ್ವೀಟ್ ಡಿಲೀಟ್ ಮಾಡಲು ಕಾರಣ ಸಿದ್ಧಾರ್ಥ್ ಮಲ್ಹೋತ್ರ ಎಂದಿದ್ದಾರೆ. ಕಮಾಲ್ ಖಾನ್ ತಮ್ಮ ಜೀವನ ಚರಿತ್ರೆಯ ಪುಸ್ತಕವನ್ನು ಬಿಡುಗಡೆಗೊಳಿಸಿದ್ದಾರೆ. ಅಮಿತಾಬ್ ಬಚ್ಚನ್ ಈ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ಹಾಗಾಗಿ ಕಮಾಲ್ ಖಾನ್‌ಗೆ ಶುಭಕೋರಿ ಕಿಯಾರಾ ಟ್ವೀಟ್ ಮಾಡಿದ್ದರು. ಆದರೆ 10 ನಿಮಿಷದಲ್ಲಿ ಈ ಟ್ವೀಟ್ ಡಿಲೀಟ್ ಮಾಡಿದ್ದಾರೆ.

ಕಿಯಾರಾ ಟ್ವೀಟ್ ಡಿಲೀಟ್ ಮಾಡಲು ಕಾರಣ ಏನು ಎಂದು ನಾನು ಕೇಳಿದೆ. ಆಗ ಕಿಯಾರಾ, ಸಿದ್‌ಗೆ ಕೋಪ ಬಂದಿದೆ. ಇದನ್ನು ಡಿಲೀಟ್ ಮಾಡಲು ಸಿದ್ಧಾರ್ಥ್ ಮಲ್ಹೋತ್ರಾ ಹೇಳಿದ್ದಾರೆ. ಈ ಮೂಲಕ ಕಿಯಾರಾಗೆ ಸಿದ್ಧಾರ್ಥ್ ಮಲ್ಹೋತ್ರಾ ಬೈಯುತ್ತಾರೆ ಎಂಬ ವಿಚಾರವನ್ನ ಕಮಲ್ ಖಾನ್ ತಿಳಿಸಿದ್ದಾರೆ. ಇದೀಗ ಸೋಷಿಯಲ್ ಮೀಡಿಯಾ ತುಂಬೆಲ್ಲಾ ಈ ಸುದ್ದಿಯೇ ಜೋರಾಗಿದೆ.

Share This Article
Leave a Comment

Leave a Reply

Your email address will not be published. Required fields are marked *