Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ಹೆಜ್ಜೆಯತ್ತ ದಾದಾ – ಗಂಗೂಲಿ ರಾಜಕೀಯ ಪ್ರವೇಶ ಫಿಕ್ಸ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಹೊಸ ಹೆಜ್ಜೆಯತ್ತ ದಾದಾ – ಗಂಗೂಲಿ ರಾಜಕೀಯ ಪ್ರವೇಶ ಫಿಕ್ಸ್?

Cricket

ಹೊಸ ಹೆಜ್ಜೆಯತ್ತ ದಾದಾ – ಗಂಗೂಲಿ ರಾಜಕೀಯ ಪ್ರವೇಶ ಫಿಕ್ಸ್?

Public TV
Last updated: June 1, 2022 10:49 pm
Public TV
Share
3 Min Read
Sourav Ganguly
SHARE

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ನೀಡಿದ್ದಾರೆ ಎಂಬ ವದಂತಿಯೊಂದು ಹರಿದಾಡುತ್ತಿದೆ. ಇದಕ್ಕೆ ಕಾರಣ ಗಂಗೂಲಿಯ ಒಂದು ಟ್ವೀಟ್. ಆ ಬಳಿಕ ಇದೀಗ ಗಂಗೂಲಿ ರಾಜಕೀಯಕ್ಕೆ ಎಂಟ್ರಿಕೊಡುವುದು ಖಚಿತ ಎಂಬ ಮಾತು ಎಲ್ಲಡೆ ಕೇಳಿ ಬರುತ್ತಿದೆ.

Sourav Ganguly 1

ಹೌದು ಕ್ರಿಕೆಟ್‍ನಲ್ಲಿ ಭಾರತ ತಂಡದ ನಾಯಕನಾಗಿ ಯಶಸ್ವಿಯಾಗಿ ಮುನ್ನಡೆಸಿದ ಗಂಗೂಲಿ, 2019ರಲ್ಲಿ ತಮಗೆ ಒಲಿದು ಬಂದ ಬಿಸಿಸಿಐ ಅಧ್ಯಕ್ಷ ಪಟ್ಟವನ್ನು ಕೂಡ ಉತ್ತಮವಾಗಿ ನಿಭಾಯಿಸಿ ಹಲವು ಬದಲಾವಣೆಗಳೊಂದಿಗೆ ಯಶಸ್ಸಿನ ಮೇಟ್ಟಿಲೇರಿಸಿದ್ದಾರೆ. ಈ ನಡುವೆ ಇಂದು ದಿಢೀರ್ ಆಗಿ ಒಂದು ಟ್ವೀಟ್ ಮಾಡಿದ ಗಂಗೂಲಿ, 1992ರಲ್ಲಿ ನನ್ನ ಕ್ರಿಕೆಟ್ ವೃತ್ತಿ ಜೀವನ ಆರಂಭಗೊಂಡು ಇದೀಗ 2022ಕ್ಕೆ 30 ವರ್ಷಗಳು ಸಂದಿದೆ. ಅಲ್ಲಿಂದ ಇಲ್ಲಿವರೆಗೂ ಕ್ರಿಕೆಟ್ ನನಗೆ ಎಲ್ಲವನ್ನೂ ಕೊಟ್ಟಿದೆ. ಎಲ್ಲಕ್ಕಿಂತ ಹೆಚ್ಚಾಗಿ ಪ್ರತಿಯೊಬ್ಬರ ಬೆಂಬಲ ನನಗೆ ಸಿಕ್ಕಿದೆ. ನನ್ನ ಕ್ರಿಕೆಟ್ ವೃತ್ತಿ ಬದುಕಿಗೆ ಸಹಕರಿಸಿದ, ನಾನು ಈ ಸ್ಥಾನಕ್ಕೆ ಬರಲು ಬೆಂಬಲ ನೀಡಿ ಪ್ರೋತ್ಸಾಹಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಸಲ್ಲಿಸಲು ಬಯಸುತ್ತೇನೆ. ನಾನು ಇಂದು ಇನ್ನೊಂದು ಹೊಸ ಪ್ರಾರಂಭದ ಹೆಜ್ಜೆಯನ್ನಿಟ್ಟಿದ್ದು ಇದು ಹಲವರಿಗೆ ನೆರವಾಗಲಿದೆ ಎನ್ನುವ ವಿಶ್ವಾಸ ನನಗಿದೆ. ನನ್ನ ಹೊಸ ಪ್ರಯತ್ನಕ್ಕೆ ನಿಮ್ಮಲ್ಲರ ಬೆಂಬಲ ಪ್ರೋತ್ಸಾಹ ಹೀಗೆ ಮುಂದುವರಿಯಲಿ ಎಂದು ನಾನು ಬೇಡಿಕೊಳ್ಳುತ್ತಿದ್ದೇನೆ ಎಂದಿದ್ದರು. ಇದನ್ನೂ ಓದಿ: ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ರಾಜೀನಾಮೆ ನೀಡಿಲ್ಲ: ಜಯ್ ಶಾ ಸ್ಪಷ್ಟನೆ

SOURAVGANGULY AMITH SHA

ಪೋಸ್ಟ್ ನೋಡಿದ ಪ್ರತಿಯೊಬ್ಬರು ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಗುಡ್‍ಬೈ ಹೇಳಿ ಆರಂಭಿಸುವ ಹೊಸ ಅಧ್ಯಾಯ ಯಾವುದು ಎಂಬ ಕುತೂಹಲದಲ್ಲಿದ್ದಾರೆ. ಆದರೆ ಗಂಗೂಲಿ ರಾಜೀನಾಮೆ ಕೊಟ್ಟಿಲ್ಲ ಎಂದು ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಯ್ ಶಾ, ಗಂಗೂಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ತಿಳಿಸಿದ್ದಾರೆ.

Sourav Ganguly 2

ಈ ನಡುವೆ ಗಂಗೂಲಿ ಟ್ವೀಟ್ ಬಗ್ಗೆ ಹಲವು ಅನುಮಾನಗಳು ಎದ್ದಿದ್ದು, ಗಂಗೂಲಿ ರಾಜಕೀಯ ಪ್ರವೇಶ ಮಾಡುತ್ತಾರೆ ಎಂಬ ಮಾತು ಮತ್ತೆ ಮುನ್ನೆಲೆಗೆ ಬಂದಿದೆ. 2015 ರಿಂದಲೂ ಬಂಗಾಳದಲ್ಲಿ ಗಂಗೂಲಿ ಬಿಜೆಪಿ ಪರವಾಗಿ ಚುನಾವಣೆಯ ಅಖಾಡಕ್ಕೆ ಧುಮುಕಲಿದ್ದಾರೆ. ದಾದಾ ಬಿಜೆಪಿ ಸೇರಿ ದೀದಿಗೆ ಟಕ್ಕರ್ ನೀಡಲಿದ್ದಾರೆ ಎಂಬ ಮಾತು ವ್ಯಾಪಕವಾಗಿ ಕೇಳಿಬರುತ್ತಿತ್ತು. 2021ರ ಬಂಗಾಳ ವಿಧಾನಸಭಾ ಚುನಾವಣೆಗೂ ಮೊದಲು ಗಂಗೂಲಿ ಬಿಜೆಪಿ ಸೇರಲಿದ್ದಾರೆ ಎಂದು ವರದಿಯಾಗಿತ್ತು. ಆ ಬಳಿಕ ಗಂಗೂಲಿಗೆ ಲಘು ಹೃದಯಾಘಾತವಾಯಿತು. ನಂತರ ರಾಜಕೀಯ ಪ್ರವೇಶಿಸುವ ಗಾಳಿಸುದ್ದಿಗೆ ಬ್ರೇಕ್ ಬಿದ್ದಿತ್ತು. ಆ ಬಳಿಕ ಕೆಲ ತಿಂಗಳ ಹಿಂದೆ ಗಂಗೂಲಿ ಮನೆಗೆ ಅಮಿತ್ ಶಾ ಭೇಟಿ ನೀಡಿದ್ದರು. ಶಾ ಭೇಟಿ ರಾಜಕೀಯ ಚರ್ಚೆಗೆ ಗ್ರಾಸವಾಗಿತ್ತು. ಆದಾದ ಬಳಿಕ ಇದೀಗ ದಾದಾ ಮಾಡಿರುವ ಟ್ವೀಟ್ ರಾಜಕೀಯ ಎಂಟ್ರಿಗೆ ಪುಷ್ಠಿ ಕೊಡುತ್ತಿದೆ. ದಾದಾರ ಹೊಸ ಹೆಜ್ಜೆ ರಾಜಕೀಯ ಪ್ರವೇಶ ಎಂಬ ಮಾತು ಆರಂಭವಾಗಿದೆ. ರಾಜಕೀಯ ರಂಗದಲ್ಲಿ ಹೊಸ ಇನ್ಸಿಂಗ್ಸ್ ಆರಂಭಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ, ಬಿಜೆಪಿಯಿಂದ ರಾಜ್ಯಸಭೆಗೆ ಸೌರವ್ ಗಂಗೂಲಿ ಹೋಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇದನ್ನೂ ಓದಿ: ಎಂ.ಎಸ್ ಧೋನಿ ಸೇರಿ 8 ಮಂದಿ ವಿರುದ್ಧ FIR

pic.twitter.com/JrHOVvH3Vi

— Sourav Ganguly (@SGanguly99) June 1, 2022

ಈ ನಡುವೆ ಗಂಗೂಲಿ ಕ್ರಿಕೆಟ್ ಅಕಾಡೆಮಿ ಆರಂಭಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ವರದಿಯಾಗಿದೆ. ಭಾರತದಾದ್ಯಂತ ಗಂಗೂಲಿ ಕ್ರಿಕೆಟ್ ಆಕಾಡೆಮಿ ಆರಂಭಿಸಲು ತಯಾರಿ ನಡೆಸಿದ್ದಾರೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಆಕಾಡೆಮಿ ಆರಂಭಿಸುವ ಮೂಲಕ ಗಂಗೂಲಿ ಕ್ರಿಕೆಟ್‍ಗೆ ಇನ್ನಷ್ಟು ಪ್ರೋತ್ಸಾಹ ನೀಡಲು ಹೊರಟಿದ್ದಾರೆ ಇದೇ ಅವರ ಹೊಸ ಹೆಜ್ಜೆ ಎಂಬುದಾಗಿ ಗುಸುಗುಸು ಇದೆ.

ದಾದಾ ಮಾಡಿರುವ ಆ ಒಂದು ಟ್ವೀಟ್ ದಾದಾ ಅಭಿಮಾನಿಗಳಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಇದಕ್ಕೆಲ್ಲ ಗಂಗೂಲಿಯೇ ಮುಂದಿನ ದಿನಗಳಲ್ಲಿ ಸೂಕ್ತ ಉತ್ತರ ಕೊಡಬೇಕಾಗಿದೆ.

TAGGED:bcciJay Shahsourav gangulyಜಯ್ ಶಾಬಿಸಿಸಿಐರಾಜಕೀಯಸೌರವ್ ಗಂಗೂಲಿ
Share This Article
Facebook Whatsapp Whatsapp Telegram

Cinema news

Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರಿಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood
fans flock to rr nagars house for darshans birthday celebration
ದರ್ಶನ್‌ ಬರ್ತ್‌ಡೇ ಸೆಲೆಬ್ರೇಶನ್‌ಗೆ ಮುಗಿಬಿದ್ದ ಫ್ಯಾನ್ಸ್ – ಹೈಡ್ರಾಮಾ ಮಾಡಿದವನಿಗೆ ಪೊಲೀಸರಿಂದ ಕಪಾಳಮೋಕ್ಷ!
Cinema Latest Main Post Sandalwood
Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories

You Might Also Like

SUBBAREDDY
Latest

ಬಾಗೇಪಲ್ಲಿ ಕೈ ಶಾಸಕ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು: ಹೈಕೋರ್ಟ್‌ ಆದೇಶ

Public TV
By Public TV
7 seconds ago
davanagere channagiri Mullu Gadduge utsava ramalingeshwara swamiji karnika
Davanagere

ಕಾರ್ಮೋಡ ಕವಿದಿತು, ಅಂತರಂಗದ ಪಕ್ಷಿ ಹಾರಿತು, ಕೆರೆ ಕಟ್ಟೆ ತುಂಬಿ ಹರಿದಾವು ಪರಾಕ್ – ಮುಳ್ಳುಗದ್ದುಗೆ ಮೇಲೆ ಕುಣಿದು ಕಾರ್ಣಿಕ!

Public TV
By Public TV
17 minutes ago
Assam Bhupen borah
Latest

ಅಸ್ಸಾಂ ವಿಧಾನಸಭಾ ಚುನಾವಣೆಗೂ ಮುನ್ನ `ಕೈʼಗೆ ಹಿನ್ನಡೆ – ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಪ್ರಮುಖರ ರಾಜೀನಾಮೆ!

Public TV
By Public TV
46 minutes ago
Road Accident 2
Bengaluru City

ಬೆಂಗಳೂರಲ್ಲಿ ರಸ್ತೆ ಕಾಮಗಾರಿಗೆ ಪುಟ್ಟ ಕಂದಮ್ಮ ಬಲಿ

Public TV
By Public TV
1 hour ago
akistan Army Balochistan Army
Latest

ನಮ್ಮವರನ್ನು ನಮಗೆ ಒಪ್ಪಿಸಿ, ಇಲ್ಲದಿದ್ರೆ ನಿಮ್ಮ 7 ಸೈನಿಕರಿಗೆ 6 ದಿನ ಮಾತ್ರ ಬಾಕಿ – ಪಾಕ್‌ಗೆ ಬಲೂಚ್‌ ಆರ್ಮಿ ಖಡಕ್‌ ಎಚ್ಚರಿಕೆ

Public TV
By Public TV
2 hours ago
Bomb Threat
Bagalkot

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ – ಹೆಚ್ಚಿದ ಆತಂಕ, ಪೊಲೀಸರಿಂದ ತೀವ್ರ ಶೋಧ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?