ನಾಳೆ ಉಪೇಂದ್ರ ಹೊಸ ಸಿನಿಮಾಗೆ ಮುಹೂರ್ತ : ಅತಿಥಿಗಳಾದ ನಾಲ್ವರು ಸ್ಟಾರ್ ನಟರು

Public TV
1 Min Read
FotoJet 4 1

ತೀ ನಿರೀಕ್ಷೆ ಇಟ್ಟುಕೊಳ್ಳಲಾದ ಉಪೇಂದ್ರ ನಿರ್ದೇಶಿಸಿ ನಟಿಸುತ್ತಿರುವ ಹೊಸ ಸಿನಿಮಾದ ಮುಹೂರ್ತ ನಾಳೆ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಲಿದೆ. ಈ ಸಿನಿಮಾ ಮುಹೂರ್ತ ಸಮಾರಂಭಕ್ಕೆ ಕನ್ನಡದ ನಾಲ್ವರು ಸ್ಟಾರ್ ನಟರು ಅತಿಥಿಗಳಾಗಿ ಆಗಮಿಸಲಿದ್ದಾರೆ.  ಮಹೂರ್ತದ ಜೊತೆಗೆ ಸಿನಿಮಾದ ಪೋಸ್ಟರ್ ಕೂಡ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ :  ಪಠ್ಯಪುಸ್ತಕದಲ್ಲಿ ನಮ್ಮ ರಾಜರ ಬಗ್ಗೆ 2 ಸಾಲು, ಮೊಘಲರ ಬಗ್ಗೆ ಜಾಸ್ತಿ ಉಲ್ಲೇಖ: ಅಕ್ಷಯ್ ಕುಮಾರ್

FotoJet 5 1

ಉಪೇಂದ್ರ ಅವರಿಗೆ ಆತ್ಮಿಯರಾದ ಮತ್ತು ತಮ್ಮದೇ ಆದ ರೀತಿಯಲ್ಲಿ ಸಿನಿಮಾಗಳನ್ನು ನೀಡಿರುವ ಶಿವರಾಜ್ ಕುಮಾರ್, ಸುದೀಪ್, ದುನಿಯಾ ವಿಜಯ್ ಮತ್ತು  ಧನಂಜಯ್ ಈ ನಾಲ್ವರು ನಾಳೆ ಅತಿಥಿಗಳಾಗಿ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ನಿರ್ಮಾಣ ಮಾಡುತ್ತಿರುವ ಲಹರಿ ಫಿಲ್ಮ್ಸ್ ಸಂಸ್ಥೆ ಹೇಳಿಕೊಂಡಿದೆ. ಈ ನಾಲ್ವರ ಪೋಸ್ಟರ್ ಕೂಡ ರಿಲೀಸ್ ಮಾಡಿದೆ. ಇದನ್ನೂ ಓದಿ : ಪತ್ನಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಗೆದ್ದ ಹಾಲಿವುಡ್ ಸ್ಟಾರ್ ನಟ ಜಾನಿ ಡೆಪ್ : ನೂರಾರು ಕೋಟಿ ಪರಿಹಾರ

upendra 3

ಈಗಾಗಲೇ ಸಿನಿಮಾದ ಹೆಸರು ಮತ್ತು ಫಸ್ಟ್ ಲುಕ್ ನಿಂದಾಗಿ ಸಾಕಷ್ಟು ಕುತೂಹಲ ಮೂಡಿಸಿರುವ ಚಿತ್ರದ ಮತ್ತೊಂದು ಪೋಸ್ಟರ್ ಅನ್ನು ನಿನ್ನೆ ಉಪೇಂದ್ರ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮೆದುಳು, ಕತ್ತಿಗಳು ಮತ್ತು ಗಡಿಯಾರಾಕೃತಿಯಂತೆ ಕಾಣುವ ಪೋಸ್ಟರ್ ಅನ್ನು ರಿಲೀಸ್ ಮಾಡಿ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ. ಇದನ್ನೂ ಓದಿ : ಸರಾಯಿ ಜೊತೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನಟಿ

upendra 1

ನಾಲ್ಕೈದು ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಇದೊಂದು ಮಧ್ಯಮ ವರ್ಗದ ಸಂಘರ್ಷದ ಕಥೆ ಎಂದು ಹೇಳಲಾಗುತ್ತಿದೆ. ಉಪ್ಪಿ 2 ಸಿನಿಮಾದ ಮುಂದುವರೆಕೆಯ ಭಾಗವೂ ಈ ಸಿನಿಮಾ ಆಗಲಿದೆ ಎನ್ನುವ ಸುದ್ದಿಯಿದೆ.

Share This Article
Leave a Comment

Leave a Reply

Your email address will not be published. Required fields are marked *