ವಾಣಿಜ್ಯ ಮಂಡಳಿ ಅಧ್ಯಕ್ಷರ ಕೈಗೆ ಫಿನಾಯಿಲ್ ಮತ್ತು ಪೊರಕೆ ಕೊಟ್ಟ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು

Public TV
1 Min Read
FotoJet 16

ಮೊನ್ನೆಯಷ್ಟೇ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಯಲ್ಲಿ ಭರ್ಜರಿಯಾಗಿ ಗೆಲವು ಸಾಧಿಸಿರುವ ಭಾ.ಮಾ.ಹರೀಶ್ ಅವರಿಗೆ ಗೆಲುವಿನ ಅಭಿನಂದನೆಗಾಗಿ ಹೆಸರಾಂತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ವಿಶೇಷ ಉಡುಗೊರೆ ಕೊಟ್ಟು ಸುದ್ದಿಯಾಗಿದ್ದಾರೆ. ಕಳೆದ ಒಂದು ವಾರದಿಂದ ಹೂಗುಚ್ಛ, ಹಾರ, ತುರಾಯಿಗಳನ್ನು ಸ್ವೀಕರಿಸುತ್ತಿದ್ದ ಭಾ.ಮಾ.ಹರೀಶ್ ಅವರು, ರಾಜೇಂದ್ರ ಸಿಂಗ್ ಬಾಬು ಅವರಿಂದ ಫಿನಾಯಿಲ್ ಮತ್ತು ಪೊರಕೆ ತಗೆದುಕೊಂಡಿದ್ದಾರೆ. ಇದನ್ನು ಓದಿ : ಯಶ್ ಮುಂದಿನ ಸಿನಿಮಾ ನರ್ತನ್ ಜೊತೆ ಫಿಕ್ಸ್ : ಘೋಷಣೆಯೊಂದೇ ಬಾಕಿ

ba.ma 2

ಭಾ.ಮಾ.ಹರೀಶ್ ಅವರಿಗೆ ಅಭಿನಂದಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಂದಿದ್ದ ರಾಜೇಂದ್ರ ಸಿಂಗ್ ಅವರು, ಕಸಬರಿಗೆ ಮತ್ತು ಫಿನಾಯಿಲ್ ನೀಡುವ ಮೂಲಕ ವಾಣಿಜ್ಯ ಮಂಡಳಿಯಲ್ಲಿ ನಡೆದ ಅವ್ಯಹಾರವನ್ನು ತೊಳೆಯುವಂತೆ ವಿನಂತಿಸಿದ್ದಾರೆ. ಈ ಕುರಿತು ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ನಿರ್ಮಾಪಕ ಕುಮಾರ್ ಶ್ರೀನಿವಾಸ್ ಮೂರ್ತಿ “ಖ್ಯಾತ ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು ಅವರು ಮತ್ತು ನಿರ್ಮಾಪಕ ಕೃಷ್ಣೇಗೌಡ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಭಾ.ಮಾ. ಹರೀಶ್ ಅವರನ್ನು ಭೇಟಿ ಮಾಡಿ, ಫೆನಾಯಿಲ್ ಮತ್ತು ತೆಂಗಿನ ಪೊರಕೆಯನ್ನು ಕೊಟ್ಟು ವಾಣಿಜ್ಯ ಮಂಡಳಿಯನ್ನು ಸ್ವಚ್ಛಗೊಳಿಸುವಂತೆ ತಿಳಿಸಿದರು’ ಎಂದು ಬರೆದುಕೊಂಡಿದ್ದಾರೆ. ಇನ್ನೂ ಓದಿ : ಪಠ್ಯ ಪುಸ್ತಕ ಪರಿಷ್ಕರಣೆ ಆಕ್ರೋಶ ಹೊರ ಹಾಕಿದ ನಟ ಚೇತನ್ : ಗಾಂಧಿ, ನೆಹರು ನಮ್ ವಿರೋಧಿಗಳು ಎಂದ ನಟ

ba.ma 3

ವಾಣಿಜ್ಯ ಮಂಡಳಿಯ ಚುನಾವಣೆಯಲ್ಲಿ ಭಾ.ಮಾ.ಹರೀಶ್ ಅವರನ್ನು ಬೆಂಬಲಿಸಿದ್ದ ರಾಜೇಂದ್ರ ಸಿಂಗ್ ಬಾಬು ಅವರು, ವಾಣಿಜ್ಯ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಮಾತನಾಡಿದ್ದಾರೆ. ಲಕ್ಷಾಂತರ ರೂಪಾಯಿ ಅವ್ಯವಹಾರವಾಗಿದೆ ಎಂದು ನೇರವಾಗಿಯೇ ಆರೋಪಿಸಿದ್ದರು. ಈಗ ಪೊರಕೆ ಕೊಟ್ಟು, ಅದನ್ನು ಸರಿ ಮಾಡಿಸುವಂತೆ ವಿನಂತಿಸಿದ್ದಾರೆ ಎನ್ನಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *