Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂದು ಜಯಾ ಜೈಲಿಗೆ, ಇಂದು ಸಂಕಷ್ಟದಲ್ಲಿ ಸೋನಿಯಾ, ರಾಹುಲ್‌ – ಇದು ಸ್ವಾಮಿ ದೂರಿನ ಕರಾಮತ್ತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಂದು ಜಯಾ ಜೈಲಿಗೆ, ಇಂದು ಸಂಕಷ್ಟದಲ್ಲಿ ಸೋನಿಯಾ, ರಾಹುಲ್‌ – ಇದು ಸ್ವಾಮಿ ದೂರಿನ ಕರಾಮತ್ತು

Latest

ಅಂದು ಜಯಾ ಜೈಲಿಗೆ, ಇಂದು ಸಂಕಷ್ಟದಲ್ಲಿ ಸೋನಿಯಾ, ರಾಹುಲ್‌ – ಇದು ಸ್ವಾಮಿ ದೂರಿನ ಕರಾಮತ್ತು

Public TV
Last updated: June 14, 2022 4:11 pm
Public TV
Share
4 Min Read
subramanian swamy sonia gandhi rahul gandhi
SHARE

ಸುಬ್ರಮಣಿಯನ್‌ ಸ್ವಾಮಿ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ಪ್ರಕರಣದಲ್ಲಿ ತಮಿಳುನಾಡಿನ ನಾಯಕಿ ಜಯಲಲಿತಾ ಅವರನ್ನೇ ಜೈಲಿಗೆ ಕಳುಹಿಸಿದ್ದ ಸುಬ್ರಮಣಿಯನ್‌ ಸ್ವಾಮಿ ನೀಡಿದ ದೂರು ಈಗ ಕಾಂಗ್ರೆಸ್‌ಗೆ ಸಂಕಷ್ಟ ತಂದಿದೆ. ಎಜಿಎಲ್‌ ಖರೀದಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಸುಬ್ರಮಣಿಯನ್‌ ಸ್ವಾಮಿ ನೀಡಿದ ಹಿನ್ನೆಲೆಯಲ್ಲಿ ಇಡಿ ಈಗ ರಾಹುಲ್‌ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿದೆ. ಹೀಗಾಗಿ ಇಲ್ಲಿ ಏನಿದು ಎಜೆಎಲ್‌ ಪ್ರಕರಣ? ಕಾಂಗ್ರೆಸ್‌ ನಾಯಕರ ಮೇಲಿರುವ ಆರೋಪ ಏನು ಇತ್ಯಾದಿ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಏನಿದು ಪ್ರಕರಣ?
1937ರಲ್ಲಿ ಮಾಜಿ ಪ್ರಧಾನಿ ಜವಾಹರ ಲಾಲ್‌ ನೆಹರೂ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷ ಅಸೋಸಿಯೇಟೆಡ್‌ ಜರ್ನಲ್ಸ್‌ ಲಿಮಿಟೆಡ್‌ (ಎಜೆಎಲ್‌) ಹೆಸರಿನಲ್ಲಿ ಕಂಪನಿಯನ್ನು ಆರಂಭಿಸಿತು. 1938ರಲ್ಲಿ ನೆಹರೂ ನೇತೃತ್ವದಲ್ಲಿ ಎಜೆಎಲ್‌ ಕಂಪನಿ ಇಂಗ್ಲಿಷ್‌ ಭಾಷೆಯ ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯನ್ನು ಆರಂಭಿಸಿತು.ಇದಾದ ಬಳಿಕ ನವಜೀವನ್‌ (ಹಿಂದಿ) ಮತ್ತು ಕ್ವಾಮಿ ಆವಾಜ್‌ (ಉರ್ದು) ಪತ್ರಿಕೆಗಳನ್ನು ಹೊರತಂದಿತ್ತು.

RAHUL GANDHI

ನೆಹರೂ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಎಜೆಎಲ್‌ ಕಂಪನಿಗೆ ಸಾಕಷ್ಟು ಪ್ರಮಾಣದಲ್ಲಿ ದೇಣಿಗೆ ಹರಿದುಬಂದಿತ್ತು. ಅಷ್ಟೇ ಅಲ್ಲದೇ ನೆಹರೂ ಅವರು ದೇಶದ ವಿವಿಧ ಭಾಗದಲ್ಲಿ ಜಮೀನನ್ನು ಮಂಜೂರು ಮಾಡಿದ್ದರು.

ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವಲ್ಲಿ ವೈಫಲ್ಯ, ಜಾಹೀರಾತು ಆದಾಯದ ಕೊರತೆ, ಆರ್ಥಿಕ ಸಂಕಷ್ಟ ಇನ್ನಿತರ ಕಾರಣದಿಂದ 2007ರ ಏಪ್ರಿಲ್‌ 1ರಂದು ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆ ಪ್ರಕಟಣೆಯನ್ನು ನಿಲ್ಲಿಸಲಾಯಿತು. ಹಾಗೇ ನವಜೀವನ್‌, ಕ್ವಾಮಿ ಆವಾಜ್‌ ಪತ್ರಿಕೆಗಳನ್ನು ನಿಲ್ಲಿಸಲಾಯಿತು.

sonia gandhi

ಯುಪಿಎ ಎರಡನೇ ಅವಧಿಯ ಸರ್ಕಾರದ ಅವಧಿಯ ವೇಳೆ 2011ರಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತಲಾ ಶೇ.38ರಷ್ಟು ಷೇರು ಹೂಡಿಕೆ ಮಾಡಿ ಯಂಗ್ ಇಂಡಿಯಾ ಲಿಮಿಟೆಡ್‌ (ವೈಐಎಲ್‌) ಹೆಸರಿನಲ್ಲಿ ಕಂಪನಿ ಆರಂಭಿಸಿದರು. ಸೋನಿಯಾ, ರಾಹುಲ್ ಅಲ್ಲದೇ ಆಸ್ಕರ್ ಫರ್ನಾಂಡಿಸ್‌ ಮತ್ತು ಮೋತಿಲಾಲ್‌ ವೋರಾ ಈ ಕಂಪನಿಯ ಆಡಳಿತ ಮಂಡಳಿ ಸೇರಿಕೊಂಡರು. ಈ ಪೈಕಿ ವೋರಾ ಮತ್ತು ಫರ್ನಾಂಡಿಸ್‌ ತಲಾ ಶೇ. 24ರಷ್ಟು ಷೇರುಗಳನ್ನು ಹೊಂದಿದ್ದರು.

ಹಣಕಾಸು ನಷ್ಟದಲ್ಲಿದ್ದ ಎಜೆಎಲ್‌ ಕಂಪನಿಯನ್ನು 90.21 ಕೋಟಿ ರೂ. ಮೊತ್ತಕ್ಕೆ ವೈಐಎಲ್‌ ಕಂಪನಿ ಖರೀದಿ ಮಾಡಿತು. 90 ಕೋಟಿ ಪೈಕಿ 50 ಲಕ್ಷ ಮೊತ್ತವನ್ನು ಕಾಂಗ್ರೆಸ್‌ ತನ್ನ ಖಜಾನೆಯಿಂದಲೇ ವರ್ಗಾಯಿಸಿದೆ. ಎಜೆಎಲ್‌ ಮಾಲೀಕತ್ವದ ಹೆರಾಲ್ಡ್‌ ಹೌಸ್‌ನ ನವೀಕರಣಕ್ಕೆ ವೈಐಎಲ್‌ 1 ಕೋಟಿ ರೂ. ನೆರವು ನೀಡಿದೆ.

CONGRESS 4

ಆರೋಪ ಏನು?
ಎಜೆಎಲ್ ಕಂಪನಿ ಆರ್ಥಿಕ ಸಂಕಷ್ಟದಲ್ಲಿ ಇದ್ದರೂ ಸುಮಾರು 5 ಸಾವಿರ ಕೋಟಿ ರೂ.ಗಳಷ್ಟು ಆಸ್ತಿಯನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ. ಇಷ್ಟೊಂದು ಆಸ್ತಿಯನ್ನು ಹೊಂದಿರುವ ಕಂಪನಿಯನ್ನು ಕೇವಲ 90 ಕೋಟಿ ರೂ.ಗೆ ಖರೀದಿಸಿದ್ದು ಹೇಗೆ ಎನ್ನುವುದು ಮೊದಲ ಪ್ರಶ್ನೆ. ಅಷ್ಟೇ ಅಲ್ಲದೇ ಎಜೆಎಲ್‌ ಕಂಪನಿಯನ್ನು ಆರಂಭಿಸಿದವರು ಜವಾಹರ ಲಾಲ್‌ ನೆಹರೂ. ಕಾಂಗ್ರೆಸ್‌ ಪಕ್ಷದ ನಾಯಕರೇ ಆರಂಭಿಸಿದ ಕಂಪನಿಗೆ ಕಾಂಗ್ರೆಸ್ ಪಕ್ಷದಿಂದಲೇ ಹಣವನ್ನು ವರ್ಗಾಯಿಸಿದ್ದು ಯಾಕೆ ಎನ್ನುವ ಪ್ರಶ್ನೆ ಎದ್ದಿದೆ.

ಸುಬ್ರಮಣಿಯನ್‌ ಸ್ವಾಮಿ ದೂರು
ಎಜೆಎಲ್‌ನ ಖರೀದಿ ವ್ಯವಹಾರದಲ್ಲಿ ಭಾರೀ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಾಣಿಸುತ್ತದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ 2012ರ ಜೂನ್‌ನಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಪ್ರಕರಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್‌ ಮುಖಂಡ ಮೋತಿ ಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್‌, ಪತ್ರಕರ್ತ ಸುಮನ್ ದುಬೆ, ದೂರಸಂಪರ್ಕ ಎಂಜಿನಿಯರ್‌ ಸ್ಯಾಮ್‌ ಪಿತ್ರೊಡ ಮತ್ತು ಯಂಗ್ ಇಂಡಿಯಾ ಲಿಮಿಟೆಡ್‌ ಕಂಪನಿಯನ್ನು ಪ್ರಮುಖ ಆರೋಪಿಗಳನ್ನಾಗಿ ಮಾಡಲಾಗಿದೆ. ಇವರಲ್ಲಿ ಮೋತಿ ಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್‌ ನಿಧನರಾಗಿದ್ದಾರೆ.

NEWS PAPER

ಎಜೆಎಲ್‌ ಕಂಪನಿಯ ಒಟ್ಟು ಆಸ್ತಿ ಹಾಗೂ ಅದರ ಖರೀದಿ ವ್ಯವಹಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಈ ಹಿಂದೆ ತಾಂತ್ರಿಕ ಕಾರಣಗಳಿಂದ ತನಿಖೆ ನಿಲ್ಲಿಸುವುದಾಗಿ ಜಾರಿ ನಿರ್ದೇಶನಾಲಯ(ಇಡಿ) ಹೇಳಿತ್ತು. ಆದರೆ ಈ ತನಿಖೆಯನ್ನು ಮತ್ತೆ ಆರಂಭಿಸುವುದಾಗಿ 2015ರ ಸೆಪ್ಟೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ ಪ್ರಕಟಿಸಿತ್ತು.

ಕಳೆದ ಏಪ್ರಿಲ್‌ ತಿಂಗಳಲ್ಲಿ ಕಾಂಗ್ರೆಸ್‌ ರಾಜ್ಯಸಭಾ ನಾಯಕ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿತ್ತು. ರಾಹುಲ್‌ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಇಡಿ ಸಮನ್ಸ್‌ ಜಾರಿ ಮಾಡಿದ್ದು ರಾಹುಲ್‌ ಗಾಂಧಿ ವಿಚಾರಣೆಗೆ ಹಾಜರಾಗಿದ್ದಾರೆ. ಕೋವಿಡ್‌ ಮತ್ತು ಅನಾರೋಗ್ಯದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ವಿಚಾರಣೆಗೆ ಗೈರಾಗಿದ್ದು ಆರೋಗ್ಯ ಸುಧಾರಣೆಯಾದ ಬಳಿಕ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.

PROTEST 2 1

ಜಯಲಲಿತಾ ವಿರುದ್ಧ ದೂರು
ಜಯಲಲಿತಾ ಸಿಎಂ ಆದ ಸಂದರ್ಭದಲ್ಲಿ ಕೇವಲ ಒಂದು ರೂಪಾಯಿ ಮಾತ್ರ ಸಂಬಳ ಪಡೆಯುವುದಾಗಿ ಘೋಷಿಸಿದ್ದರು. ಹೀಗಿದ್ದರೂ ಅವರ ಆಸ್ತಿ ವರ್ಷ ವರ್ಷ ಏರಿಕೆ ಆಗುತ್ತಿತ್ತು. 1989-90 ರಲ್ಲಿ ಆದಾಯ ಶೂನ್ಯ ಎಂದು ದಾಖಲಿಸಿದ್ದರೆ 1990-91ರಲ್ಲಿ 1.89 ಕೋಟಿ, 1991-92ರಲ್ಲಿ 5.82 ಕೋಟಿ ರೂ., 1992-93 ರಲ್ಲಿ 91.33 ಕೋಟಿ ರೂ. ಆದಾಯ ತೋರಿಸಿದ್ದರು. ಸಿಎಂ ಆಗಿದ್ದಾಗ ಆಕ್ರಮವಾಗಿ ಆದಾಯ ಸಂಪಾದಿಸಿದ್ದಾರೆ ಎಂದು ಆರೋಪಿಸಿ 1996ರಲ್ಲಿ ಸುಬ್ರಮಣಿಯನ್‌ ಸ್ವಾಮಿ ಕೋರ್ಟ್‌ನಲ್ಲಿ ಕ್ರಿಮಿನಲ್‌ ಕೇಸ್‌ ದಾಖಲಿಸಿ ಜೈಲಿಗೆ ಕಳುಹಿಸಿದ್ದರು. ಸುಪ್ರೀಂ ಕೋರ್ಟ್‌ ಈ ಪ್ರಕರಣದಲ್ಲಿ ಜಯಲಲಿತಾ ದೋಷಿ ಎಂದು ತೀರ್ಪು ನೀಡಿತ್ತು. ಆದರೆ ಈ ತೀರ್ಪು ಬರುವಷ್ಟರಲ್ಲಿ ಜಯಲಲಿತಾ ಮೃತಪಟ್ಟಿದ್ದರು.

TAGGED:bjpcongressEDRahul GandhiSonia GandhiYILಕಾಂಗ್ರೆಸ್ಜಾರಿಯಾ ನಿರ್ದೇಶನಾಲಯಬಿಜೆಪಿಯಂಗ್ ಇಂಡಿಯಾ ಲಿಮಿಟೆಡ್ರಾಹುಲ್ ಗಾಂಧಿಸೋನಿಯಾ ಗಾಂಧಿ
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Indian Origin Techie Drown in US Waterfall
Crime

ಹುಟ್ಟುಹಬ್ಬದಂದೇ ಅಮೆರಿಕದ ಜಲಪಾತದಲ್ಲಿ ಮುಳುಗಿ ಭಾರತ ಮೂಲದ ಟೆಕ್ಕಿ ಸಾವು

Public TV
By Public TV
3 minutes ago
SSLC Exams
Bengaluru City

SSLC ಪರೀಕ್ಷೆಗೆ 525 ಅಂಕ – ಕರಡು ಅಧಿಸೂಚನೆ ಹೊರಡಿಸಿದ ಶಿಕ್ಷಣ ಇಲಾಖೆ

Public TV
By Public TV
10 minutes ago
Vande Bharat Train
Bengaluru City

ಪ್ರಹ್ಲಾದ್ ಜೋಶಿ ಮನವಿಗೆ ಮನ್ನಣೆ; ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಕೇಂದ್ರ ಅಸ್ತು

Public TV
By Public TV
13 minutes ago
Jasprit Bumrah Mumbai Indians IPL
Cricket

114 ಎಸೆತ ಹಾಕಿಯೂ ವಿಕೆಟ್‌ ಪಡೆಯದ ಬುಮ್ರಾ

Public TV
By Public TV
22 minutes ago
kea
Bengaluru City

ಪಿಯುಸಿ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣನೆ: ಕೆಇಎ

Public TV
By Public TV
28 minutes ago
Krunal Pandya Hardik Pandya
Cricket

ಹಾರ್ದಿಕ್ ವಿಕೆಟ್‌ ಉರುಳಿದಾಗ ಕುಣಿದು ಕುಪ್ಪಳಿಸಿದ ಅಣ್ಣ ಕೃನಾಲ್ ಪಾಂಡ್ಯ – ಬ್ರದರ್‌ vs ಬ್ರದರ್ ವಿಡಿಯೋ ವೈರಲ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?