Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಹರಿತವಾದ ಕಥೆಯ ಸುಳಿವಿನೊಂದಿಗೆ ಬಂತು ‘ಹರಿಕಥೆ ಅಲ್ಲ ಗಿರಿಕಥೆ’ ಟ್ರೈಲರ್!

Public TV
Last updated: June 15, 2022 1:08 pm
Public TV
Share
2 Min Read
Harikathe Alla Girikathe
SHARE

ರಿಷಬ್ ಶೆಟ್ಟಿ, ನಾಯಕರಾಗಿ ನಟಿಸಿರುವ ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರ ಈಗಾಗಲೇ ಹಲವಾರು ದಿಕ್ಕುಗಳಲ್ಲಿ ಚರ್ಚೆಗಳನ್ನು ಹುಟ್ಟುಹಾಕಿದೆ. ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್‌ನಡಿಯಲ್ಲಿ ಸಂದೇಶ ಅವರು ನಿರ್ಮಾಣ ಮಾಡಿರುವ ಈ ಸಿನಿಮಾ ಜನರನ್ನು ಸೆಳೆದಿರುವುದೇ ತನ್ನೊಳಗೆ ಬಚ್ಚಿಟ್ಟುಕೊಂಡಿರುವ ಭಿನ್ನವಾದ ಕಥೆಯ ಸುಳಿವಿನಿಂದ. ಟ್ರೈಲರ್‌ನಲ್ಲಿ ಒಂದಷ್ಟು ವಿಶೇಷತೆಗಳು ಕಾಣಿಸಬಹುದೆಂಬ ಕಾರಣದಿಂದ ಅದರತ್ತ ಜನ ಆಸೆಯಿಟ್ಟು ಕಾದು ಕೂತಿದ್ದರು. ಕಡೆಗೂ ಇದೀಗ ಹರಿತವಾದ, ವಿಶೇಷವಾದ ಕಥೆಯ ಸುಳಿವಿನೊಂದಿಗೆ ‘ಹರಿಕಥೆ ಅಲ್ಲ ಗಿರಿಕಥೆ’ಯ ಟ್ರೈಲರ್ ಬಿಡುಗಡೆಗೊಂಡಿದೆ.

ಇದು ಮೂರು ‘ಗಿರಿ’ಗಳ ಸುತ್ತ ನಡೆಯೋ ಕಥಾನಕ ಎಂಬಂಥಾ ಸಣ್ಣ ಸುಳಿವನ್ನಷ್ಟೇ ಚಿತ್ರತಂಡ ಬಿಟ್ಟುಕೊಟ್ಟಿತ್ತು. ಹಾಗಾದರೆ ಈ ಗಿರಿ ಅಂದರೇನೆಂಬ ಹುಳವನ್ನು ಪ್ರತಿಯೊಬ್ಬರೂ ತಲೆಗೆ ಬಿಟ್ಟುಕೊಂಡಿದ್ದರು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ಈಗ ರಿಲೀಸ್ ಆಗಿರುವ ಟ್ರೈಲರ್ ಎಲ್ಲ ವಿಧದಲ್ಲಿಯೂ ನಿರೀಕ್ಷೆ ಮೂಡಿಸಿದೆ. ಇದನ್ನೂ ಓದಿ: ಯೂಟ್ಯೂಬ್ ನೋಡಿ ಕಳ್ಳತನ ಮಾಡಿದ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದ 

Harikathe Alla Girikathe 1

ಇಲ್ಲಿ ರಿಷಬ್‌ ಶೆಟ್ಟಿ ನಿರ್ದೇಶಕನಾಗೋ ಕನಸು ಹೊತ್ತು ತಿರುಗಾಡುವ ಡೈರೆಕ್ಟರ್ ಗಿರಿ ಎಂಬ ಪಾತ್ರಕ್ಕೆ ಜೀವ ತುಂಬಿದ್ದಾರೆಂಬ ಸುಳಿವು ಸಿಕ್ಕಿದೆ. ಅದರ ಜೊತೆ ಜೊತೆಗೇ ಪ್ರಮೋದ್ ಶೆಟ್ಟಿ, ರಚನಾ ಇಂದರ್, ತಪಸ್ವಿನಿ ಮುಂತಾದವರ ಪಾತ್ರಗಳು ಕೂಡಾ ಸಣ್ಣಮಟ್ಟದಲ್ಲಿ ಸುಳಿವು ಬಿಟ್ಟುಕೊಟ್ಟಿವೆ. ಇದುವರೆಗೆ ಜಾಹೀರಾಗಿರುವ ವಿಚಾರಗಳಾಚೆಗೆ ಇಲ್ಲಿನ ಕಥೆ ಹಬ್ಬಿಕೊಂಡಿದೆ ಎಂಬ ಸ್ಪಷ್ಟ ನಂಬಿಕೆ ಮೂಡಿಸುವಲ್ಲಿಯೂ ಈ ಟ್ರೈಲರ್ ಯಶಸ್ಸು ಕಂಡಿದೆ.

ಇದುವರೆಗೂ ಸಿನಿಮಾ ಕನಸು ಹೊತ್ತು ಗಾಂಧಿನಗರದಲ್ಲಿ ಸುಳಿದಾಡುವವರ ಕಥೆಗಳು ಸಾಕಷ್ಟು ಕಾಣಿಸಿಕೊಂಡಿವೆ. ಆದರೆ ‘ಹರಿಕಥೆ ಅಲ್ಲ ಗಿರಿಕಥೆ’ಯಲ್ಲಿರೋದು ಡಿಫರೆಂಟಾದ ಕಥೆ ಎಂಬುದನ್ನು ನಿರ್ದೇಶಕದ್ವಯರು ನಿಖರವಾಗಿಯೇ ನಿರೂಪಿಸಿದ್ದಾರೆ. ಅದು ಈ ಟ್ರೈಲರ್‌ನ ನಿಜವಾದ ಪ್ಲಸ್ ಪಾಯಿಂಟ್.

ಈ ಮೂಲಕ ದೊಡ್ಡ ಚಾಲೆಂಜೊಂದರಲ್ಲಿ ಚಿತ್ರತಂಡ ಗೆದ್ದಂತಾಗಿದೆ. ಈ ಟ್ರೈಲರ್‍ಗೆ ಸಿಗುತ್ತಿರುವ ವ್ಯಾಪಕ ಮೆಚ್ಚುಗೆ ಮತ್ತು ಬೆಂಬಲಗಳೇ ಸಿನಿಮಾದ ಗೆಲುವನ್ನು ನಿಕ್ಕಿಯಾಗಿಸಿದೆ. ಇದು ಚಿತ್ರತಂಡದ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ನಿಖರವಾಗಿ ಹೇಳಬೇಕೆಂದರೆ ‘ಹರಿಕಥೆ ಅಲ್ಲ ಗಿರಿಕಥೆ’ಯ ಟ್ರೈಲರ್ ನಿಜಕ್ಕೂ ಪರಿಣಾಮಕಾರಿಯಾಗಿದೆ.

Harikathe Alla Girikathe 2

ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಮೂಡಿ ಬಂದಿರುವ ಚಿತ್ರ ‘ಹರಿಕಥೆ ಅಲ್ಲ ಗಿರಿಕಥೆ’. ಕರಣ್ ಅನಂತ್ ಮತ್ತು ಅನಿರುದ್ಧ ಮಹೇಶ್ ಈ ಸಿನಿಮಾದ ನಿರ್ದೇಶನದ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಇದು ಓರ್ವ ನಟನಾಗಿ ರಿಷಬ್ ಶೆಟ್ಟಿ ವೃತ್ತಿ ಬದುಕಿನ ಮಹತ್ವದ ಚಿತ್ರವಾಗೋದರಲ್ಲಿ ಯಾವ ಸಂದೇಹವೂ ಇಲ್ಲ. ಇದನ್ನೂ ಓದಿ:  ಕುವೆಂಪು, ಬಸವಣ್ಣಗೆ ಕುತ್ತು ಬಂದ ಮೇಲೆ ನಾವಿದ್ದು ಏನು ಮಾಡೋದು: ಹಂಸಲೇಖ 

ಈ ಚಿತ್ರ ಕೇವಲ ಕಥೆಯ ದಿಕ್ಕಿನಿಂದ ಮಾತ್ರವಲ್ಲದೇ ತಾಂತ್ರಿಕವಾಗಿಯೂ ಶ್ರೀಮಂತವಾಗಿದೆ. ಅದರ ಲಕ್ಷಣಗಳು ಈ ಟ್ರೈಲರ್‌ನಲ್ಲೂ ಕಾಣಿಸಿವೆ. ಇನ್ನುಳಿದಂತೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ, ರಚನಾ ಇಂದರ್, ತಪಸ್ವಿನಿ, ಹೊನ್ನವಳ್ಳಿ ಕೃಷ್ಣ ಮುಂತಾದವರ ತಾರಾಗಣದಿಂದ ‘ಹರಿಕಥೆ ಅಲ್ಲ ಗಿರಿಕಥೆ’ ಮೈಕೈ ತುಂಬಿಕೊಂಡಿದೆ. ಈ ಸಿನಿಮಾ ಜೂನ್‌ 23ಕ್ಕೆ ರಿಲೀಸ್‌ ಆಗುತ್ತಿದ್ದು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

TAGGED:Harikathe Alla Girikatherishab shettysandalwoodtrailerಚಂದನವನಟ್ರೈಲರ್ರಿಷಬ್ ಶೆಟ್ಟಿಸಿನಿಮಾಹರಿಕಥೆ ಅಲ್ಲ ಗಿರಿಕಥೆ
Share This Article
Facebook Whatsapp Whatsapp Telegram

Cinema Updates

Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ ಪಡುಕೋಣೆ
17 minutes ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
4 hours ago
Nandamuri Balakrishna
ಬಾಲಯ್ಯ ಜನ್ಮದಿನಕ್ಕೆ `ಅಖಂಡ-2′ ಟೀಸರ್ ರಿಲೀಸ್ – ಮಾಸ್ ಅವತಾರದಲ್ಲಿ ಅಬ್ಬರಿಸಿದ ನಂದಮೂರಿ ಬಾಲಕೃಷ್ಣ
4 hours ago
Bro code ravi mohan
ಹೊಸ ಚಿತ್ರ ಘೋಷಿಸಿದ ರವಿ ಮೋಹನ್ – `ಬ್ರೋಕೋಡ್’ ಮೂಲಕ ನಿರ್ಮಾಣ ರಂಗಕ್ಕಿಳಿದ ತಮಿಳು ನಟ
4 hours ago

You Might Also Like

Sonam Raghuvanshi
Crime

`ನಾ ವಿಧವೆಯಾಗ್ತೀನಿ, ನಿನ್ನನ್ನೇ ಮದ್ವೆಯಾಗ್ತೀನಿ’ ಅಂದಿದ್ಳಂತೆ ಸೋನಂ ರಘುವಂಶಿ..!

Public TV
By Public TV
7 minutes ago
Banas River
Crime

ಸ್ನಾನ ಮಾಡಲು ನದಿಗೆ ಇಳಿದಿದ್ದ 8 ಮಂದಿ ಸಾವು – ಮೂವರ ರಕ್ಷಣೆ

Public TV
By Public TV
41 minutes ago
Vatal Nagaraj 1
Bengaluru City

ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ತಲಾ 5 ಕೋಟಿ ಪರಿಹಾರ ಕೊಡ್ಬೇಕು: ವಾಟಾಳ್‌ ನಾಗರಾಜ್‌ ಆಗ್ರಹ

Public TV
By Public TV
48 minutes ago
Digital Arrest of Nigeria Engineer
Bengaluru City

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧ ದಂಪತಿಯಿಂದ 4.79 ಕೋಟಿ ಸುಲಿಗೆ – ಇಬ್ಬರು ಅರೆಸ್ಟ್

Public TV
By Public TV
1 hour ago
Boyfriend
Bengaluru City

ರಸ್ತೆಯಲ್ಲೇ ಮಹಿಳೆಯರನ್ನ ತಬ್ಬಿಕೊಂಡು ತುಟಿಗೆ ಚುಂಬಿಸ್ತಿದ್ದ – ಬೆಂಗಳೂರಿನ ಬೀದಿ ಕಾಮಣ್ಣ ಪೊಲೀಸ್‌ ವಶಕ್ಕೆ

Public TV
By Public TV
1 hour ago
Sriramulu 1 1
Bellary

ಮೋದಿ ಪ್ರಧಾನಿಯಾಗುವುದಕ್ಕೂ ಮೊದಲು ಭಾರತ ಭಿಕ್ಷುಕರ ದೇಶ ಆಗಿತ್ತು: ಶ್ರೀರಾಮುಲು ವಿವಾದಾತ್ಮಕ ಹೇಳಿಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?