ಯುವಜನತೆ ಜಗತ್ತಿನಲ್ಲಿ ಶಾಂತಿ ವಿಸ್ತರಿಸುವ ಕೆಲಸ ಮಾಡಲಿ: ರಾಜ್ಯಪಾಲ

Public TV
1 Min Read
GOVERNOR 5

ಬೆಂಗಳೂರು: ಭಾರತೀಯ ಸಂಸ್ಕೃತಿಯು “ಸರ್ವ ಧರ್ಮ ಸಂಭವ” ಮತ್ತು “ವಸುಧೈವ ಕುಟುಂಬಕಂ” ಎಂಬ ಮನೋಭಾವದಿಂದ ಪ್ರೇರಿತವಾಗಿದೆ. ಯಾವಾಗಲೂ ಸಾರ್ವತ್ರಿಕ ಸಹೋದರತ್ವ ಮತ್ತು ವಿಶ್ವ ಶಾಂತಿ ಮತ್ತು ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

GOVERNOR 2

ಇಸ್ಕಾನ್ ಶೇಷಾದ್ರಿಪುರಂ ವತಿಯಿಂದ ನಗರದ ಶೇಷಾದ್ರಿಪುರಂನಲ್ಲಿ ನಿರ್ಮಾಣವಾಗಿರುವ ಜಗನ್ನಾಥ ದೇವಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ತತ್ವಶಾಸ್ತ್ರ, ಧರ್ಮ-ಆಧ್ಯಾತ್ಮಿಕತೆ ಮತ್ತು ಸಂಸ್ಕೃತಿ ಬಹಳ ಪುರಾತನವಾಗಿದ್ದು ಇಂದಿಗೂ ಪ್ರಸ್ತುತವಾಗಿವೆ. ಇದರ ಅನುಕರಣೆಯಿಂದ ಲೋಕಕಲ್ಯಾಣ ಮತ್ತು ಶಾಂತಿಯ ದಿಶೆಯಲ್ಲಿ ಪಾಲುದಾರರಾಗಬೇಕು ಎಂದು ಕರೆ ನೀಡಿದರು.  ಇದನ್ನೂ ಓದಿ: ದ್ವಿತೀಯ ಪಿಯು ಫಲಿತಾಂಶ ಪ್ರಕಟ – ಟಾಪರ್ಸ್ ಯಾರ‍್ಯಾರು ಗೊತ್ತಾ?

GOVERNOR 3

ಇಂದು ಧಾರ್ಮಿಕ ಮತ್ತು ಸಾಂಸ್ಕೃತಿಕ ಪುನರುಜ್ಜೀವನದ ಅವಶ್ಯಕತೆಯಿದೆ. ಅದರ ಜವಾಬ್ದಾರಿ ನಮ್ಮ ಯುವ ಪೀಳಿಗೆಯ ಮೇಲಿದೆ. ಯುವಕರು ಧರ್ಮ-ಆಧ್ಯಾತ್ಮಿಕತೆ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಜಗತ್ತಿನಲ್ಲಿ ಶಾಂತಿ ವಿಸ್ತರಿಸುವ ಕೆಲಸವನ್ನು ಮಾಡಲಿ ಎಂದರು.

GOVERNOR 4

ಪರಮಪೂಜ್ಯ ಜಯಪತಾಕ ಸ್ವಾಮಿ ಮಹಾರಾಜ್, ಪರಮಪೂಜ್ಯ ಭಾನು ಸ್ವಾಮಿ ಮಹಾರಾಜ್, ದಕ್ಷಿಣ ಭಾರತದಲ್ಲಿ ಕೃಷ್ಣ ಭಕ್ತಿಯ ಪ್ರಚಾರಕ ವಿನೋದ ಸ್ವಾಮಿ, ಇಸ್ಕಾನ್ ಶೇಷಾದ್ರಿಪುರಂ ದೇವಾಲಯದ ವ್ಯವಸ್ಥಾಪಕರು, ಗೌರವಾನ್ವಿತ ಅನುಕೂಲ್ ಕೇಶವ್ ಉಪಸ್ಥಿತರಿದ್ದರು.

Live Tv

Share This Article
Leave a Comment

Leave a Reply

Your email address will not be published. Required fields are marked *