ಬಿಜೆಪಿ ಇಡಿ ಅಸ್ತ್ರಕ್ಕೆ ಕಾಂಗ್ರೆಸ್ `ಅಗ್ನಿಪಥ್’ ಬ್ರಹ್ಮಾಸ್ತ್ರ – ಜೂನ್ 27ಕ್ಕೆ ಶಾಂತಿಯುತ ಸತ್ಯಾಗ್ರಹ

Public TV
1 Min Read
telangana train agnipath

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಇಡಿ ನಡೆಸುತ್ತಿರುವ ವಿಚಾರಣೆಗೆ ಇದೀಗ ಕಾಂಗ್ರೆಸ್ ಅಗ್ನಿಪಥ್ ಬ್ರಹ್ಮಾಸ್ತ್ರ ಪ್ರಯೋಗಿಸಿದೆ. ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ಕಾಂಗ್ರೆಸ್ ಶಾಂತಿಯುತ ಪ್ರತಿಭಟನೆಗೆ ಸಜ್ಜಾಗಿದೆ.

DKSHI 3

ಹೈಕಮಾಂಡ್ ಸೂಚನೆ ಮೇರೆಗೆ ಜೂನ್ 27ರಂದು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಶಾಂತಿಯುತ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಎಲ್ಲ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೂಚನೆ ನೀಡಿದ್ದಾರೆ.  ಇದನ್ನೂ ಓದಿ: 5 ಸ್ಟಾರ್‌ ಹೋಟೆಲ್‌ನಲ್ಲಿ ಬಂಡಾಯ ಶಾಸಕರು ಫುಲ್‌ ಬಿಂದಾಸ್ – ದಿನದ ಖರ್ಚು ಎಷ್ಟು ಗೊತ್ತಾ?‌

ಜೂನ್ 27ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಶಾಂತಿಯುತ ಸತ್ಯಾಗ್ರಹ ನಡೆಸಲು ಸೂಚಿಸಲಾಗಿದೆ. ಯುವಕ-ಯುವತಿಯರು, ವಿದ್ಯಾರ್ಥಿಗಳು ಭಾಗವಹಿಸುವಂತೆ ಕರೆ ನೀಡಲಾಗಿದೆ. ಅಲ್ಲದೇ ಆಯಾ ಕ್ಷೇತ್ರದ ಶಾಸಕರು, 2018ರ ಚುನಾವಣಾ ಅಭ್ಯರ್ಥಿಗಳು ಈ ಸತ್ಯಾಗ್ರಹದ ನೇತೃತ್ವ ವಹಿಸಲು ತಿಳಿಸಲಾಗಿದೆ. ಇದನ್ನೂ ಓದಿ: 55 ಶಾಸಕರು ನಮ್ಮ ಬಳಿ ಇದ್ದಾರೆ – ಉದ್ಧವ್ ಬೆದರಿಕೆಗೆ ಜಗ್ಗದ ರೆಬೆಲ್ಸ್

Live Tv

Share This Article
Leave a Comment

Leave a Reply

Your email address will not be published. Required fields are marked *