ಬಾಲಿವುಡ್ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಕಳೆದ ಎರಡು ವರ್ಷದಿಂದ ಲೈಂಗಿಕ ಕಿರುಕುಳ ಆರೋಪ ಏದುರಿಸುತ್ತಿದ್ದಾರೆ. ಇದೀಗ ಗಣೇಶ್ ಆಚಾರ್ಯ ಅವರಿಗೆ ಜಾಮೀನು ಸಿಕ್ಕಿದೆ ಮುಂಬೈನ ಮೆಜೆಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಗಣೇಶ್ ಆಚಾರ್ಯ ವಿರುದ್ಧ 2020ರಲ್ಲಿ ಅವರ ಸಹ ನೃತ್ಯಗಾರ್ತಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಖ್ಯಾತ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಅವರಿಗೆ ಜಾಮೀನು ಸಿಕ್ಕಿದೆ ಮುಂಬೈನ ಮೆಜೆಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಗಣೇಶ್ ಆಚಾರ್ಯ ವಿರುದ್ಧ 2020ರಲ್ಲಿ ಅವರ ಸಹ ನೃತ್ಯಗಾರ್ತಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದನ್ನೂ ಓದಿ: ಡಿಸೆಂಬರ್ ನಲ್ಲಿ ಮದುವೆ ಆಗಲಿದ್ದಾರೆ ತಿಥಿ ಸಿನಿಮಾ ಖ್ಯಾತಿಯ ಪೂಜಾ
2019-2020ರಲ್ಲಿ ಗಣೇಶ್ ಆಚಾರ್ಯ ತನ್ನನ್ನು ಅವರ ಕಚೇರಿಯಲ್ಲಿ ಭೇಟಿಯಾಗುವಂತೆ ಹೇಳಿದ್ದರು. ಭೇಟಿಯಾಗಲು ಹೋದಾಗಲೆಲ್ಲ ಅಶ್ಲೀಲ ವಿಡಿಯೋಗಳನ್ನು ನೋಡುವಂತೆ ಒತ್ತಾಯಸುತ್ತಿದ್ದ ಎಂದು ದೂರುದಾರೆ ಗಂಭೀರ ಆರೋಪ ಮಾಡಿದ್ದರು. 2022 ಏಪ್ರಿಲ್ ನಲ್ಲಿ ಮುಂಬೈ ಪೊಲೀಸರ ಗಣೇಶ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಆದರೆ ಈ ಪ್ರಕರಣದಲ್ಲಿ ಗಣೇಶ್ ಆಚಾರ್ಯ ಅವರನ್ನು ಇದುವರೆಗೂ ಬಂಧಿಸಿಲ್ಲ. ಗುರುವಾರ (ಜೂನ್ 23) ಗಣೇಶ್ ಆಚಾರ್ಯ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಜಾಮೀನು ಮಂಜೂರು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಕೇಸ್ ಯಾವ ರೀತಿ ತಿರುವು ಪಡೆಯಲಿದೆ ಅಂತಾ ಕಾದುನೋಡಬೇಕಿದೆ.
Live Tv